Homeಕರ್ನಾಟಕಅನುಮತಿ ಪಡೆಯುವವರೆಗೆ ಸಕ್ಕರೆ ಕಾರ್ಖಾನೆ ನಡೆಸಲಾಗದು: ಯತ್ನಾಳ್‌ ಕುಟುಂಬಕ್ಕೆ ಹೈಕೋರ್ಟ್‌ ಸೂಚನೆ

ಅನುಮತಿ ಪಡೆಯುವವರೆಗೆ ಸಕ್ಕರೆ ಕಾರ್ಖಾನೆ ನಡೆಸಲಾಗದು: ಯತ್ನಾಳ್‌ ಕುಟುಂಬಕ್ಕೆ ಹೈಕೋರ್ಟ್‌ ಸೂಚನೆ

- Advertisement -
- Advertisement -

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುಟುಂಬದ ಒಡೆತನದ ಸಿದ್ಧಸಿರಿ ಸಕ್ಕರೆ ಹಾಗೂ ಎಥೆನಾಲ್ ಘಟಕದ ಕಾರ್ಯಾಚರಣೆ ಸ್ಥಗಿತಗೊಳಿಸುವ ಕುರಿತು ಮಾಹಿತಿ ಪಡೆದು ತಿಳಿಸುವಂತೆ ಅರ್ಜಿದಾರರ ಪರ ವಕೀಲರಿಗೆ ಹೈಕೋರ್ಟ್ ಸೂಚನೆ ನೀಡಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಯತ್ನಾಳ್‌ ಪುತ್ರ ಹಾಗೂ ಸಂಸ್ಥೆಯ ನಿರ್ದೇಶಕ ರಮಣಗೌಡ ಬಿ ಪಾಟೀಲ್‌ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ ಎಸ್‌ ದಿನೇಶ್‌ ಕುಮಾರ್‌ ಮತ್ತು ನ್ಯಾಯಮೂರ್ತಿ ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ವೆಂಕಟೇಶ್‌ ದಳವಾಯಿ ಅವರು, ರಾಜಕೀಯ ಕಾರಣಕ್ಕಾಗಿ ಕಾರ್ಖಾನೆ ಮುಚ್ಚಲು ಒತ್ತಾಯಿಸಲಾಗುತ್ತಿದೆ ಎಂದು ಆರೋಪಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಕಾರ್ಖಾನೆ ನಿಯಮದ ಪ್ರಕಾರ ನಡೆಯುತ್ತಿಲ್ಲ. ಹಾಗಾಗಿ, ಕ್ರಮ ಕೈಗೊಳ್ಳಲಾಗುತ್ತಿದೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಎರಡೂ ಕಡೆಯ ವಾದ ಆಲಿಸಿದ ಪೀಠವು ಕಾರ್ಖಾನೆ ಮುಚ್ಚುವ ಸಂಬಂಧ ಅರ್ಜಿದಾರರಿಂದ ಮಾಹಿತಿ ಪಡೆದು ತಿಳಿಸಬೇಕು ಎಂದು ಸೂಚಿಸಿ ವಿಚಾರಣೆಯನ್ನು ಫೆಬ್ರವರಿ 8ಕ್ಕೆ ಮುಂದೂಡಿತು.

ಅರ್ಜಿದಾರರು 2021ರಲ್ಲಿ ಕಾರ್ಖಾನೆ ಖರೀದಿಸಿದ್ದು, ನಾವೀಗ 2024ರಲ್ಲಿದ್ದೇವೆ. ಈ ಅವಧಿಯಲ್ಲಿ ಅಗತ್ಯ ಅನುಮತಿ ಪಡೆಯಬೇಕಿತ್ತು. ಕಾನೂನಿನ ಪ್ರಕಾರ ನೀವು ಅನುಮತಿ ಪಡೆಯುವವರೆಗೆ ಕಾರ್ಖಾನೆ ನಡೆಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ಪ್ರಕರಣದ ಹಿನ್ನೆಲೆ : ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನಲ್ಲಿರುವ ಶಾಸಕ ಯತ್ನಾಳ್ ಕುಟುಂಬದ ಒಡೆತನದ ಸಿದ್ದಸಿರಿ ಸಕ್ಕರೆ ಹಾಗೂ ಎಥೆನಾಲ್ ಘಟಕ ಮುಚ್ಚುವಂತೆ ಕಲಬುರಗಿ ವಲಯದ ಹಿರಿಯ ಪರಿಸರ ಅಧಿಕಾರಿ ಜ.18ರಂದು ನೋಟಿಸ್ ಜಾರಿ ಮಾಡಿದ್ದರು. ಬಳಿಕ ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯೂ ಜ.25ರಂದು ಅದೇ ರೀತಿಯ ಆದೇಶ ನೀಡಿತ್ತು. ಈ ಎರಡೂ ಆದೇಶಗಳನ್ನು ರದ್ದು ಮಾಡುವಂತೆ ಯತ್ನಾಳ್ ಕುಟುಂಬಸ್ಥರು ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಮಾಲಿನ್ಯ ನಿಯಂತ್ರಣ ನಿಯಮಾವಳಿಗಳನ್ನು ಗಾಳಿಗೆ ತೂರಿ ಕಾರ್ಖಾನೆ ನಡೆಸುತ್ತಿದ್ದ ಆರೋಪ ಯತ್ನಾಳ್ ಕುಟುಂಬಸ್ಥರ ವಿರುದ್ದ ಕೇಳಿ ಬಂದಿದೆ. ವರದಿಗಳ ಪ್ರಕಾರ, ಅನುಮತಿ ಪಡೆಯದೆ ಬಾಯ್ಲರ್ ಆರಂಭ, ಕಬ್ಬು ಅರೆಯುವಿಕೆ, ತ್ಯಾಜ್ಯ ಸಂಸ್ಕರಣಾ ಘಟಕ ನಿರ್ಮಾಣ ಹಂತದಲ್ಲಿದ್ದರೂ ಅನುಮತಿ ಪಡೆಯದೆ ಡಿಸ್ಟಿಲರಿ ಘಟಕ ಸ್ಥಾಪಿಸಿದ್ದು ಸೇರಿದಂತೆ ಅನೇಕ ಆರೋಪಗಳು ಈ ಕಾರ್ಖಾನೆ ವಿರುದ್ದವಿದೆ.

ಇದನ್ನೂ ಓದಿ : ಭೂ ವಿಜ್ಞಾನಿ ಪ್ರತಿಮಾ ಕೊಲೆ ಪ್ರಕರಣ: ಕೋರ್ಟ್‌ಗೆ 600 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...