Homeಕರ್ನಾಟಕಅವಮಾನ ತಾಳಲಾರದೆ ದಲಿತ ಯುವಕನ ಆತ್ಮಹತ್ಯೆ ಪ್ರಕರಣ: ಪೆತ್ತಾಂಡ್ಲಹಳ್ಳಿಯಿಂದ ಯಶಸ್ವಿ ಬೈಕ್ ರ್‍ಯಾಲಿ

ಅವಮಾನ ತಾಳಲಾರದೆ ದಲಿತ ಯುವಕನ ಆತ್ಮಹತ್ಯೆ ಪ್ರಕರಣ: ಪೆತ್ತಾಂಡ್ಲಹಳ್ಳಿಯಿಂದ ಯಶಸ್ವಿ ಬೈಕ್ ರ್‍ಯಾಲಿ

- Advertisement -
- Advertisement -

ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ದಲಿತ ಯುವಕನ ಬೈಕ್ ಮತ್ತು ಮೊಬೈಲ್ ಕಿತ್ತುಕೊಂಡು ಸವರ್ಣೀಯರು ಮರಕ್ಕೆ ಕಟ್ಟಿ ಥಳಿಸಿದ್ದರಿಂದ ಅವಮಾನ ತಾಳಲಾರದೆ ದಲಿತ ಯುವಕ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಸೋಮವಾರ) ಬೈಕ್‌ ರ್‍ಯಾಲಿ ನಡೆಸಲಾಗಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಬೇವಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿತ್ತು. ಬೇವಹಳ್ಳಿಯ ಉದಯ್ ಕಿರಣ್ ಸಾವಿಗೆ ಶರಣಾಗಿದ್ದರು. ಆತನ ಮೇಲೆ ಪೆತಾಂಡ್ಲಹಳ್ಳಿ ಗ್ರಾಮದ ಕೆಲವು ಸವರ್ಣೀಯರು ಹಲ್ಲೆ ನಡೆಸಿದ್ದರು. ಇದರ ಹಿನ್ನೆಲೆಯಲ್ಲಿ ಆರೋಪಿಗಳ ಸ್ಥಳವಾದ ಪೆತಾಂಡ್ಲಹಳ್ಳಿಯಿಂದ ಹಿಡಿದು ಕೋಲಾರ ಜಿಲ್ಲಾಧಿಕಾರಿ ಕಚೇರಿಯವರೆಗೆ ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ಬೈಕ್‌ ರ್‍ಯಾಲಿ ನಡೆಸಿವೆ.

“ಬೈಕ್‌ ರ್‍ಯಾಲಿ ಯಶಸ್ವಿಯಾಗಲಿ, ನೊಂದ ಕುಟುಂಬಕ್ಕೆ ನ್ಯಾಯ ಸಿಗಲೇಬೇಕು, ನೊಂದ ಕುಟುಂಬಕ್ಕೆ ಪರಿಹಾರ ಕೊಡಲೇಬೇಕು” ಎಂಬ ಘೋಷಣೆಗಳನ್ನು ರಸ್ತೆಯುದ್ಧಕ್ಕೂ ಕೂಗಲಾಯಿತು.

ಪೆತ್ತಾಂಡ್ಲಹಳ್ಳಿಯಿಂದ ಪ್ರಾರಂವಾಗಿರುವ ರ್‍ಯಾಲಿಯಲ್ಲಿ ಸ್ವಯಂಪ್ರೇರಿತರಾಗಿ ಪ್ರತಿಯೊಬ್ಬರು ಪಾಲ್ಗೊಳ್ಳಬೇಕು. ಜಾತಿ, ಅಸ್ಪೃಶ್ಯತೆ ವಿರುದ್ಧ ಪ್ರತಿರೋಧ ತೋರಿಸುವ ರ್‍ಯಾಲಿಯಲ್ಲಿ ಎಲ್ಲರೂ ಸೇರಿಕೊಳ್ಳಬೇಕು ಎಂದು ರ್‍ಯಾಲಿಯುದ್ಧಕ್ಕೂ ಮನವಿ ಮಾಡಲಾಯಿತು.

ಪೆತ್ತಾಂಡ್ಲಹಳ್ಳಿಯಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಮತ್ತು ಮೃತ ಉದಯ್‌ ಕಿರಣ್ ಅವರ ಭಾವಚಿತ್ರವಿರುವ ಪ್ಲೆಕ್ಸ್‌ಗೆ ಉದಯ್ ಅವರ ತಂದೆ, ತಾಯಿ ಹಾಗೂ ಸಹೋದರರು ಮಾಲಾರ್ಪಣೆ ಮಾಡಿದರು.

“ನಮ್ಮಲ್ಲಿಲ್ಲ ಹಿಂದೂ ರಕ್ತ, ನಮ್ಮಲ್ಲಿಲ್ಲ ಕ್ರೈಸ್ತ ರಕ್ತ, ನಮ್ಮಲ್ಲಿಲ್ಲ ಮುಸ್ಲಿಂ ರಕ್ತ, ನಮ್ಮಲ್ಲಿಲ್ಲ ಒಕ್ಕಲಿಗರ ರಕ್ತ, ನಮ್ಮಲ್ಲಿಲ್ಲ ರೆಡ್ಡಿ ರಕ್ತ, ನಮ್ಮಲ್ಲಿಲ್ಲ ದಲಿತ ರಕ್ತ, ನಮ್ಮಲ್ಲಿರುವುದು ಒಂದೇ ರಕ್ತ- ಅದುವೇ ಮಾನವ ಕೆಂಪು ರಕ್ತ. ದಲಿತರು ಕೂಡ ಮನುಷ್ಯರು, ಮನುಷ್ಯ ಜಾತಿ ಒಂದೇ, ಜಾತಿ ಧರ್ಮಗಳನ್ನು ಬಿಟ್ಟು ಮಾನವರಾಗಿ ಬಾಳೋಣ” ಎಂಬ ಸಂದೇಶಗಳನ್ನು ಸಾರುವ ಮೂಲಕ ಜೈಭೀಮ್‌ ಘೋಷಣೆ ಮೊಳಗಿಸಲಾಯಿತು.

ಎಸ್‌ಎಫ್‌ಐ ಮುಖಂಡ ವಾಸುದೇವ ರೆಡ್ಡಿ ಮಾತನಾಡಿ, “ಅಸ್ಪೃಶ್ಯತೆಯ ನೋವುಂಡ ಉದಯ್‌ ಕುಟುಂಬ ಸೇಡು ತೀರಿಸಿಕೊಳ್ಳಬೇಕೆಂದು ಈ ಹೋರಾಟ ಮಾಡುತ್ತಿಲ್ಲ. ನಮ್ಮ ಮಗನಿಗಾದ ಅನ್ಯಾಯ ಈ ದೇಶದ ಯಾವುದೇ ಕುಟುಂಬಕ್ಕೆ ಆಗಬಾರದೆಂಬ ಕಾರಣಕ್ಕಾಗಿ ಈ ಕಾರ್ಯಕ್ರಮ ಆಯೋಜಿಸಿದ್ದೇವೆ. ಇದು ಪೆತ್ತಾಂಡ್ಲಹಳ್ಳಿ ಗ್ರಾಮಸ್ಥರ ವಿರುದ್ಧದ ಹೋರಾಟವಲ್ಲ. ನಾವೆಲ್ಲ ಜಾತಿ, ಧರ್ಮಗಳನ್ನು ಬಿಟ್ಟು ಮಾನವರಾಗಿ ಬದುಕೋಣ ಎಂಬ ಸಂದೇಶ ಸಾರುವುದಕ್ಕಾಗಿ ಡಿಸಿ ಕಚೇರಿ ಚಲೋ ಹಮ್ಮಿಕೊಂಡಿದ್ದೇವೆ. ಉದಯ್‌ ಕುಮಾರ್‌ ಕುಟುಂಬದ ಜೊತೆಗೆ ನೀವೆಲ್ಲರೂ ನಿಲ್ಲಬೇಕು” ಎಂದು ತಿಳಿಸಿದರು.

ದಲಿತ ಮುಖಂಡರಾದ ಮೆಕ್ಯಾನಿಕ್ ಸೀನಣ್ಣ ಅವರು ಕೆಂಪು ನಿಶಾನೆ ತೋರುವ ಮೂಲಕ ಬೈಕ್‌ ರ್‍ಯಾಲಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನೊಂದ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಕಾರ್ಯಕ್ರಮ ಮಾಡುತ್ತಿದ್ದೇವೆ. ರ್‍ಯಾಲಿಯನ್ನು ಮಾಡಬಾರದು ಎಂದು ಕೆಲವರು ತೊಂದರೆಯನ್ನೂ ಕೊಟ್ಟರು. ಆದರೆ ಅನೇಕರು ಬೆಂಬಲ ನೀಡಿದರು” ಎಂದು ಹೇಳಿದರು.

ಪ್ರಕರಣದ ವಿವರ

ದಲಿತ ಯುವಕನ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪೆತ್ತಾಂಡ್ಲಹಳ್ಳಿಯ ಸವರ್ಣೀಯರಾದ ಗೋಪಾಲಕೃಷ್ಣಪ್ಪ, ಶಿವರಾಜ್ ಬಿನ್ ಮುನಿವೆಂಕಟಪ್ಪ, ಗೋಪಾಲಕೃಷ್ಣಪ್ಪ ಬಿನ್ ಮುನಿಸ್ವಾಮಿ, ಮುನಿವೆಂಕಟಪ್ಪ ಬಿನ್ ಮುನಿಸ್ವಾಮಿ ಎಂಬುವವರ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 341, 34, 504, 306 ಮತ್ತು 323ರ ಅಡಿಯಲ್ಲಿ ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನವೆಂಬರ್ 30ರ ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಮುಳಬಾಗಿಲು ತಾಲ್ಲೂಕಿನ ಬೈರಕೂರು ಹೋಬಳಿಯ ಪೆತಾಂಡ್ಲಹಳ್ಳಿ ಗ್ರಾಮದ ಸವರ್ಣೀಯ ಜನಾಂಗದ ರಾಜು ಬಿನ್ ಗೋಪಾಲಕೃಷ್ಣಪ್ಪ ರವರ ದ್ವಿಚಕ್ರ ವಾಹನವನ್ನು ಬೇವಹಳ್ಳಿಯ ಉದಯ್ ಕಿರಣ್ ಮತ್ತು ನಾಗರಾಜು ಓವರ್ ಟೇಕ್ ಮಾಡಿದರು ಎಂದು ಆರೋಪಿಸಿ ಬೈರಕೂರಿನಲ್ಲಿ ಉದಯ್ ಕಿರಣ್ ವಾಹನವನ್ನು ಅಡ್ಡಗಟ್ಟಿ ನಿಂದಿಸಿ, ಹಲ್ಲೆ ಮಾಡಲಾಗಿದೆ ಎಂದು ಮೃತ ಯುವಕನ ಸೋದರ ಮಾವ ನಾಗರಾಜು ಆರೋಪಿಸಿದ್ದರು.

ಆ ನಂತರವೂ ಸಹ ಕಾಡೆನಹಳ್ಳಿಯಿಂದ ವಾಪಸ್ಸು ಬರುತ್ತಿದ್ದ ಉದಯ್ ಕಿರಣ್ ಮತ್ತು ನಾಗರಾಜರನ್ನು ಮತ್ತೆ ಪೆತಾಂಡ್ಲಹಳ್ಳಿ ಗ್ರಾಮದ ಬಳಿ ರಾಜು ಬಿನ್ ಗೋಪಾಲಕೃಷ್ಣಪ್ಪ, ಶಿವರಾಜ್ ಬಿನ್ ಮುನಿವೆಂಕಟಪ್ಪ, ಗೋಪಾಲಕೃಷ್ಣಪ್ಪ ಬಿನ್ ಮುನಿಸ್ವಾಮಿ, ಮತ್ತು ಮುನಿವೆಂಕಟಪ್ಪ ಬಿನ್ ಮುನಿಸ್ವಾಮಿ ಬಳಿ ಅಡ್ಡಗಟ್ಟಿ, ಹೊಡೆದು ಆತನ ದ್ವಿಚಕ್ರ ವಾಹನ ಮತ್ತು ಮೊಬೈಲ್ ಕಿತ್ತುಕೊಂಡು ನಿಮ್ಮ ಮನೆಯವರನ್ನು ಕರೆದುಕೊಂಡು ಬನ್ನಿ ಎಂದು ದೌರ್ಜನ್ಯವೆಸಗಿರುತ್ತಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...