Homeಕರ್ನಾಟಕಸರ್ಕಾರದ ಆದೇಶದ ಹೊರತಾಗಿಯೂ ಸ್ಥಳಾಂತರವಾಗದ ಸಕ್ಕರೆ ನಿರ್ದೇಶನಾಲಯ; ಆಯುಕ್ತರು ಹೇಳಿದ್ದೇನು?

ಸರ್ಕಾರದ ಆದೇಶದ ಹೊರತಾಗಿಯೂ ಸ್ಥಳಾಂತರವಾಗದ ಸಕ್ಕರೆ ನಿರ್ದೇಶನಾಲಯ; ಆಯುಕ್ತರು ಹೇಳಿದ್ದೇನು?

- Advertisement -
- Advertisement -

ಉತ್ತರ ಕರ್ನಾಟಕದ ಕಬ್ಬು ಬೆಳೆಗಾರರು ಮತ್ತು ಸಕ್ಕೆರೆ ಕಾರ್ಖಾನೆಗಳ ಬಹುಕಾಲದ ಬೇಡಿಕೆಯನ್ನು ಮನ್ನಿಸಿರುವ ಸರ್ಕಾರ, ‘ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯ’ವನ್ನು ಬೆ೦ಗಳೂರಿನಿ೦ದ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಅಕ್ಟೋಬರ್‌ 1 ರಿ೦ದ ಜಾರಿಗೆ ಬರುವ೦ತೆ ಪೂರ್ಣ ಪ್ರಮಾಣದಲ್ಲಿ ಸ್ಥಳಾ೦ತರಿಸುವಂತೆ ಆದೇಶಿಸಿತ್ತು. ಆದರೆ ಸರ್ಕಾರ ಆದೇಶ ಹೊರಡಿಸಿ ತಿಂಗಳಾದರೂ ಸ್ಥಳಾಂತರದ ಸಲುವಾಗಿ ಯಾವುದೆ ಪ್ರಾಥಮಿಕ ಪ್ರಕ್ರಿಯೆಯು ನಡೆದಿಲ್ಲ ಎಂದು ಮೂಲಗಳನ್ನು ಉಲ್ಲೇಖಿಸಿ ‘ದಿಫೈಲ್‌’ ವರದಿ ಮಾಡಿದೆ.

ಸರ್ಕಾರವು ‘ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯ’ಯವನ್ನು ಪೂರ್ಣ ಪ್ರಮಾಣದಲ್ಲಿ ಬೆಳಗಾವಿಗೆ ಸ್ಥಳಾಂತರಿಸುವ ಬಗ್ಗೆ ಸೆಪ್ಟೆಂಬರ್‌ 30 ರಂದು ಆದೇಶ ಹೊರಡಿಸಿತ್ತು. ಜೊತೆಗೆ ಅಕ್ಟೋಬರ್‌ 8 ರಿಂದ ಬೆಳಗಾವಿಯಲ್ಲಿ ಕಚೇರಿ ಕಾರ್ಯಾರಂಭಿಸಲಿ ಎಂದು ಕೂಡಾ ಮುಖ್ಯಮಂತ್ರಿ ಬೊಮ್ಮಾಯಿ ಭರವಸೆಯು ನೀಡಿದ್ದರು. ಆದರೆ ಆದೇಶ ನೀಡಿ ಒಂದು ತಿಂಗಳಾದರೂ ಸ್ಥಳಾಂತರದ ಯಾವುದೆ ಪ್ರಕ್ರಿಯೆಗಳೂ ನಡೆದಿಲ್ಲ ಎಂದು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಮೂಲಗಳನ್ನು ಉಲ್ಲೇಖಿಸಿ ‘ದಿಫೈಲ್‌’ ವರದಿ ಮಾಡಿದೆ.

ಇದನ್ನೂ ಓದಿ: ಮೋದಿ ಚೀನಾ ಭಯಕ್ಕೆ ಚಹಾಗೆ ಚೀನಿ(ಸಕ್ಕರೆ) ಕೂಡಾ ಹಾಕುವುದಿಲ್ಲ: ಓವೈಸಿ ವ್ಯಂಗ್ಯ

ಉತ್ತರ ಕರ್ನಾಟಕ ಅಭಿವೃದ್ದಿಯ ಉದ್ದೇಶದಿಂದ ಕೆಲವು ಸರ್ಕಾರಿ ಕಚೇರಿಯನ್ನು ಬೆಳಗಾವಿಗೆ ಸ್ಥಳಾಂತರಿಸುವ ಪಟ್ಟಿಯಲ್ಲಿ ರಾಜ್ಯ ಸರ್ಕಾರವು 2019 ಜನವರಿ 10 ರಂದು ‘ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯ’ವನ್ನು ಸೇರಿಸಿತ್ತು. ಆದರೆ 2019 ರ ಸೆಪ್ಟೆಂಬರ್‌ 7 ರಂದು ಕಬ್ಬು ಅಭಿವೃದ್ಧಿ ಆಯುಕ್ತರು ಹಾಗೂ ಸಕ್ಕರೆ ನಿರ್ದೇಶಕರು, ನಿರ್ದೇಶನಾಯಲವನ್ನು ಬೆಳಗಾವಿಗೆ ಸ್ಥಳಾಂತರಿಸದೆ ಬೆಂಗಳೂರಿನಲ್ಲೇ ಉಳಿಸಿಕೊಳ್ಳುವಂತೆ ಪ್ರಸ್ತಾವನೆ ಸಲ್ಲಿಸಿದ್ದರು.

ಇದರ ನಂತರ, ಸ್ಥಳಾಂತರವಾಗಬೇಕಾದ ಎಲ್ಲಾ ಕಚೇರಿಗಳು 2019 ಅಕ್ಟೋಬರ್‌ ಅಂತ್ಯದೊಳಗೆ ಸ್ಥಳಾಂತರಗೊಳ್ಳಬೇಕು ಎಂದು 2019 ರ ಸೆಪ್ಟೆಂಬರ್‌ 23 ರಂದು ‘ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ’ಯಿಂದ ಅಧಿಸೂಚನೆ ಹೊರಡಿಸಲಾಗಿತ್ತು.

ಈ ನಡುವೆ ಕಬ್ಬು ನಿಯಂತ್ರಣ ಮಂಡಳಿಯ ತೀರ್ಮಾನದಂತೆ ಕಬ್ಬು ಅಭಿವೃದ್ಧಿ, ಸಕ್ಕರೆ ನಿರ್ದೇಶನಾಲಯವನ್ನು ಬೆಂಗಳೂರಿನಲ್ಲಿಯೇ ಉಳಿಸಿಕೊ೦ಡು ಬೆಳಗಾವಿಯಲ್ಲಿ ಒಂದು ಪ್ರಾಂತೀಯ ಕಚೇರಿ ತೆರೆಯಲು ಸರ್ಕಾರವು ಪರಿಶೀಲನೆ ನಡೆಸಿತ್ತು.

ಇದನ್ನೂ ಓದಿ: ಸಕ್ಕರೆ ಕಾರ್ಖಾನೆ ಮಾಲೀಕರಿಗೆ ‘ನಾಡೋಜ’: ಹಂಪಿ ವಿವಿ ಮೌಲ್ಯ ಕುಸಿತ ಎಂದ ಹಿರಿಯರು

ಇದರ ನಡುವೆ ಕಚೇರಿ ಸ್ಥಳಾಂತರಗೊಳ್ಳದ ಕುರಿತು ಎರೆಡೆರೆಡು ರಿಟ್ ಅರ್ಜಿ ಕೂಡಾ ಸಲ್ಲಿಕೆಯಾಗಿತ್ತು. ಹಲವಾರು ಬೆಳವಣಿಗೆ ನಡೆದು ಕೊನೆಗೆ ಕೃಷಿಕರು, ಜನರ ಮನವಿಯನ್ನು ಪರಿಗಣಿಸಿ ಅನಿವಾರ್ಯವಾಗಿ ರಾಜ್ಯ ಸರ್ಕಾರ 2021 ರ ಸೆಪ್ಟೆಂಬರ್‌ 30 ರಂದು ಅಕ್ಟೋಬರ್‌ 30 ರ ಒಳಗೆ ‘ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯ’ ಕಚೇರಿಯನ್ನು ಪೂರ್ಣ ಪ್ರಮಾಣದಲ್ಲಿ ಸ್ಥಳಾ೦ತರಿಸುವಂತೆ ಆದೇಶ ಹೊರಡಿಸಿತ್ತು. ಆದರೆ ಸರ್ಕಾರದ ಆದೇಶದ ಹೊರತಾಗಿಯು ಯಾವುದೇ ಬೆಳವಣಿಗೆ ಆಗಿಲ್ಲ ಎಂದು ವರದಿಯಾಗಿಲ್ಲ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕಬ್ಬು ಅಭಿವೃದ್ಧಿ ಆಯುಕ್ತರು ಹಾಗೂ ಸಕ್ಕರೆ ನಿರ್ದೇಶಕರು ಶಿವಾನಂದ ಎಚ್. ಕಲಕೇರಿ, “ಕಚೇರಿಯನ್ನು ಸಂಪೂರ್ಣವಾಗಿ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ” ಎಂದು ಹೇಳಿದ್ದಾರೆ.

ಈ ಬಗ್ಗೆ ಅವರು ಹೇಳಿಕೆಯನ್ನು ಬಿಡುಗಡೆಗೊಳಿಸಿದ್ದಾರೆ. ಅದರಲ್ಲಿ ಅವರು, “ಈ ಕಾರ್ಯಾಲಯವು 1973ರಿಂದ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ರೀತಿಯ ರಾಜ್ಯ ಮಟ್ಟದ ದೊಡ್ಡ ಕಚೇರಿಯನ್ನು ತಕ್ಷಣ ಸ್ಥಳಾಂತರಿಸಲು ಹಲವು ಅಡೆತಡೆಗಳಿರುತ್ತವೆ. ನಿತ್ಯವೂ ನಡೆಯುವ ಕಚೇರಿಯ ಕಾರ್ಯಚಟುವಟಿಕೆಗಳನ್ನು ಮುಂದುವರಿಸಿಕೊಂಡೇ ಹಂತ ಹಂತವಾಗಿ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ತಾತ್ಕಾಲಿಕವಾಗಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಕಚೇರಿ ಆರಂಭಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಕಚೇರಿಯನ್ನು ಪೂರ್ಣ ಪ್ರಮಾಣದಲ್ಲಿ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಹಾಗೂ ಸುವರ್ಣ ವಿಧಾನಸೌಧದ ಎಇ ಜೊತೆ ಚರ್ಚಿಸಲಾಗಿದೆ. ಸ್ಥಳವನ್ನೂ ಗುರುತಿಸಲಾಗಿದೆ. ಅಲ್ಲದೆ ತಾತ್ಕಾಲಿಕ ಕಚೇರಿಯಲ್ಲಿ ಶಾಶ್ವತವಾಗಿ ಸಿಬ್ಬಂದಿಯನ್ನು ನಿಯೋಜಿಸಿಲ್ಲ. ವಾರದಲ್ಲಿ ಒಂದೆರಡು ದಿನ ಒಂದಿಬ್ಬರನ್ನು ನಿಯೋಜಿಸಲಾಗುತ್ತಿದೆ. ನಾನೂ ಕೆಲವು ದಿನಗಳು ಪ್ರವಾಸ ಕೈಗೊಂಡಿದ್ದೇನೆ. ಬೆಂಗಳೂರಿನ ಕಚೇರಿಯಲ್ಲಿ 1.36 ಲಕ್ಷ ಫೈಲ್‌ಗಳ ದಾಸ್ತಾನು ಕಾರ್ಯ ಪ್ರಗತಿಯಲ್ಲಿದೆ. ಅದು ಮುಗಿದ ತಕ್ಷಣ ಕಚೇರಿಯನ್ನು ಪೂರ್ಣ ಪ್ರಮಾಣದಲ್ಲಿ ಬೆಳಗಾವಿಗೆ ಸ್ಥಳಾಂತರಿಸಲಾಗುವುದು. ಅಷ್ಟೊಂದು ಫೈಲ್‌ಗಳ ಪೂರ್ಣ ದಾಸ್ತಾನಿಗೆ ಸುಮಾರು ಮೂರು ತಿಂಗಳು ಕಾಲಾವಕಾಶ ಬೇಕಾಗಬಹುದು” ಎಂದು ಅವರು ಅಂದಾಜಿಸಿದ್ದಾರೆ.

ಇದನ್ನೂ ಓದಿ: ಹಳಿಯಾಳ: ಕಬ್ಬು ಬೆಳೆಗಾರರನ್ನು ಜಲ್ಲೆ ಮಾಡುತ್ತಿರುವ ’ಪ್ಯಾರಿ ಸಕ್ಕರೆ’ ದೊರೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...