Homeಕರ್ನಾಟಕಸರ್ಕಾರದ ಆದೇಶದ ಹೊರತಾಗಿಯೂ ಸ್ಥಳಾಂತರವಾಗದ ಸಕ್ಕರೆ ನಿರ್ದೇಶನಾಲಯ; ಆಯುಕ್ತರು ಹೇಳಿದ್ದೇನು?

ಸರ್ಕಾರದ ಆದೇಶದ ಹೊರತಾಗಿಯೂ ಸ್ಥಳಾಂತರವಾಗದ ಸಕ್ಕರೆ ನಿರ್ದೇಶನಾಲಯ; ಆಯುಕ್ತರು ಹೇಳಿದ್ದೇನು?

- Advertisement -
- Advertisement -

ಉತ್ತರ ಕರ್ನಾಟಕದ ಕಬ್ಬು ಬೆಳೆಗಾರರು ಮತ್ತು ಸಕ್ಕೆರೆ ಕಾರ್ಖಾನೆಗಳ ಬಹುಕಾಲದ ಬೇಡಿಕೆಯನ್ನು ಮನ್ನಿಸಿರುವ ಸರ್ಕಾರ, ‘ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯ’ವನ್ನು ಬೆ೦ಗಳೂರಿನಿ೦ದ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಅಕ್ಟೋಬರ್‌ 1 ರಿ೦ದ ಜಾರಿಗೆ ಬರುವ೦ತೆ ಪೂರ್ಣ ಪ್ರಮಾಣದಲ್ಲಿ ಸ್ಥಳಾ೦ತರಿಸುವಂತೆ ಆದೇಶಿಸಿತ್ತು. ಆದರೆ ಸರ್ಕಾರ ಆದೇಶ ಹೊರಡಿಸಿ ತಿಂಗಳಾದರೂ ಸ್ಥಳಾಂತರದ ಸಲುವಾಗಿ ಯಾವುದೆ ಪ್ರಾಥಮಿಕ ಪ್ರಕ್ರಿಯೆಯು ನಡೆದಿಲ್ಲ ಎಂದು ಮೂಲಗಳನ್ನು ಉಲ್ಲೇಖಿಸಿ ‘ದಿಫೈಲ್‌’ ವರದಿ ಮಾಡಿದೆ.

ಸರ್ಕಾರವು ‘ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯ’ಯವನ್ನು ಪೂರ್ಣ ಪ್ರಮಾಣದಲ್ಲಿ ಬೆಳಗಾವಿಗೆ ಸ್ಥಳಾಂತರಿಸುವ ಬಗ್ಗೆ ಸೆಪ್ಟೆಂಬರ್‌ 30 ರಂದು ಆದೇಶ ಹೊರಡಿಸಿತ್ತು. ಜೊತೆಗೆ ಅಕ್ಟೋಬರ್‌ 8 ರಿಂದ ಬೆಳಗಾವಿಯಲ್ಲಿ ಕಚೇರಿ ಕಾರ್ಯಾರಂಭಿಸಲಿ ಎಂದು ಕೂಡಾ ಮುಖ್ಯಮಂತ್ರಿ ಬೊಮ್ಮಾಯಿ ಭರವಸೆಯು ನೀಡಿದ್ದರು. ಆದರೆ ಆದೇಶ ನೀಡಿ ಒಂದು ತಿಂಗಳಾದರೂ ಸ್ಥಳಾಂತರದ ಯಾವುದೆ ಪ್ರಕ್ರಿಯೆಗಳೂ ನಡೆದಿಲ್ಲ ಎಂದು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಮೂಲಗಳನ್ನು ಉಲ್ಲೇಖಿಸಿ ‘ದಿಫೈಲ್‌’ ವರದಿ ಮಾಡಿದೆ.

ಇದನ್ನೂ ಓದಿ: ಮೋದಿ ಚೀನಾ ಭಯಕ್ಕೆ ಚಹಾಗೆ ಚೀನಿ(ಸಕ್ಕರೆ) ಕೂಡಾ ಹಾಕುವುದಿಲ್ಲ: ಓವೈಸಿ ವ್ಯಂಗ್ಯ

ಉತ್ತರ ಕರ್ನಾಟಕ ಅಭಿವೃದ್ದಿಯ ಉದ್ದೇಶದಿಂದ ಕೆಲವು ಸರ್ಕಾರಿ ಕಚೇರಿಯನ್ನು ಬೆಳಗಾವಿಗೆ ಸ್ಥಳಾಂತರಿಸುವ ಪಟ್ಟಿಯಲ್ಲಿ ರಾಜ್ಯ ಸರ್ಕಾರವು 2019 ಜನವರಿ 10 ರಂದು ‘ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯ’ವನ್ನು ಸೇರಿಸಿತ್ತು. ಆದರೆ 2019 ರ ಸೆಪ್ಟೆಂಬರ್‌ 7 ರಂದು ಕಬ್ಬು ಅಭಿವೃದ್ಧಿ ಆಯುಕ್ತರು ಹಾಗೂ ಸಕ್ಕರೆ ನಿರ್ದೇಶಕರು, ನಿರ್ದೇಶನಾಯಲವನ್ನು ಬೆಳಗಾವಿಗೆ ಸ್ಥಳಾಂತರಿಸದೆ ಬೆಂಗಳೂರಿನಲ್ಲೇ ಉಳಿಸಿಕೊಳ್ಳುವಂತೆ ಪ್ರಸ್ತಾವನೆ ಸಲ್ಲಿಸಿದ್ದರು.

ಇದರ ನಂತರ, ಸ್ಥಳಾಂತರವಾಗಬೇಕಾದ ಎಲ್ಲಾ ಕಚೇರಿಗಳು 2019 ಅಕ್ಟೋಬರ್‌ ಅಂತ್ಯದೊಳಗೆ ಸ್ಥಳಾಂತರಗೊಳ್ಳಬೇಕು ಎಂದು 2019 ರ ಸೆಪ್ಟೆಂಬರ್‌ 23 ರಂದು ‘ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ’ಯಿಂದ ಅಧಿಸೂಚನೆ ಹೊರಡಿಸಲಾಗಿತ್ತು.

ಈ ನಡುವೆ ಕಬ್ಬು ನಿಯಂತ್ರಣ ಮಂಡಳಿಯ ತೀರ್ಮಾನದಂತೆ ಕಬ್ಬು ಅಭಿವೃದ್ಧಿ, ಸಕ್ಕರೆ ನಿರ್ದೇಶನಾಲಯವನ್ನು ಬೆಂಗಳೂರಿನಲ್ಲಿಯೇ ಉಳಿಸಿಕೊ೦ಡು ಬೆಳಗಾವಿಯಲ್ಲಿ ಒಂದು ಪ್ರಾಂತೀಯ ಕಚೇರಿ ತೆರೆಯಲು ಸರ್ಕಾರವು ಪರಿಶೀಲನೆ ನಡೆಸಿತ್ತು.

ಇದನ್ನೂ ಓದಿ: ಸಕ್ಕರೆ ಕಾರ್ಖಾನೆ ಮಾಲೀಕರಿಗೆ ‘ನಾಡೋಜ’: ಹಂಪಿ ವಿವಿ ಮೌಲ್ಯ ಕುಸಿತ ಎಂದ ಹಿರಿಯರು

ಇದರ ನಡುವೆ ಕಚೇರಿ ಸ್ಥಳಾಂತರಗೊಳ್ಳದ ಕುರಿತು ಎರೆಡೆರೆಡು ರಿಟ್ ಅರ್ಜಿ ಕೂಡಾ ಸಲ್ಲಿಕೆಯಾಗಿತ್ತು. ಹಲವಾರು ಬೆಳವಣಿಗೆ ನಡೆದು ಕೊನೆಗೆ ಕೃಷಿಕರು, ಜನರ ಮನವಿಯನ್ನು ಪರಿಗಣಿಸಿ ಅನಿವಾರ್ಯವಾಗಿ ರಾಜ್ಯ ಸರ್ಕಾರ 2021 ರ ಸೆಪ್ಟೆಂಬರ್‌ 30 ರಂದು ಅಕ್ಟೋಬರ್‌ 30 ರ ಒಳಗೆ ‘ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯ’ ಕಚೇರಿಯನ್ನು ಪೂರ್ಣ ಪ್ರಮಾಣದಲ್ಲಿ ಸ್ಥಳಾ೦ತರಿಸುವಂತೆ ಆದೇಶ ಹೊರಡಿಸಿತ್ತು. ಆದರೆ ಸರ್ಕಾರದ ಆದೇಶದ ಹೊರತಾಗಿಯು ಯಾವುದೇ ಬೆಳವಣಿಗೆ ಆಗಿಲ್ಲ ಎಂದು ವರದಿಯಾಗಿಲ್ಲ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕಬ್ಬು ಅಭಿವೃದ್ಧಿ ಆಯುಕ್ತರು ಹಾಗೂ ಸಕ್ಕರೆ ನಿರ್ದೇಶಕರು ಶಿವಾನಂದ ಎಚ್. ಕಲಕೇರಿ, “ಕಚೇರಿಯನ್ನು ಸಂಪೂರ್ಣವಾಗಿ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ” ಎಂದು ಹೇಳಿದ್ದಾರೆ.

ಈ ಬಗ್ಗೆ ಅವರು ಹೇಳಿಕೆಯನ್ನು ಬಿಡುಗಡೆಗೊಳಿಸಿದ್ದಾರೆ. ಅದರಲ್ಲಿ ಅವರು, “ಈ ಕಾರ್ಯಾಲಯವು 1973ರಿಂದ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ರೀತಿಯ ರಾಜ್ಯ ಮಟ್ಟದ ದೊಡ್ಡ ಕಚೇರಿಯನ್ನು ತಕ್ಷಣ ಸ್ಥಳಾಂತರಿಸಲು ಹಲವು ಅಡೆತಡೆಗಳಿರುತ್ತವೆ. ನಿತ್ಯವೂ ನಡೆಯುವ ಕಚೇರಿಯ ಕಾರ್ಯಚಟುವಟಿಕೆಗಳನ್ನು ಮುಂದುವರಿಸಿಕೊಂಡೇ ಹಂತ ಹಂತವಾಗಿ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ತಾತ್ಕಾಲಿಕವಾಗಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಕಚೇರಿ ಆರಂಭಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಕಚೇರಿಯನ್ನು ಪೂರ್ಣ ಪ್ರಮಾಣದಲ್ಲಿ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಹಾಗೂ ಸುವರ್ಣ ವಿಧಾನಸೌಧದ ಎಇ ಜೊತೆ ಚರ್ಚಿಸಲಾಗಿದೆ. ಸ್ಥಳವನ್ನೂ ಗುರುತಿಸಲಾಗಿದೆ. ಅಲ್ಲದೆ ತಾತ್ಕಾಲಿಕ ಕಚೇರಿಯಲ್ಲಿ ಶಾಶ್ವತವಾಗಿ ಸಿಬ್ಬಂದಿಯನ್ನು ನಿಯೋಜಿಸಿಲ್ಲ. ವಾರದಲ್ಲಿ ಒಂದೆರಡು ದಿನ ಒಂದಿಬ್ಬರನ್ನು ನಿಯೋಜಿಸಲಾಗುತ್ತಿದೆ. ನಾನೂ ಕೆಲವು ದಿನಗಳು ಪ್ರವಾಸ ಕೈಗೊಂಡಿದ್ದೇನೆ. ಬೆಂಗಳೂರಿನ ಕಚೇರಿಯಲ್ಲಿ 1.36 ಲಕ್ಷ ಫೈಲ್‌ಗಳ ದಾಸ್ತಾನು ಕಾರ್ಯ ಪ್ರಗತಿಯಲ್ಲಿದೆ. ಅದು ಮುಗಿದ ತಕ್ಷಣ ಕಚೇರಿಯನ್ನು ಪೂರ್ಣ ಪ್ರಮಾಣದಲ್ಲಿ ಬೆಳಗಾವಿಗೆ ಸ್ಥಳಾಂತರಿಸಲಾಗುವುದು. ಅಷ್ಟೊಂದು ಫೈಲ್‌ಗಳ ಪೂರ್ಣ ದಾಸ್ತಾನಿಗೆ ಸುಮಾರು ಮೂರು ತಿಂಗಳು ಕಾಲಾವಕಾಶ ಬೇಕಾಗಬಹುದು” ಎಂದು ಅವರು ಅಂದಾಜಿಸಿದ್ದಾರೆ.

ಇದನ್ನೂ ಓದಿ: ಹಳಿಯಾಳ: ಕಬ್ಬು ಬೆಳೆಗಾರರನ್ನು ಜಲ್ಲೆ ಮಾಡುತ್ತಿರುವ ’ಪ್ಯಾರಿ ಸಕ್ಕರೆ’ ದೊರೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...