Homeಕರ್ನಾಟಕಸುಹಾಸ್‌ ಶೆಟ್ಟಿಯ ರೌಡಿ ಶೀಟ್‌ ತೆರೆದಿದ್ದು ಪುಣ್ಯಾತ್ಮ ಬೊಮ್ಮಾಯಿ: ದಿನೇಶ್ ಗುಂಡೂರಾವ್

ಸುಹಾಸ್‌ ಶೆಟ್ಟಿಯ ರೌಡಿ ಶೀಟ್‌ ತೆರೆದಿದ್ದು ಪುಣ್ಯಾತ್ಮ ಬೊಮ್ಮಾಯಿ: ದಿನೇಶ್ ಗುಂಡೂರಾವ್

ಬಿಜೆಪಿಯವರೇ ಕ್ರಿಮಿನಲ್‌ಗಳನ್ನು ಸೃಷ್ಟಿಸಿ, ಅವರ ಮೇಲೆ ರೌಡಿ ಶೀಟರ್ ತೆರೆದು, ಈ ಕ್ರಿಮಿನಲ್‌ಗಳ ಹೆಣ ಬಿದ್ದ ಕೂಡಲೆ ಮಹಾತ್ಮರಂತೆ ಬಿಂಬಿಸಿ ಹುತಾತ್ಮರನ್ನಾಗಿ‌ ಮಾಡುತ್ತಾರೆ

- Advertisement -
- Advertisement -

ಮಂಗಳೂರಿನಲ್ಲಿ ಇತ್ತಿಚೆಗೆ ಹತ್ಯೆಯಾದ ರೌಡಿ ಸುಹಾಸ್ ಶೆಟ್ಟಿಯನ್ನು ರೌಡಿಯನ್ನಾಗಿ ಪಟ್ಟಿ ಮಾಡಿದ್ದ ಪೊಲೀಸ್ ಆದೇಶದ ಪತ್ರವನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಮಂಗಳವಾರ ಬಿಡುಗಡೆ ಮಾಡಿದ್ದಾರೆ. ರೌಡಿ ಸುಹಾಸ್‌ನನ್ನು‌ ಇಂದು ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗ ಯಾಕೆ ರೌಡಿ ಪಟ್ಟಿಗೆ ಸೇರಿಸಿದ್ದರು? ಎಂದು ಅವರು ಇದೇ ವೇಳೆ ಪ್ರಶ್ನಿಸಿದ್ದಾರೆ. ಸುಹಾಸ್‌ ಶೆಟ್ಟಿಯ

ಈ ಬಗ್ಗೆ ಎಕ್ಸ್‌ನಲ್ಲಿ ಅದೇಶ ಪತ್ರವನ್ನು ಪೋಸ್ಟ್‌ ಮಾಡಿರುವ ಗುಂಡೂರಾವ್ ಅವರು,”ಅಮಾಯಕರ ತಲೆಯಲ್ಲಿ ಮತಾಂಧತೆಯ ಅಮಲು‌ ತುಂಬಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಿರುವ BJP ನಾಯಕರ ಗಮನಕ್ಕೆ. ಇದು ಇತ್ತೀಚೆಗೆ ಹತ್ಯೆಯಾದ ಸುಹಾಶ್ ಶೆಟ್ಟಿ ವಿರುದ್ದ ರೌಡಿ ಶೀಟರ್ ತೆರೆಯಲು ಪೊಲೀಸ್ ಇಲಾಖೆ ನೀಡಿದ್ದ ಆದೇಶದ ಪ್ರತಿ.” ಎಂದು ಅವರು ಹೇಳಿದ್ದಾರೆ.

“ಸುಹಾಸ್ ಶೆಟ್ಟಿ ವಿರುದ್ಧ ರೌಡಿ ಶೀಟರ್ ಓಪನ್ ಆಗಿದ್ದು 2020 ರಲ್ಲಿ. ಆಗ ಅಧಿಕಾರದಲ್ಲಿದ್ದದ್ದು ಬಿಜೆಪಿ ಸರ್ಕಾರ. ಗೃಹ ಸಚಿವರಾಗಿದ್ದ ಪುಣ್ಯಾತ್ಮ ಬಸವರಾಜ್ ಬೊಮ್ಮಾಯಿ. ಇಂದು ಸುಹಾಸ್‌ನನ್ನು‌ ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗ ಯಾಕೆ ಸುಹಾಸ್‌ನನ್ನು ರೌಡಿ ಪಟ್ಟಿಗೆ ಸೇರಿಸಿದ್ದರು?” ಎಂದು ಗುಂಡೂರಾವ್ ಪ್ರಶ್ನಿಸಿದ್ದಾರೆ.

“ಕರಾವಳಿಯನ್ನು ಕೋಮು‌ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿರುವ ಬಿಜೆಪಿಯವರೇ ಕ್ರಿಮಿನಲ್‌ಗಳ ನಿಜವಾದ ಸೃಷ್ಟಿಕರ್ತರು. ಇವರು‌ ಅಧಿಕಾರದಲ್ಲಿದ್ದಾಗ ಕ್ರಿಮಿನಲ್‌ಗಳನ್ನು ಸೃಷ್ಟಿಸುತ್ತಾರೆ. ಅವರ ಮೇಲೆ ರೌಡಿ ಶೀಟರ್ ತೆರೆಯುತ್ತಾರೆ. ಹೆಣ ಬಿದ್ದ ಕೂಡಲೆ ಅದೇ ಕ್ರಿಮಿನಲ್‌ಗಳನ್ನು‌ ಮಹಾತ್ಮರಂತೆ ಬಿಂಬಿಸಿ ಹುತಾತ್ಮರನ್ನಾಗಿ‌ ಮಾಡುತ್ತಾರೆ.” ಎಂದು ಅವರು ಹೇಳಿದ್ದಾರೆ.

“ಸುಹಾಸ್ ಹತ್ಯೆ ನಂತರ ಕೂಗುಮಾರಿಗಳಂತೆ ಅರಚುತ್ತಿರುವ ರಾಜ್ಯ ಬಿಜೆಪಿ ನಾಯಕರ‌ ಯಾರ ಮಕ್ಕಳಾದರೂ ಧರ್ಮದ ಅಮಲಿನಲ್ಲಿ ಬೀದಿ‌ ಕಾಳಗ ಮಾಡುತ್ತಿದ್ದಾರೆಯೆ.? ಅಥವಾ ಧರ್ಮಕ್ಕಾಗಿ ಬಡಿದಾಡುತ್ತಿದ್ದಾರೆಯೆ.? ಬಿಜೆಪಿ ನಾಯಕರ‌ ಧರ್ಮಾಂಧತೆಗೆ‌ ಬೀದಿ ಹೆಣವಾಗುತ್ತಿರುವುದು ಬಡವರ ಮಕ್ಕಳು. ಇದು ಸತ್ಯವಲ್ಲವೆ?” ಎಂದು ಅವರು ಇದೇ ವೇಳೆ ಪ್ರಶ್ನಿಸಿದ್ದಾರೆ.

“ಬಿಜೆಪಿಯವರ ‌ಕೆಟ್ಟ ರಾಜಕೀಯಕ್ಕೆ ಕರಾವಳಿಯಲ್ಲಿ ಎಷ್ಟೋ ಜನರ‌ ಬಲಿಯಾಗಿದೆ. ಎಷ್ಟೋ ಮನೆಗಳ‌‌ ದೀಪ ಆರಿ ಹೋಗಿದೆ. ಇಷ್ಟಾದರೂ ಇವರ ರಕ್ತದಾಹ ನಿಂತಿಲ್ಲ. ಕರಾವಳಿಯಲ್ಲಿ ಇನ್ನಷ್ಟು ಹೆಣ ಬೀಳಬೇಕು ಎನ್ನುವ ಉದ್ದೇಶದಿಂದ ‌ದುಷ್ಟ ರಾಜಕಾರಣ ಮಾಡುತ್ತಿದ್ದಾರೆ.” ಎಂದು ಅವರು ಹೇಳಿದ್ದಾರೆ.

“ದಕ್ಷಿಣ ಕನ್ನಡದ‌ ಜನ‌ ಪ್ರಜ್ಞಾವಂತಿಕೆಯ ಜೊತೆಗೆ ಸೂಕ್ಷ್ಮತೆಯನ್ನು ಅರಿತುಕೊಂಡವರು. ಇನ್ನಾದರೂ ಕರಾವಳಿಯ ಜನ ಬಿಜೆಪಿಯ ಹುನ್ನಾರ ಅರಿಯಬೇಕಿದೆ. ಇಲ್ಲದಿದ್ದರೆ‌ ಬಿಜೆಪಿಯವರ‌ ಕೆಟ್ಟ ರಾಜಕಾರಣಕ್ಕೆ ಜಿಲ್ಲೆಯ‌ ನೆಮ್ಮದಿಯೇ ಹಾಳಾಗಲಿದೆ.” ಎಂದು ಅವರು ಎಚ್ಚರಿಸಿದ್ದಾರೆ. ಸುಹಾಸ್‌ ಶೆಟ್ಟಿಯ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೊರಾದಾಬಾದ್ ನಲ್ಲಿರುವ 22 ಪಾಕಿಸ್ತಾನಿ ಮಹಿಳೆಯರಿಗೆ 500ಕ್ಕಿಂತ ಹೆಚ್ಚಿನ ಭಾರತೀಯ ಮಕ್ಕಳು, ಮೊಮ್ಮಕ್ಕಳು

ಮೊರಾದಾಬಾದ್ ನಲ್ಲಿರುವ 22 ಪಾಕಿಸ್ತಾನಿ ಮಹಿಳೆಯರಿಗೆ 500ಕ್ಕಿಂತ ಹೆಚ್ಚಿನ ಭಾರತೀಯ ಮಕ್ಕಳು, ಮೊಮ್ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...