Homeಕರ್ನಾಟಕಹೇಳಿಕೆ ಬದಲಿಸುತ್ತಿರುವ ಸುಜಾತಾ ಭಟ್: ಅನನ್ಯಾ ಭಟ್ ಪ್ರಕರಣದ ಸುತ್ತ ಹಲವು ಗೊಂದಲ

ಹೇಳಿಕೆ ಬದಲಿಸುತ್ತಿರುವ ಸುಜಾತಾ ಭಟ್: ಅನನ್ಯಾ ಭಟ್ ಪ್ರಕರಣದ ಸುತ್ತ ಹಲವು ಗೊಂದಲ

- Advertisement -
- Advertisement -

ಧರ್ಮಸ್ಥಳಕ್ಕೆ ತೆರಳಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆಯಾಗಿದ್ದಾರೆ ಎಂಬ ಪ್ರಕರಣದ ಸುತ್ತ ಗೊಂದಲ ಸೃಷ್ಟಿಯಾಗಿದೆ. ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಅವರ ಹೇಳಿಕೆಗಳು ಈ ಗೊಂದಲಗಳಿಗೆ ಕಾರಣವಾಗಿದೆ.

ಶುಕ್ರವಾರ (ಆ.22) ‘ಇನ್‌ಸೈಟ್‌ರಶ್’ ಎಂಬ ಯೂಟ್ಯೂಬ್ ಚಾನೆಲ್ ಅಪ್ಲೋಡ್ ಮಾಡಿದ್ದ ವಿಡಿಯೋದಲ್ಲಿ ಮಾತನಾಡಿದ ಸುಜಾತಾ ಭಟ್, “ಅನನ್ಯಾ ಭಟ್ ನನ್ನ ಮಗಳು ಎನ್ನುವುದು ಸುಳ್ಳು. ನನಗೆ ಅನನ್ಯಾ ಭಟ್ ಎಂಬ ಮಗಳೇ ಇರಲಿಲ್ಲ. ಕೆಲ ವ್ಯಕ್ತಿಗಳು ಆ ರೀತಿ ಹೇಳುವಂತೆ ಒತ್ತಡ ಹೇರಿದ್ದರಿಂದ ನಾನು ಸುಳ್ಳು ಕಥೆ ಹೆಣೆದೆ ಎಂದು ಸ್ಪಷ್ಟಪಡಿಸಿದ್ದರು. ಆ ವ್ಯಕ್ತಿಗಳು ಯಾರು ಎಂದು ವರದಿಗಾರ್ತಿ ಕೇಳಿದಾಗ, ಗಿರೀಶ್ ಮಟ್ಟಣ್ಣವರ್ ಮತ್ತು ಜಯಂತ್ ಟಿ ಎಂದು ಹೆಸರು ಹೇಳಿದ್ದರು.

ಮುಂದುರಿದು, ಆಸ್ತಿ ವಿವಾದ ಇತ್ತು ಅದಕ್ಕೆ ನಾನು ಅನನ್ಯಾ ಭಟ್ ಕಥೆ ಹೇಳಿದೆ. ನನ್ನ ಅಜ್ಜನ ಆಸ್ತಿಯನ್ನು ದಾನವಾಗಿ ದೇವಸ್ಥಾನಕ್ಕೆ ಕೊಡುವಾಗ ಮೊಮ್ಮಗಳಾದ ನನ್ನ ಸಹಿ ತೆಗೆದುಕೊಳ್ಳಬೇಕಿತ್ತು. ನನಗೆ ಹಕ್ಕಿದೆ, ಆದರೆ ಹಾಗೆ ಮಾಡದೆ ದಾನವಾಗಿ ನಮ್ಮ ತಾತನ ಜಮೀನನ್ನು ಧರ್ಮಸ್ಥಳಕ್ಕೆ ಬರೆದುಕೊಟ್ಟರು. ನನ್ನನ್ನು ಸತ್ತಂತೆ ಪರಿಗಣಿಸಿದರು. ಅದು ನನಗೆ ತುಂಬಾ ನೋವು ಕೊಟ್ಟಿತು. ಹಾಗಾಗಿ ಅವರು ಹೇಳಿದಂತೆ ಮಾಡಿದ್ದೇನೆ. ನಾನು ತೋರಿಸಿರುವ ಫೋಟೋ ಎಲ್ಲವೂ ನಕಲಿ. ನಾನು ಧರ್ಮಸ್ಥಳ ಕ್ಷೇತ್ರ ಅಥವಾ ಅಲ್ಲಿನ ಯಾವುದೇ ವ್ಯಕ್ತಿ ವಿರುದ್ಧ ದೂರು ಕೊಟ್ಟಿಲ್ಲ, ಧರ್ಮಸ್ಥಳ ಗ್ರಾಮದಲ್ಲಿ ಎಂದು ದೂರು ಕೊಟ್ಟಿದ್ದೆ ಎಂದಿದ್ದರು.

ನನಗೆ ಈ ಕುರಿತು ಯಾರೂ ಹಣದ ಆಮಿಷ ಒಡ್ಡಿಲ್ಲ. ಕೇವಲ ಒಂದು ಬಾರಿಯಷ್ಟೇ ಅವರನ್ನು ಭೇಟಿಯಾಗಿದ್ದೇನೆ. ಮಗಳ ಕಥೆ ಹೇಳಿ ಎಂದು ಹೇಳಿಕೊಟ್ಟರು. ನನ್ನ ತಲೆಗೆ ತುರುಕಿದರು. ಅದರಂತೆ ಹೇಳಿದ್ದೇನೆ. ಆದರೆ, ಅದು ಈ ಮಟ್ಟಕ್ಕೆ ಹೋಗುತ್ತದೆ, ಇಷ್ಟೊಂದು ತೇಜೋವಧೆ ಆಗುತ್ತದೆ ಎಂದು ಯಾವತ್ತೂ ಭಾವಿಸಿರಲಿಲ್ಲ. ನಾನು ಲೀವಿಂಗ್ ಟುಗೆದರ್‌ನಲ್ಲಿ ಇದ್ದದ್ದು ನಿಜ. ಆದರೆ, ಆ ವ್ಯಕ್ತಿಯನ್ನು (ಸಂಗಾತಿಯನ್ನು) ನಾನೇ ದುಡಿದು ಸಾಕಿದ್ದೇನೆ. ಯಾರ ಮುಂದೆಯೂ ಕೈಚಾಚಿದವಳು ಅಲ್ಲ ಎಂದು ಸುಜಾತಾ ಭಟ್ ಅವರು ಹೇಳಿದ್ದರು.

ಈ ಹೇಳಿಕೆಯ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಬೆಂಗಳೂರಿನ ಮನೆಯಿಂದ ಸುದ್ದಿ ವಾಹಿನಿಗಳ ಜೊತೆ ಮಾತನಾಡಿದ ಸುಜಾತಾ ಭಟ್, “ಇವತ್ತು ಸಂಜೆ 5 ಗಂಟೆಗೆ ಒಬ್ಬರು ವಕೀಲರು ಬಂದು ನನ್ನನ್ನು ಕರೆದುಕೊಂಡು ಹೋಗಿ ಯೂಟ್ಯೂಬ್ ಚಾನೆಲ್‌ ಜೊತೆ ಮಾತನಾಡಿಸಿದರು. ಅವರ ಕಾರಿನಲ್ಲಿ ನನ್ನನ್ನು ಕೂರಿಸಿಕೊಂಡು ನನಗೆ ಅನನ್ಯಾ ಭಟ್ ಎಂಬ ಮಗಳೇ ಇರಲಿಲ್ಲ ಎಂಬ ಹೇಳಿಕೆ ಕೊಡಿಸಿದರು. ಅನನ್ಯಾ ಭಟ್ ಕಥೆ ಹೆಣೆಯಲು ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ಮತ್ತು ಜಯಂತ್ ಟಿ ನನ್ನನ್ನು ಪ್ರಚೋದಿಸಿದರು ಎಂದು ಬಲವಂತವಾಗಿ ಹೇಳಿಸಿದರು. ಇದು ಈ ರೀತಿ ಚಾನೆಲ್‌ನಲ್ಲಿ ಬರುತ್ತದೆ ಎಂದು ನನಗೆ ಗೊತ್ತಿರಲಿಲ್ಲ. ನಾನು ಎಸ್‌ಐಟಿ ಮುಂದೆ ಹೋಗಿ ಎಲ್ಲಾ ವಿಷಯವನ್ನು ಹೇಳುತ್ತೇನೆ. ದಯವಿಟ್ಟು ಅಲ್ಲಿಯವರೆಗೆ ನನಗೆ ಸಮಯ ಕೊಡಿ ಎಂದಿದ್ದಾರೆ.

ನನ್ನನ್ನು ಕತ್ರಿಗುಪ್ಪೆ ಕಾಮಾಕ್ಯ ರಸ್ತೆಯಲ್ಲಿ ಕರೆದುಕೊಂಡು ಹೋಗಿ, ಎಲ್ಲೋ ಒಳ ರಸ್ತೆಯಲ್ಲಿ ಕಾರಿನೊಳಗೆ ಕೂರಿಸಿ ನನ್ನಿಂದ ಹೇಳಿಕೆ ಪಡೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ. ಇನ್ನೊಂದು ವಾಹಿನಿಯವರ ಜೊತೆಯೂ ನೀವು ಅನನ್ಯಾ ಭಟ್ ಇಲ್ಲ ಎಂಬ ಹೇಳಿಕೆ ಕೊಟ್ಟಿದ್ದೀರಲ್ವಾ? ಎಂದು ಸುದ್ದಿವಾಹಿನಿ ವರದಿಗಾರ ಕೇಳಿದಾಗ, ಆ ವಾಹಿನಿಯವರು ಕೂಡ ನನ್ನಿಂದ ಬಲವಂತವಾಗಿ ಹೇಳಿಕೆ ಕೊಡಿಸಿದ್ದಾರೆ ಎಂದಿದ್ದಾರೆ.

ನಾನು ಮೊದಲು ಎಸ್‌ಐಟಿ ಮುಂದೆ ಹೇಳಿಕೆ ಕೊಡುತ್ತೇನೆ. ಆ ಬಳಿಕ ಮಾಧ್ಯಮಗಳ ಮುಂದೆ ಮಾತನಾಡುತ್ತೇನೆ. ದಯವಿಟ್ಟು ನನ್ನನ್ನು ಬಿಟ್ಟುಬಿಡಿ. ನಾನು ಇನ್ನು ಎಸ್‌ಐಟಿ ಮುಂದೆಯೇ ಹೇಳಿಕೆ ಕೊಡುತ್ತೇನೆ. ಎಸ್‌ಐಟಿಯವರು ಮಾಧ್ಯಮಗಳಿಗೆ ಹೇಳಿಕೆ ಕೊಡದಂತೆ ಸೂಚಿಸಿದ್ದಾರೆ. ನನ್ನಿಂದ ಬಲವಂತವಾಗಿ ಹೇಳಿಕೆ ಕೊಡಿಸಿದ ಬಗ್ಗೆ ನನ್ನ ವಕೀಲರ ಜೊತೆ ಮಾತನಾಡಿದ್ದೇನೆ. ಅವರು ಎಸ್‌ಐಟಿ ಮುಂದೆ ಹೋಗೋಣ ಎಂದಿದ್ದಾರೆ. ಹಾಗಾಗಿ, ನಾನು ಎಸ್ಐಟಿ ಮುಂದೆ ಎಲ್ಲವನ್ನೂ ಹೇಳುತ್ತೇನೆ ಎಂದು ಸುಜಾತಾ ಭಟ್ ತಿಳಿಸಿದ್ದಾರೆ.

2003ರಲ್ಲಿ ಸ್ನೇಹಿತೆಯರ ಜೊತೆ ಧರ್ಮಸ್ಥಳಕ್ಕೆ ತೆರಳಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆಯಾಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ತಾಯಿ ಸುಜಾತಾ ಭಟ್ 2025ರ ಜುಲೈ 15ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.  

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು, “ಮಗಳ ನಾಪತ್ತೆ ಬಗ್ಗೆ ಈ ಹಿಂದೆ ಬೆಳ್ತಂಗಡಿ ಪೊಲೀಸರಿಗೆ ದೂರು ಕೊಟ್ಟಿದ್ದರೂ ನನಗೆ ನ್ಯಾಯ ಸಿಕ್ಕಿಲ್ಲ. ಈಗ ಅನಾಮಿಕ ಕೊಟ್ಟ ದೂರಿನಂತೆ ಎಸ್‌ಐಟಿ ತನಿಖೆ ನಡೆಯುತ್ತಿರುವುದರಿಂದ ನನಗೆ ಆಶಾ ಭಾವನೆ ಮೂಡಿದೆ. ಎಸ್‌ಐಟಿಯವರು ನನ್ನ ಮಗಳ ನಾಪತ್ತೆ ಪ್ರಕರಣವನ್ನೂ ಬೇಧಿಸಿ, ಅವಳ ಅಸ್ತಿ ಹುಡುಕಿ ಕೊಟ್ಟರೆ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡುತ್ತೇನೆ” ಎಂದಿದ್ದರು.

ಸುಜಾತಾ ಭಟ್ ಅವರ ಸಂಪೂರ್ಣ ಹೇಳಿಕೆಯ ಲಿಂಕ್ ಇಲ್ಲಿದೆ

ಅನನ್ಯಾ ಭಟ್ ನಾಪತ್ತೆ ದೂರು ಧರ್ಮಸ್ಥಳ ಠಾಣೆಯಿಂದ ಆಗಸ್ಟ್ 20, 2025ರಂದು ಎಸ್‌ಐಟಿಗೆ ವರ್ಗಾವಣೆಯಾಗಿದೆ. ಎಸ್‌ಐಟಿಯವರು ವಿಚಾರಣೆಗೆ ಹಾಜರಾಗುವಂತೆ ಸುಜಾತಾ ಭಟ್ ಅವರಿಗೆ ನೋಟಿಸ್ ನೀಡಿದ್ದಾರೆ ಎಂದು ವರದಿಯಾಗಿದೆ.

ಈ ನಡುವೆ ಸುದ್ದಿ ವಾಹಿನಿಯೊಂದು ಸುಜಾತಾ ಭಟ್ ಅವರಿಗೆ ಅನನ್ಯಾ ಭಟ್ ಎಂಬ ಮಗಳೇ ಇರಲಿಲ್ಲ ಎಂದು ನಿರಂತರ ಸುದ್ದಿ ಪ್ರಕಟಿಸಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಸುಜಾತಾ ಭಟ್, ಯುವತಿಯೊಬ್ಬರ ಫೋಟೋ ಬಿಡುಗಡೆ ಮಾಡಿ, “ಇದೇ ಅನನ್ಯಾ ಭಟ್” ಎಂದಿದ್ದರು. ಆದರೆ, ಸುದ್ದಿವಾಹಿನಿ ಮತ್ತು ಕೆಲ ಯೂಟ್ಯೂಬ್ ಚಾನೆಲ್‌ಗಳು ಆ ಫೋಟೋ ನಕಲಿ ಎಂದು ಆರೋಪಿಸಿತ್ತು. ವಾಸಂತಿ ಎನ್ನುವವರ ಫೋಟೋವನ್ನು ಯೂಟ್ಯೂಬರ್ ಸಮೀರ್ ಎಐ ಮೂಲಕ ಬದಲಾಯಿಸಿ ಅನನ್ಯಾ ಭಟ್ ಎಂದು ಬಿಂಬಿಸಿದ್ದಾರೆ ಎಂದಿತ್ತು.

ಸುಜಾತಾ ಭಟ್ ಅವರಿಗೆ ಅನನ್ಯಾ ಎಂಬ ಮಗಳೇ ಇರಲಿಲ್ಲ ಎಂಬುವುದಕ್ಕೆ ಸುದ್ದಿವಾಹಿನಿ, ಸುಜಾತಾ ಭಟ್ ಸಂಬಂಧಿಕರು ಎನ್ನಲಾದ ಕೆಲ ವ್ಯಕ್ತಿಗಳಿಂದ ಹೇಳಿಕೆಯನ್ನೂ ಪಡೆದಿತ್ತು. ಇದನ್ನು ಗಮನಿಸಿದ ಜನರು ಸುಜಾತಾ ಭಟ್ ಆರೋಪ ನಿಜವೋ, ಸುಳ್ಳೋ ಎಂಬ ಗೊಂದಲಕ್ಕೀಡಾಗಿದ್ದರು.

ಈ ಬೆನ್ನಲ್ಲೇ ‘ಇನ್‌ಸೈಟ್‌ರಶ್’ ಯೂಟ್ಯೂಬ್ ಚಾನೆಲ್‌ಗೆ ಸುಜಾತಾ ಭಟ್ ನೀಡಿದ್ದ ಹೇಳಿಕೆ ಸಂಚಲನ ಸೃಷ್ಟಿಸಿತ್ತು. ಇದಾಗಿ, ಗಂಟೆಯೊಳಗೆ “ನನ್ನಿಂದ ಬಲವಂತವಾಗಿ ಹೇಳಿಕೆ ಕೊಡಿಸಲಾಗಿದೆ” ಎಂಬ ಸುಜಾತಾ ಮಾತು ಜನರಲ್ಲಿ ಗೊಂದಲ ಉಂಟು ಮಾಡಿದೆ. ಹಾಗಾಗಿ, ಅನನ್ಯಾ ಭಟ್ ಪ್ರಕರಣದ ಸತ್ಯಾಸತ್ಯತೆ ಎಸ್‌ಐಟಿ ತನಿಖೆಯಿಂದಲೇ ಬಯಲಾಗಬೇಕಿದೆ.

15 ದಿನದಿಂದ ‘ಮಾರ್ವಾಡಿ ಗೋ ಬ್ಯಾಕ್’ ಪ್ರತಿಭಟನೆಗಳು: ಹೈದರಾಬಾದ್‌ನಲ್ಲಿ ಹೆಚ್ಚಿದ ಉದ್ವಿಗ್ನತೆ, ಪೊಲೀಸರು ಹೈ ಅಲರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...