Homeಕರ್ನಾಟಕಸರ್ಕಾರದ ಆದೇಶದ ಹೊರತಾಗಿಯೂ ಸ್ಥಳಾಂತರವಾಗದ ಸಕ್ಕರೆ ನಿರ್ದೇಶನಾಲಯ; ಆಯುಕ್ತರು ಹೇಳಿದ್ದೇನು?

ಸರ್ಕಾರದ ಆದೇಶದ ಹೊರತಾಗಿಯೂ ಸ್ಥಳಾಂತರವಾಗದ ಸಕ್ಕರೆ ನಿರ್ದೇಶನಾಲಯ; ಆಯುಕ್ತರು ಹೇಳಿದ್ದೇನು?

- Advertisement -
- Advertisement -

ಉತ್ತರ ಕರ್ನಾಟಕದ ಕಬ್ಬು ಬೆಳೆಗಾರರು ಮತ್ತು ಸಕ್ಕೆರೆ ಕಾರ್ಖಾನೆಗಳ ಬಹುಕಾಲದ ಬೇಡಿಕೆಯನ್ನು ಮನ್ನಿಸಿರುವ ಸರ್ಕಾರ, ‘ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯ’ವನ್ನು ಬೆ೦ಗಳೂರಿನಿ೦ದ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಅಕ್ಟೋಬರ್‌ 1 ರಿ೦ದ ಜಾರಿಗೆ ಬರುವ೦ತೆ ಪೂರ್ಣ ಪ್ರಮಾಣದಲ್ಲಿ ಸ್ಥಳಾ೦ತರಿಸುವಂತೆ ಆದೇಶಿಸಿತ್ತು. ಆದರೆ ಸರ್ಕಾರ ಆದೇಶ ಹೊರಡಿಸಿ ತಿಂಗಳಾದರೂ ಸ್ಥಳಾಂತರದ ಸಲುವಾಗಿ ಯಾವುದೆ ಪ್ರಾಥಮಿಕ ಪ್ರಕ್ರಿಯೆಯು ನಡೆದಿಲ್ಲ ಎಂದು ಮೂಲಗಳನ್ನು ಉಲ್ಲೇಖಿಸಿ ‘ದಿಫೈಲ್‌’ ವರದಿ ಮಾಡಿದೆ.

ಸರ್ಕಾರವು ‘ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯ’ಯವನ್ನು ಪೂರ್ಣ ಪ್ರಮಾಣದಲ್ಲಿ ಬೆಳಗಾವಿಗೆ ಸ್ಥಳಾಂತರಿಸುವ ಬಗ್ಗೆ ಸೆಪ್ಟೆಂಬರ್‌ 30 ರಂದು ಆದೇಶ ಹೊರಡಿಸಿತ್ತು. ಜೊತೆಗೆ ಅಕ್ಟೋಬರ್‌ 8 ರಿಂದ ಬೆಳಗಾವಿಯಲ್ಲಿ ಕಚೇರಿ ಕಾರ್ಯಾರಂಭಿಸಲಿ ಎಂದು ಕೂಡಾ ಮುಖ್ಯಮಂತ್ರಿ ಬೊಮ್ಮಾಯಿ ಭರವಸೆಯು ನೀಡಿದ್ದರು. ಆದರೆ ಆದೇಶ ನೀಡಿ ಒಂದು ತಿಂಗಳಾದರೂ ಸ್ಥಳಾಂತರದ ಯಾವುದೆ ಪ್ರಕ್ರಿಯೆಗಳೂ ನಡೆದಿಲ್ಲ ಎಂದು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಮೂಲಗಳನ್ನು ಉಲ್ಲೇಖಿಸಿ ‘ದಿಫೈಲ್‌’ ವರದಿ ಮಾಡಿದೆ.

ಇದನ್ನೂ ಓದಿ: ಮೋದಿ ಚೀನಾ ಭಯಕ್ಕೆ ಚಹಾಗೆ ಚೀನಿ(ಸಕ್ಕರೆ) ಕೂಡಾ ಹಾಕುವುದಿಲ್ಲ: ಓವೈಸಿ ವ್ಯಂಗ್ಯ

ಉತ್ತರ ಕರ್ನಾಟಕ ಅಭಿವೃದ್ದಿಯ ಉದ್ದೇಶದಿಂದ ಕೆಲವು ಸರ್ಕಾರಿ ಕಚೇರಿಯನ್ನು ಬೆಳಗಾವಿಗೆ ಸ್ಥಳಾಂತರಿಸುವ ಪಟ್ಟಿಯಲ್ಲಿ ರಾಜ್ಯ ಸರ್ಕಾರವು 2019 ಜನವರಿ 10 ರಂದು ‘ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯ’ವನ್ನು ಸೇರಿಸಿತ್ತು. ಆದರೆ 2019 ರ ಸೆಪ್ಟೆಂಬರ್‌ 7 ರಂದು ಕಬ್ಬು ಅಭಿವೃದ್ಧಿ ಆಯುಕ್ತರು ಹಾಗೂ ಸಕ್ಕರೆ ನಿರ್ದೇಶಕರು, ನಿರ್ದೇಶನಾಯಲವನ್ನು ಬೆಳಗಾವಿಗೆ ಸ್ಥಳಾಂತರಿಸದೆ ಬೆಂಗಳೂರಿನಲ್ಲೇ ಉಳಿಸಿಕೊಳ್ಳುವಂತೆ ಪ್ರಸ್ತಾವನೆ ಸಲ್ಲಿಸಿದ್ದರು.

ಇದರ ನಂತರ, ಸ್ಥಳಾಂತರವಾಗಬೇಕಾದ ಎಲ್ಲಾ ಕಚೇರಿಗಳು 2019 ಅಕ್ಟೋಬರ್‌ ಅಂತ್ಯದೊಳಗೆ ಸ್ಥಳಾಂತರಗೊಳ್ಳಬೇಕು ಎಂದು 2019 ರ ಸೆಪ್ಟೆಂಬರ್‌ 23 ರಂದು ‘ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ’ಯಿಂದ ಅಧಿಸೂಚನೆ ಹೊರಡಿಸಲಾಗಿತ್ತು.

ಈ ನಡುವೆ ಕಬ್ಬು ನಿಯಂತ್ರಣ ಮಂಡಳಿಯ ತೀರ್ಮಾನದಂತೆ ಕಬ್ಬು ಅಭಿವೃದ್ಧಿ, ಸಕ್ಕರೆ ನಿರ್ದೇಶನಾಲಯವನ್ನು ಬೆಂಗಳೂರಿನಲ್ಲಿಯೇ ಉಳಿಸಿಕೊ೦ಡು ಬೆಳಗಾವಿಯಲ್ಲಿ ಒಂದು ಪ್ರಾಂತೀಯ ಕಚೇರಿ ತೆರೆಯಲು ಸರ್ಕಾರವು ಪರಿಶೀಲನೆ ನಡೆಸಿತ್ತು.

ಇದನ್ನೂ ಓದಿ: ಸಕ್ಕರೆ ಕಾರ್ಖಾನೆ ಮಾಲೀಕರಿಗೆ ‘ನಾಡೋಜ’: ಹಂಪಿ ವಿವಿ ಮೌಲ್ಯ ಕುಸಿತ ಎಂದ ಹಿರಿಯರು

ಇದರ ನಡುವೆ ಕಚೇರಿ ಸ್ಥಳಾಂತರಗೊಳ್ಳದ ಕುರಿತು ಎರೆಡೆರೆಡು ರಿಟ್ ಅರ್ಜಿ ಕೂಡಾ ಸಲ್ಲಿಕೆಯಾಗಿತ್ತು. ಹಲವಾರು ಬೆಳವಣಿಗೆ ನಡೆದು ಕೊನೆಗೆ ಕೃಷಿಕರು, ಜನರ ಮನವಿಯನ್ನು ಪರಿಗಣಿಸಿ ಅನಿವಾರ್ಯವಾಗಿ ರಾಜ್ಯ ಸರ್ಕಾರ 2021 ರ ಸೆಪ್ಟೆಂಬರ್‌ 30 ರಂದು ಅಕ್ಟೋಬರ್‌ 30 ರ ಒಳಗೆ ‘ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯ’ ಕಚೇರಿಯನ್ನು ಪೂರ್ಣ ಪ್ರಮಾಣದಲ್ಲಿ ಸ್ಥಳಾ೦ತರಿಸುವಂತೆ ಆದೇಶ ಹೊರಡಿಸಿತ್ತು. ಆದರೆ ಸರ್ಕಾರದ ಆದೇಶದ ಹೊರತಾಗಿಯು ಯಾವುದೇ ಬೆಳವಣಿಗೆ ಆಗಿಲ್ಲ ಎಂದು ವರದಿಯಾಗಿಲ್ಲ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕಬ್ಬು ಅಭಿವೃದ್ಧಿ ಆಯುಕ್ತರು ಹಾಗೂ ಸಕ್ಕರೆ ನಿರ್ದೇಶಕರು ಶಿವಾನಂದ ಎಚ್. ಕಲಕೇರಿ, “ಕಚೇರಿಯನ್ನು ಸಂಪೂರ್ಣವಾಗಿ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ” ಎಂದು ಹೇಳಿದ್ದಾರೆ.

ಈ ಬಗ್ಗೆ ಅವರು ಹೇಳಿಕೆಯನ್ನು ಬಿಡುಗಡೆಗೊಳಿಸಿದ್ದಾರೆ. ಅದರಲ್ಲಿ ಅವರು, “ಈ ಕಾರ್ಯಾಲಯವು 1973ರಿಂದ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ರೀತಿಯ ರಾಜ್ಯ ಮಟ್ಟದ ದೊಡ್ಡ ಕಚೇರಿಯನ್ನು ತಕ್ಷಣ ಸ್ಥಳಾಂತರಿಸಲು ಹಲವು ಅಡೆತಡೆಗಳಿರುತ್ತವೆ. ನಿತ್ಯವೂ ನಡೆಯುವ ಕಚೇರಿಯ ಕಾರ್ಯಚಟುವಟಿಕೆಗಳನ್ನು ಮುಂದುವರಿಸಿಕೊಂಡೇ ಹಂತ ಹಂತವಾಗಿ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ತಾತ್ಕಾಲಿಕವಾಗಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಕಚೇರಿ ಆರಂಭಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಕಚೇರಿಯನ್ನು ಪೂರ್ಣ ಪ್ರಮಾಣದಲ್ಲಿ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಹಾಗೂ ಸುವರ್ಣ ವಿಧಾನಸೌಧದ ಎಇ ಜೊತೆ ಚರ್ಚಿಸಲಾಗಿದೆ. ಸ್ಥಳವನ್ನೂ ಗುರುತಿಸಲಾಗಿದೆ. ಅಲ್ಲದೆ ತಾತ್ಕಾಲಿಕ ಕಚೇರಿಯಲ್ಲಿ ಶಾಶ್ವತವಾಗಿ ಸಿಬ್ಬಂದಿಯನ್ನು ನಿಯೋಜಿಸಿಲ್ಲ. ವಾರದಲ್ಲಿ ಒಂದೆರಡು ದಿನ ಒಂದಿಬ್ಬರನ್ನು ನಿಯೋಜಿಸಲಾಗುತ್ತಿದೆ. ನಾನೂ ಕೆಲವು ದಿನಗಳು ಪ್ರವಾಸ ಕೈಗೊಂಡಿದ್ದೇನೆ. ಬೆಂಗಳೂರಿನ ಕಚೇರಿಯಲ್ಲಿ 1.36 ಲಕ್ಷ ಫೈಲ್‌ಗಳ ದಾಸ್ತಾನು ಕಾರ್ಯ ಪ್ರಗತಿಯಲ್ಲಿದೆ. ಅದು ಮುಗಿದ ತಕ್ಷಣ ಕಚೇರಿಯನ್ನು ಪೂರ್ಣ ಪ್ರಮಾಣದಲ್ಲಿ ಬೆಳಗಾವಿಗೆ ಸ್ಥಳಾಂತರಿಸಲಾಗುವುದು. ಅಷ್ಟೊಂದು ಫೈಲ್‌ಗಳ ಪೂರ್ಣ ದಾಸ್ತಾನಿಗೆ ಸುಮಾರು ಮೂರು ತಿಂಗಳು ಕಾಲಾವಕಾಶ ಬೇಕಾಗಬಹುದು” ಎಂದು ಅವರು ಅಂದಾಜಿಸಿದ್ದಾರೆ.

ಇದನ್ನೂ ಓದಿ: ಹಳಿಯಾಳ: ಕಬ್ಬು ಬೆಳೆಗಾರರನ್ನು ಜಲ್ಲೆ ಮಾಡುತ್ತಿರುವ ’ಪ್ಯಾರಿ ಸಕ್ಕರೆ’ ದೊರೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...