Homeಕರ್ನಾಟಕ‘ಕರ್ನಾಟಕ ಯುವ ನೀತಿ-2021’ ರೂಪಿಕರಣ ಸಮಿತಿಯಲ್ಲಿ ‘ಚಕ್ರವರ್ತಿ ಸೂಲಿಬೆಲೆ’!

‘ಕರ್ನಾಟಕ ಯುವ ನೀತಿ-2021’ ರೂಪಿಕರಣ ಸಮಿತಿಯಲ್ಲಿ ‘ಚಕ್ರವರ್ತಿ ಸೂಲಿಬೆಲೆ’!

ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರ ಪುತ್ರ ಸಂಕಲ್ಪ ಶೆಟ್ಟರ್‌‌, ಮಾಜಿ ಸಚಿವ ಅನಂತಕುಮಾರ್‌ ಅವರ ಪುತ್ರಿ ಐಶ್ವರ್ಯ ದಿವೇಶ್‌ ಅವರು ಸಮಿತಿಯಲ್ಲಿ ಸದಸ್ಯರಾಗಿದ್ದಾರೆ.

- Advertisement -
- Advertisement -

ಕರ್ನಾಟಕ ಯುವ ನೀತಿ- 2021 ರೂಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಸ್ವಾಮಿ ವಿವೇಕಾನಂದ ಯೂತ್‌ ಮೂವ್‌ಮೆಂಟ್‌ ಸಂಸ್ಥಾಪಕ ಡಾ.ಬಾಲಸುಬ್ರಹ್ಮಣ್ಯಂ ಅವರ ಅಧ್ಯಕ್ಷತೆ ಸಮಿತಿಯನ್ನು ರಚಿಸಿದೆ.

ಸಮಿತಿಯ ವಿಶೇಷ ಆಹ್ವಾನಿತರಾಗಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌ ಹಾಗೂ ಸದಸ್ಯ ಕಾರ್ಯದರ್ಶಿಯಗಿ ಇಲಾಖೆ ಆಯುಕ್ತರನ್ನು ನೇಮಿಸಲಾಗಿದೆ. ತಜ್ಞರ ಸಮಿತಿಗೆ ಸಂಘ ಪರಿವಾರದ ಹಿನ್ನೆಲೆಯವರನ್ನು ಸದಸ್ಯರನ್ನಾಗಿ ಸೇರಿಸಲಾಗಿದೆ.

ಯುವ ಬ್ರಿಗೇಡ್ ಸಂಘಟನೆಯ ಚಕ್ರವರ್ತಿ ಸೂಲಿಬೆಲೆ, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರ ಪುತ್ರ ಸಂಕಲ್ಪ ಶೆಟ್ಟರ್‌‌, ಮಾಜಿ ಸಚಿವ ಅನಂತಕುಮಾರ್‌ ಅವರ ಪುತ್ರಿ ಐಶ್ವರ್ಯ ದಿವೇಶ್‌, ಬೆಂಗಳೂರಿನ ಮಲ್ಲಿಕಾರ್ಜುನ್‌ ಬಿ.ಪಾಟೀಲ್‌, ವಿನೋದ್‌ ಕೃಷ್ಣಮೂರ್ತಿ, ನೆಹರೂ ಯುವ ಕೇಂದ್ರದ ನಿರ್ದೇಶಕ ಎಂ.ಎನ್‌.ನಟರಾಜ್‌, ರಾಜ್ಯ ಎನ್‌‌ಎಸ್‌ಎಸ್‌ ಅಧಿಕಾರಿ ಡಾ.ಪ್ರತಾಪ್‌ ಲಿಂಗಯ್ಯ, ದೊಡ್ಡಬಳ್ಳಾಪುರದ ಡಾ.ಡಿ.ಎಸ್.ಕೃಷ್ಣ, ಮಂಡ್ಯದ ಕೆ.ನಾಗಣ್ಣಗೌಡ, ಬೇಲೂರಿನ ಸಂತೋಷ್ ಸೋಮಶೇಖರ್‌ (ಕೆಂಚಾಂಬ) ಅವರು ಸಮಿತಿ ಸದಸ್ಯರಾಗಿದ್ದಾರೆ.

ಪಠ್ಯಪುಸ್ತಕ ಪರಿಶೀಲನಾ ಸಮಿತಿ ರಚಿಸಿ, ಸಂಘಪರಿವಾರದ ಹಿನ್ನೆಲೆಯ ರೋಹಿತ್‌ ಚಕ್ರತೀರ್ಥ ಅವರನ್ನು ಸರ್ಕಾರ ನೇಮಿಸಿದ್ದು ಟೀಕೆಗೆ ಗುರಿಯಾಗಿತ್ತು. ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿದ ಆರೋಪ ಚಕ್ರತೀರ್ಥ ಅವರ ಮೇಲಿದ್ದು, ಅಂಥವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರನ್ನಾಗಿ ನೇಮಿಸಿದಾಗಲೇ ಆಕ್ರೋಶ ವ್ಯಕ್ತವಾಗಿತ್ತು.

ಪ್ರಗತಿಪರ ಮನಸ್ಸುಗಳ ವಿರುದ್ಧ ನಂಜುಕಾರುವ ರೀತಿ ಚಕ್ರತೀರ್ಥ ಅವರು ಭಾಷೆಯನ್ನು ಬಳಸುತ್ತಾರೆ. ಅಂಥವರನ್ನು ಕನ್ನಡದ ಕೆಲಸಗಳಿಗೆ ನೇಮಿಸಬಾರದು ಎಂದು ಟೀಕಿಸಲಾಗಿತ್ತು. ಆದರೆ ಜನಾಗ್ರಹಕ್ಕೆ ಮಣಿಯದ ಸರ್ಕಾರ ಸಂಘಪರಿವಾರದ ಹಿನ್ನೆಲೆಯವರನ್ನು, ವಿವಿಧ ಕೆಲಸಗಳಿಗೆ ನೇಮಿಸುವುದನ್ನು ಮುಂದುವರಿಸಿದೆ.

ಈಗ ರಚಿಸಿರುವ ಯುವ ನೀತಿ ಸಮಿತಿಯು ರಾಜ್ಯದ ಯುವಜನರ ಭವಿಷ್ಯವನ್ನು ನಿರ್ಧರಿಸಲು ಚಿಂತಿಸಲಿದೆ ಎಂದು ಸರ್ಕಾರ ಹೇಳಿದೆ. “ಯುವಜನರು ತಮ್ಮ ಜೀವನವನ್ನು ಉತ್ತಮವಾಗಿ ಕಟ್ಟಿಕೊಳ್ಳಲು, ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಅನುವಾಗುವಂತೆ ಸಮಗ್ರ ಯುವ ನೀತಿ ಹೊರತರಲು ರಚನೆಯಾಗಿರುವ ತಜ್ಞರ ಸಮಿತಿ ಇದಾಗಿದ್ದು, ಸಮಗ್ರವಾಗಿ ಅಧ್ಯಯನ ನಡೆಸಿ ಎರಡು ತಿಂಗಳೊಳಗೆ ವರದಿ ನೀಡಬೇಕು” ಎಂದು ಇಲಾಖೆಯ ಅಧೀನ ಕಾರ್ಯದರ್ಶಿ ಎಂ.ಉಮೇಶ್‌ ಶಾಸ್ತ್ರಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿರಿ: ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ಯುವಜನ ಸಬಲೀಕರಣ ಸಚಿವ ನಾರಾಯಣಗೌಡ  ಅವರು, “ಕರ್ನಾಟಕ ಯುವ ನೀತಿಯನ್ನು ಈ ಹಿಂದೆ 2012ರಲ್ಲಿ ರೂಪಿಸಲಾಗಿದ್ದು, ಕಾಲಕ್ಕೆ ಅನುಗುಣವಾಗಿ ಹೊಸ ಯುವ ನೀತಿ ರೂಪಿಸುವ ಅವಶ್ಯಕತೆ ಇದೆ. ಅದರಂತೆ ತಜ್ಞರ ಸಮಿತಿ ರಚಿಸಲಾಗಿದ್ದು, ಸಮಗ್ರ ಹಾಗೂ ಕೌಶಲ್ಯಭರಿತ ಇಂದಿನ ಕಾಲಮಾನಕ್ಕೆ ತಕ್ಕಂತೆ ನೀತಿಯನ್ನು ಸಮಿತಿ ರೂಪಿಸಲಿದೆ” ಎಂದಿದ್ದಾರೆ.

ಸಮಿತಿಗೆ ನೇಮಕವಾಗಿರುವವರಲ್ಲಿ ಸಂಘಪರಿವಾರದ ಹಿನ್ನೆಲೆಯವರು ಹೆಚ್ಚಾಗಿ ಇರುವುದರಿಂದ ಯುವ ನೀತಿಯ ಸಂಬಂಧ ಆಕ್ಷೇಪಗಳು ವ್ಯಕ್ತವಾಗಿವೆ. ಚಕ್ರವರ್ತಿ ಸೂಲಿಬೆಲೆಯವರ ಸಾರ್ವಜನಿಕ ಭಾಷಣಗಳ ಕುರಿತು ಮೊದಲಿನಿಂದಲೂ ವ್ಯಂಗ್ಯ, ಕುಹಕಗಳಿವೆ. ಚಕ್ರವರ್ತಿ ಸೂಲಿಬೆಲೆಯವರು ಸುಳ್ಳುಗಳನ್ನು ಪೋಣಿಸಿ ಭಾಷಣ ಮಾಡುತ್ತಾರೆಂಬ ಆರೋಪಗಳಿದ್ದು, ಅಂಥವರನ್ನು ಸಮಿತಿಯಿಂದ ಕೈಬಿಡಬೇಕು ಎಂದು ಪ್ರಗತಿಪರ ಮನಸ್ಸುಗಳು ಆಗ್ರಹಿಸಿವೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ರಾಜ್ಯ ಸಂಚಾಲಕ ಸರೋವರ್‌ ಬೆಂಕಿಕೆರೆ, “ಚಕ್ರವರ್ತಿ ಸೂಲಿಬೆಲೆಯವರ ಮೇಲೆ ಇರುವ ಬಹಳ ದೊಡ್ಡ ಆರೋಪ ಅವರು ಸುಳ್ಳುಗಳನ್ನು ಹೇಳುತ್ತಾರೆಂಬುದು. ಯುವಜನರಿಗೆ ಬೇಕಾಗಿರುವುದು ಉದ್ಯೋಗ ಹಾಗೂ ಉದ್ಯೋಗ ಭದ್ರತೆ. ಇದಕ್ಕಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಯುವಜನರಿಗೆ ಸಮಸ್ಯೆ ಇದೆ, ನಿರುದ್ಯೋಗ ಇದೆ ಎಂದು ಒಪ್ಪಿಕೊಳ್ಳದೆ ಇರುವ ಜನರನ್ನು ಸಮಿತಿಯಲ್ಲಿ ನೇಮಿಸುವುದು ಆತಂಕಕಾರಿ. ಇಂಥವರು ಸರ್ಕಾರದ ಪರವಾಗಿಯೇ ನೀತಿ ರೂಪಿಸುತ್ತಾರೆ. ಯುವಜನರ ದಿಕ್ಕು ತಪ್ಪಿಸುವ ಹಿನ್ನೆಲೆ ಇರುವವರನ್ನು ಒಳಗೊಂಡ ಸಮಿತಿ ಮಾಡುವುದು ಸರ್ಕಾರದ ಅಧೋಗತಿಯನ್ನು ಸೂಚಿಸುತ್ತದೆ” ಎಂದರು.

ಸಾಮಾಜಿಕ ಕಾರ್ಯಕರ್ತ ಹರ್ಷಕುಮಾರ್‌ ಕುಗ್ವೆ ಪ್ರತಿಕ್ರಿಯಿಸಿ, “ಕಳೆದ 45 ವರ್ಷಗಳಲ್ಲೇ ಅತಿಹೆಚ್ಚು ನಿರುದ್ಯೋಗ ಮೋದಿ ಸರ್ಕಾರದ ಅವಧಿಯಲ್ಲಿ ಸೃಷ್ಟಿಯಾಗಿದೆ ಎಂದು ಎನ್‌ಎಸ್‌ಎಸ್‌ಓ ಹೇಳಿದೆ. ಆದರೆ ಸರ್ಕಾರ ಆ ವರದಿಯನ್ನು ತಡೆ ಹಿಡಿಯಿತು. ಮೋದಿ ಅವಧಿಯಲ್ಲಿ ಕೊಟ್ಯಾಂತರ ಯುವಕರು ಉದ್ಯೋಗ ಕಳೆದುಕೊಂಡಿದ್ದಾರೆ. ಇಂತಹ ಯುವಜನರ ಕೈಗೆ ಲಾಠಿ, ತ್ರಿಶೂಲ, ಬಡಿಗೆ ಕೊಟ್ಟು, ಮತ್ತೊಂದು ಕೋಮು ವಿರುದ್ಧ ದೊಂಬಿ ನಡೆಸಲಿಕ್ಕೆ ಸರ್ಕಾರ ಸಿದ್ಧವಾದಂತೆ ಕಾಣುತ್ತಿದೆ. ಇತ್ತೀಚೆಗೆ ಚಕ್ರವರ್ತಿ ಸೂಲಿಬೆಲೆ ಅವರು ಟ್ವೀಟ್‌ ಮಾಡಿದ್ದು, ಹಿಂದೂ ಶೂದ್ರ ಯುವಕರನ್ನು ಮುಸ್ಲಿಮರ ವಿರುದ್ಧ ನೇರವಾಗಿ ಪ್ರಚೋದನೆ ಮಾಡಲು ಯತ್ನಿಸಿದ್ದರು. ಇದನ್ನು ಗಮನಿಸಿ ಬೆಂಗಳೂರಿನ ಮಾಜಿ ಪೊಲೀಸ್‌ ಕಮೀಷನರ್‌, ಪ್ರಸ್ತುತ ರೈಲ್ವೇ ADGP ಆಗಿರುವ ಭಾಸ್ಕರ್‌ ರಾವ್ ಅವರು ಟ್ವಿಟರ್‌ನಲ್ಲೆ ಚಕ್ರವರ್ತಿ ಸೂಲಿಬೆಲೆಗೆ ಬುದ್ಧಿವಾದ ಹೇಳಿದ್ದರು. ಸಾರ್ವಜನಿಕ ವೇದಿಕೆಯಲ್ಲಿ ಮುಸ್ಲಿಮರ ವಿರುದ್ಧ ಯುವಕರನ್ನು ಛೂ ಬಿಡುವಂತಹ ಒಬ್ಬ ವ್ಯಕ್ತಿಯನ್ನು ಯುವ ನೀತಿ ಸಮಿತಿಯಲ್ಲಿ ಸೇರಿಸಿಕೊಂಡಿರುವುದು ಏತಕ್ಕೆ?” ಎಂದು ಪ್ರಶ್ನಿಸಿದರು.


ಇದನ್ನೂ ಓದಿರಿ: ಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ತಂಡ ಕೇಶವ ಕೃಪಾದ ಆದೇಶದಂತೆ ಕೆಲಸ ನಿರ್ವಹಿಸುತ್ತದೆ. ಆದ್ದರಿಂದ ಈ ಸಮಿತಿಯಿಂದ ಯುವಜನತೆಗೆ ಯಾವ ಪ್ರಯೋಜನವೂ ಆಗುವುದಿಲ್ಲ.

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...