Homeಮುಖಪುಟಹೃದ್ಯ ಕತೆ ಕಟ್ಟಿಕೊಟ್ಟ ’ಸೂಫಿಯು ಸುಜಾದಯುಂ’ ನಿರ್ದೇಶಕ ’ಶಾನವಾಸ್’ ನಿಧನ

ಹೃದ್ಯ ಕತೆ ಕಟ್ಟಿಕೊಟ್ಟ ’ಸೂಫಿಯು ಸುಜಾದಯುಂ’ ನಿರ್ದೇಶಕ ’ಶಾನವಾಸ್’ ನಿಧನ

ಚಿತ್ರದ ಜೀವಾಳವೇ ಪ್ರೇಮ. ತಿಳಿಯದವರ ಕಣ್ಣಲ್ಲಿ ಲವ್‌ ಜಿಹಾದ್ ಆಗಿರಬಹುದು ಎಂಬ ಅನುಮಾನ, ಆದರೆ ತಿಳಿದವರ ಕಣ್ಣಲ್ಲಿ ಅದು ಅಪ್ಪಟ ಪ್ರೇಮ.

- Advertisement -
- Advertisement -

ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಸಿನಿಮಾ ಪ್ರಿಯರ ಮನಗೆದ್ದ ಇಬ್ಬರು ’ಸೂಫಿ’ಯರ ಅಮರ ಪ್ರೇಮದ ಕತೆಯಿರುವ ’ಸೂಫಿಯುಂ ಸುಜಾತಯುಂ’ ಚಿತ್ರದ ನಿರ್ದೇಶಕ ಶಾನವಾಸ್ ನಾರನೀಪುಳ ಅವರು ಹೃದಯಾಘಾತದಿಂದ ನಿನ್ನೆ ಮೃತಪಟ್ಟಿದ್ದಾರೆ.

ಶಾನವಾಸ್ ಅವರು ’ಕರಿ’ ಮತ್ತು ’ಸೂಫಿಯುಂ ಸುಜಾದಯುಂ’ ಎಂಬ ಎರಡು ಚಿತ್ರಗಳನ್ನಷ್ಟೇ ನಿರ್ದೇಶಿಸಿ ಹೆಸರು ಗಳಿಸಿದ್ದರು. ಇದರಲ್ಲಿ ಸೂಫಿಯುಂ ಸುಜಾದಯುಂ ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಒಟಿಟಿ ಫ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಯಾದ ಚಿತ್ರವಾಗಿದೆ. ಹೃದ್ಯ ಪ್ರೇಮ ಕತೆಯಿರುವ ಈ ಚಿತ್ರವು ಸಿನಮಾ ಪ್ರಿಯರ ಮನಸ್ಸನ್ನು ಗೆದ್ದಿತ್ತು. ಸಂಗೀತ, ಸಿನಿಮಾಟೋಗ್ರಾಫಿ, ಎಡಿಟಿಂಗ್ ಸೇರಿದಂತೆ ಬೇರೆಯೆ ಲೋಕಕ್ಕೆ ಕೊಂಡೊಯ್ಯುವ ಸಿನಿಮಾವಾಗಿದೆ ’ಸೂಫಿಯುಂ ಸುಜಾದಯುಂ’.

ಇದನ್ನೂ ಓದಿ: ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

ಸೂಫಿಯುಂ ಸುಜಾದಯುಂ ಚಿತ್ರದ ಒಂದು ದೃಶ್ಯ

ಚಿತ್ರದ ನಾಯಕಿ ಅದಿತಿ ರಾಮ್ ಹೈದರಿ, ತಮ್ಮ ಚಿತ್ರದ ನಿರ್ದೇಶಕನ ಸಾವಿನ ಬಗ್ಗೆ, “ಅವರ ಕಥೆಗಳಂತೆ ಅವರು ಮಾನವೀಯತೆ ಮತ್ತು ಸೂಕ್ಷ್ಮ ಮನಸ್ಸಿನವರಾಗಿದ್ದರು. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಶಾನವಾಸ್ ಸರ್‌. ಸೂಫಿಯುಂ ಸುಜಾದಯುಂನಲ್ಲಿ ನಮಗಾಗಿ ರಚಿಸಿದ ಸುಂದರವಾದ ಸ್ಥಳವನ್ನು ನಿಮ್ಮ ಸೂಫಿ ಆತ್ಮ ಕಂಡುಕೊಳ್ಳುತ್ತದೆ. ತುಂಬಾ ಬೇಗ ಹೋದಿರಿ, ನಿಮ್ಮ ಕುಟುಂಬಕ್ಕೆ ನನ್ನ ಸಂತಾಪ” ಎಂದು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆದಿದ್ದಾರೆ.

ಚಿತ್ರದ ಸಹನಟನಾದ ಜಯಸೂರ್ಯ ಕೂಡಾ ತಮ್ಮ ನಿರ್ದೇಶಕನ ಸಾವಿಗೆ ಶ್ರದ್ದಾಂಜಲಿ ಕೋರಿದ್ದಾರೆ.

ಇದನ್ನೂ ಓದಿ: ನುಡಿ ನಮನ | ಮಾನವೀಯ ಕತೆಗಳನ್ನು ಕಟ್ಟಿಕೊಟ್ಟ ನಿರ್ದೇಶಕ ‘ಕಿಮ್‌ ಕಿ ಡುಕ್‌’

’ಸೂಫಿಯುಂ ಸುಜಾದಯುಂ’ ಸಿನಿಮಾದಲ್ಲಿ ’ಮುಲ್ಲಾ ಬಝಾರ್‌’ ಎಂಬ ಪ್ರೇಮದ ಸುಗಂಧ‌ ಮಾರುವ ಮಾರುಕಟ್ಟೆ ಕಾಣುತ್ತದೆ. ಇಲ್ಲಿ ಸುಗಂಧದ ಬಾಟಲಿಯ ಮುಚ್ಚಳ ತೆರೆದು ಇಬ್ಬರಲ್ಲೂ ಪ್ರೇಮ ಮೂಡಿಸುವುದರೊಂದಿಗೆ ನಮ್ಮನ್ನೂ ಪ್ರೇಮ ಲೋಕಕ್ಕೆ ದೂಡಿದ್ದರು ಶಾನವಾಝ್. ಸುಮಧುರವಾದ ಆಜಾನ್‌‌ಗೆ ತಕ್ಕಂತೆ ಕಥಕ್ ನೃತ್ಯವಾಡುವ ನಾಯಕಿ ಇಡೀ ಚಿತ್ರದಲ್ಲಿ ಒಂದು ಮಾತೂ ಆಡದ ಮೂಕಿ. ತನ್ನ ಸೂಫೀ ಗುರುಗಳ ಸಮಾಧಿಯಿಂದ ಎದ್ದು ಬಂದ ನೇರಳೆ ಮರದಲ್ಲಿ ಹಣ್ಣು ಬಿಟ್ಟಾಗ ನಿನಗೆ ಮಾತು ಬರುತ್ತದೆ ಎಂದು ಸೂಫಿ ಹೇಳುತ್ತಾನೆ. ಆದರೆ ಮನೆಯವರ ಒತ್ತಾಯಕ್ಕೆ ಮಣಿದು ನಾಯಕಿಯು ಅನಿವಾಸಿ ಭಾರತೀಯನನ್ನು ಮದುವೆಯಾಗುವ ಆಕೆ ಸೂಫಿಯ ನೆನಪಲ್ಲೇ ಇರುತ್ತಾಳೆ.

ಚಿತ್ರದ ಜೀವಾಳವೇ ಪ್ರೇಮ. ತಿಳಿಯದವರ ಕಣ್ಣಲ್ಲಿ ಲವ್‌ ಜಿಹಾದ್ ಆಗಿರಬಹುದು ಎಂಬ ಅನುಮಾನ, ಆದರೆ ತಿಳಿದವರ ಕಣ್ಣಲ್ಲಿ ಅದು ಅಪ್ಪಟ ಪ್ರೇಮ. ಕೊನೆಗೊಮ್ಮೆ ತನ್ನ ಪ್ರೇಮಿಯನ್ನು ಭೇಟಿಯಾಗಲು ಬರುವ ಅನಿವಾರ್ಯ ಸಂದಂರ್ಭವೆ ಇಡೀ ಸಿನಿಮಾವನ್ನು ಜೀವಂತವಾಗಿಡುತ್ತದೆ. ಶಾನವಾಸ್ ಸಿನಿಮಾಗೆ ನಿರ್ದೇಶನ ಮಾಡಿರುವುದು ಮಾತ್ರವಲ್ಲದೆ, ಕತೆ ಕೂಡಾ ಅವರದ್ದೇ ಕಲ್ಪನೆಯದ್ದಾಗಿದೆ. ಒಂದು ಒಳ್ಳೆಯ ಸಿನಿಮಾ ನೀಡಿರುವ ಉದಯೋನ್ಮಕ ನಿರ್ದೇಶಕ ಅಗಲಿಕೆಯು, ಸಿನಿಮಾ ಪ್ರಿಯರನ್ನು ಕಣ್ಣೀರಾಗಿಸಿದೆ.

ಇದನ್ನೂ ಓದಿ: ಇಂಟರ್​​ನ್ಯಾಷನಲ್ ಎಮ್ಮಿ ಪ್ರಶಸ್ತಿ ಮುಡಿಗೇರಿಸಿಕೊಂಡ ’ಡೆಲ್ಲಿ ಕ್ರೈಂ’ ವೆಬ್ ಸರಣಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...