Homeಕರ್ನಾಟಕಅವಮಾನ ತಾಳಲಾರದೆ ದಲಿತ ಯುವಕನ ಆತ್ಮಹತ್ಯೆ ಪ್ರಕರಣ: ಪೆತ್ತಾಂಡ್ಲಹಳ್ಳಿಯಿಂದ ಯಶಸ್ವಿ ಬೈಕ್ ರ್‍ಯಾಲಿ

ಅವಮಾನ ತಾಳಲಾರದೆ ದಲಿತ ಯುವಕನ ಆತ್ಮಹತ್ಯೆ ಪ್ರಕರಣ: ಪೆತ್ತಾಂಡ್ಲಹಳ್ಳಿಯಿಂದ ಯಶಸ್ವಿ ಬೈಕ್ ರ್‍ಯಾಲಿ

- Advertisement -
- Advertisement -

ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ದಲಿತ ಯುವಕನ ಬೈಕ್ ಮತ್ತು ಮೊಬೈಲ್ ಕಿತ್ತುಕೊಂಡು ಸವರ್ಣೀಯರು ಮರಕ್ಕೆ ಕಟ್ಟಿ ಥಳಿಸಿದ್ದರಿಂದ ಅವಮಾನ ತಾಳಲಾರದೆ ದಲಿತ ಯುವಕ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಸೋಮವಾರ) ಬೈಕ್‌ ರ್‍ಯಾಲಿ ನಡೆಸಲಾಗಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಬೇವಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿತ್ತು. ಬೇವಹಳ್ಳಿಯ ಉದಯ್ ಕಿರಣ್ ಸಾವಿಗೆ ಶರಣಾಗಿದ್ದರು. ಆತನ ಮೇಲೆ ಪೆತಾಂಡ್ಲಹಳ್ಳಿ ಗ್ರಾಮದ ಕೆಲವು ಸವರ್ಣೀಯರು ಹಲ್ಲೆ ನಡೆಸಿದ್ದರು. ಇದರ ಹಿನ್ನೆಲೆಯಲ್ಲಿ ಆರೋಪಿಗಳ ಸ್ಥಳವಾದ ಪೆತಾಂಡ್ಲಹಳ್ಳಿಯಿಂದ ಹಿಡಿದು ಕೋಲಾರ ಜಿಲ್ಲಾಧಿಕಾರಿ ಕಚೇರಿಯವರೆಗೆ ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ಬೈಕ್‌ ರ್‍ಯಾಲಿ ನಡೆಸಿವೆ.

“ಬೈಕ್‌ ರ್‍ಯಾಲಿ ಯಶಸ್ವಿಯಾಗಲಿ, ನೊಂದ ಕುಟುಂಬಕ್ಕೆ ನ್ಯಾಯ ಸಿಗಲೇಬೇಕು, ನೊಂದ ಕುಟುಂಬಕ್ಕೆ ಪರಿಹಾರ ಕೊಡಲೇಬೇಕು” ಎಂಬ ಘೋಷಣೆಗಳನ್ನು ರಸ್ತೆಯುದ್ಧಕ್ಕೂ ಕೂಗಲಾಯಿತು.

ಪೆತ್ತಾಂಡ್ಲಹಳ್ಳಿಯಿಂದ ಪ್ರಾರಂವಾಗಿರುವ ರ್‍ಯಾಲಿಯಲ್ಲಿ ಸ್ವಯಂಪ್ರೇರಿತರಾಗಿ ಪ್ರತಿಯೊಬ್ಬರು ಪಾಲ್ಗೊಳ್ಳಬೇಕು. ಜಾತಿ, ಅಸ್ಪೃಶ್ಯತೆ ವಿರುದ್ಧ ಪ್ರತಿರೋಧ ತೋರಿಸುವ ರ್‍ಯಾಲಿಯಲ್ಲಿ ಎಲ್ಲರೂ ಸೇರಿಕೊಳ್ಳಬೇಕು ಎಂದು ರ್‍ಯಾಲಿಯುದ್ಧಕ್ಕೂ ಮನವಿ ಮಾಡಲಾಯಿತು.

ಪೆತ್ತಾಂಡ್ಲಹಳ್ಳಿಯಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಮತ್ತು ಮೃತ ಉದಯ್‌ ಕಿರಣ್ ಅವರ ಭಾವಚಿತ್ರವಿರುವ ಪ್ಲೆಕ್ಸ್‌ಗೆ ಉದಯ್ ಅವರ ತಂದೆ, ತಾಯಿ ಹಾಗೂ ಸಹೋದರರು ಮಾಲಾರ್ಪಣೆ ಮಾಡಿದರು.

“ನಮ್ಮಲ್ಲಿಲ್ಲ ಹಿಂದೂ ರಕ್ತ, ನಮ್ಮಲ್ಲಿಲ್ಲ ಕ್ರೈಸ್ತ ರಕ್ತ, ನಮ್ಮಲ್ಲಿಲ್ಲ ಮುಸ್ಲಿಂ ರಕ್ತ, ನಮ್ಮಲ್ಲಿಲ್ಲ ಒಕ್ಕಲಿಗರ ರಕ್ತ, ನಮ್ಮಲ್ಲಿಲ್ಲ ರೆಡ್ಡಿ ರಕ್ತ, ನಮ್ಮಲ್ಲಿಲ್ಲ ದಲಿತ ರಕ್ತ, ನಮ್ಮಲ್ಲಿರುವುದು ಒಂದೇ ರಕ್ತ- ಅದುವೇ ಮಾನವ ಕೆಂಪು ರಕ್ತ. ದಲಿತರು ಕೂಡ ಮನುಷ್ಯರು, ಮನುಷ್ಯ ಜಾತಿ ಒಂದೇ, ಜಾತಿ ಧರ್ಮಗಳನ್ನು ಬಿಟ್ಟು ಮಾನವರಾಗಿ ಬಾಳೋಣ” ಎಂಬ ಸಂದೇಶಗಳನ್ನು ಸಾರುವ ಮೂಲಕ ಜೈಭೀಮ್‌ ಘೋಷಣೆ ಮೊಳಗಿಸಲಾಯಿತು.

ಎಸ್‌ಎಫ್‌ಐ ಮುಖಂಡ ವಾಸುದೇವ ರೆಡ್ಡಿ ಮಾತನಾಡಿ, “ಅಸ್ಪೃಶ್ಯತೆಯ ನೋವುಂಡ ಉದಯ್‌ ಕುಟುಂಬ ಸೇಡು ತೀರಿಸಿಕೊಳ್ಳಬೇಕೆಂದು ಈ ಹೋರಾಟ ಮಾಡುತ್ತಿಲ್ಲ. ನಮ್ಮ ಮಗನಿಗಾದ ಅನ್ಯಾಯ ಈ ದೇಶದ ಯಾವುದೇ ಕುಟುಂಬಕ್ಕೆ ಆಗಬಾರದೆಂಬ ಕಾರಣಕ್ಕಾಗಿ ಈ ಕಾರ್ಯಕ್ರಮ ಆಯೋಜಿಸಿದ್ದೇವೆ. ಇದು ಪೆತ್ತಾಂಡ್ಲಹಳ್ಳಿ ಗ್ರಾಮಸ್ಥರ ವಿರುದ್ಧದ ಹೋರಾಟವಲ್ಲ. ನಾವೆಲ್ಲ ಜಾತಿ, ಧರ್ಮಗಳನ್ನು ಬಿಟ್ಟು ಮಾನವರಾಗಿ ಬದುಕೋಣ ಎಂಬ ಸಂದೇಶ ಸಾರುವುದಕ್ಕಾಗಿ ಡಿಸಿ ಕಚೇರಿ ಚಲೋ ಹಮ್ಮಿಕೊಂಡಿದ್ದೇವೆ. ಉದಯ್‌ ಕುಮಾರ್‌ ಕುಟುಂಬದ ಜೊತೆಗೆ ನೀವೆಲ್ಲರೂ ನಿಲ್ಲಬೇಕು” ಎಂದು ತಿಳಿಸಿದರು.

ದಲಿತ ಮುಖಂಡರಾದ ಮೆಕ್ಯಾನಿಕ್ ಸೀನಣ್ಣ ಅವರು ಕೆಂಪು ನಿಶಾನೆ ತೋರುವ ಮೂಲಕ ಬೈಕ್‌ ರ್‍ಯಾಲಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನೊಂದ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಕಾರ್ಯಕ್ರಮ ಮಾಡುತ್ತಿದ್ದೇವೆ. ರ್‍ಯಾಲಿಯನ್ನು ಮಾಡಬಾರದು ಎಂದು ಕೆಲವರು ತೊಂದರೆಯನ್ನೂ ಕೊಟ್ಟರು. ಆದರೆ ಅನೇಕರು ಬೆಂಬಲ ನೀಡಿದರು” ಎಂದು ಹೇಳಿದರು.

ಪ್ರಕರಣದ ವಿವರ

ದಲಿತ ಯುವಕನ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪೆತ್ತಾಂಡ್ಲಹಳ್ಳಿಯ ಸವರ್ಣೀಯರಾದ ಗೋಪಾಲಕೃಷ್ಣಪ್ಪ, ಶಿವರಾಜ್ ಬಿನ್ ಮುನಿವೆಂಕಟಪ್ಪ, ಗೋಪಾಲಕೃಷ್ಣಪ್ಪ ಬಿನ್ ಮುನಿಸ್ವಾಮಿ, ಮುನಿವೆಂಕಟಪ್ಪ ಬಿನ್ ಮುನಿಸ್ವಾಮಿ ಎಂಬುವವರ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 341, 34, 504, 306 ಮತ್ತು 323ರ ಅಡಿಯಲ್ಲಿ ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನವೆಂಬರ್ 30ರ ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಮುಳಬಾಗಿಲು ತಾಲ್ಲೂಕಿನ ಬೈರಕೂರು ಹೋಬಳಿಯ ಪೆತಾಂಡ್ಲಹಳ್ಳಿ ಗ್ರಾಮದ ಸವರ್ಣೀಯ ಜನಾಂಗದ ರಾಜು ಬಿನ್ ಗೋಪಾಲಕೃಷ್ಣಪ್ಪ ರವರ ದ್ವಿಚಕ್ರ ವಾಹನವನ್ನು ಬೇವಹಳ್ಳಿಯ ಉದಯ್ ಕಿರಣ್ ಮತ್ತು ನಾಗರಾಜು ಓವರ್ ಟೇಕ್ ಮಾಡಿದರು ಎಂದು ಆರೋಪಿಸಿ ಬೈರಕೂರಿನಲ್ಲಿ ಉದಯ್ ಕಿರಣ್ ವಾಹನವನ್ನು ಅಡ್ಡಗಟ್ಟಿ ನಿಂದಿಸಿ, ಹಲ್ಲೆ ಮಾಡಲಾಗಿದೆ ಎಂದು ಮೃತ ಯುವಕನ ಸೋದರ ಮಾವ ನಾಗರಾಜು ಆರೋಪಿಸಿದ್ದರು.

ಆ ನಂತರವೂ ಸಹ ಕಾಡೆನಹಳ್ಳಿಯಿಂದ ವಾಪಸ್ಸು ಬರುತ್ತಿದ್ದ ಉದಯ್ ಕಿರಣ್ ಮತ್ತು ನಾಗರಾಜರನ್ನು ಮತ್ತೆ ಪೆತಾಂಡ್ಲಹಳ್ಳಿ ಗ್ರಾಮದ ಬಳಿ ರಾಜು ಬಿನ್ ಗೋಪಾಲಕೃಷ್ಣಪ್ಪ, ಶಿವರಾಜ್ ಬಿನ್ ಮುನಿವೆಂಕಟಪ್ಪ, ಗೋಪಾಲಕೃಷ್ಣಪ್ಪ ಬಿನ್ ಮುನಿಸ್ವಾಮಿ, ಮತ್ತು ಮುನಿವೆಂಕಟಪ್ಪ ಬಿನ್ ಮುನಿಸ್ವಾಮಿ ಬಳಿ ಅಡ್ಡಗಟ್ಟಿ, ಹೊಡೆದು ಆತನ ದ್ವಿಚಕ್ರ ವಾಹನ ಮತ್ತು ಮೊಬೈಲ್ ಕಿತ್ತುಕೊಂಡು ನಿಮ್ಮ ಮನೆಯವರನ್ನು ಕರೆದುಕೊಂಡು ಬನ್ನಿ ಎಂದು ದೌರ್ಜನ್ಯವೆಸಗಿರುತ್ತಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...