Homeಕರ್ನಾಟಕಸುಹಾಸ್‌ ಶೆಟ್ಟಿಯ ರೌಡಿ ಶೀಟ್‌ ತೆರೆದಿದ್ದು ಪುಣ್ಯಾತ್ಮ ಬೊಮ್ಮಾಯಿ: ದಿನೇಶ್ ಗುಂಡೂರಾವ್

ಸುಹಾಸ್‌ ಶೆಟ್ಟಿಯ ರೌಡಿ ಶೀಟ್‌ ತೆರೆದಿದ್ದು ಪುಣ್ಯಾತ್ಮ ಬೊಮ್ಮಾಯಿ: ದಿನೇಶ್ ಗುಂಡೂರಾವ್

ಬಿಜೆಪಿಯವರೇ ಕ್ರಿಮಿನಲ್‌ಗಳನ್ನು ಸೃಷ್ಟಿಸಿ, ಅವರ ಮೇಲೆ ರೌಡಿ ಶೀಟರ್ ತೆರೆದು, ಈ ಕ್ರಿಮಿನಲ್‌ಗಳ ಹೆಣ ಬಿದ್ದ ಕೂಡಲೆ ಮಹಾತ್ಮರಂತೆ ಬಿಂಬಿಸಿ ಹುತಾತ್ಮರನ್ನಾಗಿ‌ ಮಾಡುತ್ತಾರೆ

- Advertisement -
- Advertisement -

ಮಂಗಳೂರಿನಲ್ಲಿ ಇತ್ತಿಚೆಗೆ ಹತ್ಯೆಯಾದ ರೌಡಿ ಸುಹಾಸ್ ಶೆಟ್ಟಿಯನ್ನು ರೌಡಿಯನ್ನಾಗಿ ಪಟ್ಟಿ ಮಾಡಿದ್ದ ಪೊಲೀಸ್ ಆದೇಶದ ಪತ್ರವನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಮಂಗಳವಾರ ಬಿಡುಗಡೆ ಮಾಡಿದ್ದಾರೆ. ರೌಡಿ ಸುಹಾಸ್‌ನನ್ನು‌ ಇಂದು ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗ ಯಾಕೆ ರೌಡಿ ಪಟ್ಟಿಗೆ ಸೇರಿಸಿದ್ದರು? ಎಂದು ಅವರು ಇದೇ ವೇಳೆ ಪ್ರಶ್ನಿಸಿದ್ದಾರೆ. ಸುಹಾಸ್‌ ಶೆಟ್ಟಿಯ

ಈ ಬಗ್ಗೆ ಎಕ್ಸ್‌ನಲ್ಲಿ ಅದೇಶ ಪತ್ರವನ್ನು ಪೋಸ್ಟ್‌ ಮಾಡಿರುವ ಗುಂಡೂರಾವ್ ಅವರು,”ಅಮಾಯಕರ ತಲೆಯಲ್ಲಿ ಮತಾಂಧತೆಯ ಅಮಲು‌ ತುಂಬಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಿರುವ BJP ನಾಯಕರ ಗಮನಕ್ಕೆ. ಇದು ಇತ್ತೀಚೆಗೆ ಹತ್ಯೆಯಾದ ಸುಹಾಶ್ ಶೆಟ್ಟಿ ವಿರುದ್ದ ರೌಡಿ ಶೀಟರ್ ತೆರೆಯಲು ಪೊಲೀಸ್ ಇಲಾಖೆ ನೀಡಿದ್ದ ಆದೇಶದ ಪ್ರತಿ.” ಎಂದು ಅವರು ಹೇಳಿದ್ದಾರೆ.

“ಸುಹಾಸ್ ಶೆಟ್ಟಿ ವಿರುದ್ಧ ರೌಡಿ ಶೀಟರ್ ಓಪನ್ ಆಗಿದ್ದು 2020 ರಲ್ಲಿ. ಆಗ ಅಧಿಕಾರದಲ್ಲಿದ್ದದ್ದು ಬಿಜೆಪಿ ಸರ್ಕಾರ. ಗೃಹ ಸಚಿವರಾಗಿದ್ದ ಪುಣ್ಯಾತ್ಮ ಬಸವರಾಜ್ ಬೊಮ್ಮಾಯಿ. ಇಂದು ಸುಹಾಸ್‌ನನ್ನು‌ ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗ ಯಾಕೆ ಸುಹಾಸ್‌ನನ್ನು ರೌಡಿ ಪಟ್ಟಿಗೆ ಸೇರಿಸಿದ್ದರು?” ಎಂದು ಗುಂಡೂರಾವ್ ಪ್ರಶ್ನಿಸಿದ್ದಾರೆ.

“ಕರಾವಳಿಯನ್ನು ಕೋಮು‌ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿರುವ ಬಿಜೆಪಿಯವರೇ ಕ್ರಿಮಿನಲ್‌ಗಳ ನಿಜವಾದ ಸೃಷ್ಟಿಕರ್ತರು. ಇವರು‌ ಅಧಿಕಾರದಲ್ಲಿದ್ದಾಗ ಕ್ರಿಮಿನಲ್‌ಗಳನ್ನು ಸೃಷ್ಟಿಸುತ್ತಾರೆ. ಅವರ ಮೇಲೆ ರೌಡಿ ಶೀಟರ್ ತೆರೆಯುತ್ತಾರೆ. ಹೆಣ ಬಿದ್ದ ಕೂಡಲೆ ಅದೇ ಕ್ರಿಮಿನಲ್‌ಗಳನ್ನು‌ ಮಹಾತ್ಮರಂತೆ ಬಿಂಬಿಸಿ ಹುತಾತ್ಮರನ್ನಾಗಿ‌ ಮಾಡುತ್ತಾರೆ.” ಎಂದು ಅವರು ಹೇಳಿದ್ದಾರೆ.

“ಸುಹಾಸ್ ಹತ್ಯೆ ನಂತರ ಕೂಗುಮಾರಿಗಳಂತೆ ಅರಚುತ್ತಿರುವ ರಾಜ್ಯ ಬಿಜೆಪಿ ನಾಯಕರ‌ ಯಾರ ಮಕ್ಕಳಾದರೂ ಧರ್ಮದ ಅಮಲಿನಲ್ಲಿ ಬೀದಿ‌ ಕಾಳಗ ಮಾಡುತ್ತಿದ್ದಾರೆಯೆ.? ಅಥವಾ ಧರ್ಮಕ್ಕಾಗಿ ಬಡಿದಾಡುತ್ತಿದ್ದಾರೆಯೆ.? ಬಿಜೆಪಿ ನಾಯಕರ‌ ಧರ್ಮಾಂಧತೆಗೆ‌ ಬೀದಿ ಹೆಣವಾಗುತ್ತಿರುವುದು ಬಡವರ ಮಕ್ಕಳು. ಇದು ಸತ್ಯವಲ್ಲವೆ?” ಎಂದು ಅವರು ಇದೇ ವೇಳೆ ಪ್ರಶ್ನಿಸಿದ್ದಾರೆ.

“ಬಿಜೆಪಿಯವರ ‌ಕೆಟ್ಟ ರಾಜಕೀಯಕ್ಕೆ ಕರಾವಳಿಯಲ್ಲಿ ಎಷ್ಟೋ ಜನರ‌ ಬಲಿಯಾಗಿದೆ. ಎಷ್ಟೋ ಮನೆಗಳ‌‌ ದೀಪ ಆರಿ ಹೋಗಿದೆ. ಇಷ್ಟಾದರೂ ಇವರ ರಕ್ತದಾಹ ನಿಂತಿಲ್ಲ. ಕರಾವಳಿಯಲ್ಲಿ ಇನ್ನಷ್ಟು ಹೆಣ ಬೀಳಬೇಕು ಎನ್ನುವ ಉದ್ದೇಶದಿಂದ ‌ದುಷ್ಟ ರಾಜಕಾರಣ ಮಾಡುತ್ತಿದ್ದಾರೆ.” ಎಂದು ಅವರು ಹೇಳಿದ್ದಾರೆ.

“ದಕ್ಷಿಣ ಕನ್ನಡದ‌ ಜನ‌ ಪ್ರಜ್ಞಾವಂತಿಕೆಯ ಜೊತೆಗೆ ಸೂಕ್ಷ್ಮತೆಯನ್ನು ಅರಿತುಕೊಂಡವರು. ಇನ್ನಾದರೂ ಕರಾವಳಿಯ ಜನ ಬಿಜೆಪಿಯ ಹುನ್ನಾರ ಅರಿಯಬೇಕಿದೆ. ಇಲ್ಲದಿದ್ದರೆ‌ ಬಿಜೆಪಿಯವರ‌ ಕೆಟ್ಟ ರಾಜಕಾರಣಕ್ಕೆ ಜಿಲ್ಲೆಯ‌ ನೆಮ್ಮದಿಯೇ ಹಾಳಾಗಲಿದೆ.” ಎಂದು ಅವರು ಎಚ್ಚರಿಸಿದ್ದಾರೆ. ಸುಹಾಸ್‌ ಶೆಟ್ಟಿಯ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೊರಾದಾಬಾದ್ ನಲ್ಲಿರುವ 22 ಪಾಕಿಸ್ತಾನಿ ಮಹಿಳೆಯರಿಗೆ 500ಕ್ಕಿಂತ ಹೆಚ್ಚಿನ ಭಾರತೀಯ ಮಕ್ಕಳು, ಮೊಮ್ಮಕ್ಕಳು

ಮೊರಾದಾಬಾದ್ ನಲ್ಲಿರುವ 22 ಪಾಕಿಸ್ತಾನಿ ಮಹಿಳೆಯರಿಗೆ 500ಕ್ಕಿಂತ ಹೆಚ್ಚಿನ ಭಾರತೀಯ ಮಕ್ಕಳು, ಮೊಮ್ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ಬೆದರಿಕೆ: ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಸಭ್ಯವಾಗಿ ನಿಂದಿಸಿ,...

ಭೀಮಾ ಕೋರೆಗಾಂವ್ ಪ್ರಕರಣ: ನಾಲ್ಕು ವರ್ಷಗಳ ನಂತರ ಇಬ್ಬರಿಗೆ ಬಾಂಬೆ ಹೈಕೋರ್ಟ್‌ನಿಂದ ಜಾಮೀನು

ಎಲ್ಗರ್ ಪರಿಷತ್ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಾಲ್ಕು ವರ್ಷಗಳ ನಂತರ, ಸಾಮಾಜಿಕ ಕಾರ್ಯಕರ್ತರಾದ ಸಾಗರ್ ಗೋರ್ಖೆ ಮತ್ತು ರಮೇಶ್ ಗೈಚೋರ್ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಈಗಾಗಲೇ ಬಿಡುಗಡೆಯಾದ...

‘ಗುಜರಾತ್‌ನಂತೆಯೇ ಕೇರಳವೂ ಈಗ ಬಿಜೆಪಿಯ ಮೇಲೆ ನಂಬಿಕೆ ಇಟ್ಟಿದೆ’: ಪ್ರಧಾನಿ ನರೇಂದ್ರ ಮೋದಿ 

ತಿರುವನಂತಪುರಂ: ಕೇರಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಿರುವನಂತಪುರಂ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ವಿಜಯವನ್ನು "ಬದಲಾವಣೆಗೆ ಮಹತ್ವದ ಜನಾದೇಶ" ಎಂದು ಶ್ಲಾಘಿಸಿದ್ದಾರೆ.  ಇದೇ ವೇಳೆ "ಜನಪರ ಮತ್ತು...

ರಾಜಸ್ಥಾನ: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ನಡುವೆ ಪ್ರೀತಿ: ಮದುವೆಗಾಗಿ ಪೆರೋಲ್ ಮೇಲೆ ಹೊರ ಬಂದ ಕೊಲೆ ಅಪರಾಧಿಗಳು

ಜೈಪುರದ ಸಂಗನೇರ್ ಓಪನ್ ಜೈಲಿನಲ್ಲಿ(ಮುಕ್ತ ಜೈಲು) ಪ್ರಾರಂಭವಾದ ಇಬ್ಬರು ಕೊಲೆ ಅಪರಾಧಿಗಳ ನಡುವಿನ ಪ್ರಣಯವು ಸಾರ್ವಜನಿಕ ಜೀವನಕ್ಕೂ ಕಾಲಿರಿಸಿದೆ. ಕೊಲೆ ಪ್ರಕರಣಗಳಲ್ಲಿ ಜೀವಾವಧಿಗೆ ಒಳಗಾಗಿರುವ ಇಬ್ಬರು ಕೈದಿಗಳು ಮದುವೆಯಾಗಲು ಪೆರೋಲ್ ಮೇಲೆ ಹೊರಬಂದಿದ್ದಾರೆ. ಅಪರಾಧ...

‘ಅತ್ಯಾಚಾರ-ಕೊಲೆ ಸಣ್ಣ ಘಟನೆ’: ಸಂಸದ ರಾಜಶೇಖರ್ ಹಿಟ್ನಾಳ್ ವಿವಾದಾತ್ಮಕ ಹೇಳಿಕೆ: ಸಂಸದರ ಹೇಳಿಕೆಗೆ ವ್ಯಾಪಕ ಖಂಡನೆ 

ಕೊಪ್ಪಳ: ಒಂದು ವರ್ಷದ ಹಿಂದೆ ಸಾಣಾಪುರದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಹಾಗೂ ವ್ಯಕ್ತಿಯ ಕೊಲೆ ಪ್ರಕರಣ ಸಣ್ಣದಾಗಿದ್ದರೂ ಮಾಧ್ಯಮಗಳು ವೈಭವೀಕರಿಸಿದ್ದರಿಂದ ಪ್ರವಾಸೋದ್ಯಮಕ್ಕೆ ವ್ಯಾಪಕ ಪೆಟ್ಟು ಬಿದ್ದಿದೆ ಎಂದು ಸಂಸದ ರಾಜಶೇಖರ...

ರಾಹುಲ್ ಕಡೆಗಣನೆ ಆರೋಪ: ಅಸಮಾಧಾನಗೊಂಡ ಶಶಿ ತರೂರ್, ಕೇರಳ ಕಾಂಗ್ರೆಸ್ ಕಾರ್ಯತಂತ್ರದ ಸಭೆಗೆ ಗೈರಾಗುವ ಸಾಧ್ಯತೆ!

ನವದೆಹಲಿ: ಕೇರಳ ಕಾಂಗ್ರೆಸ್ ಘಟಕದಲ್ಲಿ ಹೊಸ ಬಿಕ್ಕಟ್ಟು ಉಂಟಾಗಿದ್ದು, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಪಕ್ಷದ ಕಾರ್ಯಕ್ರಮವೊಂದರಲ್ಲಿ ತಮ್ಮನ್ನು ಕಡೆಗಣಿಸಿದ್ದರಿಂದ ಅಸಮಾಧಾನಗೊಂಡಿರುವ ಹಿರಿಯ ಸಂಸದ ಶಶಿ ತರೂರ್, ಚುನಾವಣಾ...

ಒಡಿಶಾ| ಮದುವೆ ಪ್ರಸ್ತಾಪ ತಿರಸ್ಕರಿಸಿದ ಮಹಿಳೆ ಮೇಲೆ ಸೇಡು; ನಕಲಿ ಖಾತೆ ತೆರೆದು ಜಗನ್ನಾಥ ದೇಗುಲ ಸ್ಪೋಟಿಸುವ ಬೆದರಿಕೆ

ಮಹಿಳೆಯ ಹೆಸರಿನಲ್ಲಿ ನಕಲಿ ಸಾಮಾಜಿಕ ಮಾಧ್ಯಮ ಖಾತೆಯನ್ನು ರಚಿಸಿ ಒಡಿಶಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ...

ಬೈಕ್ ಟ್ಯಾಕ್ಸಿ ನಿಷೇಧ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್, ಪರ್ಮಿಟ್ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಜನವರಿ 23 ರಂದು ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಅನುಮತಿ ನೀಡಿದ್ದು, ಬೈಕ್ ಟ್ಯಾಕ್ಸಿ ಸಂಗ್ರಾಹಕರು, ವೈಯಕ್ತಿಕ ಬೈಕ್ ಟ್ಯಾಕ್ಸಿ ಮಾಲೀಕರು ಮತ್ತು ಇತರರು ಸಲ್ಲಿಸಿದ ಮೇಲ್ಮನವಿಗಳನ್ನು ಅಂಗೀಕರಿಸಿದೆ. ಮುಖ್ಯ...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 22 ಮಂದಿ ಅಸ್ವಸ್ಥ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಲುಷಿತ ನೀರು ಸೇವಿಸಿ ಕನಿಷ್ಠ 22 ಜನರು ಅಸ್ವಸ್ಥರಾಗಿದ್ದಾರೆ. ಕೆಲವೇ ವಾರಗಳ ಹಿಂದೆ ಕಲುಷಿತ ನೀರಿನಿಂದ ಹರಡುವ ರೋಗಗಳಿಂದ ಕನಿಷ್ಠ 23 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಆಸ್ಪತ್ರೆಗೆ ದಾಖಲಾಗಿದ್ದರು....

ರಾಜ್ಯಪಾಲರ ಭಾಷಣ ಪದ್ಧತಿ ಕೊನೆಗೊಳಿಸುವ ಸಮಯ ಬಂದಿದೆ: ಮುಖ್ಯಮಂತ್ರಿ ಸ್ಟಾಲಿನ್

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಹೆಹ್ಲೋಟ್ ಸದನವನ್ನು ಉದ್ದೇಶಿಸಿ ಸಂಪೂರ್ಣ ಸಾಂಪ್ರದಾಯಿಕ ಭಾಷಣವನ್ನು ಓದದೆ ವಿಧಾನಸಭೆಯಿಂದ ನಿರ್ಗಮಿಸಿರುವುದು ಇದೀಗ ರಾಷ್ಟ್ರಮಟ್ಟದ ಗಮನ ಸೆಳೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ...