Homeಕರ್ನಾಟಕ‘ಕರ್ನಾಟಕ ಯುವ ನೀತಿ-2021’ ರೂಪಿಕರಣ ಸಮಿತಿಯಲ್ಲಿ ‘ಚಕ್ರವರ್ತಿ ಸೂಲಿಬೆಲೆ’!

‘ಕರ್ನಾಟಕ ಯುವ ನೀತಿ-2021’ ರೂಪಿಕರಣ ಸಮಿತಿಯಲ್ಲಿ ‘ಚಕ್ರವರ್ತಿ ಸೂಲಿಬೆಲೆ’!

ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರ ಪುತ್ರ ಸಂಕಲ್ಪ ಶೆಟ್ಟರ್‌‌, ಮಾಜಿ ಸಚಿವ ಅನಂತಕುಮಾರ್‌ ಅವರ ಪುತ್ರಿ ಐಶ್ವರ್ಯ ದಿವೇಶ್‌ ಅವರು ಸಮಿತಿಯಲ್ಲಿ ಸದಸ್ಯರಾಗಿದ್ದಾರೆ.

- Advertisement -
- Advertisement -

ಕರ್ನಾಟಕ ಯುವ ನೀತಿ- 2021 ರೂಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಸ್ವಾಮಿ ವಿವೇಕಾನಂದ ಯೂತ್‌ ಮೂವ್‌ಮೆಂಟ್‌ ಸಂಸ್ಥಾಪಕ ಡಾ.ಬಾಲಸುಬ್ರಹ್ಮಣ್ಯಂ ಅವರ ಅಧ್ಯಕ್ಷತೆ ಸಮಿತಿಯನ್ನು ರಚಿಸಿದೆ.

ಸಮಿತಿಯ ವಿಶೇಷ ಆಹ್ವಾನಿತರಾಗಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌ ಹಾಗೂ ಸದಸ್ಯ ಕಾರ್ಯದರ್ಶಿಯಗಿ ಇಲಾಖೆ ಆಯುಕ್ತರನ್ನು ನೇಮಿಸಲಾಗಿದೆ. ತಜ್ಞರ ಸಮಿತಿಗೆ ಸಂಘ ಪರಿವಾರದ ಹಿನ್ನೆಲೆಯವರನ್ನು ಸದಸ್ಯರನ್ನಾಗಿ ಸೇರಿಸಲಾಗಿದೆ.

ಯುವ ಬ್ರಿಗೇಡ್ ಸಂಘಟನೆಯ ಚಕ್ರವರ್ತಿ ಸೂಲಿಬೆಲೆ, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರ ಪುತ್ರ ಸಂಕಲ್ಪ ಶೆಟ್ಟರ್‌‌, ಮಾಜಿ ಸಚಿವ ಅನಂತಕುಮಾರ್‌ ಅವರ ಪುತ್ರಿ ಐಶ್ವರ್ಯ ದಿವೇಶ್‌, ಬೆಂಗಳೂರಿನ ಮಲ್ಲಿಕಾರ್ಜುನ್‌ ಬಿ.ಪಾಟೀಲ್‌, ವಿನೋದ್‌ ಕೃಷ್ಣಮೂರ್ತಿ, ನೆಹರೂ ಯುವ ಕೇಂದ್ರದ ನಿರ್ದೇಶಕ ಎಂ.ಎನ್‌.ನಟರಾಜ್‌, ರಾಜ್ಯ ಎನ್‌‌ಎಸ್‌ಎಸ್‌ ಅಧಿಕಾರಿ ಡಾ.ಪ್ರತಾಪ್‌ ಲಿಂಗಯ್ಯ, ದೊಡ್ಡಬಳ್ಳಾಪುರದ ಡಾ.ಡಿ.ಎಸ್.ಕೃಷ್ಣ, ಮಂಡ್ಯದ ಕೆ.ನಾಗಣ್ಣಗೌಡ, ಬೇಲೂರಿನ ಸಂತೋಷ್ ಸೋಮಶೇಖರ್‌ (ಕೆಂಚಾಂಬ) ಅವರು ಸಮಿತಿ ಸದಸ್ಯರಾಗಿದ್ದಾರೆ.

ಪಠ್ಯಪುಸ್ತಕ ಪರಿಶೀಲನಾ ಸಮಿತಿ ರಚಿಸಿ, ಸಂಘಪರಿವಾರದ ಹಿನ್ನೆಲೆಯ ರೋಹಿತ್‌ ಚಕ್ರತೀರ್ಥ ಅವರನ್ನು ಸರ್ಕಾರ ನೇಮಿಸಿದ್ದು ಟೀಕೆಗೆ ಗುರಿಯಾಗಿತ್ತು. ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿದ ಆರೋಪ ಚಕ್ರತೀರ್ಥ ಅವರ ಮೇಲಿದ್ದು, ಅಂಥವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರನ್ನಾಗಿ ನೇಮಿಸಿದಾಗಲೇ ಆಕ್ರೋಶ ವ್ಯಕ್ತವಾಗಿತ್ತು.

ಪ್ರಗತಿಪರ ಮನಸ್ಸುಗಳ ವಿರುದ್ಧ ನಂಜುಕಾರುವ ರೀತಿ ಚಕ್ರತೀರ್ಥ ಅವರು ಭಾಷೆಯನ್ನು ಬಳಸುತ್ತಾರೆ. ಅಂಥವರನ್ನು ಕನ್ನಡದ ಕೆಲಸಗಳಿಗೆ ನೇಮಿಸಬಾರದು ಎಂದು ಟೀಕಿಸಲಾಗಿತ್ತು. ಆದರೆ ಜನಾಗ್ರಹಕ್ಕೆ ಮಣಿಯದ ಸರ್ಕಾರ ಸಂಘಪರಿವಾರದ ಹಿನ್ನೆಲೆಯವರನ್ನು, ವಿವಿಧ ಕೆಲಸಗಳಿಗೆ ನೇಮಿಸುವುದನ್ನು ಮುಂದುವರಿಸಿದೆ.

ಈಗ ರಚಿಸಿರುವ ಯುವ ನೀತಿ ಸಮಿತಿಯು ರಾಜ್ಯದ ಯುವಜನರ ಭವಿಷ್ಯವನ್ನು ನಿರ್ಧರಿಸಲು ಚಿಂತಿಸಲಿದೆ ಎಂದು ಸರ್ಕಾರ ಹೇಳಿದೆ. “ಯುವಜನರು ತಮ್ಮ ಜೀವನವನ್ನು ಉತ್ತಮವಾಗಿ ಕಟ್ಟಿಕೊಳ್ಳಲು, ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಅನುವಾಗುವಂತೆ ಸಮಗ್ರ ಯುವ ನೀತಿ ಹೊರತರಲು ರಚನೆಯಾಗಿರುವ ತಜ್ಞರ ಸಮಿತಿ ಇದಾಗಿದ್ದು, ಸಮಗ್ರವಾಗಿ ಅಧ್ಯಯನ ನಡೆಸಿ ಎರಡು ತಿಂಗಳೊಳಗೆ ವರದಿ ನೀಡಬೇಕು” ಎಂದು ಇಲಾಖೆಯ ಅಧೀನ ಕಾರ್ಯದರ್ಶಿ ಎಂ.ಉಮೇಶ್‌ ಶಾಸ್ತ್ರಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿರಿ: ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ಯುವಜನ ಸಬಲೀಕರಣ ಸಚಿವ ನಾರಾಯಣಗೌಡ  ಅವರು, “ಕರ್ನಾಟಕ ಯುವ ನೀತಿಯನ್ನು ಈ ಹಿಂದೆ 2012ರಲ್ಲಿ ರೂಪಿಸಲಾಗಿದ್ದು, ಕಾಲಕ್ಕೆ ಅನುಗುಣವಾಗಿ ಹೊಸ ಯುವ ನೀತಿ ರೂಪಿಸುವ ಅವಶ್ಯಕತೆ ಇದೆ. ಅದರಂತೆ ತಜ್ಞರ ಸಮಿತಿ ರಚಿಸಲಾಗಿದ್ದು, ಸಮಗ್ರ ಹಾಗೂ ಕೌಶಲ್ಯಭರಿತ ಇಂದಿನ ಕಾಲಮಾನಕ್ಕೆ ತಕ್ಕಂತೆ ನೀತಿಯನ್ನು ಸಮಿತಿ ರೂಪಿಸಲಿದೆ” ಎಂದಿದ್ದಾರೆ.

ಸಮಿತಿಗೆ ನೇಮಕವಾಗಿರುವವರಲ್ಲಿ ಸಂಘಪರಿವಾರದ ಹಿನ್ನೆಲೆಯವರು ಹೆಚ್ಚಾಗಿ ಇರುವುದರಿಂದ ಯುವ ನೀತಿಯ ಸಂಬಂಧ ಆಕ್ಷೇಪಗಳು ವ್ಯಕ್ತವಾಗಿವೆ. ಚಕ್ರವರ್ತಿ ಸೂಲಿಬೆಲೆಯವರ ಸಾರ್ವಜನಿಕ ಭಾಷಣಗಳ ಕುರಿತು ಮೊದಲಿನಿಂದಲೂ ವ್ಯಂಗ್ಯ, ಕುಹಕಗಳಿವೆ. ಚಕ್ರವರ್ತಿ ಸೂಲಿಬೆಲೆಯವರು ಸುಳ್ಳುಗಳನ್ನು ಪೋಣಿಸಿ ಭಾಷಣ ಮಾಡುತ್ತಾರೆಂಬ ಆರೋಪಗಳಿದ್ದು, ಅಂಥವರನ್ನು ಸಮಿತಿಯಿಂದ ಕೈಬಿಡಬೇಕು ಎಂದು ಪ್ರಗತಿಪರ ಮನಸ್ಸುಗಳು ಆಗ್ರಹಿಸಿವೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ರಾಜ್ಯ ಸಂಚಾಲಕ ಸರೋವರ್‌ ಬೆಂಕಿಕೆರೆ, “ಚಕ್ರವರ್ತಿ ಸೂಲಿಬೆಲೆಯವರ ಮೇಲೆ ಇರುವ ಬಹಳ ದೊಡ್ಡ ಆರೋಪ ಅವರು ಸುಳ್ಳುಗಳನ್ನು ಹೇಳುತ್ತಾರೆಂಬುದು. ಯುವಜನರಿಗೆ ಬೇಕಾಗಿರುವುದು ಉದ್ಯೋಗ ಹಾಗೂ ಉದ್ಯೋಗ ಭದ್ರತೆ. ಇದಕ್ಕಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಯುವಜನರಿಗೆ ಸಮಸ್ಯೆ ಇದೆ, ನಿರುದ್ಯೋಗ ಇದೆ ಎಂದು ಒಪ್ಪಿಕೊಳ್ಳದೆ ಇರುವ ಜನರನ್ನು ಸಮಿತಿಯಲ್ಲಿ ನೇಮಿಸುವುದು ಆತಂಕಕಾರಿ. ಇಂಥವರು ಸರ್ಕಾರದ ಪರವಾಗಿಯೇ ನೀತಿ ರೂಪಿಸುತ್ತಾರೆ. ಯುವಜನರ ದಿಕ್ಕು ತಪ್ಪಿಸುವ ಹಿನ್ನೆಲೆ ಇರುವವರನ್ನು ಒಳಗೊಂಡ ಸಮಿತಿ ಮಾಡುವುದು ಸರ್ಕಾರದ ಅಧೋಗತಿಯನ್ನು ಸೂಚಿಸುತ್ತದೆ” ಎಂದರು.

ಸಾಮಾಜಿಕ ಕಾರ್ಯಕರ್ತ ಹರ್ಷಕುಮಾರ್‌ ಕುಗ್ವೆ ಪ್ರತಿಕ್ರಿಯಿಸಿ, “ಕಳೆದ 45 ವರ್ಷಗಳಲ್ಲೇ ಅತಿಹೆಚ್ಚು ನಿರುದ್ಯೋಗ ಮೋದಿ ಸರ್ಕಾರದ ಅವಧಿಯಲ್ಲಿ ಸೃಷ್ಟಿಯಾಗಿದೆ ಎಂದು ಎನ್‌ಎಸ್‌ಎಸ್‌ಓ ಹೇಳಿದೆ. ಆದರೆ ಸರ್ಕಾರ ಆ ವರದಿಯನ್ನು ತಡೆ ಹಿಡಿಯಿತು. ಮೋದಿ ಅವಧಿಯಲ್ಲಿ ಕೊಟ್ಯಾಂತರ ಯುವಕರು ಉದ್ಯೋಗ ಕಳೆದುಕೊಂಡಿದ್ದಾರೆ. ಇಂತಹ ಯುವಜನರ ಕೈಗೆ ಲಾಠಿ, ತ್ರಿಶೂಲ, ಬಡಿಗೆ ಕೊಟ್ಟು, ಮತ್ತೊಂದು ಕೋಮು ವಿರುದ್ಧ ದೊಂಬಿ ನಡೆಸಲಿಕ್ಕೆ ಸರ್ಕಾರ ಸಿದ್ಧವಾದಂತೆ ಕಾಣುತ್ತಿದೆ. ಇತ್ತೀಚೆಗೆ ಚಕ್ರವರ್ತಿ ಸೂಲಿಬೆಲೆ ಅವರು ಟ್ವೀಟ್‌ ಮಾಡಿದ್ದು, ಹಿಂದೂ ಶೂದ್ರ ಯುವಕರನ್ನು ಮುಸ್ಲಿಮರ ವಿರುದ್ಧ ನೇರವಾಗಿ ಪ್ರಚೋದನೆ ಮಾಡಲು ಯತ್ನಿಸಿದ್ದರು. ಇದನ್ನು ಗಮನಿಸಿ ಬೆಂಗಳೂರಿನ ಮಾಜಿ ಪೊಲೀಸ್‌ ಕಮೀಷನರ್‌, ಪ್ರಸ್ತುತ ರೈಲ್ವೇ ADGP ಆಗಿರುವ ಭಾಸ್ಕರ್‌ ರಾವ್ ಅವರು ಟ್ವಿಟರ್‌ನಲ್ಲೆ ಚಕ್ರವರ್ತಿ ಸೂಲಿಬೆಲೆಗೆ ಬುದ್ಧಿವಾದ ಹೇಳಿದ್ದರು. ಸಾರ್ವಜನಿಕ ವೇದಿಕೆಯಲ್ಲಿ ಮುಸ್ಲಿಮರ ವಿರುದ್ಧ ಯುವಕರನ್ನು ಛೂ ಬಿಡುವಂತಹ ಒಬ್ಬ ವ್ಯಕ್ತಿಯನ್ನು ಯುವ ನೀತಿ ಸಮಿತಿಯಲ್ಲಿ ಸೇರಿಸಿಕೊಂಡಿರುವುದು ಏತಕ್ಕೆ?” ಎಂದು ಪ್ರಶ್ನಿಸಿದರು.


ಇದನ್ನೂ ಓದಿರಿ: ಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ತಂಡ ಕೇಶವ ಕೃಪಾದ ಆದೇಶದಂತೆ ಕೆಲಸ ನಿರ್ವಹಿಸುತ್ತದೆ. ಆದ್ದರಿಂದ ಈ ಸಮಿತಿಯಿಂದ ಯುವಜನತೆಗೆ ಯಾವ ಪ್ರಯೋಜನವೂ ಆಗುವುದಿಲ್ಲ.

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...