Homeಮುಖಪುಟಆತ್ಮಹತ್ಯೆಯೊಂದೇ ನಮಗಿರುವ ದಾರಿ - BSNL ನೌಕರರ ಅಳಲು : ವಿಡಿಯೋ ನೋಡಿ

ಆತ್ಮಹತ್ಯೆಯೊಂದೇ ನಮಗಿರುವ ದಾರಿ – BSNL ನೌಕರರ ಅಳಲು : ವಿಡಿಯೋ ನೋಡಿ

- Advertisement -
- Advertisement -

ದೇಶದ ಪ್ರತಿಷ್ಠಿತ ಸಾರ್ವಜನಿಕ ಉದ್ದಿಮೆಗಳಲ್ಲೊಂದಾದ ಬಿಎಸ್ಎನ್ಎಲ್ ಮುಳುಗುತ್ತಿರುವ ಟೈಟಾನಿಕ್. ಭಾರತವೆಂಬ ಸಮುದ್ರದಲ್ಲಿ ತೆರಳುತ್ತಿದ್ದಾಗ ಬಂಡವಾಳ ಹಿಂತೆಗೆತವೆಂಬ ಬೃಹತ್ ಹಿಮಗಲ್ಲಿಗೆ ಗುದ್ದಿ, ಆಗಲೋ ಈಗಲೋ ಉಸಿರು ಬಿಡುವಂತಹ ಸ್ಥಿತಿಯಲ್ಲಿದೆ. ಬಿಎಸ್ಎನ್ಎಲ್ ನಿಂದಲೇ ತರಂಗಾಂತರಗಳನ್ನು ಪಡೆದಿರುವ ಖಾಸಗಿ ಟೆಲಿಕಾಂ ಕಂಪನಿ ಜಿಯೋ ಅತ್ಯಂತ ಲಾಭದಲ್ಲಿದೆ. ವರ್ಷದಿಂದ ವರ್ಷಕ್ಕೆ ಅದು ಶೇ.62ರಷ್ಟು ಲಾಭ ಗಳಿಸಿದೆ ಎಂದು ವರದಿಗಳು ತಿಳಿಸುತ್ತವೆ. ಆದರೆ ಸಾರ್ವಜನಿಕ ಉದ್ಯಮ ಭಾರತ್ ಸಂಚಾರ್ ನಿಗಮ ಲಿಮಿಟೆಡ್ ತೀವ್ರ ಸಂಕಷ್ಟಕ್ಕೆ ಗುರಿಯಾಗಲು ಅಧಿಕಾರಿಗಳು ಮತ್ತು ಸರ್ಕಾರದ ಬೇಜವಾಬ್ದಾರಿತನವೇ ಕಾರಣ. ಈ ಸತ್ಯ  ಸರ್ಕಾರಕ್ಕೂ ಗೊತ್ತಿದೆ. ಅಧಿಕಾರಿಗಳಿಗೂ ತಿಳಿದಿದೆ. ಅದನ್ನು ಬಹಿರಂಗವಾಗಿ ಹೇಳಿಕೊಳ್ಳಲಾರದಂತ ಸ್ಥಿತಿ ಅವರದ್ದು.

ಕೇಂದ್ರ ಸರ್ಕಾರದ ನೀತಿಗಳು ಸಾರ್ವಜನಿಕ ಉದ್ದಿಮೆಗಳನ್ನು ಸರ್ವನಾಶ ಮಾಡಲು ಹೊರಟಿವೆ. ಎಚ್.ಎಂ.ಟಿ. ಸೇರಿದಂತೆ ಹಲವು ಉದ್ದಿಮೆಗಳು ಮುಳುಗಿಹೋದವು. ಈಗ ಬಿಎಸ್ಎನ್ಎಲ್ ಕೂಡ ಅದೇ ಹಾದಿ ಹಿಡಿದಿದೆ. 92 ಸಾವಿರ ನೌಕರರ ಸ್ವಯಂ ನಿವೃತ್ತಿಯಾದರು. ವಾಸ್ತವ ಸಂಗತಿ ಏನೆಂದರೆ ಟೆಲಿಕಾಂ ಇಲಾಖೆ ಇದ್ದಾಗಿನಿಂದಲು ಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿರುವ ನೌಕರರ ಪಾಡು ಹೇಳತೀರದಾಗಿದೆ. ಈ ನೌಕರರು ಕಳೆದ ಅರೇಳು ತಿಂಗಳಿನಿಂದ ವೇತನ ಸಿಗದೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇತ್ತ ಬಿಎಸ್ಎನ್ಎಲ್ ಕೂಡ ಅವನತಿಯ ತುತ್ತ ತುದಿಯಲ್ಲಿದೆ. ಆದ್ದರಿಂದ ಗುತ್ತಿಗೆ ನೌಕರರಿಗೆ ಮುಂದೇನು ಎಂಬ ಪ್ರಶ್ನೆ ಎದುರಾಗಿದೆ.

ವಿಡಿಯೋ ನೋಡಿ:

BSNL

6-7 ತಿಂಗಳಿನಿಂದ ಸಂಬಳ ಕೊಟ್ಟಿಲ್ಲ. ಆತ್ಮಹತ್ಯೆಯೊಂದೇ ನಮಗಿರುವ ದಾರಿ – BSNL ನೌಕರನ ಅಳಲು…

Posted by Naanu Gauri on Monday, March 2, 2020

‘ದೇಶಾದ್ಯಂತ  ಬಿಎಸ್ಎನ್ಎಲ್ ನಿಗಮದಲ್ಲಿ ಸುಮಾರು 80 ಸಾವಿರಕ್ಕು ಹೆಚ್ಚು ಮಂದಿ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದಾರೆ. ಇವರಿಗೆ ಕಳೆದ 8 ತಿಂಗಳಿನಿಂದಲೂ ವೇತನ ಪಾವತಿಯಾಗಿಲ್ಲ. ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಹೌಸ್ ಕೀಪಿಂಗ್ ಮತ್ತು ವಾಚ್ ಅಂಡ್ ವಾರ್ಡ್ ಎಂಬ ಎರಡು ಬಗೆಯ ವಿಭಾಗಗಳು ಇವೆ. ಈ ಎರಡೂ ವಿಭಾಗಗಳಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಗುತ್ತಿಗೆದಾರರು ವೇತನ ನೀಡುತ್ತಾರೆ. ಬಿಎಸ್ಎನ್ಎಲ್ ಈ ಗುತ್ತಿಗೆದಾರರಿಗೆ ಪ್ರತಿಯೊಬ್ಬ ನೌಕರನಿಗೆ 10 ಸಾವಿರದಂತೆ ಹಣ ನೀಡುತ್ತದೆ. ಅಂದರೆ ದೇಶಾದಾದ್ಯಂತಿ ಇರುವ 80 ಸಾವಿರ ನೌಕರರಿಗೆ ಸುಮಾರು 9.5 ಕೋಟಿ ರೂಪಾಯಿ ಗಳನ್ನು ವೇತನ ಬಾಕಿ ಉಳಿಸಿಕೊಳ್ಳಲಾಗಿದೆ.

ಹೌಸ್ ಕೀಪಿಂಗ್ ವಿಭಾಗದ ನೌಕರರಿಗೆ 8,500 ರೂಪಾಯಿ ತಿಂಗಳ ವೇತನ. ವಾಚ್ ಅಂಡ್ ವಾರ್ಡ್ ವಿಭಾಗದ ನೌಕರರಿಗೆ 10 ಸಾವಿರ ರೂಪಾಯಿ ತಿಂಗಳ ವೇತನ ನಿಗದಿಪಡಿಸಲಾಗಿದೆ. ಬಿಎಸ್ಎಸ್ಎಲ್ ಮಾತ್ರ ಪ್ರತಿಯೊಬ್ಬ ನೌಕರನಿಗೆ 10 ಸಾವಿರ ರೂಪಾಯಿ ಅಂತಲೇ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡುತ್ತಿದೆ. ಈಗ ಉದ್ಭವಿಸಿರುವ ಸಮಸ್ಯೆ ಎಂದರೆ ಗುತ್ತಿಗೆದಾರರು ಜಿ.ಎಸ್.ಟಿ ತೆರಿಗೆಯನ್ನು ಪಾವತಿಸಿಲ್ಲ. ಜಿ.ಎಸ್.ಟಿ. ಪಾವತಿಸಿದ ಬಿಲ್ ಗಳನ್ನು ನೀಡಿದರೆ ಮಾತ್ರ ಬಿಎಸ್ಎನ್ಎಲ್ ಹಣ ಬಿಡುಗಡೆ ಮಾಡುತ್ತಾರೆ. ಜಿ.ಎಸ್.ಟಿ. ಪಾವತಿಸಲು ಗುತ್ತಿಗೆದಾರರ ಬಳಿ ಹಣವಿಲ್ಲ. ಇದು ಗುತ್ತಿಗೆ ನೌಕರರನ್ನು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ.

ಪ್ರತಿ ತಿಂಗಳು ವೇತನ ಸಿಗದೆ ಗುತ್ತಿಗೆ ನೌಕರರು ಮನೆ ಬಾಡಿಗೆ ಕಟ್ಟಲು ಸಾಧ್ಯವಾಗುತ್ತಿಲ್ಲ. ಮಕ್ಕಳ ವಿದ್ಯಾಭ್ಯಾಸಕ್ಕೆ ಶುಲ್ಕ ಇತರೆ ವೆಚ್ಚಗಳಿಗೆ ಹಣವಿಲ್ಲ. ಕುಟುಂಬ ನಿರ್ವಹಣೆಗೆ ಸಾಲ ಮಾಡುತ್ತಿದ್ದೇವೆ. ನಾವು ಕೆಲಸವನ್ನು ಮಾತ್ರ ಮಾಡುತ್ತಿದ್ದೇವೆ. ಬಾಕಿ ವೇತನವನ್ನು ನೀಡದಿದ್ದರೆ ಸಂಸಾರ ತೂಗಿಸುವುದು ಕಷ್ಟವಾಗಿದೆ. ಯಾರೂ ಸಾಲವನ್ನೂ ಕೊಡುತ್ತಿಲ್ಲ. ನಮ್ಮ ಭವಿಷ್ಯ ಕರಾಳವಾಗಿದೆ. ಜೀವನ ನಿರ್ವಹಣೆಗೆ ಕಷ್ಟವಾಗಿದ್ದು ಆತ್ಮಹತ್ಯೆ ಹಿಡಿಯುವುದೊಂದೇ ನಮಗೆ ಇರುವ ದಾರಿ. ಹಲವು ವರ್ಷಗಳಿಂದ ದುಡಿದರೂ ನಮ್ಮನ್ನು ಕಾಯಂ ಮಾಡಲಿಲ್ಲ. ಈಗ ನೋಡಿದರೆ 92 ಸಾವಿರ ಕಾಯಂ ನೌಕರರು ಸ್ವಯಂ ನಿವೃತ್ತಿ ಪಡೆದಿದ್ದಾರೆ. ನಮಗೆ ವೇತನವೂ ಇಲ್ಲ. ಪಿಎಫ್ ಯಾವುದೂ ಇಲ್ಲ. ಸರ್ಕಾರ ಕೂಡಲೇ ಬಾಕಿ ವೇತನ ಬಿಡುಗಡೆ ಮಾಡಬೇಕು ಎಂದು ಹೆಸರು ಹೇಳಲಿಚ್ಚಿಸದ ಗುತ್ತಿಗೆ ನೌಕರರು ಅಳಲುತೋಡಿಕೊಂಡರು.

ಒಂದು ಮೂಲದ ಪ್ರಕಾರ ಕಳೆದ ಮಾರ್ಚ್ ತಿಂಗಳಿಂದಲೂ ಗುತ್ತಿಗೆ ನೌಕರರಿಗೆ ವೇತನ ನೀಡಿಲ್ಲ. 80 ಸಾವಿರ ಗುತ್ತಿಗೆ ನೌಕರರು ಮಾನಸಿಕವಾಗಿ ತೊಳಲಾಟಕ್ಕೆ ಸಿಲುಕಿದ್ದಾರೆ. ಮಾನಸಿಕ ಹಿಂಸೆ ತಾಳದೆ ರಾಜ್ಯದಲ್ಲಿ ಒಬ್ಬರು ಹೃದಯಾಘಾತವಾಗಿ ತೀರಿಕೊಂಡಿದ್ದಾರೆ. ಹಲವು ಗುತ್ತಿಗೆ ನೌಕರರು ಮಾನಸಿಕ ಒತ್ತಡದಲ್ಲಿದ್ದು ಕೆಲಸ ನಿರ್ವಹಿಸುವುದು ದುಸ್ತರವಾಗಿದೆ. ಖಾಯಂ ನೌಕರರು ಸ್ವಯಂ ನಿವೃತ್ತಿ ತೆಗೆದುಕೊಂಡ ಮೇಲೆ ಗುತ್ತಿಗೆ ನೌಕರರಿಗೆ ಕೆಲಸದ ಒತ್ತಡವೂ ಹೆಚ್ಚಿದೆ. ಅವರ ಕೆಲಸವೆಲ್ಲವೂ ಗುತ್ತಿಗೆ ನೌಕರರ ಹೆಗಲಿಗೆ ವರ್ಗಾವಣೆಗೊಂಡಿದೆ. ಮೇಲಧಿಕಾರಿಗಳು ಹೇಳುವ ಪ್ರತಿಯೊಂದು ಕೆಲಸವನ್ನು ಅನಿವಾರ್ಯವಾಗಿ ಮಾಡಬೇಕಾಗಿದೆ. ಇವೆಲ್ಲವುಗಳಿಂದ ಗುತ್ತಿಗೆ ನೌಕರರು ಮಾನಸಿಕ ತೊಳಲಾಟಕ್ಕೆ ಸಿಕ್ಕಿ ಕಂಬನಿ ಮಿಡಿಯುತ್ತಿದ್ದಾರೆ. ಇವರ ಗೋಳು ಅರಣ್ಯರೋಧನವಾಗಿದೆ.

ಬಿಎಸ್ಎನ್ಎಲ್ ನಿಂದಲೇ ತರಂಗಾಂತರಗಳನ್ನು ಪಡೆಯುವ ಜಿಯೋ ಹೆಚ್ಚುಹೆಚ್ಚು ಲಾಭ ಪಡೆಯಲು ಹೇಗೆ ಸಾಧ್ಯವಾಯಿತು? ದೇಶದ ಜನರ ಸಂಪರ್ಕ ಸೇತುವೆಯಾಗಿರುವ ಬಿಎಸ್ಎನ್ಎಲ್ 4ಜಿ ಸೇವೆಯನ್ನು ಯಾಕೆ ಆರಂಭಿಸಲಿಲ್ಲ. ಸಾರ್ವಜನಿಕ ಕಂಪನಿಗಳೊಂದಿಗೆ ಪೈಪೋಟಿ ನೀಡುವಂತಹ ವಾತಾವರಣವನ್ನು ಕೇಂದ್ರ ಸರ್ಕಾರ ಸೃಷ್ಟಿಸದೇ ಇರುವುದರಿಂದ ಎಲ್ಲವೂ ಖಾಸಗಿಯವರ ಪಾಲಾಗುತ್ತಿದೆ. ಬಿಎಸ್ಎನ್ಎಲ್ ಐಸಿಯುನಲ್ಲಿದೆ ಅದು ಯಾವಾಗ ಕಣ್ಣುಮುಚ್ಚುತ್ತದೋ ಎಂಬದನ್ನು ಜನರು ಎದುರು ನೋಡುತ್ತಿದ್ದಾರೆ. ಹೀಗಾಗಿaT ಮುಂದಿನ ದಿನಗಳಲ್ಲಿ ಜಿಯೋ ಸಂಸ್ಥೆ ಸರ್ವಾಧಿಕಾರಿಯಂತೆ ವರ್ತಿಸಿದರೆ ಅಚ್ಚರಿಪಡಬೇಕಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...