Homeಕರ್ನಾಟಕಕುವೆಂಪುಗೆ ಅವಮಾನಿಸಿದ ರೋಹಿತ್‌ ಚಕ್ರತೀರ್ಥ ವಿರುದ್ಧ ಸೂಕ್ತ ಕ್ರಮ: ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ

ಕುವೆಂಪುಗೆ ಅವಮಾನಿಸಿದ ರೋಹಿತ್‌ ಚಕ್ರತೀರ್ಥ ವಿರುದ್ಧ ಸೂಕ್ತ ಕ್ರಮ: ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ

- Advertisement -
- Advertisement -

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮಿ ಕುವೆಂಪು ಬಗ್ಗೆ ವ್ಯಕ್ತಪಡಿಸಿರುವ ಅಭಿಪ್ರಾಯವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಪಠ್ಯಪುಸ್ತಕ ಮರು ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರ ವಿರುದ್ಧ ಸೂಕ್ತವಾದ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.

ರಾಜ್ಯ ಪಠ್ಯಪುಸ್ತಕ ಮರು ಪರಿಷ್ಕರಣೆ ಅಧ್ಯಕ್ಷರಾಗಿರುವ ರೋಹಿತ್ ಚಕ್ರತೀರ್ಥ ಅವರು ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ಗೇಲಿ ಮಾಡಿ, ವಿಕೃತಗೊಳಿಸಿ, ಅವಮಾನ ಮಾಡಿರುವ ಹಳೆಯ ಪೋಸ್ಟ್‌ ವೈರಲ್ ಆಗಿದೆ. ಈ ಹಿನ್ನಲೆಯಲ್ಲಿ ಅವರನ್ನು ಬಂಧಿಸಬೇಕು ಮತ್ತು ಅವರ ಸಮಿತಿಯನ್ನು ರದ್ದು ಮಾಡಬೇಕು ಎಂದು ಆಗ್ರಹಗಳು ಕೇಳಿಬಂದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅದರಂತೆಯೆ ನಿರ್ಮಲಾನಂದನಾಥ ಸ್ವಾಮಿ ಅವರು ಕೂಡಾ ಮುಖ್ಯಮಂತ್ರಿಗೆ ಪತ್ರ ಬರೆದು, ರಾಷ್ಟ್ರಕವಿ ಕುವೆಂಪು ಅವರನ್ನು ಅಸಂಸದೀಯ ಭಾಷೆಯಲ್ಲಿ ನಿಂದಿಸಿ ಲೇಖನ ಬರೆದಿರುವ ಮತ್ತು ನಾಡಗೀತೆಯನ್ನು ತಿರುಚಿ ಬರೆದಿರುವವರ ವಿರುದ್ಧ ಸೈಬರ್ ಕ್ರೈಮ್ ಅಡಿಯಲ್ಲಿ ಕಾನೂನು ಪ್ರಕಾರ ಸರ್ಕಾರವು ಕ್ರಮ ಜರುಗಿಸಲಿದೆ ಎಂದು ನಂಬಿದ್ದೇನೆ ಎಂದು ಹೇಳಿದ್ದರು.

ಇದನ್ನೂ ಓದಿ: ನಾಡಗೀತೆ ತಿರುಚಿದ, ಕುವೆಂಪುರನ್ನು ನಿಂದಿಸಿದವರ ವಿರುದ್ಧ ಕ್ರಮ ಜರುಗಿಸಿ: ನಿರ್ಮಲಾನಂದನಾಥ ಸ್ವಾಮೀಜಿ

ನಿರ್ಮಲಾನಂದ ಸ್ವಾಮಿ ಬರೆದಿರುವ ಪತ್ರಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, “ನಿರ್ಮಲಾನಂದ ಶ್ರೀಗಳು ಕುವೆಂಪು ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಅದನ್ನು ಗಂಭೀರವಾಗಿ ತೆಗೆದುಕೊಂಡಿದ್ದೇನೆ. ಇವತ್ತೇ ನಮ್ಮ ಶಿಕ್ಷಣ ಮಂತ್ರಿಯನ್ನು ಕರೆಯುತ್ತಿದ್ದು, ಸೂಕ್ತವಾದ ಕ್ರಮ ಕೈಗೊಳ್ಳುತ್ತೇನೆ” ಎಂದು ಹೇಳಿದ್ದಾರೆ.

ನಿರ್ಮಲಾನಂದ ಅವರು ತಮ್ಮ ಪತ್ರದಲ್ಲಿ, “ಕುವೆಂಪು ಅವರು ತಮ್ಮ ಯೌವನದ ಕಾಲದಲ್ಲಿ ಬರೆದ ‘ಜೈ ಭಾರತ ಜನನಿಯ ತನುಜಾತೆ’ ಕವಿತೆಯು ಕಳೆದ ತೊಂಬತ್ತು ವರ್ಷಗಳಿಂದ ಕನ್ನಡಿಗರ ಹೃದಯದಲ್ಲಿ ನೆಲೆನಿಂತು, ದೇಶಭಕ್ತಿ ಮತ್ತು ನಾಡಪ್ರೇಮವನ್ನು ಉದ್ದೀಪಿಸಿದೆ. ಇದನ್ನು ಮನಗಂಡು ಕರ್ನಾಟಕ ಸರ್ಕಾರವು ‘ಜೈ ಭಾರತ ಜನನಿಯ ತನುಜಾತೆ’ ಗೀತೆಯನ್ನು ನಾಡಗೀತೆಯಾಗಿ ಘೋಷಿಸಿತು”

“ಅದನ್ನು ನಾಡಗೀತೆಯಾಗಿ ಘೋಷಣೆ ಮಾಡಬೇಕು ಎಂದು ಯಾರೂ ಕೇಳಿರಲಿಲ್ಲ. ಅದು ಸರ್ಕಾರವೇ ತೆಗೆದುಕೊಂಡ ತೀರ್ಮಾನವಾಗಿತ್ತು. ಕನ್ನಡ ಮತ್ತು ಕನ್ನಡಿಗರ ಅಸ್ಮಿತೆಯಾಗಿರುವ ಅಧಿಕೃತ ನಾಡಗೀತೆಯನ್ನು ಹಾಡಿ ಕೋಟಿ ಕೋಟಿ ಕನ್ನಡಿಗರು ಸಂಭ್ರಮಿಸಿದ್ದಾರೆ, ಸಂಭ್ರಮಿಸುತ್ತಿದ್ದಾರೆ. ಆದರೆ ಈಚೆಗೆ ಕೆಲವರು ನಾಡಗೀತೆಯನ್ನು ತಿರುಚಿ ಬರೆದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ಸರ್ಕಾರದ ತೀರ್ಮಾನವನ್ನು ಗೇಲಿ ಮಾಡುತ್ತಿರುವಂತಿದೆ” ಎಂದು ನಿರ್ಮಲಾನಂದ ಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರಕವಿ ಕುವೆಂಪುರವರಿಗೆ ಅವಮಾನ: ರೋಹಿತ್ ಚಕ್ರತೀರ್ಥ ವಿರುದ್ಧ ದೂರು ದಾಖಲು

“ನಾಡಗೀತೆಯನ್ನು ತಿರುಚಿರುವುದಷ್ಟೇ ಅಲ್ಲ, ಮಹಾಕವಿಗಳೂ ರಾಷ್ಟ್ರಕವಿಗಳೂ ಆಗಿರುವ ಕುವೆಂಪು ಅವರ ಬಗ್ಗೆ ಅತ್ಯಂತ ಕೀಳುಭಾಷೆಯಲ್ಲಿ ಅವಹೇಳನಕಾರಿ ಲೇಖನಗಳನ್ನು ಬರೆದಿದ್ದಾರೆ. ನಾಡಗೀತೆಯನ್ನು ಅವಮಾನಿಸುವುದೆಂದರೆ ರಾಷ್ಟ್ರಗೀತೆಯನ್ನು ಅವಮಾನಿಸಿದಂತೆ; ಹಾಗೂ ನೆಲದ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದು ಅವರು ಪತ್ರದಲ್ಲಿ ಬೇಸರ ವ್ಯಕ್ತಪಡಿಸಿದ್ದರು.

“ಹೀಗಾಗಿ, ರಾಷ್ಟ್ರಕವಿ ಕುವೆಂಪು ಅವರನ್ನು ಅಸಂಸದೀಯ ಭಾಷೆಯಲ್ಲಿ ನಿಂದಿಸಿ ಲೇಖನ ಬರೆದಿರುವ ಮತ್ತು ನಾಡಗೀತೆಯನ್ನು ತಿರುಚಿ ಬರೆದಿರುವವರ ವಿರುದ್ಧ ಸೈಬರ್ ಕ್ರೈಮ್ ಅಡಿಯಲ್ಲಿ ಕಾನೂನು ಪ್ರಕಾರ ಸರ್ಕಾರವು ಕ್ರಮ ಜರುಗಿಸುತ್ತದೆಂದು ಭಾವಿಸುತ್ತೇವೆ. ಹಾಗೂ ಈ ಮೂಲಕ ಸರ್ಕಾರವು ಕಾನೂನು ಮತ್ತು ವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಾಳಿ ಮಾಡುವವರನ್ನು ಕ್ಷಮಿಸುವುದಿಲ್ಲ ಎಂಬ ಸಂದೇಶ ರವಾನಿಸುತ್ತದೆ ಎಂಬುದು ನಮ್ಮ ಅಭಿಲಾಷೆಯಾಗಿದೆ” ಎಂದು ನಿರ್ಮಲಾನಂದ ಸ್ವಾಮಿ ಅವರು ಪತ್ರದಲ್ಲಿ ಹೇಳಿದ್ದಾರೆ.

ಈ ಮಧ್ಯೆ ನಾಡಗೀತೆಗೆ ಅವಹೇಳನ ಮಾಡಿರುವ ಆರೋಪ ಹೊತ್ತಿರುವ ರೋಹಿತ್‌ ಚಕ್ರತೀರ್ಥನನ್ನು ಈ ಕೂಡಲೇ ಪಠ್ಯ ಪರಿಶೀಲನಾ ಸಮಿತಿ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಒಕ್ಕಲಿಗರ ಸಂಘ ಆಗ್ರಹಿಸಿದೆ.

ಇದನ್ನೂ ಓದಿ: ನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ: ರೋಹಿತ್ ಚಕ್ರತೀರ್ಥ ಸ್ಪಷ್ಟನೆ

ರೋಹಿತ್ ಚಕ್ರತೀರ್ಥ ಮತ್ತು ಕುವೆಂಪು ಅವರನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನ ಮಾಡಿದ ಲಕ್ಷಣ ಆಕಾಶೆ ಕಾರ್ಕಳ ಎಂಬುವವರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಈಗಾಗಲೇ ದೂರು ನೀಡಲಾಗಿದೆ. ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಎ.ಪಿ ರಂಗನಾಥ್, ವಕೀಲರಾದ ಕೆ.ಎನ್ ಜಗದೀಶ್ ಕುಮಾರ್, ಹರಿರಾಮ್ ಮತ್ತು ಸೂರ್ಯ ಮುಕುಂದರಾಜ್‌ರವರು ಇತ್ತೀಚೆಗೆ ಬೆಂಗಳೂರು ಪೊಲೀಸ್ ಆಯುಕ್ತರಾದ ಪ್ರತಾಪ ರೆಡ್ಡಿಯವರಿಗೆ ದೂರು ಸಲ್ಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮುಖ್ಯ ಮಂತ್ರಿಗಳ ಈ ಬರವಸೆ ಕಾರ್ಯರೂಪಕ್ಕೆ ಬರಬೇಕು. ಆಗ ಮಾತ್ರ ಅವರ ಮಾತನ್ನು ನಂಬಬಹುದು.

LEAVE A REPLY

Please enter your comment!
Please enter your name here

- Advertisment -

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...