Homeಕರ್ನಾಟಕಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ಪ್ರತಿ ಟನ್ ಗೆ 3.500ರೂ ಬೆಂಬಲ ಬೆಲೆ ನಿಗದಿಗೆ ಒತ್ತಾಯ

ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ಪ್ರತಿ ಟನ್ ಗೆ 3.500ರೂ ಬೆಂಬಲ ಬೆಲೆ ನಿಗದಿಗೆ ಒತ್ತಾಯ

- Advertisement -
- Advertisement -

ಬೆಳಗಾವಿ: ಪ್ರತಿ ಟನ್‌ ಕಬ್ಬಿಗೆ 3,500 ರೂ. ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಸಿರು ಸೇನೆ ರೈತ ಸಂಘದ ಬ್ಯಾನರ್ ಅಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿ ಟನ್‌ಗೆ 3,200 ರೂ ನೀಡುವ ಸಕ್ಕರೆ ಕಾರ್ಖಾನೆಗಳ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಾರೆ.

ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಕಳೆದ 5 ದಿನಗಳಿಂದ ನಿರಂತರ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಬ್ಬು ಬೆಳೆಗಾರರು, ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಕಿಡಿಕಾರಿದ್ದಾರೆ.

ಕಳೆದ 5 ದಿನಗಳಿಂದ ರೈತರು ಬಿರುಸಿನ ಗಾಳಿಯಲ್ಲೂ, ಚಳಿಯಲ್ಲೂ ಅಹೋರಾತ್ರಿ ಕುಳಿತು ಹೋರಾಟ ನಡೆಸುತ್ತಿದ್ದಾರೆ. ಕೆಲವರು ಸ್ಥಳದಲ್ಲೇ ಅಡುಗೆ, ಊಟ, ನಿದ್ದೆ ಮಾಡುತ್ತಾ ಹೋರಾಟ ಮುಂದುವರೆಸುತ್ತಿದ್ದಾರೆ.

ಗೋಕಾಕ್ ಪಟ್ಟಣದಲ್ಲಿ, ವಿದ್ಯಾರ್ಥಿಗಳು ರೈತರೊಂದಿಗೆ ಸೇರಿ ಪ್ರಮುಖ ರಸ್ತೆಗಳ ತಡೆಹಿಡಿದರು. ಇದರಿಂದ ಬೆಳಗಾವಿ, ಸವದತ್ತಿ, ಮೂಡಲಗಿ ಮತ್ತು ಯರಗಟ್ಟಿಯನ್ನು ಸಂಪರ್ಕಿಸುವ ಪ್ರಮುಖ ಮಾರ್ಗಗಳಲ್ಲಿ ಸಂಚಾರ ಅಸ್ತವ್ಯಸ್ತಗೊಳ್ಳುವಂತಾಯಿತು.

ಹಸಿರು ಬಾವುಟಗಳನ್ನು ಹಿಡಿದಿರುವ ರೈತರು, ರಾಜ್ಯ ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. ಸರ್ಕಾರ ರೈತರ ಹಿತಾಸಕ್ತಿಗಳನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದ್ದಾರೆ.

ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ದಿನ ಕಳೆದಂತೆ ಪ್ರತಿಭಟನಾಕಾರರ ಸಂಖ್ಯೆ ಹೆಚ್ಚುತ್ತಲೇ ಇದೆ. ಪ್ರತಿಭಟನಾ ಸ್ಥಳದಲ್ಲಿಯೇ ರೈತರು ತಾತ್ಕಾಲಿಕ ಅಡುಗೆ ಮನೆಗಳನ್ನು ಸ್ಥಾಪಿಸಿದ್ದು, ಪ್ರತಿಭಟನಾಕಾರರಿಗೆ ಆಹಾರ ವಿತರಿಸುತ್ತಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಮತ್ತು ಹಲವಾರು ರೈತ ಸಂಘಟನೆಗಳು ಆಯೋಜಿಸಿರುವ ಈ ಪ್ರತಿಭಟನೆಯಲ್ಲಿ ಬೆಳಗಾವಿ ತ್ತು ಹತ್ತಿರದ ಜಿಲ್ಲೆಗಳಾದ್ಯಂತ ರೈತರು ಬೃಹತ್ ಪ್ರಮಾಣದಲ್ಲಿ ಭಾಗವಹಿಸಿದ್ದಾರೆ.

ಮೂಡಲಗಿ, ರಾಯಬಾಗ್ ಮತ್ತು ಗೋಕಾಕ್ ವಕೀಲರ ಸಂಘದ ವಕೀಲರು, ವಿವಿಧ ಭಾಗಗಳ ಮಾಜಿ ಸೈನಿಕರು, ವಿವಿಧ ಸಂಸ್ಥೆಗಳ ಮಠಾಧೀಶರು ಕೂಡ ಪ್ರತಿಭಟನಾಕಾರರನ್ನು ಭೇಟಿ ಮಾಡಿ ತಮ್ಮ ಬೆಂಬಲವನ್ನು ಘೋಷಿಸಿದ್ದಾರೆ.

ಪಕ್ಷಪಾತವಿಲ್ಲದೆ ಹಲವಾರು ನಾಯಕರು ಮತ್ತು ಚುನಾಯಿತ ಪ್ರತಿನಿಧಿಗಳು ರೈತರ ಬೆಂಬಲಕ್ಕೆ ನಿಂತಿದ್ದಾರೆ. ಸಂಸದ ಮತ್ತು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಸೋಮವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ರೈತರ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಇಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ರೈತರಿಗೆ ತಮ್ಮ ಪಕ್ಷದ ಬೆಂಬಲವನ್ನು ನೀಡಿದರು.

ಈ ನಡುವೆ ಪ್ರತಿಭಟನಾ ನಿರತ ರೈತರು ನೆರೆಯ ಮಹಾರಾಷ್ಟ್ರದ ಸಕ್ಕರೆ ಕಾರ್ಖಾನೆಗಳು ಟನ್‌ಗೆ 3,600 ರೂ. ಪಾವತಿಸುತ್ತಿದ್ದರೂ, ಕರ್ನಾಟಕ ಸರ್ಕಾರ ಮಾತ್ರ ನ್ಯಾಯಯುತ ಬೆಲೆ ನಿಗದಿಪಡಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಭಾನುವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್ ಅವರು ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು. ಆದರೆ, ಈ ಪ್ರಯತ್ನ ವಿಫಲವಾಯಿತು.

“ಜಿಲ್ಲಾಡಳಿತವು ಕಾರ್ಖಾನೆ ಮಾಲೀಕರೊಂದಿಗೆ ನಡೆಸಿದ ಮಾತುಕತೆಗಳು ತೃಪ್ತಿದಾಯಕ ನಿರ್ಧಾರವನ್ನು ಕೈಗೊಂಡಿದ್ದರೆ, ನಾವು ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವ ಕುರಿತು ಚಿಂತನೆ ನಡೆಸುತ್ತಿದ್ದೆವು. ಆದರೆ, ಅದು ಸಾಧ್ಯವಾಗಿಲ್ಲ. ಹಗಲು ರಾತ್ರಿ ಪ್ರತಿಭಟನೆ ಮುಂದುವರೆಸುತ್ತಿದ್ದೇವೆಂದು ರೈತ ಮುಖಂಡರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...