Homeಕರ್ನಾಟಕಹೇಳಿಕೆ ಬದಲಿಸುತ್ತಿರುವ ಸುಜಾತಾ ಭಟ್: ಅನನ್ಯಾ ಭಟ್ ಪ್ರಕರಣದ ಸುತ್ತ ಹಲವು ಗೊಂದಲ

ಹೇಳಿಕೆ ಬದಲಿಸುತ್ತಿರುವ ಸುಜಾತಾ ಭಟ್: ಅನನ್ಯಾ ಭಟ್ ಪ್ರಕರಣದ ಸುತ್ತ ಹಲವು ಗೊಂದಲ

- Advertisement -
- Advertisement -

ಧರ್ಮಸ್ಥಳಕ್ಕೆ ತೆರಳಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆಯಾಗಿದ್ದಾರೆ ಎಂಬ ಪ್ರಕರಣದ ಸುತ್ತ ಗೊಂದಲ ಸೃಷ್ಟಿಯಾಗಿದೆ. ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಅವರ ಹೇಳಿಕೆಗಳು ಈ ಗೊಂದಲಗಳಿಗೆ ಕಾರಣವಾಗಿದೆ.

ಶುಕ್ರವಾರ (ಆ.22) ‘ಇನ್‌ಸೈಟ್‌ರಶ್’ ಎಂಬ ಯೂಟ್ಯೂಬ್ ಚಾನೆಲ್ ಅಪ್ಲೋಡ್ ಮಾಡಿದ್ದ ವಿಡಿಯೋದಲ್ಲಿ ಮಾತನಾಡಿದ ಸುಜಾತಾ ಭಟ್, “ಅನನ್ಯಾ ಭಟ್ ನನ್ನ ಮಗಳು ಎನ್ನುವುದು ಸುಳ್ಳು. ನನಗೆ ಅನನ್ಯಾ ಭಟ್ ಎಂಬ ಮಗಳೇ ಇರಲಿಲ್ಲ. ಕೆಲ ವ್ಯಕ್ತಿಗಳು ಆ ರೀತಿ ಹೇಳುವಂತೆ ಒತ್ತಡ ಹೇರಿದ್ದರಿಂದ ನಾನು ಸುಳ್ಳು ಕಥೆ ಹೆಣೆದೆ ಎಂದು ಸ್ಪಷ್ಟಪಡಿಸಿದ್ದರು. ಆ ವ್ಯಕ್ತಿಗಳು ಯಾರು ಎಂದು ವರದಿಗಾರ್ತಿ ಕೇಳಿದಾಗ, ಗಿರೀಶ್ ಮಟ್ಟಣ್ಣವರ್ ಮತ್ತು ಜಯಂತ್ ಟಿ ಎಂದು ಹೆಸರು ಹೇಳಿದ್ದರು.

ಮುಂದುರಿದು, ಆಸ್ತಿ ವಿವಾದ ಇತ್ತು ಅದಕ್ಕೆ ನಾನು ಅನನ್ಯಾ ಭಟ್ ಕಥೆ ಹೇಳಿದೆ. ನನ್ನ ಅಜ್ಜನ ಆಸ್ತಿಯನ್ನು ದಾನವಾಗಿ ದೇವಸ್ಥಾನಕ್ಕೆ ಕೊಡುವಾಗ ಮೊಮ್ಮಗಳಾದ ನನ್ನ ಸಹಿ ತೆಗೆದುಕೊಳ್ಳಬೇಕಿತ್ತು. ನನಗೆ ಹಕ್ಕಿದೆ, ಆದರೆ ಹಾಗೆ ಮಾಡದೆ ದಾನವಾಗಿ ನಮ್ಮ ತಾತನ ಜಮೀನನ್ನು ಧರ್ಮಸ್ಥಳಕ್ಕೆ ಬರೆದುಕೊಟ್ಟರು. ನನ್ನನ್ನು ಸತ್ತಂತೆ ಪರಿಗಣಿಸಿದರು. ಅದು ನನಗೆ ತುಂಬಾ ನೋವು ಕೊಟ್ಟಿತು. ಹಾಗಾಗಿ ಅವರು ಹೇಳಿದಂತೆ ಮಾಡಿದ್ದೇನೆ. ನಾನು ತೋರಿಸಿರುವ ಫೋಟೋ ಎಲ್ಲವೂ ನಕಲಿ. ನಾನು ಧರ್ಮಸ್ಥಳ ಕ್ಷೇತ್ರ ಅಥವಾ ಅಲ್ಲಿನ ಯಾವುದೇ ವ್ಯಕ್ತಿ ವಿರುದ್ಧ ದೂರು ಕೊಟ್ಟಿಲ್ಲ, ಧರ್ಮಸ್ಥಳ ಗ್ರಾಮದಲ್ಲಿ ಎಂದು ದೂರು ಕೊಟ್ಟಿದ್ದೆ ಎಂದಿದ್ದರು.

ನನಗೆ ಈ ಕುರಿತು ಯಾರೂ ಹಣದ ಆಮಿಷ ಒಡ್ಡಿಲ್ಲ. ಕೇವಲ ಒಂದು ಬಾರಿಯಷ್ಟೇ ಅವರನ್ನು ಭೇಟಿಯಾಗಿದ್ದೇನೆ. ಮಗಳ ಕಥೆ ಹೇಳಿ ಎಂದು ಹೇಳಿಕೊಟ್ಟರು. ನನ್ನ ತಲೆಗೆ ತುರುಕಿದರು. ಅದರಂತೆ ಹೇಳಿದ್ದೇನೆ. ಆದರೆ, ಅದು ಈ ಮಟ್ಟಕ್ಕೆ ಹೋಗುತ್ತದೆ, ಇಷ್ಟೊಂದು ತೇಜೋವಧೆ ಆಗುತ್ತದೆ ಎಂದು ಯಾವತ್ತೂ ಭಾವಿಸಿರಲಿಲ್ಲ. ನಾನು ಲೀವಿಂಗ್ ಟುಗೆದರ್‌ನಲ್ಲಿ ಇದ್ದದ್ದು ನಿಜ. ಆದರೆ, ಆ ವ್ಯಕ್ತಿಯನ್ನು (ಸಂಗಾತಿಯನ್ನು) ನಾನೇ ದುಡಿದು ಸಾಕಿದ್ದೇನೆ. ಯಾರ ಮುಂದೆಯೂ ಕೈಚಾಚಿದವಳು ಅಲ್ಲ ಎಂದು ಸುಜಾತಾ ಭಟ್ ಅವರು ಹೇಳಿದ್ದರು.

ಈ ಹೇಳಿಕೆಯ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಬೆಂಗಳೂರಿನ ಮನೆಯಿಂದ ಸುದ್ದಿ ವಾಹಿನಿಗಳ ಜೊತೆ ಮಾತನಾಡಿದ ಸುಜಾತಾ ಭಟ್, “ಇವತ್ತು ಸಂಜೆ 5 ಗಂಟೆಗೆ ಒಬ್ಬರು ವಕೀಲರು ಬಂದು ನನ್ನನ್ನು ಕರೆದುಕೊಂಡು ಹೋಗಿ ಯೂಟ್ಯೂಬ್ ಚಾನೆಲ್‌ ಜೊತೆ ಮಾತನಾಡಿಸಿದರು. ಅವರ ಕಾರಿನಲ್ಲಿ ನನ್ನನ್ನು ಕೂರಿಸಿಕೊಂಡು ನನಗೆ ಅನನ್ಯಾ ಭಟ್ ಎಂಬ ಮಗಳೇ ಇರಲಿಲ್ಲ ಎಂಬ ಹೇಳಿಕೆ ಕೊಡಿಸಿದರು. ಅನನ್ಯಾ ಭಟ್ ಕಥೆ ಹೆಣೆಯಲು ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ಮತ್ತು ಜಯಂತ್ ಟಿ ನನ್ನನ್ನು ಪ್ರಚೋದಿಸಿದರು ಎಂದು ಬಲವಂತವಾಗಿ ಹೇಳಿಸಿದರು. ಇದು ಈ ರೀತಿ ಚಾನೆಲ್‌ನಲ್ಲಿ ಬರುತ್ತದೆ ಎಂದು ನನಗೆ ಗೊತ್ತಿರಲಿಲ್ಲ. ನಾನು ಎಸ್‌ಐಟಿ ಮುಂದೆ ಹೋಗಿ ಎಲ್ಲಾ ವಿಷಯವನ್ನು ಹೇಳುತ್ತೇನೆ. ದಯವಿಟ್ಟು ಅಲ್ಲಿಯವರೆಗೆ ನನಗೆ ಸಮಯ ಕೊಡಿ ಎಂದಿದ್ದಾರೆ.

ನನ್ನನ್ನು ಕತ್ರಿಗುಪ್ಪೆ ಕಾಮಾಕ್ಯ ರಸ್ತೆಯಲ್ಲಿ ಕರೆದುಕೊಂಡು ಹೋಗಿ, ಎಲ್ಲೋ ಒಳ ರಸ್ತೆಯಲ್ಲಿ ಕಾರಿನೊಳಗೆ ಕೂರಿಸಿ ನನ್ನಿಂದ ಹೇಳಿಕೆ ಪಡೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ. ಇನ್ನೊಂದು ವಾಹಿನಿಯವರ ಜೊತೆಯೂ ನೀವು ಅನನ್ಯಾ ಭಟ್ ಇಲ್ಲ ಎಂಬ ಹೇಳಿಕೆ ಕೊಟ್ಟಿದ್ದೀರಲ್ವಾ? ಎಂದು ಸುದ್ದಿವಾಹಿನಿ ವರದಿಗಾರ ಕೇಳಿದಾಗ, ಆ ವಾಹಿನಿಯವರು ಕೂಡ ನನ್ನಿಂದ ಬಲವಂತವಾಗಿ ಹೇಳಿಕೆ ಕೊಡಿಸಿದ್ದಾರೆ ಎಂದಿದ್ದಾರೆ.

ನಾನು ಮೊದಲು ಎಸ್‌ಐಟಿ ಮುಂದೆ ಹೇಳಿಕೆ ಕೊಡುತ್ತೇನೆ. ಆ ಬಳಿಕ ಮಾಧ್ಯಮಗಳ ಮುಂದೆ ಮಾತನಾಡುತ್ತೇನೆ. ದಯವಿಟ್ಟು ನನ್ನನ್ನು ಬಿಟ್ಟುಬಿಡಿ. ನಾನು ಇನ್ನು ಎಸ್‌ಐಟಿ ಮುಂದೆಯೇ ಹೇಳಿಕೆ ಕೊಡುತ್ತೇನೆ. ಎಸ್‌ಐಟಿಯವರು ಮಾಧ್ಯಮಗಳಿಗೆ ಹೇಳಿಕೆ ಕೊಡದಂತೆ ಸೂಚಿಸಿದ್ದಾರೆ. ನನ್ನಿಂದ ಬಲವಂತವಾಗಿ ಹೇಳಿಕೆ ಕೊಡಿಸಿದ ಬಗ್ಗೆ ನನ್ನ ವಕೀಲರ ಜೊತೆ ಮಾತನಾಡಿದ್ದೇನೆ. ಅವರು ಎಸ್‌ಐಟಿ ಮುಂದೆ ಹೋಗೋಣ ಎಂದಿದ್ದಾರೆ. ಹಾಗಾಗಿ, ನಾನು ಎಸ್ಐಟಿ ಮುಂದೆ ಎಲ್ಲವನ್ನೂ ಹೇಳುತ್ತೇನೆ ಎಂದು ಸುಜಾತಾ ಭಟ್ ತಿಳಿಸಿದ್ದಾರೆ.

2003ರಲ್ಲಿ ಸ್ನೇಹಿತೆಯರ ಜೊತೆ ಧರ್ಮಸ್ಥಳಕ್ಕೆ ತೆರಳಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆಯಾಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ತಾಯಿ ಸುಜಾತಾ ಭಟ್ 2025ರ ಜುಲೈ 15ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.  

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು, “ಮಗಳ ನಾಪತ್ತೆ ಬಗ್ಗೆ ಈ ಹಿಂದೆ ಬೆಳ್ತಂಗಡಿ ಪೊಲೀಸರಿಗೆ ದೂರು ಕೊಟ್ಟಿದ್ದರೂ ನನಗೆ ನ್ಯಾಯ ಸಿಕ್ಕಿಲ್ಲ. ಈಗ ಅನಾಮಿಕ ಕೊಟ್ಟ ದೂರಿನಂತೆ ಎಸ್‌ಐಟಿ ತನಿಖೆ ನಡೆಯುತ್ತಿರುವುದರಿಂದ ನನಗೆ ಆಶಾ ಭಾವನೆ ಮೂಡಿದೆ. ಎಸ್‌ಐಟಿಯವರು ನನ್ನ ಮಗಳ ನಾಪತ್ತೆ ಪ್ರಕರಣವನ್ನೂ ಬೇಧಿಸಿ, ಅವಳ ಅಸ್ತಿ ಹುಡುಕಿ ಕೊಟ್ಟರೆ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡುತ್ತೇನೆ” ಎಂದಿದ್ದರು.

ಸುಜಾತಾ ಭಟ್ ಅವರ ಸಂಪೂರ್ಣ ಹೇಳಿಕೆಯ ಲಿಂಕ್ ಇಲ್ಲಿದೆ

ಅನನ್ಯಾ ಭಟ್ ನಾಪತ್ತೆ ದೂರು ಧರ್ಮಸ್ಥಳ ಠಾಣೆಯಿಂದ ಆಗಸ್ಟ್ 20, 2025ರಂದು ಎಸ್‌ಐಟಿಗೆ ವರ್ಗಾವಣೆಯಾಗಿದೆ. ಎಸ್‌ಐಟಿಯವರು ವಿಚಾರಣೆಗೆ ಹಾಜರಾಗುವಂತೆ ಸುಜಾತಾ ಭಟ್ ಅವರಿಗೆ ನೋಟಿಸ್ ನೀಡಿದ್ದಾರೆ ಎಂದು ವರದಿಯಾಗಿದೆ.

ಈ ನಡುವೆ ಸುದ್ದಿ ವಾಹಿನಿಯೊಂದು ಸುಜಾತಾ ಭಟ್ ಅವರಿಗೆ ಅನನ್ಯಾ ಭಟ್ ಎಂಬ ಮಗಳೇ ಇರಲಿಲ್ಲ ಎಂದು ನಿರಂತರ ಸುದ್ದಿ ಪ್ರಕಟಿಸಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಸುಜಾತಾ ಭಟ್, ಯುವತಿಯೊಬ್ಬರ ಫೋಟೋ ಬಿಡುಗಡೆ ಮಾಡಿ, “ಇದೇ ಅನನ್ಯಾ ಭಟ್” ಎಂದಿದ್ದರು. ಆದರೆ, ಸುದ್ದಿವಾಹಿನಿ ಮತ್ತು ಕೆಲ ಯೂಟ್ಯೂಬ್ ಚಾನೆಲ್‌ಗಳು ಆ ಫೋಟೋ ನಕಲಿ ಎಂದು ಆರೋಪಿಸಿತ್ತು. ವಾಸಂತಿ ಎನ್ನುವವರ ಫೋಟೋವನ್ನು ಯೂಟ್ಯೂಬರ್ ಸಮೀರ್ ಎಐ ಮೂಲಕ ಬದಲಾಯಿಸಿ ಅನನ್ಯಾ ಭಟ್ ಎಂದು ಬಿಂಬಿಸಿದ್ದಾರೆ ಎಂದಿತ್ತು.

ಸುಜಾತಾ ಭಟ್ ಅವರಿಗೆ ಅನನ್ಯಾ ಎಂಬ ಮಗಳೇ ಇರಲಿಲ್ಲ ಎಂಬುವುದಕ್ಕೆ ಸುದ್ದಿವಾಹಿನಿ, ಸುಜಾತಾ ಭಟ್ ಸಂಬಂಧಿಕರು ಎನ್ನಲಾದ ಕೆಲ ವ್ಯಕ್ತಿಗಳಿಂದ ಹೇಳಿಕೆಯನ್ನೂ ಪಡೆದಿತ್ತು. ಇದನ್ನು ಗಮನಿಸಿದ ಜನರು ಸುಜಾತಾ ಭಟ್ ಆರೋಪ ನಿಜವೋ, ಸುಳ್ಳೋ ಎಂಬ ಗೊಂದಲಕ್ಕೀಡಾಗಿದ್ದರು.

ಈ ಬೆನ್ನಲ್ಲೇ ‘ಇನ್‌ಸೈಟ್‌ರಶ್’ ಯೂಟ್ಯೂಬ್ ಚಾನೆಲ್‌ಗೆ ಸುಜಾತಾ ಭಟ್ ನೀಡಿದ್ದ ಹೇಳಿಕೆ ಸಂಚಲನ ಸೃಷ್ಟಿಸಿತ್ತು. ಇದಾಗಿ, ಗಂಟೆಯೊಳಗೆ “ನನ್ನಿಂದ ಬಲವಂತವಾಗಿ ಹೇಳಿಕೆ ಕೊಡಿಸಲಾಗಿದೆ” ಎಂಬ ಸುಜಾತಾ ಮಾತು ಜನರಲ್ಲಿ ಗೊಂದಲ ಉಂಟು ಮಾಡಿದೆ. ಹಾಗಾಗಿ, ಅನನ್ಯಾ ಭಟ್ ಪ್ರಕರಣದ ಸತ್ಯಾಸತ್ಯತೆ ಎಸ್‌ಐಟಿ ತನಿಖೆಯಿಂದಲೇ ಬಯಲಾಗಬೇಕಿದೆ.

15 ದಿನದಿಂದ ‘ಮಾರ್ವಾಡಿ ಗೋ ಬ್ಯಾಕ್’ ಪ್ರತಿಭಟನೆಗಳು: ಹೈದರಾಬಾದ್‌ನಲ್ಲಿ ಹೆಚ್ಚಿದ ಉದ್ವಿಗ್ನತೆ, ಪೊಲೀಸರು ಹೈ ಅಲರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...