Homeಮುಖಪುಟಹೃದ್ಯ ಕತೆ ಕಟ್ಟಿಕೊಟ್ಟ ’ಸೂಫಿಯು ಸುಜಾದಯುಂ’ ನಿರ್ದೇಶಕ ’ಶಾನವಾಸ್’ ನಿಧನ

ಹೃದ್ಯ ಕತೆ ಕಟ್ಟಿಕೊಟ್ಟ ’ಸೂಫಿಯು ಸುಜಾದಯುಂ’ ನಿರ್ದೇಶಕ ’ಶಾನವಾಸ್’ ನಿಧನ

ಚಿತ್ರದ ಜೀವಾಳವೇ ಪ್ರೇಮ. ತಿಳಿಯದವರ ಕಣ್ಣಲ್ಲಿ ಲವ್‌ ಜಿಹಾದ್ ಆಗಿರಬಹುದು ಎಂಬ ಅನುಮಾನ, ಆದರೆ ತಿಳಿದವರ ಕಣ್ಣಲ್ಲಿ ಅದು ಅಪ್ಪಟ ಪ್ರೇಮ.

- Advertisement -
- Advertisement -

ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಸಿನಿಮಾ ಪ್ರಿಯರ ಮನಗೆದ್ದ ಇಬ್ಬರು ’ಸೂಫಿ’ಯರ ಅಮರ ಪ್ರೇಮದ ಕತೆಯಿರುವ ’ಸೂಫಿಯುಂ ಸುಜಾತಯುಂ’ ಚಿತ್ರದ ನಿರ್ದೇಶಕ ಶಾನವಾಸ್ ನಾರನೀಪುಳ ಅವರು ಹೃದಯಾಘಾತದಿಂದ ನಿನ್ನೆ ಮೃತಪಟ್ಟಿದ್ದಾರೆ.

ಶಾನವಾಸ್ ಅವರು ’ಕರಿ’ ಮತ್ತು ’ಸೂಫಿಯುಂ ಸುಜಾದಯುಂ’ ಎಂಬ ಎರಡು ಚಿತ್ರಗಳನ್ನಷ್ಟೇ ನಿರ್ದೇಶಿಸಿ ಹೆಸರು ಗಳಿಸಿದ್ದರು. ಇದರಲ್ಲಿ ಸೂಫಿಯುಂ ಸುಜಾದಯುಂ ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಒಟಿಟಿ ಫ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಯಾದ ಚಿತ್ರವಾಗಿದೆ. ಹೃದ್ಯ ಪ್ರೇಮ ಕತೆಯಿರುವ ಈ ಚಿತ್ರವು ಸಿನಮಾ ಪ್ರಿಯರ ಮನಸ್ಸನ್ನು ಗೆದ್ದಿತ್ತು. ಸಂಗೀತ, ಸಿನಿಮಾಟೋಗ್ರಾಫಿ, ಎಡಿಟಿಂಗ್ ಸೇರಿದಂತೆ ಬೇರೆಯೆ ಲೋಕಕ್ಕೆ ಕೊಂಡೊಯ್ಯುವ ಸಿನಿಮಾವಾಗಿದೆ ’ಸೂಫಿಯುಂ ಸುಜಾದಯುಂ’.

ಇದನ್ನೂ ಓದಿ: ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

ಸೂಫಿಯುಂ ಸುಜಾದಯುಂ ಚಿತ್ರದ ಒಂದು ದೃಶ್ಯ

ಚಿತ್ರದ ನಾಯಕಿ ಅದಿತಿ ರಾಮ್ ಹೈದರಿ, ತಮ್ಮ ಚಿತ್ರದ ನಿರ್ದೇಶಕನ ಸಾವಿನ ಬಗ್ಗೆ, “ಅವರ ಕಥೆಗಳಂತೆ ಅವರು ಮಾನವೀಯತೆ ಮತ್ತು ಸೂಕ್ಷ್ಮ ಮನಸ್ಸಿನವರಾಗಿದ್ದರು. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಶಾನವಾಸ್ ಸರ್‌. ಸೂಫಿಯುಂ ಸುಜಾದಯುಂನಲ್ಲಿ ನಮಗಾಗಿ ರಚಿಸಿದ ಸುಂದರವಾದ ಸ್ಥಳವನ್ನು ನಿಮ್ಮ ಸೂಫಿ ಆತ್ಮ ಕಂಡುಕೊಳ್ಳುತ್ತದೆ. ತುಂಬಾ ಬೇಗ ಹೋದಿರಿ, ನಿಮ್ಮ ಕುಟುಂಬಕ್ಕೆ ನನ್ನ ಸಂತಾಪ” ಎಂದು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆದಿದ್ದಾರೆ.

ಚಿತ್ರದ ಸಹನಟನಾದ ಜಯಸೂರ್ಯ ಕೂಡಾ ತಮ್ಮ ನಿರ್ದೇಶಕನ ಸಾವಿಗೆ ಶ್ರದ್ದಾಂಜಲಿ ಕೋರಿದ್ದಾರೆ.

ಇದನ್ನೂ ಓದಿ: ನುಡಿ ನಮನ | ಮಾನವೀಯ ಕತೆಗಳನ್ನು ಕಟ್ಟಿಕೊಟ್ಟ ನಿರ್ದೇಶಕ ‘ಕಿಮ್‌ ಕಿ ಡುಕ್‌’

’ಸೂಫಿಯುಂ ಸುಜಾದಯುಂ’ ಸಿನಿಮಾದಲ್ಲಿ ’ಮುಲ್ಲಾ ಬಝಾರ್‌’ ಎಂಬ ಪ್ರೇಮದ ಸುಗಂಧ‌ ಮಾರುವ ಮಾರುಕಟ್ಟೆ ಕಾಣುತ್ತದೆ. ಇಲ್ಲಿ ಸುಗಂಧದ ಬಾಟಲಿಯ ಮುಚ್ಚಳ ತೆರೆದು ಇಬ್ಬರಲ್ಲೂ ಪ್ರೇಮ ಮೂಡಿಸುವುದರೊಂದಿಗೆ ನಮ್ಮನ್ನೂ ಪ್ರೇಮ ಲೋಕಕ್ಕೆ ದೂಡಿದ್ದರು ಶಾನವಾಝ್. ಸುಮಧುರವಾದ ಆಜಾನ್‌‌ಗೆ ತಕ್ಕಂತೆ ಕಥಕ್ ನೃತ್ಯವಾಡುವ ನಾಯಕಿ ಇಡೀ ಚಿತ್ರದಲ್ಲಿ ಒಂದು ಮಾತೂ ಆಡದ ಮೂಕಿ. ತನ್ನ ಸೂಫೀ ಗುರುಗಳ ಸಮಾಧಿಯಿಂದ ಎದ್ದು ಬಂದ ನೇರಳೆ ಮರದಲ್ಲಿ ಹಣ್ಣು ಬಿಟ್ಟಾಗ ನಿನಗೆ ಮಾತು ಬರುತ್ತದೆ ಎಂದು ಸೂಫಿ ಹೇಳುತ್ತಾನೆ. ಆದರೆ ಮನೆಯವರ ಒತ್ತಾಯಕ್ಕೆ ಮಣಿದು ನಾಯಕಿಯು ಅನಿವಾಸಿ ಭಾರತೀಯನನ್ನು ಮದುವೆಯಾಗುವ ಆಕೆ ಸೂಫಿಯ ನೆನಪಲ್ಲೇ ಇರುತ್ತಾಳೆ.

ಚಿತ್ರದ ಜೀವಾಳವೇ ಪ್ರೇಮ. ತಿಳಿಯದವರ ಕಣ್ಣಲ್ಲಿ ಲವ್‌ ಜಿಹಾದ್ ಆಗಿರಬಹುದು ಎಂಬ ಅನುಮಾನ, ಆದರೆ ತಿಳಿದವರ ಕಣ್ಣಲ್ಲಿ ಅದು ಅಪ್ಪಟ ಪ್ರೇಮ. ಕೊನೆಗೊಮ್ಮೆ ತನ್ನ ಪ್ರೇಮಿಯನ್ನು ಭೇಟಿಯಾಗಲು ಬರುವ ಅನಿವಾರ್ಯ ಸಂದಂರ್ಭವೆ ಇಡೀ ಸಿನಿಮಾವನ್ನು ಜೀವಂತವಾಗಿಡುತ್ತದೆ. ಶಾನವಾಸ್ ಸಿನಿಮಾಗೆ ನಿರ್ದೇಶನ ಮಾಡಿರುವುದು ಮಾತ್ರವಲ್ಲದೆ, ಕತೆ ಕೂಡಾ ಅವರದ್ದೇ ಕಲ್ಪನೆಯದ್ದಾಗಿದೆ. ಒಂದು ಒಳ್ಳೆಯ ಸಿನಿಮಾ ನೀಡಿರುವ ಉದಯೋನ್ಮಕ ನಿರ್ದೇಶಕ ಅಗಲಿಕೆಯು, ಸಿನಿಮಾ ಪ್ರಿಯರನ್ನು ಕಣ್ಣೀರಾಗಿಸಿದೆ.

ಇದನ್ನೂ ಓದಿ: ಇಂಟರ್​​ನ್ಯಾಷನಲ್ ಎಮ್ಮಿ ಪ್ರಶಸ್ತಿ ಮುಡಿಗೇರಿಸಿಕೊಂಡ ’ಡೆಲ್ಲಿ ಕ್ರೈಂ’ ವೆಬ್ ಸರಣಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...