Homeಮುಖಪುಟಹೃದ್ಯ ಕತೆ ಕಟ್ಟಿಕೊಟ್ಟ ’ಸೂಫಿಯು ಸುಜಾದಯುಂ’ ನಿರ್ದೇಶಕ ’ಶಾನವಾಸ್’ ನಿಧನ

ಹೃದ್ಯ ಕತೆ ಕಟ್ಟಿಕೊಟ್ಟ ’ಸೂಫಿಯು ಸುಜಾದಯುಂ’ ನಿರ್ದೇಶಕ ’ಶಾನವಾಸ್’ ನಿಧನ

ಚಿತ್ರದ ಜೀವಾಳವೇ ಪ್ರೇಮ. ತಿಳಿಯದವರ ಕಣ್ಣಲ್ಲಿ ಲವ್‌ ಜಿಹಾದ್ ಆಗಿರಬಹುದು ಎಂಬ ಅನುಮಾನ, ಆದರೆ ತಿಳಿದವರ ಕಣ್ಣಲ್ಲಿ ಅದು ಅಪ್ಪಟ ಪ್ರೇಮ.

- Advertisement -
- Advertisement -

ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಸಿನಿಮಾ ಪ್ರಿಯರ ಮನಗೆದ್ದ ಇಬ್ಬರು ’ಸೂಫಿ’ಯರ ಅಮರ ಪ್ರೇಮದ ಕತೆಯಿರುವ ’ಸೂಫಿಯುಂ ಸುಜಾತಯುಂ’ ಚಿತ್ರದ ನಿರ್ದೇಶಕ ಶಾನವಾಸ್ ನಾರನೀಪುಳ ಅವರು ಹೃದಯಾಘಾತದಿಂದ ನಿನ್ನೆ ಮೃತಪಟ್ಟಿದ್ದಾರೆ.

ಶಾನವಾಸ್ ಅವರು ’ಕರಿ’ ಮತ್ತು ’ಸೂಫಿಯುಂ ಸುಜಾದಯುಂ’ ಎಂಬ ಎರಡು ಚಿತ್ರಗಳನ್ನಷ್ಟೇ ನಿರ್ದೇಶಿಸಿ ಹೆಸರು ಗಳಿಸಿದ್ದರು. ಇದರಲ್ಲಿ ಸೂಫಿಯುಂ ಸುಜಾದಯುಂ ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಒಟಿಟಿ ಫ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಯಾದ ಚಿತ್ರವಾಗಿದೆ. ಹೃದ್ಯ ಪ್ರೇಮ ಕತೆಯಿರುವ ಈ ಚಿತ್ರವು ಸಿನಮಾ ಪ್ರಿಯರ ಮನಸ್ಸನ್ನು ಗೆದ್ದಿತ್ತು. ಸಂಗೀತ, ಸಿನಿಮಾಟೋಗ್ರಾಫಿ, ಎಡಿಟಿಂಗ್ ಸೇರಿದಂತೆ ಬೇರೆಯೆ ಲೋಕಕ್ಕೆ ಕೊಂಡೊಯ್ಯುವ ಸಿನಿಮಾವಾಗಿದೆ ’ಸೂಫಿಯುಂ ಸುಜಾದಯುಂ’.

ಇದನ್ನೂ ಓದಿ: ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

ಸೂಫಿಯುಂ ಸುಜಾದಯುಂ ಚಿತ್ರದ ಒಂದು ದೃಶ್ಯ

ಚಿತ್ರದ ನಾಯಕಿ ಅದಿತಿ ರಾಮ್ ಹೈದರಿ, ತಮ್ಮ ಚಿತ್ರದ ನಿರ್ದೇಶಕನ ಸಾವಿನ ಬಗ್ಗೆ, “ಅವರ ಕಥೆಗಳಂತೆ ಅವರು ಮಾನವೀಯತೆ ಮತ್ತು ಸೂಕ್ಷ್ಮ ಮನಸ್ಸಿನವರಾಗಿದ್ದರು. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಶಾನವಾಸ್ ಸರ್‌. ಸೂಫಿಯುಂ ಸುಜಾದಯುಂನಲ್ಲಿ ನಮಗಾಗಿ ರಚಿಸಿದ ಸುಂದರವಾದ ಸ್ಥಳವನ್ನು ನಿಮ್ಮ ಸೂಫಿ ಆತ್ಮ ಕಂಡುಕೊಳ್ಳುತ್ತದೆ. ತುಂಬಾ ಬೇಗ ಹೋದಿರಿ, ನಿಮ್ಮ ಕುಟುಂಬಕ್ಕೆ ನನ್ನ ಸಂತಾಪ” ಎಂದು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆದಿದ್ದಾರೆ.

ಚಿತ್ರದ ಸಹನಟನಾದ ಜಯಸೂರ್ಯ ಕೂಡಾ ತಮ್ಮ ನಿರ್ದೇಶಕನ ಸಾವಿಗೆ ಶ್ರದ್ದಾಂಜಲಿ ಕೋರಿದ್ದಾರೆ.

ಇದನ್ನೂ ಓದಿ: ನುಡಿ ನಮನ | ಮಾನವೀಯ ಕತೆಗಳನ್ನು ಕಟ್ಟಿಕೊಟ್ಟ ನಿರ್ದೇಶಕ ‘ಕಿಮ್‌ ಕಿ ಡುಕ್‌’

’ಸೂಫಿಯುಂ ಸುಜಾದಯುಂ’ ಸಿನಿಮಾದಲ್ಲಿ ’ಮುಲ್ಲಾ ಬಝಾರ್‌’ ಎಂಬ ಪ್ರೇಮದ ಸುಗಂಧ‌ ಮಾರುವ ಮಾರುಕಟ್ಟೆ ಕಾಣುತ್ತದೆ. ಇಲ್ಲಿ ಸುಗಂಧದ ಬಾಟಲಿಯ ಮುಚ್ಚಳ ತೆರೆದು ಇಬ್ಬರಲ್ಲೂ ಪ್ರೇಮ ಮೂಡಿಸುವುದರೊಂದಿಗೆ ನಮ್ಮನ್ನೂ ಪ್ರೇಮ ಲೋಕಕ್ಕೆ ದೂಡಿದ್ದರು ಶಾನವಾಝ್. ಸುಮಧುರವಾದ ಆಜಾನ್‌‌ಗೆ ತಕ್ಕಂತೆ ಕಥಕ್ ನೃತ್ಯವಾಡುವ ನಾಯಕಿ ಇಡೀ ಚಿತ್ರದಲ್ಲಿ ಒಂದು ಮಾತೂ ಆಡದ ಮೂಕಿ. ತನ್ನ ಸೂಫೀ ಗುರುಗಳ ಸಮಾಧಿಯಿಂದ ಎದ್ದು ಬಂದ ನೇರಳೆ ಮರದಲ್ಲಿ ಹಣ್ಣು ಬಿಟ್ಟಾಗ ನಿನಗೆ ಮಾತು ಬರುತ್ತದೆ ಎಂದು ಸೂಫಿ ಹೇಳುತ್ತಾನೆ. ಆದರೆ ಮನೆಯವರ ಒತ್ತಾಯಕ್ಕೆ ಮಣಿದು ನಾಯಕಿಯು ಅನಿವಾಸಿ ಭಾರತೀಯನನ್ನು ಮದುವೆಯಾಗುವ ಆಕೆ ಸೂಫಿಯ ನೆನಪಲ್ಲೇ ಇರುತ್ತಾಳೆ.

ಚಿತ್ರದ ಜೀವಾಳವೇ ಪ್ರೇಮ. ತಿಳಿಯದವರ ಕಣ್ಣಲ್ಲಿ ಲವ್‌ ಜಿಹಾದ್ ಆಗಿರಬಹುದು ಎಂಬ ಅನುಮಾನ, ಆದರೆ ತಿಳಿದವರ ಕಣ್ಣಲ್ಲಿ ಅದು ಅಪ್ಪಟ ಪ್ರೇಮ. ಕೊನೆಗೊಮ್ಮೆ ತನ್ನ ಪ್ರೇಮಿಯನ್ನು ಭೇಟಿಯಾಗಲು ಬರುವ ಅನಿವಾರ್ಯ ಸಂದಂರ್ಭವೆ ಇಡೀ ಸಿನಿಮಾವನ್ನು ಜೀವಂತವಾಗಿಡುತ್ತದೆ. ಶಾನವಾಸ್ ಸಿನಿಮಾಗೆ ನಿರ್ದೇಶನ ಮಾಡಿರುವುದು ಮಾತ್ರವಲ್ಲದೆ, ಕತೆ ಕೂಡಾ ಅವರದ್ದೇ ಕಲ್ಪನೆಯದ್ದಾಗಿದೆ. ಒಂದು ಒಳ್ಳೆಯ ಸಿನಿಮಾ ನೀಡಿರುವ ಉದಯೋನ್ಮಕ ನಿರ್ದೇಶಕ ಅಗಲಿಕೆಯು, ಸಿನಿಮಾ ಪ್ರಿಯರನ್ನು ಕಣ್ಣೀರಾಗಿಸಿದೆ.

ಇದನ್ನೂ ಓದಿ: ಇಂಟರ್​​ನ್ಯಾಷನಲ್ ಎಮ್ಮಿ ಪ್ರಶಸ್ತಿ ಮುಡಿಗೇರಿಸಿಕೊಂಡ ’ಡೆಲ್ಲಿ ಕ್ರೈಂ’ ವೆಬ್ ಸರಣಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...