Homeಮುಖಪುಟಆತ್ಮಹತ್ಯೆಯೊಂದೇ ನಮಗಿರುವ ದಾರಿ - BSNL ನೌಕರರ ಅಳಲು : ವಿಡಿಯೋ ನೋಡಿ

ಆತ್ಮಹತ್ಯೆಯೊಂದೇ ನಮಗಿರುವ ದಾರಿ – BSNL ನೌಕರರ ಅಳಲು : ವಿಡಿಯೋ ನೋಡಿ

- Advertisement -
- Advertisement -

ದೇಶದ ಪ್ರತಿಷ್ಠಿತ ಸಾರ್ವಜನಿಕ ಉದ್ದಿಮೆಗಳಲ್ಲೊಂದಾದ ಬಿಎಸ್ಎನ್ಎಲ್ ಮುಳುಗುತ್ತಿರುವ ಟೈಟಾನಿಕ್. ಭಾರತವೆಂಬ ಸಮುದ್ರದಲ್ಲಿ ತೆರಳುತ್ತಿದ್ದಾಗ ಬಂಡವಾಳ ಹಿಂತೆಗೆತವೆಂಬ ಬೃಹತ್ ಹಿಮಗಲ್ಲಿಗೆ ಗುದ್ದಿ, ಆಗಲೋ ಈಗಲೋ ಉಸಿರು ಬಿಡುವಂತಹ ಸ್ಥಿತಿಯಲ್ಲಿದೆ. ಬಿಎಸ್ಎನ್ಎಲ್ ನಿಂದಲೇ ತರಂಗಾಂತರಗಳನ್ನು ಪಡೆದಿರುವ ಖಾಸಗಿ ಟೆಲಿಕಾಂ ಕಂಪನಿ ಜಿಯೋ ಅತ್ಯಂತ ಲಾಭದಲ್ಲಿದೆ. ವರ್ಷದಿಂದ ವರ್ಷಕ್ಕೆ ಅದು ಶೇ.62ರಷ್ಟು ಲಾಭ ಗಳಿಸಿದೆ ಎಂದು ವರದಿಗಳು ತಿಳಿಸುತ್ತವೆ. ಆದರೆ ಸಾರ್ವಜನಿಕ ಉದ್ಯಮ ಭಾರತ್ ಸಂಚಾರ್ ನಿಗಮ ಲಿಮಿಟೆಡ್ ತೀವ್ರ ಸಂಕಷ್ಟಕ್ಕೆ ಗುರಿಯಾಗಲು ಅಧಿಕಾರಿಗಳು ಮತ್ತು ಸರ್ಕಾರದ ಬೇಜವಾಬ್ದಾರಿತನವೇ ಕಾರಣ. ಈ ಸತ್ಯ  ಸರ್ಕಾರಕ್ಕೂ ಗೊತ್ತಿದೆ. ಅಧಿಕಾರಿಗಳಿಗೂ ತಿಳಿದಿದೆ. ಅದನ್ನು ಬಹಿರಂಗವಾಗಿ ಹೇಳಿಕೊಳ್ಳಲಾರದಂತ ಸ್ಥಿತಿ ಅವರದ್ದು.

ಕೇಂದ್ರ ಸರ್ಕಾರದ ನೀತಿಗಳು ಸಾರ್ವಜನಿಕ ಉದ್ದಿಮೆಗಳನ್ನು ಸರ್ವನಾಶ ಮಾಡಲು ಹೊರಟಿವೆ. ಎಚ್.ಎಂ.ಟಿ. ಸೇರಿದಂತೆ ಹಲವು ಉದ್ದಿಮೆಗಳು ಮುಳುಗಿಹೋದವು. ಈಗ ಬಿಎಸ್ಎನ್ಎಲ್ ಕೂಡ ಅದೇ ಹಾದಿ ಹಿಡಿದಿದೆ. 92 ಸಾವಿರ ನೌಕರರ ಸ್ವಯಂ ನಿವೃತ್ತಿಯಾದರು. ವಾಸ್ತವ ಸಂಗತಿ ಏನೆಂದರೆ ಟೆಲಿಕಾಂ ಇಲಾಖೆ ಇದ್ದಾಗಿನಿಂದಲು ಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿರುವ ನೌಕರರ ಪಾಡು ಹೇಳತೀರದಾಗಿದೆ. ಈ ನೌಕರರು ಕಳೆದ ಅರೇಳು ತಿಂಗಳಿನಿಂದ ವೇತನ ಸಿಗದೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇತ್ತ ಬಿಎಸ್ಎನ್ಎಲ್ ಕೂಡ ಅವನತಿಯ ತುತ್ತ ತುದಿಯಲ್ಲಿದೆ. ಆದ್ದರಿಂದ ಗುತ್ತಿಗೆ ನೌಕರರಿಗೆ ಮುಂದೇನು ಎಂಬ ಪ್ರಶ್ನೆ ಎದುರಾಗಿದೆ.

ವಿಡಿಯೋ ನೋಡಿ:

BSNL

6-7 ತಿಂಗಳಿನಿಂದ ಸಂಬಳ ಕೊಟ್ಟಿಲ್ಲ. ಆತ್ಮಹತ್ಯೆಯೊಂದೇ ನಮಗಿರುವ ದಾರಿ – BSNL ನೌಕರನ ಅಳಲು…

Posted by Naanu Gauri on Monday, March 2, 2020

‘ದೇಶಾದ್ಯಂತ  ಬಿಎಸ್ಎನ್ಎಲ್ ನಿಗಮದಲ್ಲಿ ಸುಮಾರು 80 ಸಾವಿರಕ್ಕು ಹೆಚ್ಚು ಮಂದಿ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದಾರೆ. ಇವರಿಗೆ ಕಳೆದ 8 ತಿಂಗಳಿನಿಂದಲೂ ವೇತನ ಪಾವತಿಯಾಗಿಲ್ಲ. ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಹೌಸ್ ಕೀಪಿಂಗ್ ಮತ್ತು ವಾಚ್ ಅಂಡ್ ವಾರ್ಡ್ ಎಂಬ ಎರಡು ಬಗೆಯ ವಿಭಾಗಗಳು ಇವೆ. ಈ ಎರಡೂ ವಿಭಾಗಗಳಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಗುತ್ತಿಗೆದಾರರು ವೇತನ ನೀಡುತ್ತಾರೆ. ಬಿಎಸ್ಎನ್ಎಲ್ ಈ ಗುತ್ತಿಗೆದಾರರಿಗೆ ಪ್ರತಿಯೊಬ್ಬ ನೌಕರನಿಗೆ 10 ಸಾವಿರದಂತೆ ಹಣ ನೀಡುತ್ತದೆ. ಅಂದರೆ ದೇಶಾದಾದ್ಯಂತಿ ಇರುವ 80 ಸಾವಿರ ನೌಕರರಿಗೆ ಸುಮಾರು 9.5 ಕೋಟಿ ರೂಪಾಯಿ ಗಳನ್ನು ವೇತನ ಬಾಕಿ ಉಳಿಸಿಕೊಳ್ಳಲಾಗಿದೆ.

ಹೌಸ್ ಕೀಪಿಂಗ್ ವಿಭಾಗದ ನೌಕರರಿಗೆ 8,500 ರೂಪಾಯಿ ತಿಂಗಳ ವೇತನ. ವಾಚ್ ಅಂಡ್ ವಾರ್ಡ್ ವಿಭಾಗದ ನೌಕರರಿಗೆ 10 ಸಾವಿರ ರೂಪಾಯಿ ತಿಂಗಳ ವೇತನ ನಿಗದಿಪಡಿಸಲಾಗಿದೆ. ಬಿಎಸ್ಎಸ್ಎಲ್ ಮಾತ್ರ ಪ್ರತಿಯೊಬ್ಬ ನೌಕರನಿಗೆ 10 ಸಾವಿರ ರೂಪಾಯಿ ಅಂತಲೇ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡುತ್ತಿದೆ. ಈಗ ಉದ್ಭವಿಸಿರುವ ಸಮಸ್ಯೆ ಎಂದರೆ ಗುತ್ತಿಗೆದಾರರು ಜಿ.ಎಸ್.ಟಿ ತೆರಿಗೆಯನ್ನು ಪಾವತಿಸಿಲ್ಲ. ಜಿ.ಎಸ್.ಟಿ. ಪಾವತಿಸಿದ ಬಿಲ್ ಗಳನ್ನು ನೀಡಿದರೆ ಮಾತ್ರ ಬಿಎಸ್ಎನ್ಎಲ್ ಹಣ ಬಿಡುಗಡೆ ಮಾಡುತ್ತಾರೆ. ಜಿ.ಎಸ್.ಟಿ. ಪಾವತಿಸಲು ಗುತ್ತಿಗೆದಾರರ ಬಳಿ ಹಣವಿಲ್ಲ. ಇದು ಗುತ್ತಿಗೆ ನೌಕರರನ್ನು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ.

ಪ್ರತಿ ತಿಂಗಳು ವೇತನ ಸಿಗದೆ ಗುತ್ತಿಗೆ ನೌಕರರು ಮನೆ ಬಾಡಿಗೆ ಕಟ್ಟಲು ಸಾಧ್ಯವಾಗುತ್ತಿಲ್ಲ. ಮಕ್ಕಳ ವಿದ್ಯಾಭ್ಯಾಸಕ್ಕೆ ಶುಲ್ಕ ಇತರೆ ವೆಚ್ಚಗಳಿಗೆ ಹಣವಿಲ್ಲ. ಕುಟುಂಬ ನಿರ್ವಹಣೆಗೆ ಸಾಲ ಮಾಡುತ್ತಿದ್ದೇವೆ. ನಾವು ಕೆಲಸವನ್ನು ಮಾತ್ರ ಮಾಡುತ್ತಿದ್ದೇವೆ. ಬಾಕಿ ವೇತನವನ್ನು ನೀಡದಿದ್ದರೆ ಸಂಸಾರ ತೂಗಿಸುವುದು ಕಷ್ಟವಾಗಿದೆ. ಯಾರೂ ಸಾಲವನ್ನೂ ಕೊಡುತ್ತಿಲ್ಲ. ನಮ್ಮ ಭವಿಷ್ಯ ಕರಾಳವಾಗಿದೆ. ಜೀವನ ನಿರ್ವಹಣೆಗೆ ಕಷ್ಟವಾಗಿದ್ದು ಆತ್ಮಹತ್ಯೆ ಹಿಡಿಯುವುದೊಂದೇ ನಮಗೆ ಇರುವ ದಾರಿ. ಹಲವು ವರ್ಷಗಳಿಂದ ದುಡಿದರೂ ನಮ್ಮನ್ನು ಕಾಯಂ ಮಾಡಲಿಲ್ಲ. ಈಗ ನೋಡಿದರೆ 92 ಸಾವಿರ ಕಾಯಂ ನೌಕರರು ಸ್ವಯಂ ನಿವೃತ್ತಿ ಪಡೆದಿದ್ದಾರೆ. ನಮಗೆ ವೇತನವೂ ಇಲ್ಲ. ಪಿಎಫ್ ಯಾವುದೂ ಇಲ್ಲ. ಸರ್ಕಾರ ಕೂಡಲೇ ಬಾಕಿ ವೇತನ ಬಿಡುಗಡೆ ಮಾಡಬೇಕು ಎಂದು ಹೆಸರು ಹೇಳಲಿಚ್ಚಿಸದ ಗುತ್ತಿಗೆ ನೌಕರರು ಅಳಲುತೋಡಿಕೊಂಡರು.

ಒಂದು ಮೂಲದ ಪ್ರಕಾರ ಕಳೆದ ಮಾರ್ಚ್ ತಿಂಗಳಿಂದಲೂ ಗುತ್ತಿಗೆ ನೌಕರರಿಗೆ ವೇತನ ನೀಡಿಲ್ಲ. 80 ಸಾವಿರ ಗುತ್ತಿಗೆ ನೌಕರರು ಮಾನಸಿಕವಾಗಿ ತೊಳಲಾಟಕ್ಕೆ ಸಿಲುಕಿದ್ದಾರೆ. ಮಾನಸಿಕ ಹಿಂಸೆ ತಾಳದೆ ರಾಜ್ಯದಲ್ಲಿ ಒಬ್ಬರು ಹೃದಯಾಘಾತವಾಗಿ ತೀರಿಕೊಂಡಿದ್ದಾರೆ. ಹಲವು ಗುತ್ತಿಗೆ ನೌಕರರು ಮಾನಸಿಕ ಒತ್ತಡದಲ್ಲಿದ್ದು ಕೆಲಸ ನಿರ್ವಹಿಸುವುದು ದುಸ್ತರವಾಗಿದೆ. ಖಾಯಂ ನೌಕರರು ಸ್ವಯಂ ನಿವೃತ್ತಿ ತೆಗೆದುಕೊಂಡ ಮೇಲೆ ಗುತ್ತಿಗೆ ನೌಕರರಿಗೆ ಕೆಲಸದ ಒತ್ತಡವೂ ಹೆಚ್ಚಿದೆ. ಅವರ ಕೆಲಸವೆಲ್ಲವೂ ಗುತ್ತಿಗೆ ನೌಕರರ ಹೆಗಲಿಗೆ ವರ್ಗಾವಣೆಗೊಂಡಿದೆ. ಮೇಲಧಿಕಾರಿಗಳು ಹೇಳುವ ಪ್ರತಿಯೊಂದು ಕೆಲಸವನ್ನು ಅನಿವಾರ್ಯವಾಗಿ ಮಾಡಬೇಕಾಗಿದೆ. ಇವೆಲ್ಲವುಗಳಿಂದ ಗುತ್ತಿಗೆ ನೌಕರರು ಮಾನಸಿಕ ತೊಳಲಾಟಕ್ಕೆ ಸಿಕ್ಕಿ ಕಂಬನಿ ಮಿಡಿಯುತ್ತಿದ್ದಾರೆ. ಇವರ ಗೋಳು ಅರಣ್ಯರೋಧನವಾಗಿದೆ.

ಬಿಎಸ್ಎನ್ಎಲ್ ನಿಂದಲೇ ತರಂಗಾಂತರಗಳನ್ನು ಪಡೆಯುವ ಜಿಯೋ ಹೆಚ್ಚುಹೆಚ್ಚು ಲಾಭ ಪಡೆಯಲು ಹೇಗೆ ಸಾಧ್ಯವಾಯಿತು? ದೇಶದ ಜನರ ಸಂಪರ್ಕ ಸೇತುವೆಯಾಗಿರುವ ಬಿಎಸ್ಎನ್ಎಲ್ 4ಜಿ ಸೇವೆಯನ್ನು ಯಾಕೆ ಆರಂಭಿಸಲಿಲ್ಲ. ಸಾರ್ವಜನಿಕ ಕಂಪನಿಗಳೊಂದಿಗೆ ಪೈಪೋಟಿ ನೀಡುವಂತಹ ವಾತಾವರಣವನ್ನು ಕೇಂದ್ರ ಸರ್ಕಾರ ಸೃಷ್ಟಿಸದೇ ಇರುವುದರಿಂದ ಎಲ್ಲವೂ ಖಾಸಗಿಯವರ ಪಾಲಾಗುತ್ತಿದೆ. ಬಿಎಸ್ಎನ್ಎಲ್ ಐಸಿಯುನಲ್ಲಿದೆ ಅದು ಯಾವಾಗ ಕಣ್ಣುಮುಚ್ಚುತ್ತದೋ ಎಂಬದನ್ನು ಜನರು ಎದುರು ನೋಡುತ್ತಿದ್ದಾರೆ. ಹೀಗಾಗಿaT ಮುಂದಿನ ದಿನಗಳಲ್ಲಿ ಜಿಯೋ ಸಂಸ್ಥೆ ಸರ್ವಾಧಿಕಾರಿಯಂತೆ ವರ್ತಿಸಿದರೆ ಅಚ್ಚರಿಪಡಬೇಕಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...