Homeಮುಖಪುಟಹೃದ್ಯ ಕತೆ ಕಟ್ಟಿಕೊಟ್ಟ ’ಸೂಫಿಯು ಸುಜಾದಯುಂ’ ನಿರ್ದೇಶಕ ’ಶಾನವಾಸ್’ ನಿಧನ

ಹೃದ್ಯ ಕತೆ ಕಟ್ಟಿಕೊಟ್ಟ ’ಸೂಫಿಯು ಸುಜಾದಯುಂ’ ನಿರ್ದೇಶಕ ’ಶಾನವಾಸ್’ ನಿಧನ

ಚಿತ್ರದ ಜೀವಾಳವೇ ಪ್ರೇಮ. ತಿಳಿಯದವರ ಕಣ್ಣಲ್ಲಿ ಲವ್‌ ಜಿಹಾದ್ ಆಗಿರಬಹುದು ಎಂಬ ಅನುಮಾನ, ಆದರೆ ತಿಳಿದವರ ಕಣ್ಣಲ್ಲಿ ಅದು ಅಪ್ಪಟ ಪ್ರೇಮ.

- Advertisement -
- Advertisement -

ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಸಿನಿಮಾ ಪ್ರಿಯರ ಮನಗೆದ್ದ ಇಬ್ಬರು ’ಸೂಫಿ’ಯರ ಅಮರ ಪ್ರೇಮದ ಕತೆಯಿರುವ ’ಸೂಫಿಯುಂ ಸುಜಾತಯುಂ’ ಚಿತ್ರದ ನಿರ್ದೇಶಕ ಶಾನವಾಸ್ ನಾರನೀಪುಳ ಅವರು ಹೃದಯಾಘಾತದಿಂದ ನಿನ್ನೆ ಮೃತಪಟ್ಟಿದ್ದಾರೆ.

ಶಾನವಾಸ್ ಅವರು ’ಕರಿ’ ಮತ್ತು ’ಸೂಫಿಯುಂ ಸುಜಾದಯುಂ’ ಎಂಬ ಎರಡು ಚಿತ್ರಗಳನ್ನಷ್ಟೇ ನಿರ್ದೇಶಿಸಿ ಹೆಸರು ಗಳಿಸಿದ್ದರು. ಇದರಲ್ಲಿ ಸೂಫಿಯುಂ ಸುಜಾದಯುಂ ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಒಟಿಟಿ ಫ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಯಾದ ಚಿತ್ರವಾಗಿದೆ. ಹೃದ್ಯ ಪ್ರೇಮ ಕತೆಯಿರುವ ಈ ಚಿತ್ರವು ಸಿನಮಾ ಪ್ರಿಯರ ಮನಸ್ಸನ್ನು ಗೆದ್ದಿತ್ತು. ಸಂಗೀತ, ಸಿನಿಮಾಟೋಗ್ರಾಫಿ, ಎಡಿಟಿಂಗ್ ಸೇರಿದಂತೆ ಬೇರೆಯೆ ಲೋಕಕ್ಕೆ ಕೊಂಡೊಯ್ಯುವ ಸಿನಿಮಾವಾಗಿದೆ ’ಸೂಫಿಯುಂ ಸುಜಾದಯುಂ’.

ಇದನ್ನೂ ಓದಿ: ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

ಸೂಫಿಯುಂ ಸುಜಾದಯುಂ ಚಿತ್ರದ ಒಂದು ದೃಶ್ಯ

ಚಿತ್ರದ ನಾಯಕಿ ಅದಿತಿ ರಾಮ್ ಹೈದರಿ, ತಮ್ಮ ಚಿತ್ರದ ನಿರ್ದೇಶಕನ ಸಾವಿನ ಬಗ್ಗೆ, “ಅವರ ಕಥೆಗಳಂತೆ ಅವರು ಮಾನವೀಯತೆ ಮತ್ತು ಸೂಕ್ಷ್ಮ ಮನಸ್ಸಿನವರಾಗಿದ್ದರು. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಶಾನವಾಸ್ ಸರ್‌. ಸೂಫಿಯುಂ ಸುಜಾದಯುಂನಲ್ಲಿ ನಮಗಾಗಿ ರಚಿಸಿದ ಸುಂದರವಾದ ಸ್ಥಳವನ್ನು ನಿಮ್ಮ ಸೂಫಿ ಆತ್ಮ ಕಂಡುಕೊಳ್ಳುತ್ತದೆ. ತುಂಬಾ ಬೇಗ ಹೋದಿರಿ, ನಿಮ್ಮ ಕುಟುಂಬಕ್ಕೆ ನನ್ನ ಸಂತಾಪ” ಎಂದು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆದಿದ್ದಾರೆ.

ಚಿತ್ರದ ಸಹನಟನಾದ ಜಯಸೂರ್ಯ ಕೂಡಾ ತಮ್ಮ ನಿರ್ದೇಶಕನ ಸಾವಿಗೆ ಶ್ರದ್ದಾಂಜಲಿ ಕೋರಿದ್ದಾರೆ.

ಇದನ್ನೂ ಓದಿ: ನುಡಿ ನಮನ | ಮಾನವೀಯ ಕತೆಗಳನ್ನು ಕಟ್ಟಿಕೊಟ್ಟ ನಿರ್ದೇಶಕ ‘ಕಿಮ್‌ ಕಿ ಡುಕ್‌’

’ಸೂಫಿಯುಂ ಸುಜಾದಯುಂ’ ಸಿನಿಮಾದಲ್ಲಿ ’ಮುಲ್ಲಾ ಬಝಾರ್‌’ ಎಂಬ ಪ್ರೇಮದ ಸುಗಂಧ‌ ಮಾರುವ ಮಾರುಕಟ್ಟೆ ಕಾಣುತ್ತದೆ. ಇಲ್ಲಿ ಸುಗಂಧದ ಬಾಟಲಿಯ ಮುಚ್ಚಳ ತೆರೆದು ಇಬ್ಬರಲ್ಲೂ ಪ್ರೇಮ ಮೂಡಿಸುವುದರೊಂದಿಗೆ ನಮ್ಮನ್ನೂ ಪ್ರೇಮ ಲೋಕಕ್ಕೆ ದೂಡಿದ್ದರು ಶಾನವಾಝ್. ಸುಮಧುರವಾದ ಆಜಾನ್‌‌ಗೆ ತಕ್ಕಂತೆ ಕಥಕ್ ನೃತ್ಯವಾಡುವ ನಾಯಕಿ ಇಡೀ ಚಿತ್ರದಲ್ಲಿ ಒಂದು ಮಾತೂ ಆಡದ ಮೂಕಿ. ತನ್ನ ಸೂಫೀ ಗುರುಗಳ ಸಮಾಧಿಯಿಂದ ಎದ್ದು ಬಂದ ನೇರಳೆ ಮರದಲ್ಲಿ ಹಣ್ಣು ಬಿಟ್ಟಾಗ ನಿನಗೆ ಮಾತು ಬರುತ್ತದೆ ಎಂದು ಸೂಫಿ ಹೇಳುತ್ತಾನೆ. ಆದರೆ ಮನೆಯವರ ಒತ್ತಾಯಕ್ಕೆ ಮಣಿದು ನಾಯಕಿಯು ಅನಿವಾಸಿ ಭಾರತೀಯನನ್ನು ಮದುವೆಯಾಗುವ ಆಕೆ ಸೂಫಿಯ ನೆನಪಲ್ಲೇ ಇರುತ್ತಾಳೆ.

ಚಿತ್ರದ ಜೀವಾಳವೇ ಪ್ರೇಮ. ತಿಳಿಯದವರ ಕಣ್ಣಲ್ಲಿ ಲವ್‌ ಜಿಹಾದ್ ಆಗಿರಬಹುದು ಎಂಬ ಅನುಮಾನ, ಆದರೆ ತಿಳಿದವರ ಕಣ್ಣಲ್ಲಿ ಅದು ಅಪ್ಪಟ ಪ್ರೇಮ. ಕೊನೆಗೊಮ್ಮೆ ತನ್ನ ಪ್ರೇಮಿಯನ್ನು ಭೇಟಿಯಾಗಲು ಬರುವ ಅನಿವಾರ್ಯ ಸಂದಂರ್ಭವೆ ಇಡೀ ಸಿನಿಮಾವನ್ನು ಜೀವಂತವಾಗಿಡುತ್ತದೆ. ಶಾನವಾಸ್ ಸಿನಿಮಾಗೆ ನಿರ್ದೇಶನ ಮಾಡಿರುವುದು ಮಾತ್ರವಲ್ಲದೆ, ಕತೆ ಕೂಡಾ ಅವರದ್ದೇ ಕಲ್ಪನೆಯದ್ದಾಗಿದೆ. ಒಂದು ಒಳ್ಳೆಯ ಸಿನಿಮಾ ನೀಡಿರುವ ಉದಯೋನ್ಮಕ ನಿರ್ದೇಶಕ ಅಗಲಿಕೆಯು, ಸಿನಿಮಾ ಪ್ರಿಯರನ್ನು ಕಣ್ಣೀರಾಗಿಸಿದೆ.

ಇದನ್ನೂ ಓದಿ: ಇಂಟರ್​​ನ್ಯಾಷನಲ್ ಎಮ್ಮಿ ಪ್ರಶಸ್ತಿ ಮುಡಿಗೇರಿಸಿಕೊಂಡ ’ಡೆಲ್ಲಿ ಕ್ರೈಂ’ ವೆಬ್ ಸರಣಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...