Homeಅಂತರಾಷ್ಟ್ರೀಯಡಮಾಸ್ಕಸ್ ಚರ್ಚ್ ಮೇಲೆ ಆತ್ಮಾಹುತಿ ದಾಳಿ: 22 ಜನರು ಸಾವು

ಡಮಾಸ್ಕಸ್ ಚರ್ಚ್ ಮೇಲೆ ಆತ್ಮಾಹುತಿ ದಾಳಿ: 22 ಜನರು ಸಾವು

- Advertisement -
- Advertisement -

ಡಮಾಸ್ಕಸ್‌ನ ಚರ್ಚ್‌ನಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ ಮತ್ತು 63 ಜನರು ಗಾಯಗೊಂಡಿದ್ದಾರೆ ಎಂದು ಸಿರಿಯಾದ ಆರೋಗ್ಯ ಸಚಿವಾಲಯ ತಿಳಿಸಿದೆ.

ದ್ವೀಲಾ ಸಮೀಪದ ಗ್ರೀಕ್ ಆರ್ಥೊಡಾಕ್ಸ್ ಚರ್ಚ್‌ನಲ್ಲಿ ಭಾನುವಾರ (ಜೂ.22) ಸಂಜೆ ಪ್ರಾರ್ಥನೆ ನಡೆಯುತ್ತಿದ್ದಾಗ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದಾನೆ. ನಂತರ ತನ್ನ ದೇಹಕ್ಕೆ ಕಟ್ಟಿಕೊಂಡಿದ್ದ ಸ್ಪೋಟಕವನ್ನು ಸ್ಪೋಟಿಸಿದ್ದಾನೆ ಎಂದು ಬಿಬಿಸಿ ವರದಿ ಮಾಡಿದೆ.

ದಾಳಿಕೋರ ಭಯೋತ್ಪಾದಕ ಗುಂಪು ಇಸ್ಲಾಮಿಕ್ ಸ್ಟೇಟ್ (ಐಎಸ್‌)ಗೆ ಸೇರಿದವನು ಎಂದು ಸಚಿವಾಲಯ ಹೇಳಿದೆ. ಆದರೆ, ಐಎಸ್‌ ಇದುವರೆಗೆ ದಾಳಿಯ ಹೊಣೆ ಹೊತ್ತುಕೊಂಡಿಲ್ಲ.

ಚರ್ಚ್ ಒಳಗಿನಿಂದ ತೆಗೆದ ಫೋಟೋಗಳು ಮತ್ತು ವಿಡಿಯೋಗಳಲ್ಲಿ ತೀವ್ರವಾಗಿ ಹಾನಿಗೊಳಗಾದ ಬಲಿಪೀಠ, ಒಡೆದ ಗಾಜಿನಿಂದ ಆವೃತವಾದ ಬೆಂಚುಗಳು ಮತ್ತು ಗೋಡೆಗಳಲ್ಲಿ ರಕ್ತದ ಕಲೆಗಳು ನೋಡಬಹುದು.

“ಯಾರೋ ಹೊರಗಿನಿಂದ ಆಯುಧ ಹಿಡಿದು ಚರ್ಚ್ ಒಳಗೆ ಪ್ರವೇಶಿಸಿ ಗುಂಡು ಹಾರಿಸಲು ಪ್ರಾರಂಭಿಸಿದರು” ಎಂದು ಪ್ರತ್ಯಕ್ಷದರ್ಶಿ ಲಾರೆನ್ಸ್ ಮಾಮರಿ ಹೇಳಿರುವುದಾಗಿ ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ದಾಳಿಕೋರ ತನ್ನನ್ನು ತಾನು ಸ್ಪೋಟಿಸಿಕೊಳ್ಳಲುವ ಮೊದಲು ಜನರು ಆತನನ್ನು ತಡೆಯಲು ಪ್ರಯತ್ನಿಸಿದ್ದಾರೆ ಎಂದು ವರದಿ ತಿಳಿಸಿದೆ.

ಹತ್ತಿರದ ಅಂಗಡಿಯಲ್ಲಿದ್ದ ಜಿಯಾದ್ ಎಂಬ ಮತ್ತೊಬ್ಬ ವ್ಯಕ್ತಿ, “ಗುಂಡಿನ ಸದ್ದು ಕೇಳಿಬಂದಿದ್ದು, ನಂತರ ಗಾಜುಗಳು ಹಾರಿಹೋಗುವ ರೀತಿ ಸ್ಫೋಟ ಸಂಭವಿಸಿದೆ. ಚರ್ಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರವೇಶದ್ವಾರದವರೆಗೂ ಮರದ ಬೆಂಚುಗಳ ಅವಶೇಷಗಳು ಬಿದ್ದಿರುವುದನ್ನು ನಾವು ನೋಡಿದ್ದೇವೆ” ಎಂದು ಹೇಳಿದ್ದಾರೆ.

ಡಿಸೆಂಬರ್‌ನಲ್ಲಿ ಇಸ್ಲಾಮಿಸ್ಟ್ ನೇತೃತ್ವದ ಬಂಡಾಯ ಪಡೆಗಳು ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಅವರನ್ನು ಪದಚ್ಯುತಗೊಳಿಸಿ, 13 ವರ್ಷಗಳ ವಿನಾಶಕಾರಿ ಅಂತರ್ಯುದ್ಧವನ್ನು ಕೊನೆಗೊಳಿಸಿದ ನಂತರ ಡಮಾಸ್ಕಸ್‌ನಲ್ಲಿ ನಡೆದ ಮೊದಲ ದಾಳಿ ಇದಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಚರ್ಚ್ ಪ್ರವೇಶದ್ವಾರದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಕಟ್ಟಡದ ಒಳಗೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಜನರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿವೆ.

ಸಿರಿಯಾದ ವಿಶ್ವಸಂಸ್ಥೆಯ ವಿಶೇಷ ರಾಯಭಾರಿ ಗೀರ್ ಪೆಡರ್ಸನ್ ಅವರ ಕಚೇರಿಯು ದಾಳಿಯನ್ನು ಖಂಡಿಸಿದ್ದು, “ಭಯೋತ್ಪಾದನೆ, ಉಗ್ರವಾದ, ಪ್ರಚೋದನೆ ಮತ್ತು ಯಾವುದೇ ಸಮುದಾಯವನ್ನು ಗುರಿಯಾಗಿಸಿಕೊಳ್ಳುವುದನ್ನು ತಿರಸ್ಕರಿಸುವಲ್ಲಿ ಸಿರಿಯನ್ನರು ಒಂದಾಗಬೇಕು” ಎಂದು ಆಗ್ರಹಿಸಿದೆ.

ಇರಾನ್-ಅಮೆರಿಕ ಸಂಘರ್ಷದ ನಡುವೆ ಗಾಝಾದಲ್ಲಿನ ನೋವು ಮರೆಯದಿರಿ: ಜಗತ್ತಿಗೆ ಪೋಪ್ ಲಿಯೋ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...