Homeಕರ್ನಾಟಕಹೇಳಿಕೆ ಬದಲಿಸುತ್ತಿರುವ ಸುಜಾತಾ ಭಟ್: ಅನನ್ಯಾ ಭಟ್ ಪ್ರಕರಣದ ಸುತ್ತ ಹಲವು ಗೊಂದಲ

ಹೇಳಿಕೆ ಬದಲಿಸುತ್ತಿರುವ ಸುಜಾತಾ ಭಟ್: ಅನನ್ಯಾ ಭಟ್ ಪ್ರಕರಣದ ಸುತ್ತ ಹಲವು ಗೊಂದಲ

- Advertisement -
- Advertisement -

ಧರ್ಮಸ್ಥಳಕ್ಕೆ ತೆರಳಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆಯಾಗಿದ್ದಾರೆ ಎಂಬ ಪ್ರಕರಣದ ಸುತ್ತ ಗೊಂದಲ ಸೃಷ್ಟಿಯಾಗಿದೆ. ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಅವರ ಹೇಳಿಕೆಗಳು ಈ ಗೊಂದಲಗಳಿಗೆ ಕಾರಣವಾಗಿದೆ.

ಶುಕ್ರವಾರ (ಆ.22) ‘ಇನ್‌ಸೈಟ್‌ರಶ್’ ಎಂಬ ಯೂಟ್ಯೂಬ್ ಚಾನೆಲ್ ಅಪ್ಲೋಡ್ ಮಾಡಿದ್ದ ವಿಡಿಯೋದಲ್ಲಿ ಮಾತನಾಡಿದ ಸುಜಾತಾ ಭಟ್, “ಅನನ್ಯಾ ಭಟ್ ನನ್ನ ಮಗಳು ಎನ್ನುವುದು ಸುಳ್ಳು. ನನಗೆ ಅನನ್ಯಾ ಭಟ್ ಎಂಬ ಮಗಳೇ ಇರಲಿಲ್ಲ. ಕೆಲ ವ್ಯಕ್ತಿಗಳು ಆ ರೀತಿ ಹೇಳುವಂತೆ ಒತ್ತಡ ಹೇರಿದ್ದರಿಂದ ನಾನು ಸುಳ್ಳು ಕಥೆ ಹೆಣೆದೆ ಎಂದು ಸ್ಪಷ್ಟಪಡಿಸಿದ್ದರು. ಆ ವ್ಯಕ್ತಿಗಳು ಯಾರು ಎಂದು ವರದಿಗಾರ್ತಿ ಕೇಳಿದಾಗ, ಗಿರೀಶ್ ಮಟ್ಟಣ್ಣವರ್ ಮತ್ತು ಜಯಂತ್ ಟಿ ಎಂದು ಹೆಸರು ಹೇಳಿದ್ದರು.

ಮುಂದುರಿದು, ಆಸ್ತಿ ವಿವಾದ ಇತ್ತು ಅದಕ್ಕೆ ನಾನು ಅನನ್ಯಾ ಭಟ್ ಕಥೆ ಹೇಳಿದೆ. ನನ್ನ ಅಜ್ಜನ ಆಸ್ತಿಯನ್ನು ದಾನವಾಗಿ ದೇವಸ್ಥಾನಕ್ಕೆ ಕೊಡುವಾಗ ಮೊಮ್ಮಗಳಾದ ನನ್ನ ಸಹಿ ತೆಗೆದುಕೊಳ್ಳಬೇಕಿತ್ತು. ನನಗೆ ಹಕ್ಕಿದೆ, ಆದರೆ ಹಾಗೆ ಮಾಡದೆ ದಾನವಾಗಿ ನಮ್ಮ ತಾತನ ಜಮೀನನ್ನು ಧರ್ಮಸ್ಥಳಕ್ಕೆ ಬರೆದುಕೊಟ್ಟರು. ನನ್ನನ್ನು ಸತ್ತಂತೆ ಪರಿಗಣಿಸಿದರು. ಅದು ನನಗೆ ತುಂಬಾ ನೋವು ಕೊಟ್ಟಿತು. ಹಾಗಾಗಿ ಅವರು ಹೇಳಿದಂತೆ ಮಾಡಿದ್ದೇನೆ. ನಾನು ತೋರಿಸಿರುವ ಫೋಟೋ ಎಲ್ಲವೂ ನಕಲಿ. ನಾನು ಧರ್ಮಸ್ಥಳ ಕ್ಷೇತ್ರ ಅಥವಾ ಅಲ್ಲಿನ ಯಾವುದೇ ವ್ಯಕ್ತಿ ವಿರುದ್ಧ ದೂರು ಕೊಟ್ಟಿಲ್ಲ, ಧರ್ಮಸ್ಥಳ ಗ್ರಾಮದಲ್ಲಿ ಎಂದು ದೂರು ಕೊಟ್ಟಿದ್ದೆ ಎಂದಿದ್ದರು.

ನನಗೆ ಈ ಕುರಿತು ಯಾರೂ ಹಣದ ಆಮಿಷ ಒಡ್ಡಿಲ್ಲ. ಕೇವಲ ಒಂದು ಬಾರಿಯಷ್ಟೇ ಅವರನ್ನು ಭೇಟಿಯಾಗಿದ್ದೇನೆ. ಮಗಳ ಕಥೆ ಹೇಳಿ ಎಂದು ಹೇಳಿಕೊಟ್ಟರು. ನನ್ನ ತಲೆಗೆ ತುರುಕಿದರು. ಅದರಂತೆ ಹೇಳಿದ್ದೇನೆ. ಆದರೆ, ಅದು ಈ ಮಟ್ಟಕ್ಕೆ ಹೋಗುತ್ತದೆ, ಇಷ್ಟೊಂದು ತೇಜೋವಧೆ ಆಗುತ್ತದೆ ಎಂದು ಯಾವತ್ತೂ ಭಾವಿಸಿರಲಿಲ್ಲ. ನಾನು ಲೀವಿಂಗ್ ಟುಗೆದರ್‌ನಲ್ಲಿ ಇದ್ದದ್ದು ನಿಜ. ಆದರೆ, ಆ ವ್ಯಕ್ತಿಯನ್ನು (ಸಂಗಾತಿಯನ್ನು) ನಾನೇ ದುಡಿದು ಸಾಕಿದ್ದೇನೆ. ಯಾರ ಮುಂದೆಯೂ ಕೈಚಾಚಿದವಳು ಅಲ್ಲ ಎಂದು ಸುಜಾತಾ ಭಟ್ ಅವರು ಹೇಳಿದ್ದರು.

ಈ ಹೇಳಿಕೆಯ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಬೆಂಗಳೂರಿನ ಮನೆಯಿಂದ ಸುದ್ದಿ ವಾಹಿನಿಗಳ ಜೊತೆ ಮಾತನಾಡಿದ ಸುಜಾತಾ ಭಟ್, “ಇವತ್ತು ಸಂಜೆ 5 ಗಂಟೆಗೆ ಒಬ್ಬರು ವಕೀಲರು ಬಂದು ನನ್ನನ್ನು ಕರೆದುಕೊಂಡು ಹೋಗಿ ಯೂಟ್ಯೂಬ್ ಚಾನೆಲ್‌ ಜೊತೆ ಮಾತನಾಡಿಸಿದರು. ಅವರ ಕಾರಿನಲ್ಲಿ ನನ್ನನ್ನು ಕೂರಿಸಿಕೊಂಡು ನನಗೆ ಅನನ್ಯಾ ಭಟ್ ಎಂಬ ಮಗಳೇ ಇರಲಿಲ್ಲ ಎಂಬ ಹೇಳಿಕೆ ಕೊಡಿಸಿದರು. ಅನನ್ಯಾ ಭಟ್ ಕಥೆ ಹೆಣೆಯಲು ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ಮತ್ತು ಜಯಂತ್ ಟಿ ನನ್ನನ್ನು ಪ್ರಚೋದಿಸಿದರು ಎಂದು ಬಲವಂತವಾಗಿ ಹೇಳಿಸಿದರು. ಇದು ಈ ರೀತಿ ಚಾನೆಲ್‌ನಲ್ಲಿ ಬರುತ್ತದೆ ಎಂದು ನನಗೆ ಗೊತ್ತಿರಲಿಲ್ಲ. ನಾನು ಎಸ್‌ಐಟಿ ಮುಂದೆ ಹೋಗಿ ಎಲ್ಲಾ ವಿಷಯವನ್ನು ಹೇಳುತ್ತೇನೆ. ದಯವಿಟ್ಟು ಅಲ್ಲಿಯವರೆಗೆ ನನಗೆ ಸಮಯ ಕೊಡಿ ಎಂದಿದ್ದಾರೆ.

ನನ್ನನ್ನು ಕತ್ರಿಗುಪ್ಪೆ ಕಾಮಾಕ್ಯ ರಸ್ತೆಯಲ್ಲಿ ಕರೆದುಕೊಂಡು ಹೋಗಿ, ಎಲ್ಲೋ ಒಳ ರಸ್ತೆಯಲ್ಲಿ ಕಾರಿನೊಳಗೆ ಕೂರಿಸಿ ನನ್ನಿಂದ ಹೇಳಿಕೆ ಪಡೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ. ಇನ್ನೊಂದು ವಾಹಿನಿಯವರ ಜೊತೆಯೂ ನೀವು ಅನನ್ಯಾ ಭಟ್ ಇಲ್ಲ ಎಂಬ ಹೇಳಿಕೆ ಕೊಟ್ಟಿದ್ದೀರಲ್ವಾ? ಎಂದು ಸುದ್ದಿವಾಹಿನಿ ವರದಿಗಾರ ಕೇಳಿದಾಗ, ಆ ವಾಹಿನಿಯವರು ಕೂಡ ನನ್ನಿಂದ ಬಲವಂತವಾಗಿ ಹೇಳಿಕೆ ಕೊಡಿಸಿದ್ದಾರೆ ಎಂದಿದ್ದಾರೆ.

ನಾನು ಮೊದಲು ಎಸ್‌ಐಟಿ ಮುಂದೆ ಹೇಳಿಕೆ ಕೊಡುತ್ತೇನೆ. ಆ ಬಳಿಕ ಮಾಧ್ಯಮಗಳ ಮುಂದೆ ಮಾತನಾಡುತ್ತೇನೆ. ದಯವಿಟ್ಟು ನನ್ನನ್ನು ಬಿಟ್ಟುಬಿಡಿ. ನಾನು ಇನ್ನು ಎಸ್‌ಐಟಿ ಮುಂದೆಯೇ ಹೇಳಿಕೆ ಕೊಡುತ್ತೇನೆ. ಎಸ್‌ಐಟಿಯವರು ಮಾಧ್ಯಮಗಳಿಗೆ ಹೇಳಿಕೆ ಕೊಡದಂತೆ ಸೂಚಿಸಿದ್ದಾರೆ. ನನ್ನಿಂದ ಬಲವಂತವಾಗಿ ಹೇಳಿಕೆ ಕೊಡಿಸಿದ ಬಗ್ಗೆ ನನ್ನ ವಕೀಲರ ಜೊತೆ ಮಾತನಾಡಿದ್ದೇನೆ. ಅವರು ಎಸ್‌ಐಟಿ ಮುಂದೆ ಹೋಗೋಣ ಎಂದಿದ್ದಾರೆ. ಹಾಗಾಗಿ, ನಾನು ಎಸ್ಐಟಿ ಮುಂದೆ ಎಲ್ಲವನ್ನೂ ಹೇಳುತ್ತೇನೆ ಎಂದು ಸುಜಾತಾ ಭಟ್ ತಿಳಿಸಿದ್ದಾರೆ.

2003ರಲ್ಲಿ ಸ್ನೇಹಿತೆಯರ ಜೊತೆ ಧರ್ಮಸ್ಥಳಕ್ಕೆ ತೆರಳಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆಯಾಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ತಾಯಿ ಸುಜಾತಾ ಭಟ್ 2025ರ ಜುಲೈ 15ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.  

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು, “ಮಗಳ ನಾಪತ್ತೆ ಬಗ್ಗೆ ಈ ಹಿಂದೆ ಬೆಳ್ತಂಗಡಿ ಪೊಲೀಸರಿಗೆ ದೂರು ಕೊಟ್ಟಿದ್ದರೂ ನನಗೆ ನ್ಯಾಯ ಸಿಕ್ಕಿಲ್ಲ. ಈಗ ಅನಾಮಿಕ ಕೊಟ್ಟ ದೂರಿನಂತೆ ಎಸ್‌ಐಟಿ ತನಿಖೆ ನಡೆಯುತ್ತಿರುವುದರಿಂದ ನನಗೆ ಆಶಾ ಭಾವನೆ ಮೂಡಿದೆ. ಎಸ್‌ಐಟಿಯವರು ನನ್ನ ಮಗಳ ನಾಪತ್ತೆ ಪ್ರಕರಣವನ್ನೂ ಬೇಧಿಸಿ, ಅವಳ ಅಸ್ತಿ ಹುಡುಕಿ ಕೊಟ್ಟರೆ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡುತ್ತೇನೆ” ಎಂದಿದ್ದರು.

ಸುಜಾತಾ ಭಟ್ ಅವರ ಸಂಪೂರ್ಣ ಹೇಳಿಕೆಯ ಲಿಂಕ್ ಇಲ್ಲಿದೆ

ಅನನ್ಯಾ ಭಟ್ ನಾಪತ್ತೆ ದೂರು ಧರ್ಮಸ್ಥಳ ಠಾಣೆಯಿಂದ ಆಗಸ್ಟ್ 20, 2025ರಂದು ಎಸ್‌ಐಟಿಗೆ ವರ್ಗಾವಣೆಯಾಗಿದೆ. ಎಸ್‌ಐಟಿಯವರು ವಿಚಾರಣೆಗೆ ಹಾಜರಾಗುವಂತೆ ಸುಜಾತಾ ಭಟ್ ಅವರಿಗೆ ನೋಟಿಸ್ ನೀಡಿದ್ದಾರೆ ಎಂದು ವರದಿಯಾಗಿದೆ.

ಈ ನಡುವೆ ಸುದ್ದಿ ವಾಹಿನಿಯೊಂದು ಸುಜಾತಾ ಭಟ್ ಅವರಿಗೆ ಅನನ್ಯಾ ಭಟ್ ಎಂಬ ಮಗಳೇ ಇರಲಿಲ್ಲ ಎಂದು ನಿರಂತರ ಸುದ್ದಿ ಪ್ರಕಟಿಸಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಸುಜಾತಾ ಭಟ್, ಯುವತಿಯೊಬ್ಬರ ಫೋಟೋ ಬಿಡುಗಡೆ ಮಾಡಿ, “ಇದೇ ಅನನ್ಯಾ ಭಟ್” ಎಂದಿದ್ದರು. ಆದರೆ, ಸುದ್ದಿವಾಹಿನಿ ಮತ್ತು ಕೆಲ ಯೂಟ್ಯೂಬ್ ಚಾನೆಲ್‌ಗಳು ಆ ಫೋಟೋ ನಕಲಿ ಎಂದು ಆರೋಪಿಸಿತ್ತು. ವಾಸಂತಿ ಎನ್ನುವವರ ಫೋಟೋವನ್ನು ಯೂಟ್ಯೂಬರ್ ಸಮೀರ್ ಎಐ ಮೂಲಕ ಬದಲಾಯಿಸಿ ಅನನ್ಯಾ ಭಟ್ ಎಂದು ಬಿಂಬಿಸಿದ್ದಾರೆ ಎಂದಿತ್ತು.

ಸುಜಾತಾ ಭಟ್ ಅವರಿಗೆ ಅನನ್ಯಾ ಎಂಬ ಮಗಳೇ ಇರಲಿಲ್ಲ ಎಂಬುವುದಕ್ಕೆ ಸುದ್ದಿವಾಹಿನಿ, ಸುಜಾತಾ ಭಟ್ ಸಂಬಂಧಿಕರು ಎನ್ನಲಾದ ಕೆಲ ವ್ಯಕ್ತಿಗಳಿಂದ ಹೇಳಿಕೆಯನ್ನೂ ಪಡೆದಿತ್ತು. ಇದನ್ನು ಗಮನಿಸಿದ ಜನರು ಸುಜಾತಾ ಭಟ್ ಆರೋಪ ನಿಜವೋ, ಸುಳ್ಳೋ ಎಂಬ ಗೊಂದಲಕ್ಕೀಡಾಗಿದ್ದರು.

ಈ ಬೆನ್ನಲ್ಲೇ ‘ಇನ್‌ಸೈಟ್‌ರಶ್’ ಯೂಟ್ಯೂಬ್ ಚಾನೆಲ್‌ಗೆ ಸುಜಾತಾ ಭಟ್ ನೀಡಿದ್ದ ಹೇಳಿಕೆ ಸಂಚಲನ ಸೃಷ್ಟಿಸಿತ್ತು. ಇದಾಗಿ, ಗಂಟೆಯೊಳಗೆ “ನನ್ನಿಂದ ಬಲವಂತವಾಗಿ ಹೇಳಿಕೆ ಕೊಡಿಸಲಾಗಿದೆ” ಎಂಬ ಸುಜಾತಾ ಮಾತು ಜನರಲ್ಲಿ ಗೊಂದಲ ಉಂಟು ಮಾಡಿದೆ. ಹಾಗಾಗಿ, ಅನನ್ಯಾ ಭಟ್ ಪ್ರಕರಣದ ಸತ್ಯಾಸತ್ಯತೆ ಎಸ್‌ಐಟಿ ತನಿಖೆಯಿಂದಲೇ ಬಯಲಾಗಬೇಕಿದೆ.

15 ದಿನದಿಂದ ‘ಮಾರ್ವಾಡಿ ಗೋ ಬ್ಯಾಕ್’ ಪ್ರತಿಭಟನೆಗಳು: ಹೈದರಾಬಾದ್‌ನಲ್ಲಿ ಹೆಚ್ಚಿದ ಉದ್ವಿಗ್ನತೆ, ಪೊಲೀಸರು ಹೈ ಅಲರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...