Homeಕರ್ನಾಟಕಹೇಳಿಕೆ ಬದಲಿಸುತ್ತಿರುವ ಸುಜಾತಾ ಭಟ್: ಅನನ್ಯಾ ಭಟ್ ಪ್ರಕರಣದ ಸುತ್ತ ಹಲವು ಗೊಂದಲ

ಹೇಳಿಕೆ ಬದಲಿಸುತ್ತಿರುವ ಸುಜಾತಾ ಭಟ್: ಅನನ್ಯಾ ಭಟ್ ಪ್ರಕರಣದ ಸುತ್ತ ಹಲವು ಗೊಂದಲ

- Advertisement -
- Advertisement -

ಧರ್ಮಸ್ಥಳಕ್ಕೆ ತೆರಳಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆಯಾಗಿದ್ದಾರೆ ಎಂಬ ಪ್ರಕರಣದ ಸುತ್ತ ಗೊಂದಲ ಸೃಷ್ಟಿಯಾಗಿದೆ. ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಅವರ ಹೇಳಿಕೆಗಳು ಈ ಗೊಂದಲಗಳಿಗೆ ಕಾರಣವಾಗಿದೆ.

ಶುಕ್ರವಾರ (ಆ.22) ‘ಇನ್‌ಸೈಟ್‌ರಶ್’ ಎಂಬ ಯೂಟ್ಯೂಬ್ ಚಾನೆಲ್ ಅಪ್ಲೋಡ್ ಮಾಡಿದ್ದ ವಿಡಿಯೋದಲ್ಲಿ ಮಾತನಾಡಿದ ಸುಜಾತಾ ಭಟ್, “ಅನನ್ಯಾ ಭಟ್ ನನ್ನ ಮಗಳು ಎನ್ನುವುದು ಸುಳ್ಳು. ನನಗೆ ಅನನ್ಯಾ ಭಟ್ ಎಂಬ ಮಗಳೇ ಇರಲಿಲ್ಲ. ಕೆಲ ವ್ಯಕ್ತಿಗಳು ಆ ರೀತಿ ಹೇಳುವಂತೆ ಒತ್ತಡ ಹೇರಿದ್ದರಿಂದ ನಾನು ಸುಳ್ಳು ಕಥೆ ಹೆಣೆದೆ ಎಂದು ಸ್ಪಷ್ಟಪಡಿಸಿದ್ದರು. ಆ ವ್ಯಕ್ತಿಗಳು ಯಾರು ಎಂದು ವರದಿಗಾರ್ತಿ ಕೇಳಿದಾಗ, ಗಿರೀಶ್ ಮಟ್ಟಣ್ಣವರ್ ಮತ್ತು ಜಯಂತ್ ಟಿ ಎಂದು ಹೆಸರು ಹೇಳಿದ್ದರು.

ಮುಂದುರಿದು, ಆಸ್ತಿ ವಿವಾದ ಇತ್ತು ಅದಕ್ಕೆ ನಾನು ಅನನ್ಯಾ ಭಟ್ ಕಥೆ ಹೇಳಿದೆ. ನನ್ನ ಅಜ್ಜನ ಆಸ್ತಿಯನ್ನು ದಾನವಾಗಿ ದೇವಸ್ಥಾನಕ್ಕೆ ಕೊಡುವಾಗ ಮೊಮ್ಮಗಳಾದ ನನ್ನ ಸಹಿ ತೆಗೆದುಕೊಳ್ಳಬೇಕಿತ್ತು. ನನಗೆ ಹಕ್ಕಿದೆ, ಆದರೆ ಹಾಗೆ ಮಾಡದೆ ದಾನವಾಗಿ ನಮ್ಮ ತಾತನ ಜಮೀನನ್ನು ಧರ್ಮಸ್ಥಳಕ್ಕೆ ಬರೆದುಕೊಟ್ಟರು. ನನ್ನನ್ನು ಸತ್ತಂತೆ ಪರಿಗಣಿಸಿದರು. ಅದು ನನಗೆ ತುಂಬಾ ನೋವು ಕೊಟ್ಟಿತು. ಹಾಗಾಗಿ ಅವರು ಹೇಳಿದಂತೆ ಮಾಡಿದ್ದೇನೆ. ನಾನು ತೋರಿಸಿರುವ ಫೋಟೋ ಎಲ್ಲವೂ ನಕಲಿ. ನಾನು ಧರ್ಮಸ್ಥಳ ಕ್ಷೇತ್ರ ಅಥವಾ ಅಲ್ಲಿನ ಯಾವುದೇ ವ್ಯಕ್ತಿ ವಿರುದ್ಧ ದೂರು ಕೊಟ್ಟಿಲ್ಲ, ಧರ್ಮಸ್ಥಳ ಗ್ರಾಮದಲ್ಲಿ ಎಂದು ದೂರು ಕೊಟ್ಟಿದ್ದೆ ಎಂದಿದ್ದರು.

ನನಗೆ ಈ ಕುರಿತು ಯಾರೂ ಹಣದ ಆಮಿಷ ಒಡ್ಡಿಲ್ಲ. ಕೇವಲ ಒಂದು ಬಾರಿಯಷ್ಟೇ ಅವರನ್ನು ಭೇಟಿಯಾಗಿದ್ದೇನೆ. ಮಗಳ ಕಥೆ ಹೇಳಿ ಎಂದು ಹೇಳಿಕೊಟ್ಟರು. ನನ್ನ ತಲೆಗೆ ತುರುಕಿದರು. ಅದರಂತೆ ಹೇಳಿದ್ದೇನೆ. ಆದರೆ, ಅದು ಈ ಮಟ್ಟಕ್ಕೆ ಹೋಗುತ್ತದೆ, ಇಷ್ಟೊಂದು ತೇಜೋವಧೆ ಆಗುತ್ತದೆ ಎಂದು ಯಾವತ್ತೂ ಭಾವಿಸಿರಲಿಲ್ಲ. ನಾನು ಲೀವಿಂಗ್ ಟುಗೆದರ್‌ನಲ್ಲಿ ಇದ್ದದ್ದು ನಿಜ. ಆದರೆ, ಆ ವ್ಯಕ್ತಿಯನ್ನು (ಸಂಗಾತಿಯನ್ನು) ನಾನೇ ದುಡಿದು ಸಾಕಿದ್ದೇನೆ. ಯಾರ ಮುಂದೆಯೂ ಕೈಚಾಚಿದವಳು ಅಲ್ಲ ಎಂದು ಸುಜಾತಾ ಭಟ್ ಅವರು ಹೇಳಿದ್ದರು.

ಈ ಹೇಳಿಕೆಯ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಬೆಂಗಳೂರಿನ ಮನೆಯಿಂದ ಸುದ್ದಿ ವಾಹಿನಿಗಳ ಜೊತೆ ಮಾತನಾಡಿದ ಸುಜಾತಾ ಭಟ್, “ಇವತ್ತು ಸಂಜೆ 5 ಗಂಟೆಗೆ ಒಬ್ಬರು ವಕೀಲರು ಬಂದು ನನ್ನನ್ನು ಕರೆದುಕೊಂಡು ಹೋಗಿ ಯೂಟ್ಯೂಬ್ ಚಾನೆಲ್‌ ಜೊತೆ ಮಾತನಾಡಿಸಿದರು. ಅವರ ಕಾರಿನಲ್ಲಿ ನನ್ನನ್ನು ಕೂರಿಸಿಕೊಂಡು ನನಗೆ ಅನನ್ಯಾ ಭಟ್ ಎಂಬ ಮಗಳೇ ಇರಲಿಲ್ಲ ಎಂಬ ಹೇಳಿಕೆ ಕೊಡಿಸಿದರು. ಅನನ್ಯಾ ಭಟ್ ಕಥೆ ಹೆಣೆಯಲು ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ಮತ್ತು ಜಯಂತ್ ಟಿ ನನ್ನನ್ನು ಪ್ರಚೋದಿಸಿದರು ಎಂದು ಬಲವಂತವಾಗಿ ಹೇಳಿಸಿದರು. ಇದು ಈ ರೀತಿ ಚಾನೆಲ್‌ನಲ್ಲಿ ಬರುತ್ತದೆ ಎಂದು ನನಗೆ ಗೊತ್ತಿರಲಿಲ್ಲ. ನಾನು ಎಸ್‌ಐಟಿ ಮುಂದೆ ಹೋಗಿ ಎಲ್ಲಾ ವಿಷಯವನ್ನು ಹೇಳುತ್ತೇನೆ. ದಯವಿಟ್ಟು ಅಲ್ಲಿಯವರೆಗೆ ನನಗೆ ಸಮಯ ಕೊಡಿ ಎಂದಿದ್ದಾರೆ.

ನನ್ನನ್ನು ಕತ್ರಿಗುಪ್ಪೆ ಕಾಮಾಕ್ಯ ರಸ್ತೆಯಲ್ಲಿ ಕರೆದುಕೊಂಡು ಹೋಗಿ, ಎಲ್ಲೋ ಒಳ ರಸ್ತೆಯಲ್ಲಿ ಕಾರಿನೊಳಗೆ ಕೂರಿಸಿ ನನ್ನಿಂದ ಹೇಳಿಕೆ ಪಡೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ. ಇನ್ನೊಂದು ವಾಹಿನಿಯವರ ಜೊತೆಯೂ ನೀವು ಅನನ್ಯಾ ಭಟ್ ಇಲ್ಲ ಎಂಬ ಹೇಳಿಕೆ ಕೊಟ್ಟಿದ್ದೀರಲ್ವಾ? ಎಂದು ಸುದ್ದಿವಾಹಿನಿ ವರದಿಗಾರ ಕೇಳಿದಾಗ, ಆ ವಾಹಿನಿಯವರು ಕೂಡ ನನ್ನಿಂದ ಬಲವಂತವಾಗಿ ಹೇಳಿಕೆ ಕೊಡಿಸಿದ್ದಾರೆ ಎಂದಿದ್ದಾರೆ.

ನಾನು ಮೊದಲು ಎಸ್‌ಐಟಿ ಮುಂದೆ ಹೇಳಿಕೆ ಕೊಡುತ್ತೇನೆ. ಆ ಬಳಿಕ ಮಾಧ್ಯಮಗಳ ಮುಂದೆ ಮಾತನಾಡುತ್ತೇನೆ. ದಯವಿಟ್ಟು ನನ್ನನ್ನು ಬಿಟ್ಟುಬಿಡಿ. ನಾನು ಇನ್ನು ಎಸ್‌ಐಟಿ ಮುಂದೆಯೇ ಹೇಳಿಕೆ ಕೊಡುತ್ತೇನೆ. ಎಸ್‌ಐಟಿಯವರು ಮಾಧ್ಯಮಗಳಿಗೆ ಹೇಳಿಕೆ ಕೊಡದಂತೆ ಸೂಚಿಸಿದ್ದಾರೆ. ನನ್ನಿಂದ ಬಲವಂತವಾಗಿ ಹೇಳಿಕೆ ಕೊಡಿಸಿದ ಬಗ್ಗೆ ನನ್ನ ವಕೀಲರ ಜೊತೆ ಮಾತನಾಡಿದ್ದೇನೆ. ಅವರು ಎಸ್‌ಐಟಿ ಮುಂದೆ ಹೋಗೋಣ ಎಂದಿದ್ದಾರೆ. ಹಾಗಾಗಿ, ನಾನು ಎಸ್ಐಟಿ ಮುಂದೆ ಎಲ್ಲವನ್ನೂ ಹೇಳುತ್ತೇನೆ ಎಂದು ಸುಜಾತಾ ಭಟ್ ತಿಳಿಸಿದ್ದಾರೆ.

2003ರಲ್ಲಿ ಸ್ನೇಹಿತೆಯರ ಜೊತೆ ಧರ್ಮಸ್ಥಳಕ್ಕೆ ತೆರಳಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆಯಾಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ತಾಯಿ ಸುಜಾತಾ ಭಟ್ 2025ರ ಜುಲೈ 15ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.  

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು, “ಮಗಳ ನಾಪತ್ತೆ ಬಗ್ಗೆ ಈ ಹಿಂದೆ ಬೆಳ್ತಂಗಡಿ ಪೊಲೀಸರಿಗೆ ದೂರು ಕೊಟ್ಟಿದ್ದರೂ ನನಗೆ ನ್ಯಾಯ ಸಿಕ್ಕಿಲ್ಲ. ಈಗ ಅನಾಮಿಕ ಕೊಟ್ಟ ದೂರಿನಂತೆ ಎಸ್‌ಐಟಿ ತನಿಖೆ ನಡೆಯುತ್ತಿರುವುದರಿಂದ ನನಗೆ ಆಶಾ ಭಾವನೆ ಮೂಡಿದೆ. ಎಸ್‌ಐಟಿಯವರು ನನ್ನ ಮಗಳ ನಾಪತ್ತೆ ಪ್ರಕರಣವನ್ನೂ ಬೇಧಿಸಿ, ಅವಳ ಅಸ್ತಿ ಹುಡುಕಿ ಕೊಟ್ಟರೆ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡುತ್ತೇನೆ” ಎಂದಿದ್ದರು.

ಸುಜಾತಾ ಭಟ್ ಅವರ ಸಂಪೂರ್ಣ ಹೇಳಿಕೆಯ ಲಿಂಕ್ ಇಲ್ಲಿದೆ

ಅನನ್ಯಾ ಭಟ್ ನಾಪತ್ತೆ ದೂರು ಧರ್ಮಸ್ಥಳ ಠಾಣೆಯಿಂದ ಆಗಸ್ಟ್ 20, 2025ರಂದು ಎಸ್‌ಐಟಿಗೆ ವರ್ಗಾವಣೆಯಾಗಿದೆ. ಎಸ್‌ಐಟಿಯವರು ವಿಚಾರಣೆಗೆ ಹಾಜರಾಗುವಂತೆ ಸುಜಾತಾ ಭಟ್ ಅವರಿಗೆ ನೋಟಿಸ್ ನೀಡಿದ್ದಾರೆ ಎಂದು ವರದಿಯಾಗಿದೆ.

ಈ ನಡುವೆ ಸುದ್ದಿ ವಾಹಿನಿಯೊಂದು ಸುಜಾತಾ ಭಟ್ ಅವರಿಗೆ ಅನನ್ಯಾ ಭಟ್ ಎಂಬ ಮಗಳೇ ಇರಲಿಲ್ಲ ಎಂದು ನಿರಂತರ ಸುದ್ದಿ ಪ್ರಕಟಿಸಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಸುಜಾತಾ ಭಟ್, ಯುವತಿಯೊಬ್ಬರ ಫೋಟೋ ಬಿಡುಗಡೆ ಮಾಡಿ, “ಇದೇ ಅನನ್ಯಾ ಭಟ್” ಎಂದಿದ್ದರು. ಆದರೆ, ಸುದ್ದಿವಾಹಿನಿ ಮತ್ತು ಕೆಲ ಯೂಟ್ಯೂಬ್ ಚಾನೆಲ್‌ಗಳು ಆ ಫೋಟೋ ನಕಲಿ ಎಂದು ಆರೋಪಿಸಿತ್ತು. ವಾಸಂತಿ ಎನ್ನುವವರ ಫೋಟೋವನ್ನು ಯೂಟ್ಯೂಬರ್ ಸಮೀರ್ ಎಐ ಮೂಲಕ ಬದಲಾಯಿಸಿ ಅನನ್ಯಾ ಭಟ್ ಎಂದು ಬಿಂಬಿಸಿದ್ದಾರೆ ಎಂದಿತ್ತು.

ಸುಜಾತಾ ಭಟ್ ಅವರಿಗೆ ಅನನ್ಯಾ ಎಂಬ ಮಗಳೇ ಇರಲಿಲ್ಲ ಎಂಬುವುದಕ್ಕೆ ಸುದ್ದಿವಾಹಿನಿ, ಸುಜಾತಾ ಭಟ್ ಸಂಬಂಧಿಕರು ಎನ್ನಲಾದ ಕೆಲ ವ್ಯಕ್ತಿಗಳಿಂದ ಹೇಳಿಕೆಯನ್ನೂ ಪಡೆದಿತ್ತು. ಇದನ್ನು ಗಮನಿಸಿದ ಜನರು ಸುಜಾತಾ ಭಟ್ ಆರೋಪ ನಿಜವೋ, ಸುಳ್ಳೋ ಎಂಬ ಗೊಂದಲಕ್ಕೀಡಾಗಿದ್ದರು.

ಈ ಬೆನ್ನಲ್ಲೇ ‘ಇನ್‌ಸೈಟ್‌ರಶ್’ ಯೂಟ್ಯೂಬ್ ಚಾನೆಲ್‌ಗೆ ಸುಜಾತಾ ಭಟ್ ನೀಡಿದ್ದ ಹೇಳಿಕೆ ಸಂಚಲನ ಸೃಷ್ಟಿಸಿತ್ತು. ಇದಾಗಿ, ಗಂಟೆಯೊಳಗೆ “ನನ್ನಿಂದ ಬಲವಂತವಾಗಿ ಹೇಳಿಕೆ ಕೊಡಿಸಲಾಗಿದೆ” ಎಂಬ ಸುಜಾತಾ ಮಾತು ಜನರಲ್ಲಿ ಗೊಂದಲ ಉಂಟು ಮಾಡಿದೆ. ಹಾಗಾಗಿ, ಅನನ್ಯಾ ಭಟ್ ಪ್ರಕರಣದ ಸತ್ಯಾಸತ್ಯತೆ ಎಸ್‌ಐಟಿ ತನಿಖೆಯಿಂದಲೇ ಬಯಲಾಗಬೇಕಿದೆ.

15 ದಿನದಿಂದ ‘ಮಾರ್ವಾಡಿ ಗೋ ಬ್ಯಾಕ್’ ಪ್ರತಿಭಟನೆಗಳು: ಹೈದರಾಬಾದ್‌ನಲ್ಲಿ ಹೆಚ್ಚಿದ ಉದ್ವಿಗ್ನತೆ, ಪೊಲೀಸರು ಹೈ ಅಲರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...