Homeಕರ್ನಾಟಕಅವಮಾನ ತಾಳಲಾರದೆ ದಲಿತ ಯುವಕನ ಆತ್ಮಹತ್ಯೆ ಪ್ರಕರಣ: ಪೆತ್ತಾಂಡ್ಲಹಳ್ಳಿಯಿಂದ ಯಶಸ್ವಿ ಬೈಕ್ ರ್‍ಯಾಲಿ

ಅವಮಾನ ತಾಳಲಾರದೆ ದಲಿತ ಯುವಕನ ಆತ್ಮಹತ್ಯೆ ಪ್ರಕರಣ: ಪೆತ್ತಾಂಡ್ಲಹಳ್ಳಿಯಿಂದ ಯಶಸ್ವಿ ಬೈಕ್ ರ್‍ಯಾಲಿ

- Advertisement -
- Advertisement -

ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ದಲಿತ ಯುವಕನ ಬೈಕ್ ಮತ್ತು ಮೊಬೈಲ್ ಕಿತ್ತುಕೊಂಡು ಸವರ್ಣೀಯರು ಮರಕ್ಕೆ ಕಟ್ಟಿ ಥಳಿಸಿದ್ದರಿಂದ ಅವಮಾನ ತಾಳಲಾರದೆ ದಲಿತ ಯುವಕ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಸೋಮವಾರ) ಬೈಕ್‌ ರ್‍ಯಾಲಿ ನಡೆಸಲಾಗಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಬೇವಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿತ್ತು. ಬೇವಹಳ್ಳಿಯ ಉದಯ್ ಕಿರಣ್ ಸಾವಿಗೆ ಶರಣಾಗಿದ್ದರು. ಆತನ ಮೇಲೆ ಪೆತಾಂಡ್ಲಹಳ್ಳಿ ಗ್ರಾಮದ ಕೆಲವು ಸವರ್ಣೀಯರು ಹಲ್ಲೆ ನಡೆಸಿದ್ದರು. ಇದರ ಹಿನ್ನೆಲೆಯಲ್ಲಿ ಆರೋಪಿಗಳ ಸ್ಥಳವಾದ ಪೆತಾಂಡ್ಲಹಳ್ಳಿಯಿಂದ ಹಿಡಿದು ಕೋಲಾರ ಜಿಲ್ಲಾಧಿಕಾರಿ ಕಚೇರಿಯವರೆಗೆ ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ಬೈಕ್‌ ರ್‍ಯಾಲಿ ನಡೆಸಿವೆ.

“ಬೈಕ್‌ ರ್‍ಯಾಲಿ ಯಶಸ್ವಿಯಾಗಲಿ, ನೊಂದ ಕುಟುಂಬಕ್ಕೆ ನ್ಯಾಯ ಸಿಗಲೇಬೇಕು, ನೊಂದ ಕುಟುಂಬಕ್ಕೆ ಪರಿಹಾರ ಕೊಡಲೇಬೇಕು” ಎಂಬ ಘೋಷಣೆಗಳನ್ನು ರಸ್ತೆಯುದ್ಧಕ್ಕೂ ಕೂಗಲಾಯಿತು.

ಪೆತ್ತಾಂಡ್ಲಹಳ್ಳಿಯಿಂದ ಪ್ರಾರಂವಾಗಿರುವ ರ್‍ಯಾಲಿಯಲ್ಲಿ ಸ್ವಯಂಪ್ರೇರಿತರಾಗಿ ಪ್ರತಿಯೊಬ್ಬರು ಪಾಲ್ಗೊಳ್ಳಬೇಕು. ಜಾತಿ, ಅಸ್ಪೃಶ್ಯತೆ ವಿರುದ್ಧ ಪ್ರತಿರೋಧ ತೋರಿಸುವ ರ್‍ಯಾಲಿಯಲ್ಲಿ ಎಲ್ಲರೂ ಸೇರಿಕೊಳ್ಳಬೇಕು ಎಂದು ರ್‍ಯಾಲಿಯುದ್ಧಕ್ಕೂ ಮನವಿ ಮಾಡಲಾಯಿತು.

ಪೆತ್ತಾಂಡ್ಲಹಳ್ಳಿಯಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಮತ್ತು ಮೃತ ಉದಯ್‌ ಕಿರಣ್ ಅವರ ಭಾವಚಿತ್ರವಿರುವ ಪ್ಲೆಕ್ಸ್‌ಗೆ ಉದಯ್ ಅವರ ತಂದೆ, ತಾಯಿ ಹಾಗೂ ಸಹೋದರರು ಮಾಲಾರ್ಪಣೆ ಮಾಡಿದರು.

“ನಮ್ಮಲ್ಲಿಲ್ಲ ಹಿಂದೂ ರಕ್ತ, ನಮ್ಮಲ್ಲಿಲ್ಲ ಕ್ರೈಸ್ತ ರಕ್ತ, ನಮ್ಮಲ್ಲಿಲ್ಲ ಮುಸ್ಲಿಂ ರಕ್ತ, ನಮ್ಮಲ್ಲಿಲ್ಲ ಒಕ್ಕಲಿಗರ ರಕ್ತ, ನಮ್ಮಲ್ಲಿಲ್ಲ ರೆಡ್ಡಿ ರಕ್ತ, ನಮ್ಮಲ್ಲಿಲ್ಲ ದಲಿತ ರಕ್ತ, ನಮ್ಮಲ್ಲಿರುವುದು ಒಂದೇ ರಕ್ತ- ಅದುವೇ ಮಾನವ ಕೆಂಪು ರಕ್ತ. ದಲಿತರು ಕೂಡ ಮನುಷ್ಯರು, ಮನುಷ್ಯ ಜಾತಿ ಒಂದೇ, ಜಾತಿ ಧರ್ಮಗಳನ್ನು ಬಿಟ್ಟು ಮಾನವರಾಗಿ ಬಾಳೋಣ” ಎಂಬ ಸಂದೇಶಗಳನ್ನು ಸಾರುವ ಮೂಲಕ ಜೈಭೀಮ್‌ ಘೋಷಣೆ ಮೊಳಗಿಸಲಾಯಿತು.

ಎಸ್‌ಎಫ್‌ಐ ಮುಖಂಡ ವಾಸುದೇವ ರೆಡ್ಡಿ ಮಾತನಾಡಿ, “ಅಸ್ಪೃಶ್ಯತೆಯ ನೋವುಂಡ ಉದಯ್‌ ಕುಟುಂಬ ಸೇಡು ತೀರಿಸಿಕೊಳ್ಳಬೇಕೆಂದು ಈ ಹೋರಾಟ ಮಾಡುತ್ತಿಲ್ಲ. ನಮ್ಮ ಮಗನಿಗಾದ ಅನ್ಯಾಯ ಈ ದೇಶದ ಯಾವುದೇ ಕುಟುಂಬಕ್ಕೆ ಆಗಬಾರದೆಂಬ ಕಾರಣಕ್ಕಾಗಿ ಈ ಕಾರ್ಯಕ್ರಮ ಆಯೋಜಿಸಿದ್ದೇವೆ. ಇದು ಪೆತ್ತಾಂಡ್ಲಹಳ್ಳಿ ಗ್ರಾಮಸ್ಥರ ವಿರುದ್ಧದ ಹೋರಾಟವಲ್ಲ. ನಾವೆಲ್ಲ ಜಾತಿ, ಧರ್ಮಗಳನ್ನು ಬಿಟ್ಟು ಮಾನವರಾಗಿ ಬದುಕೋಣ ಎಂಬ ಸಂದೇಶ ಸಾರುವುದಕ್ಕಾಗಿ ಡಿಸಿ ಕಚೇರಿ ಚಲೋ ಹಮ್ಮಿಕೊಂಡಿದ್ದೇವೆ. ಉದಯ್‌ ಕುಮಾರ್‌ ಕುಟುಂಬದ ಜೊತೆಗೆ ನೀವೆಲ್ಲರೂ ನಿಲ್ಲಬೇಕು” ಎಂದು ತಿಳಿಸಿದರು.

ದಲಿತ ಮುಖಂಡರಾದ ಮೆಕ್ಯಾನಿಕ್ ಸೀನಣ್ಣ ಅವರು ಕೆಂಪು ನಿಶಾನೆ ತೋರುವ ಮೂಲಕ ಬೈಕ್‌ ರ್‍ಯಾಲಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನೊಂದ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಕಾರ್ಯಕ್ರಮ ಮಾಡುತ್ತಿದ್ದೇವೆ. ರ್‍ಯಾಲಿಯನ್ನು ಮಾಡಬಾರದು ಎಂದು ಕೆಲವರು ತೊಂದರೆಯನ್ನೂ ಕೊಟ್ಟರು. ಆದರೆ ಅನೇಕರು ಬೆಂಬಲ ನೀಡಿದರು” ಎಂದು ಹೇಳಿದರು.

ಪ್ರಕರಣದ ವಿವರ

ದಲಿತ ಯುವಕನ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪೆತ್ತಾಂಡ್ಲಹಳ್ಳಿಯ ಸವರ್ಣೀಯರಾದ ಗೋಪಾಲಕೃಷ್ಣಪ್ಪ, ಶಿವರಾಜ್ ಬಿನ್ ಮುನಿವೆಂಕಟಪ್ಪ, ಗೋಪಾಲಕೃಷ್ಣಪ್ಪ ಬಿನ್ ಮುನಿಸ್ವಾಮಿ, ಮುನಿವೆಂಕಟಪ್ಪ ಬಿನ್ ಮುನಿಸ್ವಾಮಿ ಎಂಬುವವರ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 341, 34, 504, 306 ಮತ್ತು 323ರ ಅಡಿಯಲ್ಲಿ ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನವೆಂಬರ್ 30ರ ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಮುಳಬಾಗಿಲು ತಾಲ್ಲೂಕಿನ ಬೈರಕೂರು ಹೋಬಳಿಯ ಪೆತಾಂಡ್ಲಹಳ್ಳಿ ಗ್ರಾಮದ ಸವರ್ಣೀಯ ಜನಾಂಗದ ರಾಜು ಬಿನ್ ಗೋಪಾಲಕೃಷ್ಣಪ್ಪ ರವರ ದ್ವಿಚಕ್ರ ವಾಹನವನ್ನು ಬೇವಹಳ್ಳಿಯ ಉದಯ್ ಕಿರಣ್ ಮತ್ತು ನಾಗರಾಜು ಓವರ್ ಟೇಕ್ ಮಾಡಿದರು ಎಂದು ಆರೋಪಿಸಿ ಬೈರಕೂರಿನಲ್ಲಿ ಉದಯ್ ಕಿರಣ್ ವಾಹನವನ್ನು ಅಡ್ಡಗಟ್ಟಿ ನಿಂದಿಸಿ, ಹಲ್ಲೆ ಮಾಡಲಾಗಿದೆ ಎಂದು ಮೃತ ಯುವಕನ ಸೋದರ ಮಾವ ನಾಗರಾಜು ಆರೋಪಿಸಿದ್ದರು.

ಆ ನಂತರವೂ ಸಹ ಕಾಡೆನಹಳ್ಳಿಯಿಂದ ವಾಪಸ್ಸು ಬರುತ್ತಿದ್ದ ಉದಯ್ ಕಿರಣ್ ಮತ್ತು ನಾಗರಾಜರನ್ನು ಮತ್ತೆ ಪೆತಾಂಡ್ಲಹಳ್ಳಿ ಗ್ರಾಮದ ಬಳಿ ರಾಜು ಬಿನ್ ಗೋಪಾಲಕೃಷ್ಣಪ್ಪ, ಶಿವರಾಜ್ ಬಿನ್ ಮುನಿವೆಂಕಟಪ್ಪ, ಗೋಪಾಲಕೃಷ್ಣಪ್ಪ ಬಿನ್ ಮುನಿಸ್ವಾಮಿ, ಮತ್ತು ಮುನಿವೆಂಕಟಪ್ಪ ಬಿನ್ ಮುನಿಸ್ವಾಮಿ ಬಳಿ ಅಡ್ಡಗಟ್ಟಿ, ಹೊಡೆದು ಆತನ ದ್ವಿಚಕ್ರ ವಾಹನ ಮತ್ತು ಮೊಬೈಲ್ ಕಿತ್ತುಕೊಂಡು ನಿಮ್ಮ ಮನೆಯವರನ್ನು ಕರೆದುಕೊಂಡು ಬನ್ನಿ ಎಂದು ದೌರ್ಜನ್ಯವೆಸಗಿರುತ್ತಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...