Homeಕರ್ನಾಟಕಸರ್ಕಾರದ ಆದೇಶದ ಹೊರತಾಗಿಯೂ ಸ್ಥಳಾಂತರವಾಗದ ಸಕ್ಕರೆ ನಿರ್ದೇಶನಾಲಯ; ಆಯುಕ್ತರು ಹೇಳಿದ್ದೇನು?

ಸರ್ಕಾರದ ಆದೇಶದ ಹೊರತಾಗಿಯೂ ಸ್ಥಳಾಂತರವಾಗದ ಸಕ್ಕರೆ ನಿರ್ದೇಶನಾಲಯ; ಆಯುಕ್ತರು ಹೇಳಿದ್ದೇನು?

- Advertisement -
- Advertisement -

ಉತ್ತರ ಕರ್ನಾಟಕದ ಕಬ್ಬು ಬೆಳೆಗಾರರು ಮತ್ತು ಸಕ್ಕೆರೆ ಕಾರ್ಖಾನೆಗಳ ಬಹುಕಾಲದ ಬೇಡಿಕೆಯನ್ನು ಮನ್ನಿಸಿರುವ ಸರ್ಕಾರ, ‘ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯ’ವನ್ನು ಬೆ೦ಗಳೂರಿನಿ೦ದ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಅಕ್ಟೋಬರ್‌ 1 ರಿ೦ದ ಜಾರಿಗೆ ಬರುವ೦ತೆ ಪೂರ್ಣ ಪ್ರಮಾಣದಲ್ಲಿ ಸ್ಥಳಾ೦ತರಿಸುವಂತೆ ಆದೇಶಿಸಿತ್ತು. ಆದರೆ ಸರ್ಕಾರ ಆದೇಶ ಹೊರಡಿಸಿ ತಿಂಗಳಾದರೂ ಸ್ಥಳಾಂತರದ ಸಲುವಾಗಿ ಯಾವುದೆ ಪ್ರಾಥಮಿಕ ಪ್ರಕ್ರಿಯೆಯು ನಡೆದಿಲ್ಲ ಎಂದು ಮೂಲಗಳನ್ನು ಉಲ್ಲೇಖಿಸಿ ‘ದಿಫೈಲ್‌’ ವರದಿ ಮಾಡಿದೆ.

ಸರ್ಕಾರವು ‘ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯ’ಯವನ್ನು ಪೂರ್ಣ ಪ್ರಮಾಣದಲ್ಲಿ ಬೆಳಗಾವಿಗೆ ಸ್ಥಳಾಂತರಿಸುವ ಬಗ್ಗೆ ಸೆಪ್ಟೆಂಬರ್‌ 30 ರಂದು ಆದೇಶ ಹೊರಡಿಸಿತ್ತು. ಜೊತೆಗೆ ಅಕ್ಟೋಬರ್‌ 8 ರಿಂದ ಬೆಳಗಾವಿಯಲ್ಲಿ ಕಚೇರಿ ಕಾರ್ಯಾರಂಭಿಸಲಿ ಎಂದು ಕೂಡಾ ಮುಖ್ಯಮಂತ್ರಿ ಬೊಮ್ಮಾಯಿ ಭರವಸೆಯು ನೀಡಿದ್ದರು. ಆದರೆ ಆದೇಶ ನೀಡಿ ಒಂದು ತಿಂಗಳಾದರೂ ಸ್ಥಳಾಂತರದ ಯಾವುದೆ ಪ್ರಕ್ರಿಯೆಗಳೂ ನಡೆದಿಲ್ಲ ಎಂದು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಮೂಲಗಳನ್ನು ಉಲ್ಲೇಖಿಸಿ ‘ದಿಫೈಲ್‌’ ವರದಿ ಮಾಡಿದೆ.

ಇದನ್ನೂ ಓದಿ: ಮೋದಿ ಚೀನಾ ಭಯಕ್ಕೆ ಚಹಾಗೆ ಚೀನಿ(ಸಕ್ಕರೆ) ಕೂಡಾ ಹಾಕುವುದಿಲ್ಲ: ಓವೈಸಿ ವ್ಯಂಗ್ಯ

ಉತ್ತರ ಕರ್ನಾಟಕ ಅಭಿವೃದ್ದಿಯ ಉದ್ದೇಶದಿಂದ ಕೆಲವು ಸರ್ಕಾರಿ ಕಚೇರಿಯನ್ನು ಬೆಳಗಾವಿಗೆ ಸ್ಥಳಾಂತರಿಸುವ ಪಟ್ಟಿಯಲ್ಲಿ ರಾಜ್ಯ ಸರ್ಕಾರವು 2019 ಜನವರಿ 10 ರಂದು ‘ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯ’ವನ್ನು ಸೇರಿಸಿತ್ತು. ಆದರೆ 2019 ರ ಸೆಪ್ಟೆಂಬರ್‌ 7 ರಂದು ಕಬ್ಬು ಅಭಿವೃದ್ಧಿ ಆಯುಕ್ತರು ಹಾಗೂ ಸಕ್ಕರೆ ನಿರ್ದೇಶಕರು, ನಿರ್ದೇಶನಾಯಲವನ್ನು ಬೆಳಗಾವಿಗೆ ಸ್ಥಳಾಂತರಿಸದೆ ಬೆಂಗಳೂರಿನಲ್ಲೇ ಉಳಿಸಿಕೊಳ್ಳುವಂತೆ ಪ್ರಸ್ತಾವನೆ ಸಲ್ಲಿಸಿದ್ದರು.

ಇದರ ನಂತರ, ಸ್ಥಳಾಂತರವಾಗಬೇಕಾದ ಎಲ್ಲಾ ಕಚೇರಿಗಳು 2019 ಅಕ್ಟೋಬರ್‌ ಅಂತ್ಯದೊಳಗೆ ಸ್ಥಳಾಂತರಗೊಳ್ಳಬೇಕು ಎಂದು 2019 ರ ಸೆಪ್ಟೆಂಬರ್‌ 23 ರಂದು ‘ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ’ಯಿಂದ ಅಧಿಸೂಚನೆ ಹೊರಡಿಸಲಾಗಿತ್ತು.

ಈ ನಡುವೆ ಕಬ್ಬು ನಿಯಂತ್ರಣ ಮಂಡಳಿಯ ತೀರ್ಮಾನದಂತೆ ಕಬ್ಬು ಅಭಿವೃದ್ಧಿ, ಸಕ್ಕರೆ ನಿರ್ದೇಶನಾಲಯವನ್ನು ಬೆಂಗಳೂರಿನಲ್ಲಿಯೇ ಉಳಿಸಿಕೊ೦ಡು ಬೆಳಗಾವಿಯಲ್ಲಿ ಒಂದು ಪ್ರಾಂತೀಯ ಕಚೇರಿ ತೆರೆಯಲು ಸರ್ಕಾರವು ಪರಿಶೀಲನೆ ನಡೆಸಿತ್ತು.

ಇದನ್ನೂ ಓದಿ: ಸಕ್ಕರೆ ಕಾರ್ಖಾನೆ ಮಾಲೀಕರಿಗೆ ‘ನಾಡೋಜ’: ಹಂಪಿ ವಿವಿ ಮೌಲ್ಯ ಕುಸಿತ ಎಂದ ಹಿರಿಯರು

ಇದರ ನಡುವೆ ಕಚೇರಿ ಸ್ಥಳಾಂತರಗೊಳ್ಳದ ಕುರಿತು ಎರೆಡೆರೆಡು ರಿಟ್ ಅರ್ಜಿ ಕೂಡಾ ಸಲ್ಲಿಕೆಯಾಗಿತ್ತು. ಹಲವಾರು ಬೆಳವಣಿಗೆ ನಡೆದು ಕೊನೆಗೆ ಕೃಷಿಕರು, ಜನರ ಮನವಿಯನ್ನು ಪರಿಗಣಿಸಿ ಅನಿವಾರ್ಯವಾಗಿ ರಾಜ್ಯ ಸರ್ಕಾರ 2021 ರ ಸೆಪ್ಟೆಂಬರ್‌ 30 ರಂದು ಅಕ್ಟೋಬರ್‌ 30 ರ ಒಳಗೆ ‘ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯ’ ಕಚೇರಿಯನ್ನು ಪೂರ್ಣ ಪ್ರಮಾಣದಲ್ಲಿ ಸ್ಥಳಾ೦ತರಿಸುವಂತೆ ಆದೇಶ ಹೊರಡಿಸಿತ್ತು. ಆದರೆ ಸರ್ಕಾರದ ಆದೇಶದ ಹೊರತಾಗಿಯು ಯಾವುದೇ ಬೆಳವಣಿಗೆ ಆಗಿಲ್ಲ ಎಂದು ವರದಿಯಾಗಿಲ್ಲ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕಬ್ಬು ಅಭಿವೃದ್ಧಿ ಆಯುಕ್ತರು ಹಾಗೂ ಸಕ್ಕರೆ ನಿರ್ದೇಶಕರು ಶಿವಾನಂದ ಎಚ್. ಕಲಕೇರಿ, “ಕಚೇರಿಯನ್ನು ಸಂಪೂರ್ಣವಾಗಿ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ” ಎಂದು ಹೇಳಿದ್ದಾರೆ.

ಈ ಬಗ್ಗೆ ಅವರು ಹೇಳಿಕೆಯನ್ನು ಬಿಡುಗಡೆಗೊಳಿಸಿದ್ದಾರೆ. ಅದರಲ್ಲಿ ಅವರು, “ಈ ಕಾರ್ಯಾಲಯವು 1973ರಿಂದ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ರೀತಿಯ ರಾಜ್ಯ ಮಟ್ಟದ ದೊಡ್ಡ ಕಚೇರಿಯನ್ನು ತಕ್ಷಣ ಸ್ಥಳಾಂತರಿಸಲು ಹಲವು ಅಡೆತಡೆಗಳಿರುತ್ತವೆ. ನಿತ್ಯವೂ ನಡೆಯುವ ಕಚೇರಿಯ ಕಾರ್ಯಚಟುವಟಿಕೆಗಳನ್ನು ಮುಂದುವರಿಸಿಕೊಂಡೇ ಹಂತ ಹಂತವಾಗಿ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ತಾತ್ಕಾಲಿಕವಾಗಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಕಚೇರಿ ಆರಂಭಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಕಚೇರಿಯನ್ನು ಪೂರ್ಣ ಪ್ರಮಾಣದಲ್ಲಿ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಹಾಗೂ ಸುವರ್ಣ ವಿಧಾನಸೌಧದ ಎಇ ಜೊತೆ ಚರ್ಚಿಸಲಾಗಿದೆ. ಸ್ಥಳವನ್ನೂ ಗುರುತಿಸಲಾಗಿದೆ. ಅಲ್ಲದೆ ತಾತ್ಕಾಲಿಕ ಕಚೇರಿಯಲ್ಲಿ ಶಾಶ್ವತವಾಗಿ ಸಿಬ್ಬಂದಿಯನ್ನು ನಿಯೋಜಿಸಿಲ್ಲ. ವಾರದಲ್ಲಿ ಒಂದೆರಡು ದಿನ ಒಂದಿಬ್ಬರನ್ನು ನಿಯೋಜಿಸಲಾಗುತ್ತಿದೆ. ನಾನೂ ಕೆಲವು ದಿನಗಳು ಪ್ರವಾಸ ಕೈಗೊಂಡಿದ್ದೇನೆ. ಬೆಂಗಳೂರಿನ ಕಚೇರಿಯಲ್ಲಿ 1.36 ಲಕ್ಷ ಫೈಲ್‌ಗಳ ದಾಸ್ತಾನು ಕಾರ್ಯ ಪ್ರಗತಿಯಲ್ಲಿದೆ. ಅದು ಮುಗಿದ ತಕ್ಷಣ ಕಚೇರಿಯನ್ನು ಪೂರ್ಣ ಪ್ರಮಾಣದಲ್ಲಿ ಬೆಳಗಾವಿಗೆ ಸ್ಥಳಾಂತರಿಸಲಾಗುವುದು. ಅಷ್ಟೊಂದು ಫೈಲ್‌ಗಳ ಪೂರ್ಣ ದಾಸ್ತಾನಿಗೆ ಸುಮಾರು ಮೂರು ತಿಂಗಳು ಕಾಲಾವಕಾಶ ಬೇಕಾಗಬಹುದು” ಎಂದು ಅವರು ಅಂದಾಜಿಸಿದ್ದಾರೆ.

ಇದನ್ನೂ ಓದಿ: ಹಳಿಯಾಳ: ಕಬ್ಬು ಬೆಳೆಗಾರರನ್ನು ಜಲ್ಲೆ ಮಾಡುತ್ತಿರುವ ’ಪ್ಯಾರಿ ಸಕ್ಕರೆ’ ದೊರೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....