Homeಕರ್ನಾಟಕಅವಮಾನ ತಾಳಲಾರದೆ ದಲಿತ ಯುವಕನ ಆತ್ಮಹತ್ಯೆ ಪ್ರಕರಣ: ಪೆತ್ತಾಂಡ್ಲಹಳ್ಳಿಯಿಂದ ಯಶಸ್ವಿ ಬೈಕ್ ರ್‍ಯಾಲಿ

ಅವಮಾನ ತಾಳಲಾರದೆ ದಲಿತ ಯುವಕನ ಆತ್ಮಹತ್ಯೆ ಪ್ರಕರಣ: ಪೆತ್ತಾಂಡ್ಲಹಳ್ಳಿಯಿಂದ ಯಶಸ್ವಿ ಬೈಕ್ ರ್‍ಯಾಲಿ

- Advertisement -
- Advertisement -

ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ದಲಿತ ಯುವಕನ ಬೈಕ್ ಮತ್ತು ಮೊಬೈಲ್ ಕಿತ್ತುಕೊಂಡು ಸವರ್ಣೀಯರು ಮರಕ್ಕೆ ಕಟ್ಟಿ ಥಳಿಸಿದ್ದರಿಂದ ಅವಮಾನ ತಾಳಲಾರದೆ ದಲಿತ ಯುವಕ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಸೋಮವಾರ) ಬೈಕ್‌ ರ್‍ಯಾಲಿ ನಡೆಸಲಾಗಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಬೇವಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿತ್ತು. ಬೇವಹಳ್ಳಿಯ ಉದಯ್ ಕಿರಣ್ ಸಾವಿಗೆ ಶರಣಾಗಿದ್ದರು. ಆತನ ಮೇಲೆ ಪೆತಾಂಡ್ಲಹಳ್ಳಿ ಗ್ರಾಮದ ಕೆಲವು ಸವರ್ಣೀಯರು ಹಲ್ಲೆ ನಡೆಸಿದ್ದರು. ಇದರ ಹಿನ್ನೆಲೆಯಲ್ಲಿ ಆರೋಪಿಗಳ ಸ್ಥಳವಾದ ಪೆತಾಂಡ್ಲಹಳ್ಳಿಯಿಂದ ಹಿಡಿದು ಕೋಲಾರ ಜಿಲ್ಲಾಧಿಕಾರಿ ಕಚೇರಿಯವರೆಗೆ ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ಬೈಕ್‌ ರ್‍ಯಾಲಿ ನಡೆಸಿವೆ.

“ಬೈಕ್‌ ರ್‍ಯಾಲಿ ಯಶಸ್ವಿಯಾಗಲಿ, ನೊಂದ ಕುಟುಂಬಕ್ಕೆ ನ್ಯಾಯ ಸಿಗಲೇಬೇಕು, ನೊಂದ ಕುಟುಂಬಕ್ಕೆ ಪರಿಹಾರ ಕೊಡಲೇಬೇಕು” ಎಂಬ ಘೋಷಣೆಗಳನ್ನು ರಸ್ತೆಯುದ್ಧಕ್ಕೂ ಕೂಗಲಾಯಿತು.

ಪೆತ್ತಾಂಡ್ಲಹಳ್ಳಿಯಿಂದ ಪ್ರಾರಂವಾಗಿರುವ ರ್‍ಯಾಲಿಯಲ್ಲಿ ಸ್ವಯಂಪ್ರೇರಿತರಾಗಿ ಪ್ರತಿಯೊಬ್ಬರು ಪಾಲ್ಗೊಳ್ಳಬೇಕು. ಜಾತಿ, ಅಸ್ಪೃಶ್ಯತೆ ವಿರುದ್ಧ ಪ್ರತಿರೋಧ ತೋರಿಸುವ ರ್‍ಯಾಲಿಯಲ್ಲಿ ಎಲ್ಲರೂ ಸೇರಿಕೊಳ್ಳಬೇಕು ಎಂದು ರ್‍ಯಾಲಿಯುದ್ಧಕ್ಕೂ ಮನವಿ ಮಾಡಲಾಯಿತು.

ಪೆತ್ತಾಂಡ್ಲಹಳ್ಳಿಯಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಮತ್ತು ಮೃತ ಉದಯ್‌ ಕಿರಣ್ ಅವರ ಭಾವಚಿತ್ರವಿರುವ ಪ್ಲೆಕ್ಸ್‌ಗೆ ಉದಯ್ ಅವರ ತಂದೆ, ತಾಯಿ ಹಾಗೂ ಸಹೋದರರು ಮಾಲಾರ್ಪಣೆ ಮಾಡಿದರು.

“ನಮ್ಮಲ್ಲಿಲ್ಲ ಹಿಂದೂ ರಕ್ತ, ನಮ್ಮಲ್ಲಿಲ್ಲ ಕ್ರೈಸ್ತ ರಕ್ತ, ನಮ್ಮಲ್ಲಿಲ್ಲ ಮುಸ್ಲಿಂ ರಕ್ತ, ನಮ್ಮಲ್ಲಿಲ್ಲ ಒಕ್ಕಲಿಗರ ರಕ್ತ, ನಮ್ಮಲ್ಲಿಲ್ಲ ರೆಡ್ಡಿ ರಕ್ತ, ನಮ್ಮಲ್ಲಿಲ್ಲ ದಲಿತ ರಕ್ತ, ನಮ್ಮಲ್ಲಿರುವುದು ಒಂದೇ ರಕ್ತ- ಅದುವೇ ಮಾನವ ಕೆಂಪು ರಕ್ತ. ದಲಿತರು ಕೂಡ ಮನುಷ್ಯರು, ಮನುಷ್ಯ ಜಾತಿ ಒಂದೇ, ಜಾತಿ ಧರ್ಮಗಳನ್ನು ಬಿಟ್ಟು ಮಾನವರಾಗಿ ಬಾಳೋಣ” ಎಂಬ ಸಂದೇಶಗಳನ್ನು ಸಾರುವ ಮೂಲಕ ಜೈಭೀಮ್‌ ಘೋಷಣೆ ಮೊಳಗಿಸಲಾಯಿತು.

ಎಸ್‌ಎಫ್‌ಐ ಮುಖಂಡ ವಾಸುದೇವ ರೆಡ್ಡಿ ಮಾತನಾಡಿ, “ಅಸ್ಪೃಶ್ಯತೆಯ ನೋವುಂಡ ಉದಯ್‌ ಕುಟುಂಬ ಸೇಡು ತೀರಿಸಿಕೊಳ್ಳಬೇಕೆಂದು ಈ ಹೋರಾಟ ಮಾಡುತ್ತಿಲ್ಲ. ನಮ್ಮ ಮಗನಿಗಾದ ಅನ್ಯಾಯ ಈ ದೇಶದ ಯಾವುದೇ ಕುಟುಂಬಕ್ಕೆ ಆಗಬಾರದೆಂಬ ಕಾರಣಕ್ಕಾಗಿ ಈ ಕಾರ್ಯಕ್ರಮ ಆಯೋಜಿಸಿದ್ದೇವೆ. ಇದು ಪೆತ್ತಾಂಡ್ಲಹಳ್ಳಿ ಗ್ರಾಮಸ್ಥರ ವಿರುದ್ಧದ ಹೋರಾಟವಲ್ಲ. ನಾವೆಲ್ಲ ಜಾತಿ, ಧರ್ಮಗಳನ್ನು ಬಿಟ್ಟು ಮಾನವರಾಗಿ ಬದುಕೋಣ ಎಂಬ ಸಂದೇಶ ಸಾರುವುದಕ್ಕಾಗಿ ಡಿಸಿ ಕಚೇರಿ ಚಲೋ ಹಮ್ಮಿಕೊಂಡಿದ್ದೇವೆ. ಉದಯ್‌ ಕುಮಾರ್‌ ಕುಟುಂಬದ ಜೊತೆಗೆ ನೀವೆಲ್ಲರೂ ನಿಲ್ಲಬೇಕು” ಎಂದು ತಿಳಿಸಿದರು.

ದಲಿತ ಮುಖಂಡರಾದ ಮೆಕ್ಯಾನಿಕ್ ಸೀನಣ್ಣ ಅವರು ಕೆಂಪು ನಿಶಾನೆ ತೋರುವ ಮೂಲಕ ಬೈಕ್‌ ರ್‍ಯಾಲಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನೊಂದ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಕಾರ್ಯಕ್ರಮ ಮಾಡುತ್ತಿದ್ದೇವೆ. ರ್‍ಯಾಲಿಯನ್ನು ಮಾಡಬಾರದು ಎಂದು ಕೆಲವರು ತೊಂದರೆಯನ್ನೂ ಕೊಟ್ಟರು. ಆದರೆ ಅನೇಕರು ಬೆಂಬಲ ನೀಡಿದರು” ಎಂದು ಹೇಳಿದರು.

ಪ್ರಕರಣದ ವಿವರ

ದಲಿತ ಯುವಕನ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪೆತ್ತಾಂಡ್ಲಹಳ್ಳಿಯ ಸವರ್ಣೀಯರಾದ ಗೋಪಾಲಕೃಷ್ಣಪ್ಪ, ಶಿವರಾಜ್ ಬಿನ್ ಮುನಿವೆಂಕಟಪ್ಪ, ಗೋಪಾಲಕೃಷ್ಣಪ್ಪ ಬಿನ್ ಮುನಿಸ್ವಾಮಿ, ಮುನಿವೆಂಕಟಪ್ಪ ಬಿನ್ ಮುನಿಸ್ವಾಮಿ ಎಂಬುವವರ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 341, 34, 504, 306 ಮತ್ತು 323ರ ಅಡಿಯಲ್ಲಿ ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನವೆಂಬರ್ 30ರ ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಮುಳಬಾಗಿಲು ತಾಲ್ಲೂಕಿನ ಬೈರಕೂರು ಹೋಬಳಿಯ ಪೆತಾಂಡ್ಲಹಳ್ಳಿ ಗ್ರಾಮದ ಸವರ್ಣೀಯ ಜನಾಂಗದ ರಾಜು ಬಿನ್ ಗೋಪಾಲಕೃಷ್ಣಪ್ಪ ರವರ ದ್ವಿಚಕ್ರ ವಾಹನವನ್ನು ಬೇವಹಳ್ಳಿಯ ಉದಯ್ ಕಿರಣ್ ಮತ್ತು ನಾಗರಾಜು ಓವರ್ ಟೇಕ್ ಮಾಡಿದರು ಎಂದು ಆರೋಪಿಸಿ ಬೈರಕೂರಿನಲ್ಲಿ ಉದಯ್ ಕಿರಣ್ ವಾಹನವನ್ನು ಅಡ್ಡಗಟ್ಟಿ ನಿಂದಿಸಿ, ಹಲ್ಲೆ ಮಾಡಲಾಗಿದೆ ಎಂದು ಮೃತ ಯುವಕನ ಸೋದರ ಮಾವ ನಾಗರಾಜು ಆರೋಪಿಸಿದ್ದರು.

ಆ ನಂತರವೂ ಸಹ ಕಾಡೆನಹಳ್ಳಿಯಿಂದ ವಾಪಸ್ಸು ಬರುತ್ತಿದ್ದ ಉದಯ್ ಕಿರಣ್ ಮತ್ತು ನಾಗರಾಜರನ್ನು ಮತ್ತೆ ಪೆತಾಂಡ್ಲಹಳ್ಳಿ ಗ್ರಾಮದ ಬಳಿ ರಾಜು ಬಿನ್ ಗೋಪಾಲಕೃಷ್ಣಪ್ಪ, ಶಿವರಾಜ್ ಬಿನ್ ಮುನಿವೆಂಕಟಪ್ಪ, ಗೋಪಾಲಕೃಷ್ಣಪ್ಪ ಬಿನ್ ಮುನಿಸ್ವಾಮಿ, ಮತ್ತು ಮುನಿವೆಂಕಟಪ್ಪ ಬಿನ್ ಮುನಿಸ್ವಾಮಿ ಬಳಿ ಅಡ್ಡಗಟ್ಟಿ, ಹೊಡೆದು ಆತನ ದ್ವಿಚಕ್ರ ವಾಹನ ಮತ್ತು ಮೊಬೈಲ್ ಕಿತ್ತುಕೊಂಡು ನಿಮ್ಮ ಮನೆಯವರನ್ನು ಕರೆದುಕೊಂಡು ಬನ್ನಿ ಎಂದು ದೌರ್ಜನ್ಯವೆಸಗಿರುತ್ತಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...