Homeಕರ್ನಾಟಕ‘ಕರ್ನಾಟಕ ಯುವ ನೀತಿ-2021’ ರೂಪಿಕರಣ ಸಮಿತಿಯಲ್ಲಿ ‘ಚಕ್ರವರ್ತಿ ಸೂಲಿಬೆಲೆ’!

‘ಕರ್ನಾಟಕ ಯುವ ನೀತಿ-2021’ ರೂಪಿಕರಣ ಸಮಿತಿಯಲ್ಲಿ ‘ಚಕ್ರವರ್ತಿ ಸೂಲಿಬೆಲೆ’!

ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರ ಪುತ್ರ ಸಂಕಲ್ಪ ಶೆಟ್ಟರ್‌‌, ಮಾಜಿ ಸಚಿವ ಅನಂತಕುಮಾರ್‌ ಅವರ ಪುತ್ರಿ ಐಶ್ವರ್ಯ ದಿವೇಶ್‌ ಅವರು ಸಮಿತಿಯಲ್ಲಿ ಸದಸ್ಯರಾಗಿದ್ದಾರೆ.

- Advertisement -
- Advertisement -

ಕರ್ನಾಟಕ ಯುವ ನೀತಿ- 2021 ರೂಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಸ್ವಾಮಿ ವಿವೇಕಾನಂದ ಯೂತ್‌ ಮೂವ್‌ಮೆಂಟ್‌ ಸಂಸ್ಥಾಪಕ ಡಾ.ಬಾಲಸುಬ್ರಹ್ಮಣ್ಯಂ ಅವರ ಅಧ್ಯಕ್ಷತೆ ಸಮಿತಿಯನ್ನು ರಚಿಸಿದೆ.

ಸಮಿತಿಯ ವಿಶೇಷ ಆಹ್ವಾನಿತರಾಗಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌ ಹಾಗೂ ಸದಸ್ಯ ಕಾರ್ಯದರ್ಶಿಯಗಿ ಇಲಾಖೆ ಆಯುಕ್ತರನ್ನು ನೇಮಿಸಲಾಗಿದೆ. ತಜ್ಞರ ಸಮಿತಿಗೆ ಸಂಘ ಪರಿವಾರದ ಹಿನ್ನೆಲೆಯವರನ್ನು ಸದಸ್ಯರನ್ನಾಗಿ ಸೇರಿಸಲಾಗಿದೆ.

ಯುವ ಬ್ರಿಗೇಡ್ ಸಂಘಟನೆಯ ಚಕ್ರವರ್ತಿ ಸೂಲಿಬೆಲೆ, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರ ಪುತ್ರ ಸಂಕಲ್ಪ ಶೆಟ್ಟರ್‌‌, ಮಾಜಿ ಸಚಿವ ಅನಂತಕುಮಾರ್‌ ಅವರ ಪುತ್ರಿ ಐಶ್ವರ್ಯ ದಿವೇಶ್‌, ಬೆಂಗಳೂರಿನ ಮಲ್ಲಿಕಾರ್ಜುನ್‌ ಬಿ.ಪಾಟೀಲ್‌, ವಿನೋದ್‌ ಕೃಷ್ಣಮೂರ್ತಿ, ನೆಹರೂ ಯುವ ಕೇಂದ್ರದ ನಿರ್ದೇಶಕ ಎಂ.ಎನ್‌.ನಟರಾಜ್‌, ರಾಜ್ಯ ಎನ್‌‌ಎಸ್‌ಎಸ್‌ ಅಧಿಕಾರಿ ಡಾ.ಪ್ರತಾಪ್‌ ಲಿಂಗಯ್ಯ, ದೊಡ್ಡಬಳ್ಳಾಪುರದ ಡಾ.ಡಿ.ಎಸ್.ಕೃಷ್ಣ, ಮಂಡ್ಯದ ಕೆ.ನಾಗಣ್ಣಗೌಡ, ಬೇಲೂರಿನ ಸಂತೋಷ್ ಸೋಮಶೇಖರ್‌ (ಕೆಂಚಾಂಬ) ಅವರು ಸಮಿತಿ ಸದಸ್ಯರಾಗಿದ್ದಾರೆ.

ಪಠ್ಯಪುಸ್ತಕ ಪರಿಶೀಲನಾ ಸಮಿತಿ ರಚಿಸಿ, ಸಂಘಪರಿವಾರದ ಹಿನ್ನೆಲೆಯ ರೋಹಿತ್‌ ಚಕ್ರತೀರ್ಥ ಅವರನ್ನು ಸರ್ಕಾರ ನೇಮಿಸಿದ್ದು ಟೀಕೆಗೆ ಗುರಿಯಾಗಿತ್ತು. ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿದ ಆರೋಪ ಚಕ್ರತೀರ್ಥ ಅವರ ಮೇಲಿದ್ದು, ಅಂಥವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರನ್ನಾಗಿ ನೇಮಿಸಿದಾಗಲೇ ಆಕ್ರೋಶ ವ್ಯಕ್ತವಾಗಿತ್ತು.

ಪ್ರಗತಿಪರ ಮನಸ್ಸುಗಳ ವಿರುದ್ಧ ನಂಜುಕಾರುವ ರೀತಿ ಚಕ್ರತೀರ್ಥ ಅವರು ಭಾಷೆಯನ್ನು ಬಳಸುತ್ತಾರೆ. ಅಂಥವರನ್ನು ಕನ್ನಡದ ಕೆಲಸಗಳಿಗೆ ನೇಮಿಸಬಾರದು ಎಂದು ಟೀಕಿಸಲಾಗಿತ್ತು. ಆದರೆ ಜನಾಗ್ರಹಕ್ಕೆ ಮಣಿಯದ ಸರ್ಕಾರ ಸಂಘಪರಿವಾರದ ಹಿನ್ನೆಲೆಯವರನ್ನು, ವಿವಿಧ ಕೆಲಸಗಳಿಗೆ ನೇಮಿಸುವುದನ್ನು ಮುಂದುವರಿಸಿದೆ.

ಈಗ ರಚಿಸಿರುವ ಯುವ ನೀತಿ ಸಮಿತಿಯು ರಾಜ್ಯದ ಯುವಜನರ ಭವಿಷ್ಯವನ್ನು ನಿರ್ಧರಿಸಲು ಚಿಂತಿಸಲಿದೆ ಎಂದು ಸರ್ಕಾರ ಹೇಳಿದೆ. “ಯುವಜನರು ತಮ್ಮ ಜೀವನವನ್ನು ಉತ್ತಮವಾಗಿ ಕಟ್ಟಿಕೊಳ್ಳಲು, ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಅನುವಾಗುವಂತೆ ಸಮಗ್ರ ಯುವ ನೀತಿ ಹೊರತರಲು ರಚನೆಯಾಗಿರುವ ತಜ್ಞರ ಸಮಿತಿ ಇದಾಗಿದ್ದು, ಸಮಗ್ರವಾಗಿ ಅಧ್ಯಯನ ನಡೆಸಿ ಎರಡು ತಿಂಗಳೊಳಗೆ ವರದಿ ನೀಡಬೇಕು” ಎಂದು ಇಲಾಖೆಯ ಅಧೀನ ಕಾರ್ಯದರ್ಶಿ ಎಂ.ಉಮೇಶ್‌ ಶಾಸ್ತ್ರಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿರಿ: ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ಯುವಜನ ಸಬಲೀಕರಣ ಸಚಿವ ನಾರಾಯಣಗೌಡ  ಅವರು, “ಕರ್ನಾಟಕ ಯುವ ನೀತಿಯನ್ನು ಈ ಹಿಂದೆ 2012ರಲ್ಲಿ ರೂಪಿಸಲಾಗಿದ್ದು, ಕಾಲಕ್ಕೆ ಅನುಗುಣವಾಗಿ ಹೊಸ ಯುವ ನೀತಿ ರೂಪಿಸುವ ಅವಶ್ಯಕತೆ ಇದೆ. ಅದರಂತೆ ತಜ್ಞರ ಸಮಿತಿ ರಚಿಸಲಾಗಿದ್ದು, ಸಮಗ್ರ ಹಾಗೂ ಕೌಶಲ್ಯಭರಿತ ಇಂದಿನ ಕಾಲಮಾನಕ್ಕೆ ತಕ್ಕಂತೆ ನೀತಿಯನ್ನು ಸಮಿತಿ ರೂಪಿಸಲಿದೆ” ಎಂದಿದ್ದಾರೆ.

ಸಮಿತಿಗೆ ನೇಮಕವಾಗಿರುವವರಲ್ಲಿ ಸಂಘಪರಿವಾರದ ಹಿನ್ನೆಲೆಯವರು ಹೆಚ್ಚಾಗಿ ಇರುವುದರಿಂದ ಯುವ ನೀತಿಯ ಸಂಬಂಧ ಆಕ್ಷೇಪಗಳು ವ್ಯಕ್ತವಾಗಿವೆ. ಚಕ್ರವರ್ತಿ ಸೂಲಿಬೆಲೆಯವರ ಸಾರ್ವಜನಿಕ ಭಾಷಣಗಳ ಕುರಿತು ಮೊದಲಿನಿಂದಲೂ ವ್ಯಂಗ್ಯ, ಕುಹಕಗಳಿವೆ. ಚಕ್ರವರ್ತಿ ಸೂಲಿಬೆಲೆಯವರು ಸುಳ್ಳುಗಳನ್ನು ಪೋಣಿಸಿ ಭಾಷಣ ಮಾಡುತ್ತಾರೆಂಬ ಆರೋಪಗಳಿದ್ದು, ಅಂಥವರನ್ನು ಸಮಿತಿಯಿಂದ ಕೈಬಿಡಬೇಕು ಎಂದು ಪ್ರಗತಿಪರ ಮನಸ್ಸುಗಳು ಆಗ್ರಹಿಸಿವೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ರಾಜ್ಯ ಸಂಚಾಲಕ ಸರೋವರ್‌ ಬೆಂಕಿಕೆರೆ, “ಚಕ್ರವರ್ತಿ ಸೂಲಿಬೆಲೆಯವರ ಮೇಲೆ ಇರುವ ಬಹಳ ದೊಡ್ಡ ಆರೋಪ ಅವರು ಸುಳ್ಳುಗಳನ್ನು ಹೇಳುತ್ತಾರೆಂಬುದು. ಯುವಜನರಿಗೆ ಬೇಕಾಗಿರುವುದು ಉದ್ಯೋಗ ಹಾಗೂ ಉದ್ಯೋಗ ಭದ್ರತೆ. ಇದಕ್ಕಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಯುವಜನರಿಗೆ ಸಮಸ್ಯೆ ಇದೆ, ನಿರುದ್ಯೋಗ ಇದೆ ಎಂದು ಒಪ್ಪಿಕೊಳ್ಳದೆ ಇರುವ ಜನರನ್ನು ಸಮಿತಿಯಲ್ಲಿ ನೇಮಿಸುವುದು ಆತಂಕಕಾರಿ. ಇಂಥವರು ಸರ್ಕಾರದ ಪರವಾಗಿಯೇ ನೀತಿ ರೂಪಿಸುತ್ತಾರೆ. ಯುವಜನರ ದಿಕ್ಕು ತಪ್ಪಿಸುವ ಹಿನ್ನೆಲೆ ಇರುವವರನ್ನು ಒಳಗೊಂಡ ಸಮಿತಿ ಮಾಡುವುದು ಸರ್ಕಾರದ ಅಧೋಗತಿಯನ್ನು ಸೂಚಿಸುತ್ತದೆ” ಎಂದರು.

ಸಾಮಾಜಿಕ ಕಾರ್ಯಕರ್ತ ಹರ್ಷಕುಮಾರ್‌ ಕುಗ್ವೆ ಪ್ರತಿಕ್ರಿಯಿಸಿ, “ಕಳೆದ 45 ವರ್ಷಗಳಲ್ಲೇ ಅತಿಹೆಚ್ಚು ನಿರುದ್ಯೋಗ ಮೋದಿ ಸರ್ಕಾರದ ಅವಧಿಯಲ್ಲಿ ಸೃಷ್ಟಿಯಾಗಿದೆ ಎಂದು ಎನ್‌ಎಸ್‌ಎಸ್‌ಓ ಹೇಳಿದೆ. ಆದರೆ ಸರ್ಕಾರ ಆ ವರದಿಯನ್ನು ತಡೆ ಹಿಡಿಯಿತು. ಮೋದಿ ಅವಧಿಯಲ್ಲಿ ಕೊಟ್ಯಾಂತರ ಯುವಕರು ಉದ್ಯೋಗ ಕಳೆದುಕೊಂಡಿದ್ದಾರೆ. ಇಂತಹ ಯುವಜನರ ಕೈಗೆ ಲಾಠಿ, ತ್ರಿಶೂಲ, ಬಡಿಗೆ ಕೊಟ್ಟು, ಮತ್ತೊಂದು ಕೋಮು ವಿರುದ್ಧ ದೊಂಬಿ ನಡೆಸಲಿಕ್ಕೆ ಸರ್ಕಾರ ಸಿದ್ಧವಾದಂತೆ ಕಾಣುತ್ತಿದೆ. ಇತ್ತೀಚೆಗೆ ಚಕ್ರವರ್ತಿ ಸೂಲಿಬೆಲೆ ಅವರು ಟ್ವೀಟ್‌ ಮಾಡಿದ್ದು, ಹಿಂದೂ ಶೂದ್ರ ಯುವಕರನ್ನು ಮುಸ್ಲಿಮರ ವಿರುದ್ಧ ನೇರವಾಗಿ ಪ್ರಚೋದನೆ ಮಾಡಲು ಯತ್ನಿಸಿದ್ದರು. ಇದನ್ನು ಗಮನಿಸಿ ಬೆಂಗಳೂರಿನ ಮಾಜಿ ಪೊಲೀಸ್‌ ಕಮೀಷನರ್‌, ಪ್ರಸ್ತುತ ರೈಲ್ವೇ ADGP ಆಗಿರುವ ಭಾಸ್ಕರ್‌ ರಾವ್ ಅವರು ಟ್ವಿಟರ್‌ನಲ್ಲೆ ಚಕ್ರವರ್ತಿ ಸೂಲಿಬೆಲೆಗೆ ಬುದ್ಧಿವಾದ ಹೇಳಿದ್ದರು. ಸಾರ್ವಜನಿಕ ವೇದಿಕೆಯಲ್ಲಿ ಮುಸ್ಲಿಮರ ವಿರುದ್ಧ ಯುವಕರನ್ನು ಛೂ ಬಿಡುವಂತಹ ಒಬ್ಬ ವ್ಯಕ್ತಿಯನ್ನು ಯುವ ನೀತಿ ಸಮಿತಿಯಲ್ಲಿ ಸೇರಿಸಿಕೊಂಡಿರುವುದು ಏತಕ್ಕೆ?” ಎಂದು ಪ್ರಶ್ನಿಸಿದರು.


ಇದನ್ನೂ ಓದಿರಿ: ಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ತಂಡ ಕೇಶವ ಕೃಪಾದ ಆದೇಶದಂತೆ ಕೆಲಸ ನಿರ್ವಹಿಸುತ್ತದೆ. ಆದ್ದರಿಂದ ಈ ಸಮಿತಿಯಿಂದ ಯುವಜನತೆಗೆ ಯಾವ ಪ್ರಯೋಜನವೂ ಆಗುವುದಿಲ್ಲ.

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...