Homeಕರ್ನಾಟಕಅವಮಾನ ತಾಳಲಾರದೆ ದಲಿತ ಯುವಕನ ಆತ್ಮಹತ್ಯೆ ಪ್ರಕರಣ: ಪೆತ್ತಾಂಡ್ಲಹಳ್ಳಿಯಿಂದ ಯಶಸ್ವಿ ಬೈಕ್ ರ್‍ಯಾಲಿ

ಅವಮಾನ ತಾಳಲಾರದೆ ದಲಿತ ಯುವಕನ ಆತ್ಮಹತ್ಯೆ ಪ್ರಕರಣ: ಪೆತ್ತಾಂಡ್ಲಹಳ್ಳಿಯಿಂದ ಯಶಸ್ವಿ ಬೈಕ್ ರ್‍ಯಾಲಿ

- Advertisement -
- Advertisement -

ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ದಲಿತ ಯುವಕನ ಬೈಕ್ ಮತ್ತು ಮೊಬೈಲ್ ಕಿತ್ತುಕೊಂಡು ಸವರ್ಣೀಯರು ಮರಕ್ಕೆ ಕಟ್ಟಿ ಥಳಿಸಿದ್ದರಿಂದ ಅವಮಾನ ತಾಳಲಾರದೆ ದಲಿತ ಯುವಕ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಸೋಮವಾರ) ಬೈಕ್‌ ರ್‍ಯಾಲಿ ನಡೆಸಲಾಗಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಬೇವಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿತ್ತು. ಬೇವಹಳ್ಳಿಯ ಉದಯ್ ಕಿರಣ್ ಸಾವಿಗೆ ಶರಣಾಗಿದ್ದರು. ಆತನ ಮೇಲೆ ಪೆತಾಂಡ್ಲಹಳ್ಳಿ ಗ್ರಾಮದ ಕೆಲವು ಸವರ್ಣೀಯರು ಹಲ್ಲೆ ನಡೆಸಿದ್ದರು. ಇದರ ಹಿನ್ನೆಲೆಯಲ್ಲಿ ಆರೋಪಿಗಳ ಸ್ಥಳವಾದ ಪೆತಾಂಡ್ಲಹಳ್ಳಿಯಿಂದ ಹಿಡಿದು ಕೋಲಾರ ಜಿಲ್ಲಾಧಿಕಾರಿ ಕಚೇರಿಯವರೆಗೆ ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ಬೈಕ್‌ ರ್‍ಯಾಲಿ ನಡೆಸಿವೆ.

“ಬೈಕ್‌ ರ್‍ಯಾಲಿ ಯಶಸ್ವಿಯಾಗಲಿ, ನೊಂದ ಕುಟುಂಬಕ್ಕೆ ನ್ಯಾಯ ಸಿಗಲೇಬೇಕು, ನೊಂದ ಕುಟುಂಬಕ್ಕೆ ಪರಿಹಾರ ಕೊಡಲೇಬೇಕು” ಎಂಬ ಘೋಷಣೆಗಳನ್ನು ರಸ್ತೆಯುದ್ಧಕ್ಕೂ ಕೂಗಲಾಯಿತು.

ಪೆತ್ತಾಂಡ್ಲಹಳ್ಳಿಯಿಂದ ಪ್ರಾರಂವಾಗಿರುವ ರ್‍ಯಾಲಿಯಲ್ಲಿ ಸ್ವಯಂಪ್ರೇರಿತರಾಗಿ ಪ್ರತಿಯೊಬ್ಬರು ಪಾಲ್ಗೊಳ್ಳಬೇಕು. ಜಾತಿ, ಅಸ್ಪೃಶ್ಯತೆ ವಿರುದ್ಧ ಪ್ರತಿರೋಧ ತೋರಿಸುವ ರ್‍ಯಾಲಿಯಲ್ಲಿ ಎಲ್ಲರೂ ಸೇರಿಕೊಳ್ಳಬೇಕು ಎಂದು ರ್‍ಯಾಲಿಯುದ್ಧಕ್ಕೂ ಮನವಿ ಮಾಡಲಾಯಿತು.

ಪೆತ್ತಾಂಡ್ಲಹಳ್ಳಿಯಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಮತ್ತು ಮೃತ ಉದಯ್‌ ಕಿರಣ್ ಅವರ ಭಾವಚಿತ್ರವಿರುವ ಪ್ಲೆಕ್ಸ್‌ಗೆ ಉದಯ್ ಅವರ ತಂದೆ, ತಾಯಿ ಹಾಗೂ ಸಹೋದರರು ಮಾಲಾರ್ಪಣೆ ಮಾಡಿದರು.

“ನಮ್ಮಲ್ಲಿಲ್ಲ ಹಿಂದೂ ರಕ್ತ, ನಮ್ಮಲ್ಲಿಲ್ಲ ಕ್ರೈಸ್ತ ರಕ್ತ, ನಮ್ಮಲ್ಲಿಲ್ಲ ಮುಸ್ಲಿಂ ರಕ್ತ, ನಮ್ಮಲ್ಲಿಲ್ಲ ಒಕ್ಕಲಿಗರ ರಕ್ತ, ನಮ್ಮಲ್ಲಿಲ್ಲ ರೆಡ್ಡಿ ರಕ್ತ, ನಮ್ಮಲ್ಲಿಲ್ಲ ದಲಿತ ರಕ್ತ, ನಮ್ಮಲ್ಲಿರುವುದು ಒಂದೇ ರಕ್ತ- ಅದುವೇ ಮಾನವ ಕೆಂಪು ರಕ್ತ. ದಲಿತರು ಕೂಡ ಮನುಷ್ಯರು, ಮನುಷ್ಯ ಜಾತಿ ಒಂದೇ, ಜಾತಿ ಧರ್ಮಗಳನ್ನು ಬಿಟ್ಟು ಮಾನವರಾಗಿ ಬಾಳೋಣ” ಎಂಬ ಸಂದೇಶಗಳನ್ನು ಸಾರುವ ಮೂಲಕ ಜೈಭೀಮ್‌ ಘೋಷಣೆ ಮೊಳಗಿಸಲಾಯಿತು.

ಎಸ್‌ಎಫ್‌ಐ ಮುಖಂಡ ವಾಸುದೇವ ರೆಡ್ಡಿ ಮಾತನಾಡಿ, “ಅಸ್ಪೃಶ್ಯತೆಯ ನೋವುಂಡ ಉದಯ್‌ ಕುಟುಂಬ ಸೇಡು ತೀರಿಸಿಕೊಳ್ಳಬೇಕೆಂದು ಈ ಹೋರಾಟ ಮಾಡುತ್ತಿಲ್ಲ. ನಮ್ಮ ಮಗನಿಗಾದ ಅನ್ಯಾಯ ಈ ದೇಶದ ಯಾವುದೇ ಕುಟುಂಬಕ್ಕೆ ಆಗಬಾರದೆಂಬ ಕಾರಣಕ್ಕಾಗಿ ಈ ಕಾರ್ಯಕ್ರಮ ಆಯೋಜಿಸಿದ್ದೇವೆ. ಇದು ಪೆತ್ತಾಂಡ್ಲಹಳ್ಳಿ ಗ್ರಾಮಸ್ಥರ ವಿರುದ್ಧದ ಹೋರಾಟವಲ್ಲ. ನಾವೆಲ್ಲ ಜಾತಿ, ಧರ್ಮಗಳನ್ನು ಬಿಟ್ಟು ಮಾನವರಾಗಿ ಬದುಕೋಣ ಎಂಬ ಸಂದೇಶ ಸಾರುವುದಕ್ಕಾಗಿ ಡಿಸಿ ಕಚೇರಿ ಚಲೋ ಹಮ್ಮಿಕೊಂಡಿದ್ದೇವೆ. ಉದಯ್‌ ಕುಮಾರ್‌ ಕುಟುಂಬದ ಜೊತೆಗೆ ನೀವೆಲ್ಲರೂ ನಿಲ್ಲಬೇಕು” ಎಂದು ತಿಳಿಸಿದರು.

ದಲಿತ ಮುಖಂಡರಾದ ಮೆಕ್ಯಾನಿಕ್ ಸೀನಣ್ಣ ಅವರು ಕೆಂಪು ನಿಶಾನೆ ತೋರುವ ಮೂಲಕ ಬೈಕ್‌ ರ್‍ಯಾಲಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನೊಂದ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಕಾರ್ಯಕ್ರಮ ಮಾಡುತ್ತಿದ್ದೇವೆ. ರ್‍ಯಾಲಿಯನ್ನು ಮಾಡಬಾರದು ಎಂದು ಕೆಲವರು ತೊಂದರೆಯನ್ನೂ ಕೊಟ್ಟರು. ಆದರೆ ಅನೇಕರು ಬೆಂಬಲ ನೀಡಿದರು” ಎಂದು ಹೇಳಿದರು.

ಪ್ರಕರಣದ ವಿವರ

ದಲಿತ ಯುವಕನ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪೆತ್ತಾಂಡ್ಲಹಳ್ಳಿಯ ಸವರ್ಣೀಯರಾದ ಗೋಪಾಲಕೃಷ್ಣಪ್ಪ, ಶಿವರಾಜ್ ಬಿನ್ ಮುನಿವೆಂಕಟಪ್ಪ, ಗೋಪಾಲಕೃಷ್ಣಪ್ಪ ಬಿನ್ ಮುನಿಸ್ವಾಮಿ, ಮುನಿವೆಂಕಟಪ್ಪ ಬಿನ್ ಮುನಿಸ್ವಾಮಿ ಎಂಬುವವರ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 341, 34, 504, 306 ಮತ್ತು 323ರ ಅಡಿಯಲ್ಲಿ ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನವೆಂಬರ್ 30ರ ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಮುಳಬಾಗಿಲು ತಾಲ್ಲೂಕಿನ ಬೈರಕೂರು ಹೋಬಳಿಯ ಪೆತಾಂಡ್ಲಹಳ್ಳಿ ಗ್ರಾಮದ ಸವರ್ಣೀಯ ಜನಾಂಗದ ರಾಜು ಬಿನ್ ಗೋಪಾಲಕೃಷ್ಣಪ್ಪ ರವರ ದ್ವಿಚಕ್ರ ವಾಹನವನ್ನು ಬೇವಹಳ್ಳಿಯ ಉದಯ್ ಕಿರಣ್ ಮತ್ತು ನಾಗರಾಜು ಓವರ್ ಟೇಕ್ ಮಾಡಿದರು ಎಂದು ಆರೋಪಿಸಿ ಬೈರಕೂರಿನಲ್ಲಿ ಉದಯ್ ಕಿರಣ್ ವಾಹನವನ್ನು ಅಡ್ಡಗಟ್ಟಿ ನಿಂದಿಸಿ, ಹಲ್ಲೆ ಮಾಡಲಾಗಿದೆ ಎಂದು ಮೃತ ಯುವಕನ ಸೋದರ ಮಾವ ನಾಗರಾಜು ಆರೋಪಿಸಿದ್ದರು.

ಆ ನಂತರವೂ ಸಹ ಕಾಡೆನಹಳ್ಳಿಯಿಂದ ವಾಪಸ್ಸು ಬರುತ್ತಿದ್ದ ಉದಯ್ ಕಿರಣ್ ಮತ್ತು ನಾಗರಾಜರನ್ನು ಮತ್ತೆ ಪೆತಾಂಡ್ಲಹಳ್ಳಿ ಗ್ರಾಮದ ಬಳಿ ರಾಜು ಬಿನ್ ಗೋಪಾಲಕೃಷ್ಣಪ್ಪ, ಶಿವರಾಜ್ ಬಿನ್ ಮುನಿವೆಂಕಟಪ್ಪ, ಗೋಪಾಲಕೃಷ್ಣಪ್ಪ ಬಿನ್ ಮುನಿಸ್ವಾಮಿ, ಮತ್ತು ಮುನಿವೆಂಕಟಪ್ಪ ಬಿನ್ ಮುನಿಸ್ವಾಮಿ ಬಳಿ ಅಡ್ಡಗಟ್ಟಿ, ಹೊಡೆದು ಆತನ ದ್ವಿಚಕ್ರ ವಾಹನ ಮತ್ತು ಮೊಬೈಲ್ ಕಿತ್ತುಕೊಂಡು ನಿಮ್ಮ ಮನೆಯವರನ್ನು ಕರೆದುಕೊಂಡು ಬನ್ನಿ ಎಂದು ದೌರ್ಜನ್ಯವೆಸಗಿರುತ್ತಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...