Homeಕರ್ನಾಟಕಹೇಳಿಕೆ ಬದಲಿಸುತ್ತಿರುವ ಸುಜಾತಾ ಭಟ್: ಅನನ್ಯಾ ಭಟ್ ಪ್ರಕರಣದ ಸುತ್ತ ಹಲವು ಗೊಂದಲ

ಹೇಳಿಕೆ ಬದಲಿಸುತ್ತಿರುವ ಸುಜಾತಾ ಭಟ್: ಅನನ್ಯಾ ಭಟ್ ಪ್ರಕರಣದ ಸುತ್ತ ಹಲವು ಗೊಂದಲ

- Advertisement -
- Advertisement -

ಧರ್ಮಸ್ಥಳಕ್ಕೆ ತೆರಳಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆಯಾಗಿದ್ದಾರೆ ಎಂಬ ಪ್ರಕರಣದ ಸುತ್ತ ಗೊಂದಲ ಸೃಷ್ಟಿಯಾಗಿದೆ. ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಅವರ ಹೇಳಿಕೆಗಳು ಈ ಗೊಂದಲಗಳಿಗೆ ಕಾರಣವಾಗಿದೆ.

ಶುಕ್ರವಾರ (ಆ.22) ‘ಇನ್‌ಸೈಟ್‌ರಶ್’ ಎಂಬ ಯೂಟ್ಯೂಬ್ ಚಾನೆಲ್ ಅಪ್ಲೋಡ್ ಮಾಡಿದ್ದ ವಿಡಿಯೋದಲ್ಲಿ ಮಾತನಾಡಿದ ಸುಜಾತಾ ಭಟ್, “ಅನನ್ಯಾ ಭಟ್ ನನ್ನ ಮಗಳು ಎನ್ನುವುದು ಸುಳ್ಳು. ನನಗೆ ಅನನ್ಯಾ ಭಟ್ ಎಂಬ ಮಗಳೇ ಇರಲಿಲ್ಲ. ಕೆಲ ವ್ಯಕ್ತಿಗಳು ಆ ರೀತಿ ಹೇಳುವಂತೆ ಒತ್ತಡ ಹೇರಿದ್ದರಿಂದ ನಾನು ಸುಳ್ಳು ಕಥೆ ಹೆಣೆದೆ ಎಂದು ಸ್ಪಷ್ಟಪಡಿಸಿದ್ದರು. ಆ ವ್ಯಕ್ತಿಗಳು ಯಾರು ಎಂದು ವರದಿಗಾರ್ತಿ ಕೇಳಿದಾಗ, ಗಿರೀಶ್ ಮಟ್ಟಣ್ಣವರ್ ಮತ್ತು ಜಯಂತ್ ಟಿ ಎಂದು ಹೆಸರು ಹೇಳಿದ್ದರು.

ಮುಂದುರಿದು, ಆಸ್ತಿ ವಿವಾದ ಇತ್ತು ಅದಕ್ಕೆ ನಾನು ಅನನ್ಯಾ ಭಟ್ ಕಥೆ ಹೇಳಿದೆ. ನನ್ನ ಅಜ್ಜನ ಆಸ್ತಿಯನ್ನು ದಾನವಾಗಿ ದೇವಸ್ಥಾನಕ್ಕೆ ಕೊಡುವಾಗ ಮೊಮ್ಮಗಳಾದ ನನ್ನ ಸಹಿ ತೆಗೆದುಕೊಳ್ಳಬೇಕಿತ್ತು. ನನಗೆ ಹಕ್ಕಿದೆ, ಆದರೆ ಹಾಗೆ ಮಾಡದೆ ದಾನವಾಗಿ ನಮ್ಮ ತಾತನ ಜಮೀನನ್ನು ಧರ್ಮಸ್ಥಳಕ್ಕೆ ಬರೆದುಕೊಟ್ಟರು. ನನ್ನನ್ನು ಸತ್ತಂತೆ ಪರಿಗಣಿಸಿದರು. ಅದು ನನಗೆ ತುಂಬಾ ನೋವು ಕೊಟ್ಟಿತು. ಹಾಗಾಗಿ ಅವರು ಹೇಳಿದಂತೆ ಮಾಡಿದ್ದೇನೆ. ನಾನು ತೋರಿಸಿರುವ ಫೋಟೋ ಎಲ್ಲವೂ ನಕಲಿ. ನಾನು ಧರ್ಮಸ್ಥಳ ಕ್ಷೇತ್ರ ಅಥವಾ ಅಲ್ಲಿನ ಯಾವುದೇ ವ್ಯಕ್ತಿ ವಿರುದ್ಧ ದೂರು ಕೊಟ್ಟಿಲ್ಲ, ಧರ್ಮಸ್ಥಳ ಗ್ರಾಮದಲ್ಲಿ ಎಂದು ದೂರು ಕೊಟ್ಟಿದ್ದೆ ಎಂದಿದ್ದರು.

ನನಗೆ ಈ ಕುರಿತು ಯಾರೂ ಹಣದ ಆಮಿಷ ಒಡ್ಡಿಲ್ಲ. ಕೇವಲ ಒಂದು ಬಾರಿಯಷ್ಟೇ ಅವರನ್ನು ಭೇಟಿಯಾಗಿದ್ದೇನೆ. ಮಗಳ ಕಥೆ ಹೇಳಿ ಎಂದು ಹೇಳಿಕೊಟ್ಟರು. ನನ್ನ ತಲೆಗೆ ತುರುಕಿದರು. ಅದರಂತೆ ಹೇಳಿದ್ದೇನೆ. ಆದರೆ, ಅದು ಈ ಮಟ್ಟಕ್ಕೆ ಹೋಗುತ್ತದೆ, ಇಷ್ಟೊಂದು ತೇಜೋವಧೆ ಆಗುತ್ತದೆ ಎಂದು ಯಾವತ್ತೂ ಭಾವಿಸಿರಲಿಲ್ಲ. ನಾನು ಲೀವಿಂಗ್ ಟುಗೆದರ್‌ನಲ್ಲಿ ಇದ್ದದ್ದು ನಿಜ. ಆದರೆ, ಆ ವ್ಯಕ್ತಿಯನ್ನು (ಸಂಗಾತಿಯನ್ನು) ನಾನೇ ದುಡಿದು ಸಾಕಿದ್ದೇನೆ. ಯಾರ ಮುಂದೆಯೂ ಕೈಚಾಚಿದವಳು ಅಲ್ಲ ಎಂದು ಸುಜಾತಾ ಭಟ್ ಅವರು ಹೇಳಿದ್ದರು.

ಈ ಹೇಳಿಕೆಯ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಬೆಂಗಳೂರಿನ ಮನೆಯಿಂದ ಸುದ್ದಿ ವಾಹಿನಿಗಳ ಜೊತೆ ಮಾತನಾಡಿದ ಸುಜಾತಾ ಭಟ್, “ಇವತ್ತು ಸಂಜೆ 5 ಗಂಟೆಗೆ ಒಬ್ಬರು ವಕೀಲರು ಬಂದು ನನ್ನನ್ನು ಕರೆದುಕೊಂಡು ಹೋಗಿ ಯೂಟ್ಯೂಬ್ ಚಾನೆಲ್‌ ಜೊತೆ ಮಾತನಾಡಿಸಿದರು. ಅವರ ಕಾರಿನಲ್ಲಿ ನನ್ನನ್ನು ಕೂರಿಸಿಕೊಂಡು ನನಗೆ ಅನನ್ಯಾ ಭಟ್ ಎಂಬ ಮಗಳೇ ಇರಲಿಲ್ಲ ಎಂಬ ಹೇಳಿಕೆ ಕೊಡಿಸಿದರು. ಅನನ್ಯಾ ಭಟ್ ಕಥೆ ಹೆಣೆಯಲು ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ಮತ್ತು ಜಯಂತ್ ಟಿ ನನ್ನನ್ನು ಪ್ರಚೋದಿಸಿದರು ಎಂದು ಬಲವಂತವಾಗಿ ಹೇಳಿಸಿದರು. ಇದು ಈ ರೀತಿ ಚಾನೆಲ್‌ನಲ್ಲಿ ಬರುತ್ತದೆ ಎಂದು ನನಗೆ ಗೊತ್ತಿರಲಿಲ್ಲ. ನಾನು ಎಸ್‌ಐಟಿ ಮುಂದೆ ಹೋಗಿ ಎಲ್ಲಾ ವಿಷಯವನ್ನು ಹೇಳುತ್ತೇನೆ. ದಯವಿಟ್ಟು ಅಲ್ಲಿಯವರೆಗೆ ನನಗೆ ಸಮಯ ಕೊಡಿ ಎಂದಿದ್ದಾರೆ.

ನನ್ನನ್ನು ಕತ್ರಿಗುಪ್ಪೆ ಕಾಮಾಕ್ಯ ರಸ್ತೆಯಲ್ಲಿ ಕರೆದುಕೊಂಡು ಹೋಗಿ, ಎಲ್ಲೋ ಒಳ ರಸ್ತೆಯಲ್ಲಿ ಕಾರಿನೊಳಗೆ ಕೂರಿಸಿ ನನ್ನಿಂದ ಹೇಳಿಕೆ ಪಡೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ. ಇನ್ನೊಂದು ವಾಹಿನಿಯವರ ಜೊತೆಯೂ ನೀವು ಅನನ್ಯಾ ಭಟ್ ಇಲ್ಲ ಎಂಬ ಹೇಳಿಕೆ ಕೊಟ್ಟಿದ್ದೀರಲ್ವಾ? ಎಂದು ಸುದ್ದಿವಾಹಿನಿ ವರದಿಗಾರ ಕೇಳಿದಾಗ, ಆ ವಾಹಿನಿಯವರು ಕೂಡ ನನ್ನಿಂದ ಬಲವಂತವಾಗಿ ಹೇಳಿಕೆ ಕೊಡಿಸಿದ್ದಾರೆ ಎಂದಿದ್ದಾರೆ.

ನಾನು ಮೊದಲು ಎಸ್‌ಐಟಿ ಮುಂದೆ ಹೇಳಿಕೆ ಕೊಡುತ್ತೇನೆ. ಆ ಬಳಿಕ ಮಾಧ್ಯಮಗಳ ಮುಂದೆ ಮಾತನಾಡುತ್ತೇನೆ. ದಯವಿಟ್ಟು ನನ್ನನ್ನು ಬಿಟ್ಟುಬಿಡಿ. ನಾನು ಇನ್ನು ಎಸ್‌ಐಟಿ ಮುಂದೆಯೇ ಹೇಳಿಕೆ ಕೊಡುತ್ತೇನೆ. ಎಸ್‌ಐಟಿಯವರು ಮಾಧ್ಯಮಗಳಿಗೆ ಹೇಳಿಕೆ ಕೊಡದಂತೆ ಸೂಚಿಸಿದ್ದಾರೆ. ನನ್ನಿಂದ ಬಲವಂತವಾಗಿ ಹೇಳಿಕೆ ಕೊಡಿಸಿದ ಬಗ್ಗೆ ನನ್ನ ವಕೀಲರ ಜೊತೆ ಮಾತನಾಡಿದ್ದೇನೆ. ಅವರು ಎಸ್‌ಐಟಿ ಮುಂದೆ ಹೋಗೋಣ ಎಂದಿದ್ದಾರೆ. ಹಾಗಾಗಿ, ನಾನು ಎಸ್ಐಟಿ ಮುಂದೆ ಎಲ್ಲವನ್ನೂ ಹೇಳುತ್ತೇನೆ ಎಂದು ಸುಜಾತಾ ಭಟ್ ತಿಳಿಸಿದ್ದಾರೆ.

2003ರಲ್ಲಿ ಸ್ನೇಹಿತೆಯರ ಜೊತೆ ಧರ್ಮಸ್ಥಳಕ್ಕೆ ತೆರಳಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆಯಾಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ತಾಯಿ ಸುಜಾತಾ ಭಟ್ 2025ರ ಜುಲೈ 15ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.  

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು, “ಮಗಳ ನಾಪತ್ತೆ ಬಗ್ಗೆ ಈ ಹಿಂದೆ ಬೆಳ್ತಂಗಡಿ ಪೊಲೀಸರಿಗೆ ದೂರು ಕೊಟ್ಟಿದ್ದರೂ ನನಗೆ ನ್ಯಾಯ ಸಿಕ್ಕಿಲ್ಲ. ಈಗ ಅನಾಮಿಕ ಕೊಟ್ಟ ದೂರಿನಂತೆ ಎಸ್‌ಐಟಿ ತನಿಖೆ ನಡೆಯುತ್ತಿರುವುದರಿಂದ ನನಗೆ ಆಶಾ ಭಾವನೆ ಮೂಡಿದೆ. ಎಸ್‌ಐಟಿಯವರು ನನ್ನ ಮಗಳ ನಾಪತ್ತೆ ಪ್ರಕರಣವನ್ನೂ ಬೇಧಿಸಿ, ಅವಳ ಅಸ್ತಿ ಹುಡುಕಿ ಕೊಟ್ಟರೆ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡುತ್ತೇನೆ” ಎಂದಿದ್ದರು.

ಸುಜಾತಾ ಭಟ್ ಅವರ ಸಂಪೂರ್ಣ ಹೇಳಿಕೆಯ ಲಿಂಕ್ ಇಲ್ಲಿದೆ

ಅನನ್ಯಾ ಭಟ್ ನಾಪತ್ತೆ ದೂರು ಧರ್ಮಸ್ಥಳ ಠಾಣೆಯಿಂದ ಆಗಸ್ಟ್ 20, 2025ರಂದು ಎಸ್‌ಐಟಿಗೆ ವರ್ಗಾವಣೆಯಾಗಿದೆ. ಎಸ್‌ಐಟಿಯವರು ವಿಚಾರಣೆಗೆ ಹಾಜರಾಗುವಂತೆ ಸುಜಾತಾ ಭಟ್ ಅವರಿಗೆ ನೋಟಿಸ್ ನೀಡಿದ್ದಾರೆ ಎಂದು ವರದಿಯಾಗಿದೆ.

ಈ ನಡುವೆ ಸುದ್ದಿ ವಾಹಿನಿಯೊಂದು ಸುಜಾತಾ ಭಟ್ ಅವರಿಗೆ ಅನನ್ಯಾ ಭಟ್ ಎಂಬ ಮಗಳೇ ಇರಲಿಲ್ಲ ಎಂದು ನಿರಂತರ ಸುದ್ದಿ ಪ್ರಕಟಿಸಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಸುಜಾತಾ ಭಟ್, ಯುವತಿಯೊಬ್ಬರ ಫೋಟೋ ಬಿಡುಗಡೆ ಮಾಡಿ, “ಇದೇ ಅನನ್ಯಾ ಭಟ್” ಎಂದಿದ್ದರು. ಆದರೆ, ಸುದ್ದಿವಾಹಿನಿ ಮತ್ತು ಕೆಲ ಯೂಟ್ಯೂಬ್ ಚಾನೆಲ್‌ಗಳು ಆ ಫೋಟೋ ನಕಲಿ ಎಂದು ಆರೋಪಿಸಿತ್ತು. ವಾಸಂತಿ ಎನ್ನುವವರ ಫೋಟೋವನ್ನು ಯೂಟ್ಯೂಬರ್ ಸಮೀರ್ ಎಐ ಮೂಲಕ ಬದಲಾಯಿಸಿ ಅನನ್ಯಾ ಭಟ್ ಎಂದು ಬಿಂಬಿಸಿದ್ದಾರೆ ಎಂದಿತ್ತು.

ಸುಜಾತಾ ಭಟ್ ಅವರಿಗೆ ಅನನ್ಯಾ ಎಂಬ ಮಗಳೇ ಇರಲಿಲ್ಲ ಎಂಬುವುದಕ್ಕೆ ಸುದ್ದಿವಾಹಿನಿ, ಸುಜಾತಾ ಭಟ್ ಸಂಬಂಧಿಕರು ಎನ್ನಲಾದ ಕೆಲ ವ್ಯಕ್ತಿಗಳಿಂದ ಹೇಳಿಕೆಯನ್ನೂ ಪಡೆದಿತ್ತು. ಇದನ್ನು ಗಮನಿಸಿದ ಜನರು ಸುಜಾತಾ ಭಟ್ ಆರೋಪ ನಿಜವೋ, ಸುಳ್ಳೋ ಎಂಬ ಗೊಂದಲಕ್ಕೀಡಾಗಿದ್ದರು.

ಈ ಬೆನ್ನಲ್ಲೇ ‘ಇನ್‌ಸೈಟ್‌ರಶ್’ ಯೂಟ್ಯೂಬ್ ಚಾನೆಲ್‌ಗೆ ಸುಜಾತಾ ಭಟ್ ನೀಡಿದ್ದ ಹೇಳಿಕೆ ಸಂಚಲನ ಸೃಷ್ಟಿಸಿತ್ತು. ಇದಾಗಿ, ಗಂಟೆಯೊಳಗೆ “ನನ್ನಿಂದ ಬಲವಂತವಾಗಿ ಹೇಳಿಕೆ ಕೊಡಿಸಲಾಗಿದೆ” ಎಂಬ ಸುಜಾತಾ ಮಾತು ಜನರಲ್ಲಿ ಗೊಂದಲ ಉಂಟು ಮಾಡಿದೆ. ಹಾಗಾಗಿ, ಅನನ್ಯಾ ಭಟ್ ಪ್ರಕರಣದ ಸತ್ಯಾಸತ್ಯತೆ ಎಸ್‌ಐಟಿ ತನಿಖೆಯಿಂದಲೇ ಬಯಲಾಗಬೇಕಿದೆ.

15 ದಿನದಿಂದ ‘ಮಾರ್ವಾಡಿ ಗೋ ಬ್ಯಾಕ್’ ಪ್ರತಿಭಟನೆಗಳು: ಹೈದರಾಬಾದ್‌ನಲ್ಲಿ ಹೆಚ್ಚಿದ ಉದ್ವಿಗ್ನತೆ, ಪೊಲೀಸರು ಹೈ ಅಲರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....