Homeಕರ್ನಾಟಕಅವಮಾನ ತಾಳಲಾರದೆ ದಲಿತ ಯುವಕನ ಆತ್ಮಹತ್ಯೆ ಪ್ರಕರಣ: ಪೆತ್ತಾಂಡ್ಲಹಳ್ಳಿಯಿಂದ ಯಶಸ್ವಿ ಬೈಕ್ ರ್‍ಯಾಲಿ

ಅವಮಾನ ತಾಳಲಾರದೆ ದಲಿತ ಯುವಕನ ಆತ್ಮಹತ್ಯೆ ಪ್ರಕರಣ: ಪೆತ್ತಾಂಡ್ಲಹಳ್ಳಿಯಿಂದ ಯಶಸ್ವಿ ಬೈಕ್ ರ್‍ಯಾಲಿ

- Advertisement -
- Advertisement -

ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ದಲಿತ ಯುವಕನ ಬೈಕ್ ಮತ್ತು ಮೊಬೈಲ್ ಕಿತ್ತುಕೊಂಡು ಸವರ್ಣೀಯರು ಮರಕ್ಕೆ ಕಟ್ಟಿ ಥಳಿಸಿದ್ದರಿಂದ ಅವಮಾನ ತಾಳಲಾರದೆ ದಲಿತ ಯುವಕ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಸೋಮವಾರ) ಬೈಕ್‌ ರ್‍ಯಾಲಿ ನಡೆಸಲಾಗಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಬೇವಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿತ್ತು. ಬೇವಹಳ್ಳಿಯ ಉದಯ್ ಕಿರಣ್ ಸಾವಿಗೆ ಶರಣಾಗಿದ್ದರು. ಆತನ ಮೇಲೆ ಪೆತಾಂಡ್ಲಹಳ್ಳಿ ಗ್ರಾಮದ ಕೆಲವು ಸವರ್ಣೀಯರು ಹಲ್ಲೆ ನಡೆಸಿದ್ದರು. ಇದರ ಹಿನ್ನೆಲೆಯಲ್ಲಿ ಆರೋಪಿಗಳ ಸ್ಥಳವಾದ ಪೆತಾಂಡ್ಲಹಳ್ಳಿಯಿಂದ ಹಿಡಿದು ಕೋಲಾರ ಜಿಲ್ಲಾಧಿಕಾರಿ ಕಚೇರಿಯವರೆಗೆ ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ಬೈಕ್‌ ರ್‍ಯಾಲಿ ನಡೆಸಿವೆ.

“ಬೈಕ್‌ ರ್‍ಯಾಲಿ ಯಶಸ್ವಿಯಾಗಲಿ, ನೊಂದ ಕುಟುಂಬಕ್ಕೆ ನ್ಯಾಯ ಸಿಗಲೇಬೇಕು, ನೊಂದ ಕುಟುಂಬಕ್ಕೆ ಪರಿಹಾರ ಕೊಡಲೇಬೇಕು” ಎಂಬ ಘೋಷಣೆಗಳನ್ನು ರಸ್ತೆಯುದ್ಧಕ್ಕೂ ಕೂಗಲಾಯಿತು.

ಪೆತ್ತಾಂಡ್ಲಹಳ್ಳಿಯಿಂದ ಪ್ರಾರಂವಾಗಿರುವ ರ್‍ಯಾಲಿಯಲ್ಲಿ ಸ್ವಯಂಪ್ರೇರಿತರಾಗಿ ಪ್ರತಿಯೊಬ್ಬರು ಪಾಲ್ಗೊಳ್ಳಬೇಕು. ಜಾತಿ, ಅಸ್ಪೃಶ್ಯತೆ ವಿರುದ್ಧ ಪ್ರತಿರೋಧ ತೋರಿಸುವ ರ್‍ಯಾಲಿಯಲ್ಲಿ ಎಲ್ಲರೂ ಸೇರಿಕೊಳ್ಳಬೇಕು ಎಂದು ರ್‍ಯಾಲಿಯುದ್ಧಕ್ಕೂ ಮನವಿ ಮಾಡಲಾಯಿತು.

ಪೆತ್ತಾಂಡ್ಲಹಳ್ಳಿಯಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಮತ್ತು ಮೃತ ಉದಯ್‌ ಕಿರಣ್ ಅವರ ಭಾವಚಿತ್ರವಿರುವ ಪ್ಲೆಕ್ಸ್‌ಗೆ ಉದಯ್ ಅವರ ತಂದೆ, ತಾಯಿ ಹಾಗೂ ಸಹೋದರರು ಮಾಲಾರ್ಪಣೆ ಮಾಡಿದರು.

“ನಮ್ಮಲ್ಲಿಲ್ಲ ಹಿಂದೂ ರಕ್ತ, ನಮ್ಮಲ್ಲಿಲ್ಲ ಕ್ರೈಸ್ತ ರಕ್ತ, ನಮ್ಮಲ್ಲಿಲ್ಲ ಮುಸ್ಲಿಂ ರಕ್ತ, ನಮ್ಮಲ್ಲಿಲ್ಲ ಒಕ್ಕಲಿಗರ ರಕ್ತ, ನಮ್ಮಲ್ಲಿಲ್ಲ ರೆಡ್ಡಿ ರಕ್ತ, ನಮ್ಮಲ್ಲಿಲ್ಲ ದಲಿತ ರಕ್ತ, ನಮ್ಮಲ್ಲಿರುವುದು ಒಂದೇ ರಕ್ತ- ಅದುವೇ ಮಾನವ ಕೆಂಪು ರಕ್ತ. ದಲಿತರು ಕೂಡ ಮನುಷ್ಯರು, ಮನುಷ್ಯ ಜಾತಿ ಒಂದೇ, ಜಾತಿ ಧರ್ಮಗಳನ್ನು ಬಿಟ್ಟು ಮಾನವರಾಗಿ ಬಾಳೋಣ” ಎಂಬ ಸಂದೇಶಗಳನ್ನು ಸಾರುವ ಮೂಲಕ ಜೈಭೀಮ್‌ ಘೋಷಣೆ ಮೊಳಗಿಸಲಾಯಿತು.

ಎಸ್‌ಎಫ್‌ಐ ಮುಖಂಡ ವಾಸುದೇವ ರೆಡ್ಡಿ ಮಾತನಾಡಿ, “ಅಸ್ಪೃಶ್ಯತೆಯ ನೋವುಂಡ ಉದಯ್‌ ಕುಟುಂಬ ಸೇಡು ತೀರಿಸಿಕೊಳ್ಳಬೇಕೆಂದು ಈ ಹೋರಾಟ ಮಾಡುತ್ತಿಲ್ಲ. ನಮ್ಮ ಮಗನಿಗಾದ ಅನ್ಯಾಯ ಈ ದೇಶದ ಯಾವುದೇ ಕುಟುಂಬಕ್ಕೆ ಆಗಬಾರದೆಂಬ ಕಾರಣಕ್ಕಾಗಿ ಈ ಕಾರ್ಯಕ್ರಮ ಆಯೋಜಿಸಿದ್ದೇವೆ. ಇದು ಪೆತ್ತಾಂಡ್ಲಹಳ್ಳಿ ಗ್ರಾಮಸ್ಥರ ವಿರುದ್ಧದ ಹೋರಾಟವಲ್ಲ. ನಾವೆಲ್ಲ ಜಾತಿ, ಧರ್ಮಗಳನ್ನು ಬಿಟ್ಟು ಮಾನವರಾಗಿ ಬದುಕೋಣ ಎಂಬ ಸಂದೇಶ ಸಾರುವುದಕ್ಕಾಗಿ ಡಿಸಿ ಕಚೇರಿ ಚಲೋ ಹಮ್ಮಿಕೊಂಡಿದ್ದೇವೆ. ಉದಯ್‌ ಕುಮಾರ್‌ ಕುಟುಂಬದ ಜೊತೆಗೆ ನೀವೆಲ್ಲರೂ ನಿಲ್ಲಬೇಕು” ಎಂದು ತಿಳಿಸಿದರು.

ದಲಿತ ಮುಖಂಡರಾದ ಮೆಕ್ಯಾನಿಕ್ ಸೀನಣ್ಣ ಅವರು ಕೆಂಪು ನಿಶಾನೆ ತೋರುವ ಮೂಲಕ ಬೈಕ್‌ ರ್‍ಯಾಲಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನೊಂದ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಕಾರ್ಯಕ್ರಮ ಮಾಡುತ್ತಿದ್ದೇವೆ. ರ್‍ಯಾಲಿಯನ್ನು ಮಾಡಬಾರದು ಎಂದು ಕೆಲವರು ತೊಂದರೆಯನ್ನೂ ಕೊಟ್ಟರು. ಆದರೆ ಅನೇಕರು ಬೆಂಬಲ ನೀಡಿದರು” ಎಂದು ಹೇಳಿದರು.

ಪ್ರಕರಣದ ವಿವರ

ದಲಿತ ಯುವಕನ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪೆತ್ತಾಂಡ್ಲಹಳ್ಳಿಯ ಸವರ್ಣೀಯರಾದ ಗೋಪಾಲಕೃಷ್ಣಪ್ಪ, ಶಿವರಾಜ್ ಬಿನ್ ಮುನಿವೆಂಕಟಪ್ಪ, ಗೋಪಾಲಕೃಷ್ಣಪ್ಪ ಬಿನ್ ಮುನಿಸ್ವಾಮಿ, ಮುನಿವೆಂಕಟಪ್ಪ ಬಿನ್ ಮುನಿಸ್ವಾಮಿ ಎಂಬುವವರ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 341, 34, 504, 306 ಮತ್ತು 323ರ ಅಡಿಯಲ್ಲಿ ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನವೆಂಬರ್ 30ರ ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಮುಳಬಾಗಿಲು ತಾಲ್ಲೂಕಿನ ಬೈರಕೂರು ಹೋಬಳಿಯ ಪೆತಾಂಡ್ಲಹಳ್ಳಿ ಗ್ರಾಮದ ಸವರ್ಣೀಯ ಜನಾಂಗದ ರಾಜು ಬಿನ್ ಗೋಪಾಲಕೃಷ್ಣಪ್ಪ ರವರ ದ್ವಿಚಕ್ರ ವಾಹನವನ್ನು ಬೇವಹಳ್ಳಿಯ ಉದಯ್ ಕಿರಣ್ ಮತ್ತು ನಾಗರಾಜು ಓವರ್ ಟೇಕ್ ಮಾಡಿದರು ಎಂದು ಆರೋಪಿಸಿ ಬೈರಕೂರಿನಲ್ಲಿ ಉದಯ್ ಕಿರಣ್ ವಾಹನವನ್ನು ಅಡ್ಡಗಟ್ಟಿ ನಿಂದಿಸಿ, ಹಲ್ಲೆ ಮಾಡಲಾಗಿದೆ ಎಂದು ಮೃತ ಯುವಕನ ಸೋದರ ಮಾವ ನಾಗರಾಜು ಆರೋಪಿಸಿದ್ದರು.

ಆ ನಂತರವೂ ಸಹ ಕಾಡೆನಹಳ್ಳಿಯಿಂದ ವಾಪಸ್ಸು ಬರುತ್ತಿದ್ದ ಉದಯ್ ಕಿರಣ್ ಮತ್ತು ನಾಗರಾಜರನ್ನು ಮತ್ತೆ ಪೆತಾಂಡ್ಲಹಳ್ಳಿ ಗ್ರಾಮದ ಬಳಿ ರಾಜು ಬಿನ್ ಗೋಪಾಲಕೃಷ್ಣಪ್ಪ, ಶಿವರಾಜ್ ಬಿನ್ ಮುನಿವೆಂಕಟಪ್ಪ, ಗೋಪಾಲಕೃಷ್ಣಪ್ಪ ಬಿನ್ ಮುನಿಸ್ವಾಮಿ, ಮತ್ತು ಮುನಿವೆಂಕಟಪ್ಪ ಬಿನ್ ಮುನಿಸ್ವಾಮಿ ಬಳಿ ಅಡ್ಡಗಟ್ಟಿ, ಹೊಡೆದು ಆತನ ದ್ವಿಚಕ್ರ ವಾಹನ ಮತ್ತು ಮೊಬೈಲ್ ಕಿತ್ತುಕೊಂಡು ನಿಮ್ಮ ಮನೆಯವರನ್ನು ಕರೆದುಕೊಂಡು ಬನ್ನಿ ಎಂದು ದೌರ್ಜನ್ಯವೆಸಗಿರುತ್ತಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...