Homeಮುಖಪುಟಆತ್ಮಹತ್ಯೆಯೊಂದೇ ನಮಗಿರುವ ದಾರಿ - BSNL ನೌಕರರ ಅಳಲು : ವಿಡಿಯೋ ನೋಡಿ

ಆತ್ಮಹತ್ಯೆಯೊಂದೇ ನಮಗಿರುವ ದಾರಿ – BSNL ನೌಕರರ ಅಳಲು : ವಿಡಿಯೋ ನೋಡಿ

- Advertisement -
- Advertisement -

ದೇಶದ ಪ್ರತಿಷ್ಠಿತ ಸಾರ್ವಜನಿಕ ಉದ್ದಿಮೆಗಳಲ್ಲೊಂದಾದ ಬಿಎಸ್ಎನ್ಎಲ್ ಮುಳುಗುತ್ತಿರುವ ಟೈಟಾನಿಕ್. ಭಾರತವೆಂಬ ಸಮುದ್ರದಲ್ಲಿ ತೆರಳುತ್ತಿದ್ದಾಗ ಬಂಡವಾಳ ಹಿಂತೆಗೆತವೆಂಬ ಬೃಹತ್ ಹಿಮಗಲ್ಲಿಗೆ ಗುದ್ದಿ, ಆಗಲೋ ಈಗಲೋ ಉಸಿರು ಬಿಡುವಂತಹ ಸ್ಥಿತಿಯಲ್ಲಿದೆ. ಬಿಎಸ್ಎನ್ಎಲ್ ನಿಂದಲೇ ತರಂಗಾಂತರಗಳನ್ನು ಪಡೆದಿರುವ ಖಾಸಗಿ ಟೆಲಿಕಾಂ ಕಂಪನಿ ಜಿಯೋ ಅತ್ಯಂತ ಲಾಭದಲ್ಲಿದೆ. ವರ್ಷದಿಂದ ವರ್ಷಕ್ಕೆ ಅದು ಶೇ.62ರಷ್ಟು ಲಾಭ ಗಳಿಸಿದೆ ಎಂದು ವರದಿಗಳು ತಿಳಿಸುತ್ತವೆ. ಆದರೆ ಸಾರ್ವಜನಿಕ ಉದ್ಯಮ ಭಾರತ್ ಸಂಚಾರ್ ನಿಗಮ ಲಿಮಿಟೆಡ್ ತೀವ್ರ ಸಂಕಷ್ಟಕ್ಕೆ ಗುರಿಯಾಗಲು ಅಧಿಕಾರಿಗಳು ಮತ್ತು ಸರ್ಕಾರದ ಬೇಜವಾಬ್ದಾರಿತನವೇ ಕಾರಣ. ಈ ಸತ್ಯ  ಸರ್ಕಾರಕ್ಕೂ ಗೊತ್ತಿದೆ. ಅಧಿಕಾರಿಗಳಿಗೂ ತಿಳಿದಿದೆ. ಅದನ್ನು ಬಹಿರಂಗವಾಗಿ ಹೇಳಿಕೊಳ್ಳಲಾರದಂತ ಸ್ಥಿತಿ ಅವರದ್ದು.

ಕೇಂದ್ರ ಸರ್ಕಾರದ ನೀತಿಗಳು ಸಾರ್ವಜನಿಕ ಉದ್ದಿಮೆಗಳನ್ನು ಸರ್ವನಾಶ ಮಾಡಲು ಹೊರಟಿವೆ. ಎಚ್.ಎಂ.ಟಿ. ಸೇರಿದಂತೆ ಹಲವು ಉದ್ದಿಮೆಗಳು ಮುಳುಗಿಹೋದವು. ಈಗ ಬಿಎಸ್ಎನ್ಎಲ್ ಕೂಡ ಅದೇ ಹಾದಿ ಹಿಡಿದಿದೆ. 92 ಸಾವಿರ ನೌಕರರ ಸ್ವಯಂ ನಿವೃತ್ತಿಯಾದರು. ವಾಸ್ತವ ಸಂಗತಿ ಏನೆಂದರೆ ಟೆಲಿಕಾಂ ಇಲಾಖೆ ಇದ್ದಾಗಿನಿಂದಲು ಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿರುವ ನೌಕರರ ಪಾಡು ಹೇಳತೀರದಾಗಿದೆ. ಈ ನೌಕರರು ಕಳೆದ ಅರೇಳು ತಿಂಗಳಿನಿಂದ ವೇತನ ಸಿಗದೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇತ್ತ ಬಿಎಸ್ಎನ್ಎಲ್ ಕೂಡ ಅವನತಿಯ ತುತ್ತ ತುದಿಯಲ್ಲಿದೆ. ಆದ್ದರಿಂದ ಗುತ್ತಿಗೆ ನೌಕರರಿಗೆ ಮುಂದೇನು ಎಂಬ ಪ್ರಶ್ನೆ ಎದುರಾಗಿದೆ.

ವಿಡಿಯೋ ನೋಡಿ:

BSNL

6-7 ತಿಂಗಳಿನಿಂದ ಸಂಬಳ ಕೊಟ್ಟಿಲ್ಲ. ಆತ್ಮಹತ್ಯೆಯೊಂದೇ ನಮಗಿರುವ ದಾರಿ – BSNL ನೌಕರನ ಅಳಲು…

Posted by Naanu Gauri on Monday, March 2, 2020

‘ದೇಶಾದ್ಯಂತ  ಬಿಎಸ್ಎನ್ಎಲ್ ನಿಗಮದಲ್ಲಿ ಸುಮಾರು 80 ಸಾವಿರಕ್ಕು ಹೆಚ್ಚು ಮಂದಿ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದಾರೆ. ಇವರಿಗೆ ಕಳೆದ 8 ತಿಂಗಳಿನಿಂದಲೂ ವೇತನ ಪಾವತಿಯಾಗಿಲ್ಲ. ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಹೌಸ್ ಕೀಪಿಂಗ್ ಮತ್ತು ವಾಚ್ ಅಂಡ್ ವಾರ್ಡ್ ಎಂಬ ಎರಡು ಬಗೆಯ ವಿಭಾಗಗಳು ಇವೆ. ಈ ಎರಡೂ ವಿಭಾಗಗಳಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಗುತ್ತಿಗೆದಾರರು ವೇತನ ನೀಡುತ್ತಾರೆ. ಬಿಎಸ್ಎನ್ಎಲ್ ಈ ಗುತ್ತಿಗೆದಾರರಿಗೆ ಪ್ರತಿಯೊಬ್ಬ ನೌಕರನಿಗೆ 10 ಸಾವಿರದಂತೆ ಹಣ ನೀಡುತ್ತದೆ. ಅಂದರೆ ದೇಶಾದಾದ್ಯಂತಿ ಇರುವ 80 ಸಾವಿರ ನೌಕರರಿಗೆ ಸುಮಾರು 9.5 ಕೋಟಿ ರೂಪಾಯಿ ಗಳನ್ನು ವೇತನ ಬಾಕಿ ಉಳಿಸಿಕೊಳ್ಳಲಾಗಿದೆ.

ಹೌಸ್ ಕೀಪಿಂಗ್ ವಿಭಾಗದ ನೌಕರರಿಗೆ 8,500 ರೂಪಾಯಿ ತಿಂಗಳ ವೇತನ. ವಾಚ್ ಅಂಡ್ ವಾರ್ಡ್ ವಿಭಾಗದ ನೌಕರರಿಗೆ 10 ಸಾವಿರ ರೂಪಾಯಿ ತಿಂಗಳ ವೇತನ ನಿಗದಿಪಡಿಸಲಾಗಿದೆ. ಬಿಎಸ್ಎಸ್ಎಲ್ ಮಾತ್ರ ಪ್ರತಿಯೊಬ್ಬ ನೌಕರನಿಗೆ 10 ಸಾವಿರ ರೂಪಾಯಿ ಅಂತಲೇ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡುತ್ತಿದೆ. ಈಗ ಉದ್ಭವಿಸಿರುವ ಸಮಸ್ಯೆ ಎಂದರೆ ಗುತ್ತಿಗೆದಾರರು ಜಿ.ಎಸ್.ಟಿ ತೆರಿಗೆಯನ್ನು ಪಾವತಿಸಿಲ್ಲ. ಜಿ.ಎಸ್.ಟಿ. ಪಾವತಿಸಿದ ಬಿಲ್ ಗಳನ್ನು ನೀಡಿದರೆ ಮಾತ್ರ ಬಿಎಸ್ಎನ್ಎಲ್ ಹಣ ಬಿಡುಗಡೆ ಮಾಡುತ್ತಾರೆ. ಜಿ.ಎಸ್.ಟಿ. ಪಾವತಿಸಲು ಗುತ್ತಿಗೆದಾರರ ಬಳಿ ಹಣವಿಲ್ಲ. ಇದು ಗುತ್ತಿಗೆ ನೌಕರರನ್ನು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ.

ಪ್ರತಿ ತಿಂಗಳು ವೇತನ ಸಿಗದೆ ಗುತ್ತಿಗೆ ನೌಕರರು ಮನೆ ಬಾಡಿಗೆ ಕಟ್ಟಲು ಸಾಧ್ಯವಾಗುತ್ತಿಲ್ಲ. ಮಕ್ಕಳ ವಿದ್ಯಾಭ್ಯಾಸಕ್ಕೆ ಶುಲ್ಕ ಇತರೆ ವೆಚ್ಚಗಳಿಗೆ ಹಣವಿಲ್ಲ. ಕುಟುಂಬ ನಿರ್ವಹಣೆಗೆ ಸಾಲ ಮಾಡುತ್ತಿದ್ದೇವೆ. ನಾವು ಕೆಲಸವನ್ನು ಮಾತ್ರ ಮಾಡುತ್ತಿದ್ದೇವೆ. ಬಾಕಿ ವೇತನವನ್ನು ನೀಡದಿದ್ದರೆ ಸಂಸಾರ ತೂಗಿಸುವುದು ಕಷ್ಟವಾಗಿದೆ. ಯಾರೂ ಸಾಲವನ್ನೂ ಕೊಡುತ್ತಿಲ್ಲ. ನಮ್ಮ ಭವಿಷ್ಯ ಕರಾಳವಾಗಿದೆ. ಜೀವನ ನಿರ್ವಹಣೆಗೆ ಕಷ್ಟವಾಗಿದ್ದು ಆತ್ಮಹತ್ಯೆ ಹಿಡಿಯುವುದೊಂದೇ ನಮಗೆ ಇರುವ ದಾರಿ. ಹಲವು ವರ್ಷಗಳಿಂದ ದುಡಿದರೂ ನಮ್ಮನ್ನು ಕಾಯಂ ಮಾಡಲಿಲ್ಲ. ಈಗ ನೋಡಿದರೆ 92 ಸಾವಿರ ಕಾಯಂ ನೌಕರರು ಸ್ವಯಂ ನಿವೃತ್ತಿ ಪಡೆದಿದ್ದಾರೆ. ನಮಗೆ ವೇತನವೂ ಇಲ್ಲ. ಪಿಎಫ್ ಯಾವುದೂ ಇಲ್ಲ. ಸರ್ಕಾರ ಕೂಡಲೇ ಬಾಕಿ ವೇತನ ಬಿಡುಗಡೆ ಮಾಡಬೇಕು ಎಂದು ಹೆಸರು ಹೇಳಲಿಚ್ಚಿಸದ ಗುತ್ತಿಗೆ ನೌಕರರು ಅಳಲುತೋಡಿಕೊಂಡರು.

ಒಂದು ಮೂಲದ ಪ್ರಕಾರ ಕಳೆದ ಮಾರ್ಚ್ ತಿಂಗಳಿಂದಲೂ ಗುತ್ತಿಗೆ ನೌಕರರಿಗೆ ವೇತನ ನೀಡಿಲ್ಲ. 80 ಸಾವಿರ ಗುತ್ತಿಗೆ ನೌಕರರು ಮಾನಸಿಕವಾಗಿ ತೊಳಲಾಟಕ್ಕೆ ಸಿಲುಕಿದ್ದಾರೆ. ಮಾನಸಿಕ ಹಿಂಸೆ ತಾಳದೆ ರಾಜ್ಯದಲ್ಲಿ ಒಬ್ಬರು ಹೃದಯಾಘಾತವಾಗಿ ತೀರಿಕೊಂಡಿದ್ದಾರೆ. ಹಲವು ಗುತ್ತಿಗೆ ನೌಕರರು ಮಾನಸಿಕ ಒತ್ತಡದಲ್ಲಿದ್ದು ಕೆಲಸ ನಿರ್ವಹಿಸುವುದು ದುಸ್ತರವಾಗಿದೆ. ಖಾಯಂ ನೌಕರರು ಸ್ವಯಂ ನಿವೃತ್ತಿ ತೆಗೆದುಕೊಂಡ ಮೇಲೆ ಗುತ್ತಿಗೆ ನೌಕರರಿಗೆ ಕೆಲಸದ ಒತ್ತಡವೂ ಹೆಚ್ಚಿದೆ. ಅವರ ಕೆಲಸವೆಲ್ಲವೂ ಗುತ್ತಿಗೆ ನೌಕರರ ಹೆಗಲಿಗೆ ವರ್ಗಾವಣೆಗೊಂಡಿದೆ. ಮೇಲಧಿಕಾರಿಗಳು ಹೇಳುವ ಪ್ರತಿಯೊಂದು ಕೆಲಸವನ್ನು ಅನಿವಾರ್ಯವಾಗಿ ಮಾಡಬೇಕಾಗಿದೆ. ಇವೆಲ್ಲವುಗಳಿಂದ ಗುತ್ತಿಗೆ ನೌಕರರು ಮಾನಸಿಕ ತೊಳಲಾಟಕ್ಕೆ ಸಿಕ್ಕಿ ಕಂಬನಿ ಮಿಡಿಯುತ್ತಿದ್ದಾರೆ. ಇವರ ಗೋಳು ಅರಣ್ಯರೋಧನವಾಗಿದೆ.

ಬಿಎಸ್ಎನ್ಎಲ್ ನಿಂದಲೇ ತರಂಗಾಂತರಗಳನ್ನು ಪಡೆಯುವ ಜಿಯೋ ಹೆಚ್ಚುಹೆಚ್ಚು ಲಾಭ ಪಡೆಯಲು ಹೇಗೆ ಸಾಧ್ಯವಾಯಿತು? ದೇಶದ ಜನರ ಸಂಪರ್ಕ ಸೇತುವೆಯಾಗಿರುವ ಬಿಎಸ್ಎನ್ಎಲ್ 4ಜಿ ಸೇವೆಯನ್ನು ಯಾಕೆ ಆರಂಭಿಸಲಿಲ್ಲ. ಸಾರ್ವಜನಿಕ ಕಂಪನಿಗಳೊಂದಿಗೆ ಪೈಪೋಟಿ ನೀಡುವಂತಹ ವಾತಾವರಣವನ್ನು ಕೇಂದ್ರ ಸರ್ಕಾರ ಸೃಷ್ಟಿಸದೇ ಇರುವುದರಿಂದ ಎಲ್ಲವೂ ಖಾಸಗಿಯವರ ಪಾಲಾಗುತ್ತಿದೆ. ಬಿಎಸ್ಎನ್ಎಲ್ ಐಸಿಯುನಲ್ಲಿದೆ ಅದು ಯಾವಾಗ ಕಣ್ಣುಮುಚ್ಚುತ್ತದೋ ಎಂಬದನ್ನು ಜನರು ಎದುರು ನೋಡುತ್ತಿದ್ದಾರೆ. ಹೀಗಾಗಿaT ಮುಂದಿನ ದಿನಗಳಲ್ಲಿ ಜಿಯೋ ಸಂಸ್ಥೆ ಸರ್ವಾಧಿಕಾರಿಯಂತೆ ವರ್ತಿಸಿದರೆ ಅಚ್ಚರಿಪಡಬೇಕಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....