Homeಅಂತರಾಷ್ಟ್ರೀಯಡಮಾಸ್ಕಸ್ ಚರ್ಚ್ ಮೇಲೆ ಆತ್ಮಾಹುತಿ ದಾಳಿ: 22 ಜನರು ಸಾವು

ಡಮಾಸ್ಕಸ್ ಚರ್ಚ್ ಮೇಲೆ ಆತ್ಮಾಹುತಿ ದಾಳಿ: 22 ಜನರು ಸಾವು

- Advertisement -
- Advertisement -

ಡಮಾಸ್ಕಸ್‌ನ ಚರ್ಚ್‌ನಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ ಮತ್ತು 63 ಜನರು ಗಾಯಗೊಂಡಿದ್ದಾರೆ ಎಂದು ಸಿರಿಯಾದ ಆರೋಗ್ಯ ಸಚಿವಾಲಯ ತಿಳಿಸಿದೆ.

ದ್ವೀಲಾ ಸಮೀಪದ ಗ್ರೀಕ್ ಆರ್ಥೊಡಾಕ್ಸ್ ಚರ್ಚ್‌ನಲ್ಲಿ ಭಾನುವಾರ (ಜೂ.22) ಸಂಜೆ ಪ್ರಾರ್ಥನೆ ನಡೆಯುತ್ತಿದ್ದಾಗ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದಾನೆ. ನಂತರ ತನ್ನ ದೇಹಕ್ಕೆ ಕಟ್ಟಿಕೊಂಡಿದ್ದ ಸ್ಪೋಟಕವನ್ನು ಸ್ಪೋಟಿಸಿದ್ದಾನೆ ಎಂದು ಬಿಬಿಸಿ ವರದಿ ಮಾಡಿದೆ.

ದಾಳಿಕೋರ ಭಯೋತ್ಪಾದಕ ಗುಂಪು ಇಸ್ಲಾಮಿಕ್ ಸ್ಟೇಟ್ (ಐಎಸ್‌)ಗೆ ಸೇರಿದವನು ಎಂದು ಸಚಿವಾಲಯ ಹೇಳಿದೆ. ಆದರೆ, ಐಎಸ್‌ ಇದುವರೆಗೆ ದಾಳಿಯ ಹೊಣೆ ಹೊತ್ತುಕೊಂಡಿಲ್ಲ.

ಚರ್ಚ್ ಒಳಗಿನಿಂದ ತೆಗೆದ ಫೋಟೋಗಳು ಮತ್ತು ವಿಡಿಯೋಗಳಲ್ಲಿ ತೀವ್ರವಾಗಿ ಹಾನಿಗೊಳಗಾದ ಬಲಿಪೀಠ, ಒಡೆದ ಗಾಜಿನಿಂದ ಆವೃತವಾದ ಬೆಂಚುಗಳು ಮತ್ತು ಗೋಡೆಗಳಲ್ಲಿ ರಕ್ತದ ಕಲೆಗಳು ನೋಡಬಹುದು.

“ಯಾರೋ ಹೊರಗಿನಿಂದ ಆಯುಧ ಹಿಡಿದು ಚರ್ಚ್ ಒಳಗೆ ಪ್ರವೇಶಿಸಿ ಗುಂಡು ಹಾರಿಸಲು ಪ್ರಾರಂಭಿಸಿದರು” ಎಂದು ಪ್ರತ್ಯಕ್ಷದರ್ಶಿ ಲಾರೆನ್ಸ್ ಮಾಮರಿ ಹೇಳಿರುವುದಾಗಿ ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ದಾಳಿಕೋರ ತನ್ನನ್ನು ತಾನು ಸ್ಪೋಟಿಸಿಕೊಳ್ಳಲುವ ಮೊದಲು ಜನರು ಆತನನ್ನು ತಡೆಯಲು ಪ್ರಯತ್ನಿಸಿದ್ದಾರೆ ಎಂದು ವರದಿ ತಿಳಿಸಿದೆ.

ಹತ್ತಿರದ ಅಂಗಡಿಯಲ್ಲಿದ್ದ ಜಿಯಾದ್ ಎಂಬ ಮತ್ತೊಬ್ಬ ವ್ಯಕ್ತಿ, “ಗುಂಡಿನ ಸದ್ದು ಕೇಳಿಬಂದಿದ್ದು, ನಂತರ ಗಾಜುಗಳು ಹಾರಿಹೋಗುವ ರೀತಿ ಸ್ಫೋಟ ಸಂಭವಿಸಿದೆ. ಚರ್ಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರವೇಶದ್ವಾರದವರೆಗೂ ಮರದ ಬೆಂಚುಗಳ ಅವಶೇಷಗಳು ಬಿದ್ದಿರುವುದನ್ನು ನಾವು ನೋಡಿದ್ದೇವೆ” ಎಂದು ಹೇಳಿದ್ದಾರೆ.

ಡಿಸೆಂಬರ್‌ನಲ್ಲಿ ಇಸ್ಲಾಮಿಸ್ಟ್ ನೇತೃತ್ವದ ಬಂಡಾಯ ಪಡೆಗಳು ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಅವರನ್ನು ಪದಚ್ಯುತಗೊಳಿಸಿ, 13 ವರ್ಷಗಳ ವಿನಾಶಕಾರಿ ಅಂತರ್ಯುದ್ಧವನ್ನು ಕೊನೆಗೊಳಿಸಿದ ನಂತರ ಡಮಾಸ್ಕಸ್‌ನಲ್ಲಿ ನಡೆದ ಮೊದಲ ದಾಳಿ ಇದಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಚರ್ಚ್ ಪ್ರವೇಶದ್ವಾರದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಕಟ್ಟಡದ ಒಳಗೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಜನರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿವೆ.

ಸಿರಿಯಾದ ವಿಶ್ವಸಂಸ್ಥೆಯ ವಿಶೇಷ ರಾಯಭಾರಿ ಗೀರ್ ಪೆಡರ್ಸನ್ ಅವರ ಕಚೇರಿಯು ದಾಳಿಯನ್ನು ಖಂಡಿಸಿದ್ದು, “ಭಯೋತ್ಪಾದನೆ, ಉಗ್ರವಾದ, ಪ್ರಚೋದನೆ ಮತ್ತು ಯಾವುದೇ ಸಮುದಾಯವನ್ನು ಗುರಿಯಾಗಿಸಿಕೊಳ್ಳುವುದನ್ನು ತಿರಸ್ಕರಿಸುವಲ್ಲಿ ಸಿರಿಯನ್ನರು ಒಂದಾಗಬೇಕು” ಎಂದು ಆಗ್ರಹಿಸಿದೆ.

ಇರಾನ್-ಅಮೆರಿಕ ಸಂಘರ್ಷದ ನಡುವೆ ಗಾಝಾದಲ್ಲಿನ ನೋವು ಮರೆಯದಿರಿ: ಜಗತ್ತಿಗೆ ಪೋಪ್ ಲಿಯೋ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...