Homeಅಂತರಾಷ್ಟ್ರೀಯಡಮಾಸ್ಕಸ್ ಚರ್ಚ್ ಮೇಲೆ ಆತ್ಮಾಹುತಿ ದಾಳಿ: 22 ಜನರು ಸಾವು

ಡಮಾಸ್ಕಸ್ ಚರ್ಚ್ ಮೇಲೆ ಆತ್ಮಾಹುತಿ ದಾಳಿ: 22 ಜನರು ಸಾವು

- Advertisement -
- Advertisement -

ಡಮಾಸ್ಕಸ್‌ನ ಚರ್ಚ್‌ನಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ ಮತ್ತು 63 ಜನರು ಗಾಯಗೊಂಡಿದ್ದಾರೆ ಎಂದು ಸಿರಿಯಾದ ಆರೋಗ್ಯ ಸಚಿವಾಲಯ ತಿಳಿಸಿದೆ.

ದ್ವೀಲಾ ಸಮೀಪದ ಗ್ರೀಕ್ ಆರ್ಥೊಡಾಕ್ಸ್ ಚರ್ಚ್‌ನಲ್ಲಿ ಭಾನುವಾರ (ಜೂ.22) ಸಂಜೆ ಪ್ರಾರ್ಥನೆ ನಡೆಯುತ್ತಿದ್ದಾಗ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದಾನೆ. ನಂತರ ತನ್ನ ದೇಹಕ್ಕೆ ಕಟ್ಟಿಕೊಂಡಿದ್ದ ಸ್ಪೋಟಕವನ್ನು ಸ್ಪೋಟಿಸಿದ್ದಾನೆ ಎಂದು ಬಿಬಿಸಿ ವರದಿ ಮಾಡಿದೆ.

ದಾಳಿಕೋರ ಭಯೋತ್ಪಾದಕ ಗುಂಪು ಇಸ್ಲಾಮಿಕ್ ಸ್ಟೇಟ್ (ಐಎಸ್‌)ಗೆ ಸೇರಿದವನು ಎಂದು ಸಚಿವಾಲಯ ಹೇಳಿದೆ. ಆದರೆ, ಐಎಸ್‌ ಇದುವರೆಗೆ ದಾಳಿಯ ಹೊಣೆ ಹೊತ್ತುಕೊಂಡಿಲ್ಲ.

ಚರ್ಚ್ ಒಳಗಿನಿಂದ ತೆಗೆದ ಫೋಟೋಗಳು ಮತ್ತು ವಿಡಿಯೋಗಳಲ್ಲಿ ತೀವ್ರವಾಗಿ ಹಾನಿಗೊಳಗಾದ ಬಲಿಪೀಠ, ಒಡೆದ ಗಾಜಿನಿಂದ ಆವೃತವಾದ ಬೆಂಚುಗಳು ಮತ್ತು ಗೋಡೆಗಳಲ್ಲಿ ರಕ್ತದ ಕಲೆಗಳು ನೋಡಬಹುದು.

“ಯಾರೋ ಹೊರಗಿನಿಂದ ಆಯುಧ ಹಿಡಿದು ಚರ್ಚ್ ಒಳಗೆ ಪ್ರವೇಶಿಸಿ ಗುಂಡು ಹಾರಿಸಲು ಪ್ರಾರಂಭಿಸಿದರು” ಎಂದು ಪ್ರತ್ಯಕ್ಷದರ್ಶಿ ಲಾರೆನ್ಸ್ ಮಾಮರಿ ಹೇಳಿರುವುದಾಗಿ ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ದಾಳಿಕೋರ ತನ್ನನ್ನು ತಾನು ಸ್ಪೋಟಿಸಿಕೊಳ್ಳಲುವ ಮೊದಲು ಜನರು ಆತನನ್ನು ತಡೆಯಲು ಪ್ರಯತ್ನಿಸಿದ್ದಾರೆ ಎಂದು ವರದಿ ತಿಳಿಸಿದೆ.

ಹತ್ತಿರದ ಅಂಗಡಿಯಲ್ಲಿದ್ದ ಜಿಯಾದ್ ಎಂಬ ಮತ್ತೊಬ್ಬ ವ್ಯಕ್ತಿ, “ಗುಂಡಿನ ಸದ್ದು ಕೇಳಿಬಂದಿದ್ದು, ನಂತರ ಗಾಜುಗಳು ಹಾರಿಹೋಗುವ ರೀತಿ ಸ್ಫೋಟ ಸಂಭವಿಸಿದೆ. ಚರ್ಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರವೇಶದ್ವಾರದವರೆಗೂ ಮರದ ಬೆಂಚುಗಳ ಅವಶೇಷಗಳು ಬಿದ್ದಿರುವುದನ್ನು ನಾವು ನೋಡಿದ್ದೇವೆ” ಎಂದು ಹೇಳಿದ್ದಾರೆ.

ಡಿಸೆಂಬರ್‌ನಲ್ಲಿ ಇಸ್ಲಾಮಿಸ್ಟ್ ನೇತೃತ್ವದ ಬಂಡಾಯ ಪಡೆಗಳು ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಅವರನ್ನು ಪದಚ್ಯುತಗೊಳಿಸಿ, 13 ವರ್ಷಗಳ ವಿನಾಶಕಾರಿ ಅಂತರ್ಯುದ್ಧವನ್ನು ಕೊನೆಗೊಳಿಸಿದ ನಂತರ ಡಮಾಸ್ಕಸ್‌ನಲ್ಲಿ ನಡೆದ ಮೊದಲ ದಾಳಿ ಇದಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಚರ್ಚ್ ಪ್ರವೇಶದ್ವಾರದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಕಟ್ಟಡದ ಒಳಗೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಜನರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿವೆ.

ಸಿರಿಯಾದ ವಿಶ್ವಸಂಸ್ಥೆಯ ವಿಶೇಷ ರಾಯಭಾರಿ ಗೀರ್ ಪೆಡರ್ಸನ್ ಅವರ ಕಚೇರಿಯು ದಾಳಿಯನ್ನು ಖಂಡಿಸಿದ್ದು, “ಭಯೋತ್ಪಾದನೆ, ಉಗ್ರವಾದ, ಪ್ರಚೋದನೆ ಮತ್ತು ಯಾವುದೇ ಸಮುದಾಯವನ್ನು ಗುರಿಯಾಗಿಸಿಕೊಳ್ಳುವುದನ್ನು ತಿರಸ್ಕರಿಸುವಲ್ಲಿ ಸಿರಿಯನ್ನರು ಒಂದಾಗಬೇಕು” ಎಂದು ಆಗ್ರಹಿಸಿದೆ.

ಇರಾನ್-ಅಮೆರಿಕ ಸಂಘರ್ಷದ ನಡುವೆ ಗಾಝಾದಲ್ಲಿನ ನೋವು ಮರೆಯದಿರಿ: ಜಗತ್ತಿಗೆ ಪೋಪ್ ಲಿಯೋ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...