Homeಕರ್ನಾಟಕಹೇಳಿಕೆ ಬದಲಿಸುತ್ತಿರುವ ಸುಜಾತಾ ಭಟ್: ಅನನ್ಯಾ ಭಟ್ ಪ್ರಕರಣದ ಸುತ್ತ ಹಲವು ಗೊಂದಲ

ಹೇಳಿಕೆ ಬದಲಿಸುತ್ತಿರುವ ಸುಜಾತಾ ಭಟ್: ಅನನ್ಯಾ ಭಟ್ ಪ್ರಕರಣದ ಸುತ್ತ ಹಲವು ಗೊಂದಲ

- Advertisement -
- Advertisement -

ಧರ್ಮಸ್ಥಳಕ್ಕೆ ತೆರಳಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆಯಾಗಿದ್ದಾರೆ ಎಂಬ ಪ್ರಕರಣದ ಸುತ್ತ ಗೊಂದಲ ಸೃಷ್ಟಿಯಾಗಿದೆ. ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಅವರ ಹೇಳಿಕೆಗಳು ಈ ಗೊಂದಲಗಳಿಗೆ ಕಾರಣವಾಗಿದೆ.

ಶುಕ್ರವಾರ (ಆ.22) ‘ಇನ್‌ಸೈಟ್‌ರಶ್’ ಎಂಬ ಯೂಟ್ಯೂಬ್ ಚಾನೆಲ್ ಅಪ್ಲೋಡ್ ಮಾಡಿದ್ದ ವಿಡಿಯೋದಲ್ಲಿ ಮಾತನಾಡಿದ ಸುಜಾತಾ ಭಟ್, “ಅನನ್ಯಾ ಭಟ್ ನನ್ನ ಮಗಳು ಎನ್ನುವುದು ಸುಳ್ಳು. ನನಗೆ ಅನನ್ಯಾ ಭಟ್ ಎಂಬ ಮಗಳೇ ಇರಲಿಲ್ಲ. ಕೆಲ ವ್ಯಕ್ತಿಗಳು ಆ ರೀತಿ ಹೇಳುವಂತೆ ಒತ್ತಡ ಹೇರಿದ್ದರಿಂದ ನಾನು ಸುಳ್ಳು ಕಥೆ ಹೆಣೆದೆ ಎಂದು ಸ್ಪಷ್ಟಪಡಿಸಿದ್ದರು. ಆ ವ್ಯಕ್ತಿಗಳು ಯಾರು ಎಂದು ವರದಿಗಾರ್ತಿ ಕೇಳಿದಾಗ, ಗಿರೀಶ್ ಮಟ್ಟಣ್ಣವರ್ ಮತ್ತು ಜಯಂತ್ ಟಿ ಎಂದು ಹೆಸರು ಹೇಳಿದ್ದರು.

ಮುಂದುರಿದು, ಆಸ್ತಿ ವಿವಾದ ಇತ್ತು ಅದಕ್ಕೆ ನಾನು ಅನನ್ಯಾ ಭಟ್ ಕಥೆ ಹೇಳಿದೆ. ನನ್ನ ಅಜ್ಜನ ಆಸ್ತಿಯನ್ನು ದಾನವಾಗಿ ದೇವಸ್ಥಾನಕ್ಕೆ ಕೊಡುವಾಗ ಮೊಮ್ಮಗಳಾದ ನನ್ನ ಸಹಿ ತೆಗೆದುಕೊಳ್ಳಬೇಕಿತ್ತು. ನನಗೆ ಹಕ್ಕಿದೆ, ಆದರೆ ಹಾಗೆ ಮಾಡದೆ ದಾನವಾಗಿ ನಮ್ಮ ತಾತನ ಜಮೀನನ್ನು ಧರ್ಮಸ್ಥಳಕ್ಕೆ ಬರೆದುಕೊಟ್ಟರು. ನನ್ನನ್ನು ಸತ್ತಂತೆ ಪರಿಗಣಿಸಿದರು. ಅದು ನನಗೆ ತುಂಬಾ ನೋವು ಕೊಟ್ಟಿತು. ಹಾಗಾಗಿ ಅವರು ಹೇಳಿದಂತೆ ಮಾಡಿದ್ದೇನೆ. ನಾನು ತೋರಿಸಿರುವ ಫೋಟೋ ಎಲ್ಲವೂ ನಕಲಿ. ನಾನು ಧರ್ಮಸ್ಥಳ ಕ್ಷೇತ್ರ ಅಥವಾ ಅಲ್ಲಿನ ಯಾವುದೇ ವ್ಯಕ್ತಿ ವಿರುದ್ಧ ದೂರು ಕೊಟ್ಟಿಲ್ಲ, ಧರ್ಮಸ್ಥಳ ಗ್ರಾಮದಲ್ಲಿ ಎಂದು ದೂರು ಕೊಟ್ಟಿದ್ದೆ ಎಂದಿದ್ದರು.

ನನಗೆ ಈ ಕುರಿತು ಯಾರೂ ಹಣದ ಆಮಿಷ ಒಡ್ಡಿಲ್ಲ. ಕೇವಲ ಒಂದು ಬಾರಿಯಷ್ಟೇ ಅವರನ್ನು ಭೇಟಿಯಾಗಿದ್ದೇನೆ. ಮಗಳ ಕಥೆ ಹೇಳಿ ಎಂದು ಹೇಳಿಕೊಟ್ಟರು. ನನ್ನ ತಲೆಗೆ ತುರುಕಿದರು. ಅದರಂತೆ ಹೇಳಿದ್ದೇನೆ. ಆದರೆ, ಅದು ಈ ಮಟ್ಟಕ್ಕೆ ಹೋಗುತ್ತದೆ, ಇಷ್ಟೊಂದು ತೇಜೋವಧೆ ಆಗುತ್ತದೆ ಎಂದು ಯಾವತ್ತೂ ಭಾವಿಸಿರಲಿಲ್ಲ. ನಾನು ಲೀವಿಂಗ್ ಟುಗೆದರ್‌ನಲ್ಲಿ ಇದ್ದದ್ದು ನಿಜ. ಆದರೆ, ಆ ವ್ಯಕ್ತಿಯನ್ನು (ಸಂಗಾತಿಯನ್ನು) ನಾನೇ ದುಡಿದು ಸಾಕಿದ್ದೇನೆ. ಯಾರ ಮುಂದೆಯೂ ಕೈಚಾಚಿದವಳು ಅಲ್ಲ ಎಂದು ಸುಜಾತಾ ಭಟ್ ಅವರು ಹೇಳಿದ್ದರು.

ಈ ಹೇಳಿಕೆಯ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಬೆಂಗಳೂರಿನ ಮನೆಯಿಂದ ಸುದ್ದಿ ವಾಹಿನಿಗಳ ಜೊತೆ ಮಾತನಾಡಿದ ಸುಜಾತಾ ಭಟ್, “ಇವತ್ತು ಸಂಜೆ 5 ಗಂಟೆಗೆ ಒಬ್ಬರು ವಕೀಲರು ಬಂದು ನನ್ನನ್ನು ಕರೆದುಕೊಂಡು ಹೋಗಿ ಯೂಟ್ಯೂಬ್ ಚಾನೆಲ್‌ ಜೊತೆ ಮಾತನಾಡಿಸಿದರು. ಅವರ ಕಾರಿನಲ್ಲಿ ನನ್ನನ್ನು ಕೂರಿಸಿಕೊಂಡು ನನಗೆ ಅನನ್ಯಾ ಭಟ್ ಎಂಬ ಮಗಳೇ ಇರಲಿಲ್ಲ ಎಂಬ ಹೇಳಿಕೆ ಕೊಡಿಸಿದರು. ಅನನ್ಯಾ ಭಟ್ ಕಥೆ ಹೆಣೆಯಲು ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ಮತ್ತು ಜಯಂತ್ ಟಿ ನನ್ನನ್ನು ಪ್ರಚೋದಿಸಿದರು ಎಂದು ಬಲವಂತವಾಗಿ ಹೇಳಿಸಿದರು. ಇದು ಈ ರೀತಿ ಚಾನೆಲ್‌ನಲ್ಲಿ ಬರುತ್ತದೆ ಎಂದು ನನಗೆ ಗೊತ್ತಿರಲಿಲ್ಲ. ನಾನು ಎಸ್‌ಐಟಿ ಮುಂದೆ ಹೋಗಿ ಎಲ್ಲಾ ವಿಷಯವನ್ನು ಹೇಳುತ್ತೇನೆ. ದಯವಿಟ್ಟು ಅಲ್ಲಿಯವರೆಗೆ ನನಗೆ ಸಮಯ ಕೊಡಿ ಎಂದಿದ್ದಾರೆ.

ನನ್ನನ್ನು ಕತ್ರಿಗುಪ್ಪೆ ಕಾಮಾಕ್ಯ ರಸ್ತೆಯಲ್ಲಿ ಕರೆದುಕೊಂಡು ಹೋಗಿ, ಎಲ್ಲೋ ಒಳ ರಸ್ತೆಯಲ್ಲಿ ಕಾರಿನೊಳಗೆ ಕೂರಿಸಿ ನನ್ನಿಂದ ಹೇಳಿಕೆ ಪಡೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ. ಇನ್ನೊಂದು ವಾಹಿನಿಯವರ ಜೊತೆಯೂ ನೀವು ಅನನ್ಯಾ ಭಟ್ ಇಲ್ಲ ಎಂಬ ಹೇಳಿಕೆ ಕೊಟ್ಟಿದ್ದೀರಲ್ವಾ? ಎಂದು ಸುದ್ದಿವಾಹಿನಿ ವರದಿಗಾರ ಕೇಳಿದಾಗ, ಆ ವಾಹಿನಿಯವರು ಕೂಡ ನನ್ನಿಂದ ಬಲವಂತವಾಗಿ ಹೇಳಿಕೆ ಕೊಡಿಸಿದ್ದಾರೆ ಎಂದಿದ್ದಾರೆ.

ನಾನು ಮೊದಲು ಎಸ್‌ಐಟಿ ಮುಂದೆ ಹೇಳಿಕೆ ಕೊಡುತ್ತೇನೆ. ಆ ಬಳಿಕ ಮಾಧ್ಯಮಗಳ ಮುಂದೆ ಮಾತನಾಡುತ್ತೇನೆ. ದಯವಿಟ್ಟು ನನ್ನನ್ನು ಬಿಟ್ಟುಬಿಡಿ. ನಾನು ಇನ್ನು ಎಸ್‌ಐಟಿ ಮುಂದೆಯೇ ಹೇಳಿಕೆ ಕೊಡುತ್ತೇನೆ. ಎಸ್‌ಐಟಿಯವರು ಮಾಧ್ಯಮಗಳಿಗೆ ಹೇಳಿಕೆ ಕೊಡದಂತೆ ಸೂಚಿಸಿದ್ದಾರೆ. ನನ್ನಿಂದ ಬಲವಂತವಾಗಿ ಹೇಳಿಕೆ ಕೊಡಿಸಿದ ಬಗ್ಗೆ ನನ್ನ ವಕೀಲರ ಜೊತೆ ಮಾತನಾಡಿದ್ದೇನೆ. ಅವರು ಎಸ್‌ಐಟಿ ಮುಂದೆ ಹೋಗೋಣ ಎಂದಿದ್ದಾರೆ. ಹಾಗಾಗಿ, ನಾನು ಎಸ್ಐಟಿ ಮುಂದೆ ಎಲ್ಲವನ್ನೂ ಹೇಳುತ್ತೇನೆ ಎಂದು ಸುಜಾತಾ ಭಟ್ ತಿಳಿಸಿದ್ದಾರೆ.

2003ರಲ್ಲಿ ಸ್ನೇಹಿತೆಯರ ಜೊತೆ ಧರ್ಮಸ್ಥಳಕ್ಕೆ ತೆರಳಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆಯಾಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ತಾಯಿ ಸುಜಾತಾ ಭಟ್ 2025ರ ಜುಲೈ 15ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.  

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು, “ಮಗಳ ನಾಪತ್ತೆ ಬಗ್ಗೆ ಈ ಹಿಂದೆ ಬೆಳ್ತಂಗಡಿ ಪೊಲೀಸರಿಗೆ ದೂರು ಕೊಟ್ಟಿದ್ದರೂ ನನಗೆ ನ್ಯಾಯ ಸಿಕ್ಕಿಲ್ಲ. ಈಗ ಅನಾಮಿಕ ಕೊಟ್ಟ ದೂರಿನಂತೆ ಎಸ್‌ಐಟಿ ತನಿಖೆ ನಡೆಯುತ್ತಿರುವುದರಿಂದ ನನಗೆ ಆಶಾ ಭಾವನೆ ಮೂಡಿದೆ. ಎಸ್‌ಐಟಿಯವರು ನನ್ನ ಮಗಳ ನಾಪತ್ತೆ ಪ್ರಕರಣವನ್ನೂ ಬೇಧಿಸಿ, ಅವಳ ಅಸ್ತಿ ಹುಡುಕಿ ಕೊಟ್ಟರೆ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡುತ್ತೇನೆ” ಎಂದಿದ್ದರು.

ಸುಜಾತಾ ಭಟ್ ಅವರ ಸಂಪೂರ್ಣ ಹೇಳಿಕೆಯ ಲಿಂಕ್ ಇಲ್ಲಿದೆ

ಅನನ್ಯಾ ಭಟ್ ನಾಪತ್ತೆ ದೂರು ಧರ್ಮಸ್ಥಳ ಠಾಣೆಯಿಂದ ಆಗಸ್ಟ್ 20, 2025ರಂದು ಎಸ್‌ಐಟಿಗೆ ವರ್ಗಾವಣೆಯಾಗಿದೆ. ಎಸ್‌ಐಟಿಯವರು ವಿಚಾರಣೆಗೆ ಹಾಜರಾಗುವಂತೆ ಸುಜಾತಾ ಭಟ್ ಅವರಿಗೆ ನೋಟಿಸ್ ನೀಡಿದ್ದಾರೆ ಎಂದು ವರದಿಯಾಗಿದೆ.

ಈ ನಡುವೆ ಸುದ್ದಿ ವಾಹಿನಿಯೊಂದು ಸುಜಾತಾ ಭಟ್ ಅವರಿಗೆ ಅನನ್ಯಾ ಭಟ್ ಎಂಬ ಮಗಳೇ ಇರಲಿಲ್ಲ ಎಂದು ನಿರಂತರ ಸುದ್ದಿ ಪ್ರಕಟಿಸಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಸುಜಾತಾ ಭಟ್, ಯುವತಿಯೊಬ್ಬರ ಫೋಟೋ ಬಿಡುಗಡೆ ಮಾಡಿ, “ಇದೇ ಅನನ್ಯಾ ಭಟ್” ಎಂದಿದ್ದರು. ಆದರೆ, ಸುದ್ದಿವಾಹಿನಿ ಮತ್ತು ಕೆಲ ಯೂಟ್ಯೂಬ್ ಚಾನೆಲ್‌ಗಳು ಆ ಫೋಟೋ ನಕಲಿ ಎಂದು ಆರೋಪಿಸಿತ್ತು. ವಾಸಂತಿ ಎನ್ನುವವರ ಫೋಟೋವನ್ನು ಯೂಟ್ಯೂಬರ್ ಸಮೀರ್ ಎಐ ಮೂಲಕ ಬದಲಾಯಿಸಿ ಅನನ್ಯಾ ಭಟ್ ಎಂದು ಬಿಂಬಿಸಿದ್ದಾರೆ ಎಂದಿತ್ತು.

ಸುಜಾತಾ ಭಟ್ ಅವರಿಗೆ ಅನನ್ಯಾ ಎಂಬ ಮಗಳೇ ಇರಲಿಲ್ಲ ಎಂಬುವುದಕ್ಕೆ ಸುದ್ದಿವಾಹಿನಿ, ಸುಜಾತಾ ಭಟ್ ಸಂಬಂಧಿಕರು ಎನ್ನಲಾದ ಕೆಲ ವ್ಯಕ್ತಿಗಳಿಂದ ಹೇಳಿಕೆಯನ್ನೂ ಪಡೆದಿತ್ತು. ಇದನ್ನು ಗಮನಿಸಿದ ಜನರು ಸುಜಾತಾ ಭಟ್ ಆರೋಪ ನಿಜವೋ, ಸುಳ್ಳೋ ಎಂಬ ಗೊಂದಲಕ್ಕೀಡಾಗಿದ್ದರು.

ಈ ಬೆನ್ನಲ್ಲೇ ‘ಇನ್‌ಸೈಟ್‌ರಶ್’ ಯೂಟ್ಯೂಬ್ ಚಾನೆಲ್‌ಗೆ ಸುಜಾತಾ ಭಟ್ ನೀಡಿದ್ದ ಹೇಳಿಕೆ ಸಂಚಲನ ಸೃಷ್ಟಿಸಿತ್ತು. ಇದಾಗಿ, ಗಂಟೆಯೊಳಗೆ “ನನ್ನಿಂದ ಬಲವಂತವಾಗಿ ಹೇಳಿಕೆ ಕೊಡಿಸಲಾಗಿದೆ” ಎಂಬ ಸುಜಾತಾ ಮಾತು ಜನರಲ್ಲಿ ಗೊಂದಲ ಉಂಟು ಮಾಡಿದೆ. ಹಾಗಾಗಿ, ಅನನ್ಯಾ ಭಟ್ ಪ್ರಕರಣದ ಸತ್ಯಾಸತ್ಯತೆ ಎಸ್‌ಐಟಿ ತನಿಖೆಯಿಂದಲೇ ಬಯಲಾಗಬೇಕಿದೆ.

15 ದಿನದಿಂದ ‘ಮಾರ್ವಾಡಿ ಗೋ ಬ್ಯಾಕ್’ ಪ್ರತಿಭಟನೆಗಳು: ಹೈದರಾಬಾದ್‌ನಲ್ಲಿ ಹೆಚ್ಚಿದ ಉದ್ವಿಗ್ನತೆ, ಪೊಲೀಸರು ಹೈ ಅಲರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...