Homeಕರ್ನಾಟಕ‘ಕರ್ನಾಟಕ ಯುವ ನೀತಿ-2021’ ರೂಪಿಕರಣ ಸಮಿತಿಯಲ್ಲಿ ‘ಚಕ್ರವರ್ತಿ ಸೂಲಿಬೆಲೆ’!

‘ಕರ್ನಾಟಕ ಯುವ ನೀತಿ-2021’ ರೂಪಿಕರಣ ಸಮಿತಿಯಲ್ಲಿ ‘ಚಕ್ರವರ್ತಿ ಸೂಲಿಬೆಲೆ’!

ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರ ಪುತ್ರ ಸಂಕಲ್ಪ ಶೆಟ್ಟರ್‌‌, ಮಾಜಿ ಸಚಿವ ಅನಂತಕುಮಾರ್‌ ಅವರ ಪುತ್ರಿ ಐಶ್ವರ್ಯ ದಿವೇಶ್‌ ಅವರು ಸಮಿತಿಯಲ್ಲಿ ಸದಸ್ಯರಾಗಿದ್ದಾರೆ.

- Advertisement -
- Advertisement -

ಕರ್ನಾಟಕ ಯುವ ನೀತಿ- 2021 ರೂಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಸ್ವಾಮಿ ವಿವೇಕಾನಂದ ಯೂತ್‌ ಮೂವ್‌ಮೆಂಟ್‌ ಸಂಸ್ಥಾಪಕ ಡಾ.ಬಾಲಸುಬ್ರಹ್ಮಣ್ಯಂ ಅವರ ಅಧ್ಯಕ್ಷತೆ ಸಮಿತಿಯನ್ನು ರಚಿಸಿದೆ.

ಸಮಿತಿಯ ವಿಶೇಷ ಆಹ್ವಾನಿತರಾಗಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌ ಹಾಗೂ ಸದಸ್ಯ ಕಾರ್ಯದರ್ಶಿಯಗಿ ಇಲಾಖೆ ಆಯುಕ್ತರನ್ನು ನೇಮಿಸಲಾಗಿದೆ. ತಜ್ಞರ ಸಮಿತಿಗೆ ಸಂಘ ಪರಿವಾರದ ಹಿನ್ನೆಲೆಯವರನ್ನು ಸದಸ್ಯರನ್ನಾಗಿ ಸೇರಿಸಲಾಗಿದೆ.

ಯುವ ಬ್ರಿಗೇಡ್ ಸಂಘಟನೆಯ ಚಕ್ರವರ್ತಿ ಸೂಲಿಬೆಲೆ, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರ ಪುತ್ರ ಸಂಕಲ್ಪ ಶೆಟ್ಟರ್‌‌, ಮಾಜಿ ಸಚಿವ ಅನಂತಕುಮಾರ್‌ ಅವರ ಪುತ್ರಿ ಐಶ್ವರ್ಯ ದಿವೇಶ್‌, ಬೆಂಗಳೂರಿನ ಮಲ್ಲಿಕಾರ್ಜುನ್‌ ಬಿ.ಪಾಟೀಲ್‌, ವಿನೋದ್‌ ಕೃಷ್ಣಮೂರ್ತಿ, ನೆಹರೂ ಯುವ ಕೇಂದ್ರದ ನಿರ್ದೇಶಕ ಎಂ.ಎನ್‌.ನಟರಾಜ್‌, ರಾಜ್ಯ ಎನ್‌‌ಎಸ್‌ಎಸ್‌ ಅಧಿಕಾರಿ ಡಾ.ಪ್ರತಾಪ್‌ ಲಿಂಗಯ್ಯ, ದೊಡ್ಡಬಳ್ಳಾಪುರದ ಡಾ.ಡಿ.ಎಸ್.ಕೃಷ್ಣ, ಮಂಡ್ಯದ ಕೆ.ನಾಗಣ್ಣಗೌಡ, ಬೇಲೂರಿನ ಸಂತೋಷ್ ಸೋಮಶೇಖರ್‌ (ಕೆಂಚಾಂಬ) ಅವರು ಸಮಿತಿ ಸದಸ್ಯರಾಗಿದ್ದಾರೆ.

ಪಠ್ಯಪುಸ್ತಕ ಪರಿಶೀಲನಾ ಸಮಿತಿ ರಚಿಸಿ, ಸಂಘಪರಿವಾರದ ಹಿನ್ನೆಲೆಯ ರೋಹಿತ್‌ ಚಕ್ರತೀರ್ಥ ಅವರನ್ನು ಸರ್ಕಾರ ನೇಮಿಸಿದ್ದು ಟೀಕೆಗೆ ಗುರಿಯಾಗಿತ್ತು. ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿದ ಆರೋಪ ಚಕ್ರತೀರ್ಥ ಅವರ ಮೇಲಿದ್ದು, ಅಂಥವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರನ್ನಾಗಿ ನೇಮಿಸಿದಾಗಲೇ ಆಕ್ರೋಶ ವ್ಯಕ್ತವಾಗಿತ್ತು.

ಪ್ರಗತಿಪರ ಮನಸ್ಸುಗಳ ವಿರುದ್ಧ ನಂಜುಕಾರುವ ರೀತಿ ಚಕ್ರತೀರ್ಥ ಅವರು ಭಾಷೆಯನ್ನು ಬಳಸುತ್ತಾರೆ. ಅಂಥವರನ್ನು ಕನ್ನಡದ ಕೆಲಸಗಳಿಗೆ ನೇಮಿಸಬಾರದು ಎಂದು ಟೀಕಿಸಲಾಗಿತ್ತು. ಆದರೆ ಜನಾಗ್ರಹಕ್ಕೆ ಮಣಿಯದ ಸರ್ಕಾರ ಸಂಘಪರಿವಾರದ ಹಿನ್ನೆಲೆಯವರನ್ನು, ವಿವಿಧ ಕೆಲಸಗಳಿಗೆ ನೇಮಿಸುವುದನ್ನು ಮುಂದುವರಿಸಿದೆ.

ಈಗ ರಚಿಸಿರುವ ಯುವ ನೀತಿ ಸಮಿತಿಯು ರಾಜ್ಯದ ಯುವಜನರ ಭವಿಷ್ಯವನ್ನು ನಿರ್ಧರಿಸಲು ಚಿಂತಿಸಲಿದೆ ಎಂದು ಸರ್ಕಾರ ಹೇಳಿದೆ. “ಯುವಜನರು ತಮ್ಮ ಜೀವನವನ್ನು ಉತ್ತಮವಾಗಿ ಕಟ್ಟಿಕೊಳ್ಳಲು, ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಅನುವಾಗುವಂತೆ ಸಮಗ್ರ ಯುವ ನೀತಿ ಹೊರತರಲು ರಚನೆಯಾಗಿರುವ ತಜ್ಞರ ಸಮಿತಿ ಇದಾಗಿದ್ದು, ಸಮಗ್ರವಾಗಿ ಅಧ್ಯಯನ ನಡೆಸಿ ಎರಡು ತಿಂಗಳೊಳಗೆ ವರದಿ ನೀಡಬೇಕು” ಎಂದು ಇಲಾಖೆಯ ಅಧೀನ ಕಾರ್ಯದರ್ಶಿ ಎಂ.ಉಮೇಶ್‌ ಶಾಸ್ತ್ರಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿರಿ: ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ಯುವಜನ ಸಬಲೀಕರಣ ಸಚಿವ ನಾರಾಯಣಗೌಡ  ಅವರು, “ಕರ್ನಾಟಕ ಯುವ ನೀತಿಯನ್ನು ಈ ಹಿಂದೆ 2012ರಲ್ಲಿ ರೂಪಿಸಲಾಗಿದ್ದು, ಕಾಲಕ್ಕೆ ಅನುಗುಣವಾಗಿ ಹೊಸ ಯುವ ನೀತಿ ರೂಪಿಸುವ ಅವಶ್ಯಕತೆ ಇದೆ. ಅದರಂತೆ ತಜ್ಞರ ಸಮಿತಿ ರಚಿಸಲಾಗಿದ್ದು, ಸಮಗ್ರ ಹಾಗೂ ಕೌಶಲ್ಯಭರಿತ ಇಂದಿನ ಕಾಲಮಾನಕ್ಕೆ ತಕ್ಕಂತೆ ನೀತಿಯನ್ನು ಸಮಿತಿ ರೂಪಿಸಲಿದೆ” ಎಂದಿದ್ದಾರೆ.

ಸಮಿತಿಗೆ ನೇಮಕವಾಗಿರುವವರಲ್ಲಿ ಸಂಘಪರಿವಾರದ ಹಿನ್ನೆಲೆಯವರು ಹೆಚ್ಚಾಗಿ ಇರುವುದರಿಂದ ಯುವ ನೀತಿಯ ಸಂಬಂಧ ಆಕ್ಷೇಪಗಳು ವ್ಯಕ್ತವಾಗಿವೆ. ಚಕ್ರವರ್ತಿ ಸೂಲಿಬೆಲೆಯವರ ಸಾರ್ವಜನಿಕ ಭಾಷಣಗಳ ಕುರಿತು ಮೊದಲಿನಿಂದಲೂ ವ್ಯಂಗ್ಯ, ಕುಹಕಗಳಿವೆ. ಚಕ್ರವರ್ತಿ ಸೂಲಿಬೆಲೆಯವರು ಸುಳ್ಳುಗಳನ್ನು ಪೋಣಿಸಿ ಭಾಷಣ ಮಾಡುತ್ತಾರೆಂಬ ಆರೋಪಗಳಿದ್ದು, ಅಂಥವರನ್ನು ಸಮಿತಿಯಿಂದ ಕೈಬಿಡಬೇಕು ಎಂದು ಪ್ರಗತಿಪರ ಮನಸ್ಸುಗಳು ಆಗ್ರಹಿಸಿವೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ರಾಜ್ಯ ಸಂಚಾಲಕ ಸರೋವರ್‌ ಬೆಂಕಿಕೆರೆ, “ಚಕ್ರವರ್ತಿ ಸೂಲಿಬೆಲೆಯವರ ಮೇಲೆ ಇರುವ ಬಹಳ ದೊಡ್ಡ ಆರೋಪ ಅವರು ಸುಳ್ಳುಗಳನ್ನು ಹೇಳುತ್ತಾರೆಂಬುದು. ಯುವಜನರಿಗೆ ಬೇಕಾಗಿರುವುದು ಉದ್ಯೋಗ ಹಾಗೂ ಉದ್ಯೋಗ ಭದ್ರತೆ. ಇದಕ್ಕಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಯುವಜನರಿಗೆ ಸಮಸ್ಯೆ ಇದೆ, ನಿರುದ್ಯೋಗ ಇದೆ ಎಂದು ಒಪ್ಪಿಕೊಳ್ಳದೆ ಇರುವ ಜನರನ್ನು ಸಮಿತಿಯಲ್ಲಿ ನೇಮಿಸುವುದು ಆತಂಕಕಾರಿ. ಇಂಥವರು ಸರ್ಕಾರದ ಪರವಾಗಿಯೇ ನೀತಿ ರೂಪಿಸುತ್ತಾರೆ. ಯುವಜನರ ದಿಕ್ಕು ತಪ್ಪಿಸುವ ಹಿನ್ನೆಲೆ ಇರುವವರನ್ನು ಒಳಗೊಂಡ ಸಮಿತಿ ಮಾಡುವುದು ಸರ್ಕಾರದ ಅಧೋಗತಿಯನ್ನು ಸೂಚಿಸುತ್ತದೆ” ಎಂದರು.

ಸಾಮಾಜಿಕ ಕಾರ್ಯಕರ್ತ ಹರ್ಷಕುಮಾರ್‌ ಕುಗ್ವೆ ಪ್ರತಿಕ್ರಿಯಿಸಿ, “ಕಳೆದ 45 ವರ್ಷಗಳಲ್ಲೇ ಅತಿಹೆಚ್ಚು ನಿರುದ್ಯೋಗ ಮೋದಿ ಸರ್ಕಾರದ ಅವಧಿಯಲ್ಲಿ ಸೃಷ್ಟಿಯಾಗಿದೆ ಎಂದು ಎನ್‌ಎಸ್‌ಎಸ್‌ಓ ಹೇಳಿದೆ. ಆದರೆ ಸರ್ಕಾರ ಆ ವರದಿಯನ್ನು ತಡೆ ಹಿಡಿಯಿತು. ಮೋದಿ ಅವಧಿಯಲ್ಲಿ ಕೊಟ್ಯಾಂತರ ಯುವಕರು ಉದ್ಯೋಗ ಕಳೆದುಕೊಂಡಿದ್ದಾರೆ. ಇಂತಹ ಯುವಜನರ ಕೈಗೆ ಲಾಠಿ, ತ್ರಿಶೂಲ, ಬಡಿಗೆ ಕೊಟ್ಟು, ಮತ್ತೊಂದು ಕೋಮು ವಿರುದ್ಧ ದೊಂಬಿ ನಡೆಸಲಿಕ್ಕೆ ಸರ್ಕಾರ ಸಿದ್ಧವಾದಂತೆ ಕಾಣುತ್ತಿದೆ. ಇತ್ತೀಚೆಗೆ ಚಕ್ರವರ್ತಿ ಸೂಲಿಬೆಲೆ ಅವರು ಟ್ವೀಟ್‌ ಮಾಡಿದ್ದು, ಹಿಂದೂ ಶೂದ್ರ ಯುವಕರನ್ನು ಮುಸ್ಲಿಮರ ವಿರುದ್ಧ ನೇರವಾಗಿ ಪ್ರಚೋದನೆ ಮಾಡಲು ಯತ್ನಿಸಿದ್ದರು. ಇದನ್ನು ಗಮನಿಸಿ ಬೆಂಗಳೂರಿನ ಮಾಜಿ ಪೊಲೀಸ್‌ ಕಮೀಷನರ್‌, ಪ್ರಸ್ತುತ ರೈಲ್ವೇ ADGP ಆಗಿರುವ ಭಾಸ್ಕರ್‌ ರಾವ್ ಅವರು ಟ್ವಿಟರ್‌ನಲ್ಲೆ ಚಕ್ರವರ್ತಿ ಸೂಲಿಬೆಲೆಗೆ ಬುದ್ಧಿವಾದ ಹೇಳಿದ್ದರು. ಸಾರ್ವಜನಿಕ ವೇದಿಕೆಯಲ್ಲಿ ಮುಸ್ಲಿಮರ ವಿರುದ್ಧ ಯುವಕರನ್ನು ಛೂ ಬಿಡುವಂತಹ ಒಬ್ಬ ವ್ಯಕ್ತಿಯನ್ನು ಯುವ ನೀತಿ ಸಮಿತಿಯಲ್ಲಿ ಸೇರಿಸಿಕೊಂಡಿರುವುದು ಏತಕ್ಕೆ?” ಎಂದು ಪ್ರಶ್ನಿಸಿದರು.


ಇದನ್ನೂ ಓದಿರಿ: ಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ತಂಡ ಕೇಶವ ಕೃಪಾದ ಆದೇಶದಂತೆ ಕೆಲಸ ನಿರ್ವಹಿಸುತ್ತದೆ. ಆದ್ದರಿಂದ ಈ ಸಮಿತಿಯಿಂದ ಯುವಜನತೆಗೆ ಯಾವ ಪ್ರಯೋಜನವೂ ಆಗುವುದಿಲ್ಲ.

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...