Homeಕರ್ನಾಟಕಸುಡಾನ್ ಸಂಘರ್ಷದಲ್ಲಿ ಕನ್ನಡಿಗರಿಗೆ ಸಂಕಷ್ಟ: ಜೈಶಂಕರ್-ಸಿದ್ದರಾಮಯ್ಯ ಮಧ್ಯೆ ಟ್ವೀಟ್ ವಾರ್

ಸುಡಾನ್ ಸಂಘರ್ಷದಲ್ಲಿ ಕನ್ನಡಿಗರಿಗೆ ಸಂಕಷ್ಟ: ಜೈಶಂಕರ್-ಸಿದ್ದರಾಮಯ್ಯ ಮಧ್ಯೆ ಟ್ವೀಟ್ ವಾರ್

- Advertisement -
- Advertisement -

ಸುಡಾನ್‌ನಲ್ಲಿ ನಡೆಯುತ್ತಿರುವ ಸೇನೆ ಮತ್ತು ಅರೆಸೇನಾ ಪಡೆ ನಡುವಿನ ಸಂಘ‍ರ್ಷದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇದಕ್ಕೆ ವಿದೇಶಾಂಗ ಸಚಿವ ಜೈಶಂಕರ್‌ ಪ್ರತಿ ಟ್ವೀಟ್ ಮಾಡಿದ್ದು, ಟ್ವಿಟರ್ ವಾರ್‌ಗೆ ಕಾರಣವಾಗಿದೆ.

ಕನ್ನಡಿಗರ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿ ಸಿದ್ದರಾಮಯ್ಯ ಅವರು ಮಂಗಳವಾರ ಟ್ವೀಟ್‌ ಮಾಡಿದ್ದರು. ಇದಕ್ಕೆ ಟ್ವಿಟರ್‌ನಲ್ಲೇ ಪ್ರತಿಕ್ರಿಯಿಸಿರುವ ಜೈಶಂಕರ್‌, ‘ಇದನ್ನು ರಾಜಕೀಯಗೊಳಿಸಬೇಡಿ’ ಎಂದು ತಿರುಗೇಟು ನೀಡಿದ್ದರು. ಅದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಟ್ವೀಟ್‌ ಏಟು ನೀಡಿದ್ದಾರೆ.

ಸಿದ್ದರಾಮಯ್ಯ ಅವರು, ”ಕೇಂದ್ರ ಬಿಜೆಪಿ ಸರ್ಕಾರವು ತಕ್ಷಣವೇ ರಾಜತಾಂತ್ರಿಕ ಚರ್ಚೆಗಳನ್ನು ತೆರೆಯಬೇಕು ಮತ್ತು ಹಕ್ಕಿ ಪಿಕ್ಕಿಗಳ ಯೋಗಕ್ಷೇಮದ ಬಗ್ಗೆ ತಿಳಿದುಕೊಳ್ಳಲು ಅಂತರಾಷ್ಟ್ರೀಯ ಏಜೆನ್ಸಿಗಳಿಗೆ ತಿಳಿಸಬೇಕು. ಭಾರತೀಯರ ರಕ್ಷಣೆಗೆ ಕೂಡಲೇ ಎಲ್ಲಾ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಬಸವರಾಜ ಬೊಮ್ಮಾಯಿಗೆ ಮನವಿ ಮಾಡುತ್ತೇನೆ” ಎಂದು ಟ್ವೀಟ್ ಮಾಡಿದ್ದರು.

ಸಿದ್ದರಾಮಯ್ಯನವರು ಸುಡಾನ್‌ನಲ್ಲಿ ಸಿಲುಕಿರುವ ರಾಜ್ಯದ ಹಕ್ಕಿ ಪಿಕ್ಕಿ ಬುಡಕಟ್ಟಿಗೆ ಸೇರಿದ 31 ಜನರು ಸಿಲುಕಿದ್ದಾರೆ ಅವರನ್ನು ಸುರಕ್ಷಿತವಾಗಿ ಕರೆತರಬೇಕು ಎಂದಿದ್ದರು.

ಅದಕ್ಕೆ ಜೈಶಂಕರ್ ಅವರು, ”ನಿಮ್ಮ (ಸಿದ್ದರಾಮಯ್ಯ) ಟ್ವೀಟ್‌ ನೋಡಿ ಆಶ್ಚರ್ಯವಾಯಿತು. ಅಲ್ಲಿ ಜೀವಗಳು ಅಪಾಯದಲ್ಲಿವೆ. ದಯವಿಟ್ಟು ಇದರಲ್ಲಿ ರಾಜಕೀಯ ಮಾಡಬೇಡಿ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾರತದ ರಾಯಭಾರ ಕಚೇರಿಯು ಸುಡಾನ್‌ನಲ್ಲಿರುವ ಹೆಚ್ಚಿನ ಭಾರತೀಯ ಪ್ರಜೆಗಳು ಸಂಪರ್ಕದಲ್ಲಿದ್ದಾರೆ” ಎಂದು ಹೇಳಿದ್ದಾರೆ.

ಜೈಶಂಕರ್‌ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ”ನೀವು ವಿದೇಶಾಂಗ ವ್ಯವಹಾರಗಳ ಸಚಿವರಾಗಿರುವುದರಿಂದ ನಾನು ನಿಮಗೆ ಸಹಾಯಕ್ಕಾಗಿ ಮನವಿ ಮಾಡಿದ್ದೇನೆ. ಆದರೆ ನೀವು ಆಶ್ಚರ್ಯಗೊಳ್ಳುವುದರಲ್ಲಿ ಬ್ಯುಸಿಯಾಗಿದ್ದರೆ ದಯವಿಟ್ಟು ನಮ್ಮ ಜನರನ್ನು ಮರಳಿ ಕರೆತರಲು ಸಹಾಯ ಮಾಡುವ ವ್ಯಕ್ತಿಯ ಸಂಪರ್ಕ ಮಾಡಿಕೊಡಿ” ಎಂದು ತಿರುಗೇಟು ನೀಡಿದ್ದಾರೆ.

ಸುಡಾನ್‌ ರಾಜಧಾನಿ ಖಾರ್ಟೂಮ್‌ ಸೇರಿದಂತೆ ದೇಶದ ವಿವಿಧೆಡೆ ಕಳೆದ ಎರಡು ದಿನಗಳಿಂದ ಸೇನೆ ಮತ್ತು ಅರೆಸೇನಾ ಪಡೆ ನಡುವೆ ಉಂಟಾದ ಸಂಘರ್ಷ ಮುಂದುವರಿದಿದೆ. ಈವರೆಗೆ ಕನಿಷ್ಠ 200ಜನರು ಸಾವಿಗೀಡಾಗಿದ್ದು, 1800ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸೇನೆ ಮತ್ತು ಅರೆಸೇನಾಪಡೆ ನಡುವೆ ಗುಂಡಿನ ಕಾಳಗ ನಡೆಯುತ್ತಿದ್ದು ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಸೇನೆ ಮತ್ತು ಅರೆಸೇನಾಪಡೆ (ಆರ್‌ಎಸ್‌ಎಫ್‌) ನಡುವೆ ಅಧಿಕಾರಕ್ಕಾಗಿ ಮೂಡಿರುವ ಬಿಕ್ಕಟ್ಟು ಇನ್ನಷ್ಟು ಉಲ್ಬಣಗೊಂಡಿದೆ. ಸೇನೆಗಿಂತಲೂ ಅರೆಸೇನಾಪಡೆ ಪ್ರಬಲವಾಗಿದೆ ಎಂದು ಮೂಲಗಳು ತಿಳಿಸಿವೆ.

ಸೇನೆ ನೇತೃತ್ವವನ್ನು ಅಬ್ದೆಲ್‌ ಫತ್ಹಾ ಅಲ್ ಬುರ‍್ಹಾನ್ ವಹಿಸಿದ್ದರೆ, ಉಪ ನಾಯಕನಾಗಿ ರ‍್ಯಾಪಿಡ್‌ ಸಪೋರ್ಟ್‌ ಫೋರ್ಸ್‌ ಕಮಾಂಡರ್‌ ಮೊಹಮ್ಮದ್ ಹಮ್ದಾನ್‌ ಡಾಗ್ಲೊ ಅವರು ಇದ್ದಾರೆ. ಅಧಿಕಾರಕ್ಕಾಗಿ ಈ ಇಬ್ಬರ ನಡುವೆ ಸಂಘರ್ಷಕ್ಕೆ ನಡೆಯುತ್ತಿದೆ.

ಸಂಕಷ್ಟದಲ್ಲಿ ಕರ್ನಾಟಕ ಸೇರಿದಂತೆ ಅನೇಕ ಭಾರತೀಯರು..

ಸುಡಾನ್‌ನಲ್ಲಿನ ಪರಿಸ್ಥಿತಿಯನ್ನು ಗಮನಿಸುತ್ತಿರುವ ಭಾರತದ ವಿದೇಶಾಂಗ ಸಚಿವಾಲಯ ಅಲ್ಲಿನ ಭಾರತೀಯರ ರಕ್ಷಣೆ ಮತ್ತು ಸಹಾಯಕ್ಕಾಗಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ. ಅಲ್ಲದೆ ನಿಯಂತ್ರಣ ಕೊಠಡಿ ಸಂಖ್ಯೆಯ ದೂರವಾಣಿ ಸಂಖ್ಯೆ ಇಮೇಲ್ ವಿಳಾಸಗಳನ್ನು ಸಹ ಜನತೆಗೆ ನೀಡಲಾಗಿದೆ. ದೂರವಾಣಿ ಸಂಖ್ಯೆಗಳು: 1800 11 8797 (ಟೋಲ್ ಫ್ರೀ) +91-11-23012113; +91-11-23014104; +91-11-23017905; ಮೊಬೈಲ್: +91 99682 91988 ಮತ್ತು ಇಮೇಲ್: [email protected]

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...