Homeಕರ್ನಾಟಕ‘ಕರ್ನಾಟಕ ಯುವ ನೀತಿ-2021’ ರೂಪಿಕರಣ ಸಮಿತಿಯಲ್ಲಿ ‘ಚಕ್ರವರ್ತಿ ಸೂಲಿಬೆಲೆ’!

‘ಕರ್ನಾಟಕ ಯುವ ನೀತಿ-2021’ ರೂಪಿಕರಣ ಸಮಿತಿಯಲ್ಲಿ ‘ಚಕ್ರವರ್ತಿ ಸೂಲಿಬೆಲೆ’!

ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರ ಪುತ್ರ ಸಂಕಲ್ಪ ಶೆಟ್ಟರ್‌‌, ಮಾಜಿ ಸಚಿವ ಅನಂತಕುಮಾರ್‌ ಅವರ ಪುತ್ರಿ ಐಶ್ವರ್ಯ ದಿವೇಶ್‌ ಅವರು ಸಮಿತಿಯಲ್ಲಿ ಸದಸ್ಯರಾಗಿದ್ದಾರೆ.

- Advertisement -
- Advertisement -

ಕರ್ನಾಟಕ ಯುವ ನೀತಿ- 2021 ರೂಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಸ್ವಾಮಿ ವಿವೇಕಾನಂದ ಯೂತ್‌ ಮೂವ್‌ಮೆಂಟ್‌ ಸಂಸ್ಥಾಪಕ ಡಾ.ಬಾಲಸುಬ್ರಹ್ಮಣ್ಯಂ ಅವರ ಅಧ್ಯಕ್ಷತೆ ಸಮಿತಿಯನ್ನು ರಚಿಸಿದೆ.

ಸಮಿತಿಯ ವಿಶೇಷ ಆಹ್ವಾನಿತರಾಗಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌ ಹಾಗೂ ಸದಸ್ಯ ಕಾರ್ಯದರ್ಶಿಯಗಿ ಇಲಾಖೆ ಆಯುಕ್ತರನ್ನು ನೇಮಿಸಲಾಗಿದೆ. ತಜ್ಞರ ಸಮಿತಿಗೆ ಸಂಘ ಪರಿವಾರದ ಹಿನ್ನೆಲೆಯವರನ್ನು ಸದಸ್ಯರನ್ನಾಗಿ ಸೇರಿಸಲಾಗಿದೆ.

ಯುವ ಬ್ರಿಗೇಡ್ ಸಂಘಟನೆಯ ಚಕ್ರವರ್ತಿ ಸೂಲಿಬೆಲೆ, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರ ಪುತ್ರ ಸಂಕಲ್ಪ ಶೆಟ್ಟರ್‌‌, ಮಾಜಿ ಸಚಿವ ಅನಂತಕುಮಾರ್‌ ಅವರ ಪುತ್ರಿ ಐಶ್ವರ್ಯ ದಿವೇಶ್‌, ಬೆಂಗಳೂರಿನ ಮಲ್ಲಿಕಾರ್ಜುನ್‌ ಬಿ.ಪಾಟೀಲ್‌, ವಿನೋದ್‌ ಕೃಷ್ಣಮೂರ್ತಿ, ನೆಹರೂ ಯುವ ಕೇಂದ್ರದ ನಿರ್ದೇಶಕ ಎಂ.ಎನ್‌.ನಟರಾಜ್‌, ರಾಜ್ಯ ಎನ್‌‌ಎಸ್‌ಎಸ್‌ ಅಧಿಕಾರಿ ಡಾ.ಪ್ರತಾಪ್‌ ಲಿಂಗಯ್ಯ, ದೊಡ್ಡಬಳ್ಳಾಪುರದ ಡಾ.ಡಿ.ಎಸ್.ಕೃಷ್ಣ, ಮಂಡ್ಯದ ಕೆ.ನಾಗಣ್ಣಗೌಡ, ಬೇಲೂರಿನ ಸಂತೋಷ್ ಸೋಮಶೇಖರ್‌ (ಕೆಂಚಾಂಬ) ಅವರು ಸಮಿತಿ ಸದಸ್ಯರಾಗಿದ್ದಾರೆ.

ಪಠ್ಯಪುಸ್ತಕ ಪರಿಶೀಲನಾ ಸಮಿತಿ ರಚಿಸಿ, ಸಂಘಪರಿವಾರದ ಹಿನ್ನೆಲೆಯ ರೋಹಿತ್‌ ಚಕ್ರತೀರ್ಥ ಅವರನ್ನು ಸರ್ಕಾರ ನೇಮಿಸಿದ್ದು ಟೀಕೆಗೆ ಗುರಿಯಾಗಿತ್ತು. ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿದ ಆರೋಪ ಚಕ್ರತೀರ್ಥ ಅವರ ಮೇಲಿದ್ದು, ಅಂಥವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರನ್ನಾಗಿ ನೇಮಿಸಿದಾಗಲೇ ಆಕ್ರೋಶ ವ್ಯಕ್ತವಾಗಿತ್ತು.

ಪ್ರಗತಿಪರ ಮನಸ್ಸುಗಳ ವಿರುದ್ಧ ನಂಜುಕಾರುವ ರೀತಿ ಚಕ್ರತೀರ್ಥ ಅವರು ಭಾಷೆಯನ್ನು ಬಳಸುತ್ತಾರೆ. ಅಂಥವರನ್ನು ಕನ್ನಡದ ಕೆಲಸಗಳಿಗೆ ನೇಮಿಸಬಾರದು ಎಂದು ಟೀಕಿಸಲಾಗಿತ್ತು. ಆದರೆ ಜನಾಗ್ರಹಕ್ಕೆ ಮಣಿಯದ ಸರ್ಕಾರ ಸಂಘಪರಿವಾರದ ಹಿನ್ನೆಲೆಯವರನ್ನು, ವಿವಿಧ ಕೆಲಸಗಳಿಗೆ ನೇಮಿಸುವುದನ್ನು ಮುಂದುವರಿಸಿದೆ.

ಈಗ ರಚಿಸಿರುವ ಯುವ ನೀತಿ ಸಮಿತಿಯು ರಾಜ್ಯದ ಯುವಜನರ ಭವಿಷ್ಯವನ್ನು ನಿರ್ಧರಿಸಲು ಚಿಂತಿಸಲಿದೆ ಎಂದು ಸರ್ಕಾರ ಹೇಳಿದೆ. “ಯುವಜನರು ತಮ್ಮ ಜೀವನವನ್ನು ಉತ್ತಮವಾಗಿ ಕಟ್ಟಿಕೊಳ್ಳಲು, ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಅನುವಾಗುವಂತೆ ಸಮಗ್ರ ಯುವ ನೀತಿ ಹೊರತರಲು ರಚನೆಯಾಗಿರುವ ತಜ್ಞರ ಸಮಿತಿ ಇದಾಗಿದ್ದು, ಸಮಗ್ರವಾಗಿ ಅಧ್ಯಯನ ನಡೆಸಿ ಎರಡು ತಿಂಗಳೊಳಗೆ ವರದಿ ನೀಡಬೇಕು” ಎಂದು ಇಲಾಖೆಯ ಅಧೀನ ಕಾರ್ಯದರ್ಶಿ ಎಂ.ಉಮೇಶ್‌ ಶಾಸ್ತ್ರಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿರಿ: ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ಯುವಜನ ಸಬಲೀಕರಣ ಸಚಿವ ನಾರಾಯಣಗೌಡ  ಅವರು, “ಕರ್ನಾಟಕ ಯುವ ನೀತಿಯನ್ನು ಈ ಹಿಂದೆ 2012ರಲ್ಲಿ ರೂಪಿಸಲಾಗಿದ್ದು, ಕಾಲಕ್ಕೆ ಅನುಗುಣವಾಗಿ ಹೊಸ ಯುವ ನೀತಿ ರೂಪಿಸುವ ಅವಶ್ಯಕತೆ ಇದೆ. ಅದರಂತೆ ತಜ್ಞರ ಸಮಿತಿ ರಚಿಸಲಾಗಿದ್ದು, ಸಮಗ್ರ ಹಾಗೂ ಕೌಶಲ್ಯಭರಿತ ಇಂದಿನ ಕಾಲಮಾನಕ್ಕೆ ತಕ್ಕಂತೆ ನೀತಿಯನ್ನು ಸಮಿತಿ ರೂಪಿಸಲಿದೆ” ಎಂದಿದ್ದಾರೆ.

ಸಮಿತಿಗೆ ನೇಮಕವಾಗಿರುವವರಲ್ಲಿ ಸಂಘಪರಿವಾರದ ಹಿನ್ನೆಲೆಯವರು ಹೆಚ್ಚಾಗಿ ಇರುವುದರಿಂದ ಯುವ ನೀತಿಯ ಸಂಬಂಧ ಆಕ್ಷೇಪಗಳು ವ್ಯಕ್ತವಾಗಿವೆ. ಚಕ್ರವರ್ತಿ ಸೂಲಿಬೆಲೆಯವರ ಸಾರ್ವಜನಿಕ ಭಾಷಣಗಳ ಕುರಿತು ಮೊದಲಿನಿಂದಲೂ ವ್ಯಂಗ್ಯ, ಕುಹಕಗಳಿವೆ. ಚಕ್ರವರ್ತಿ ಸೂಲಿಬೆಲೆಯವರು ಸುಳ್ಳುಗಳನ್ನು ಪೋಣಿಸಿ ಭಾಷಣ ಮಾಡುತ್ತಾರೆಂಬ ಆರೋಪಗಳಿದ್ದು, ಅಂಥವರನ್ನು ಸಮಿತಿಯಿಂದ ಕೈಬಿಡಬೇಕು ಎಂದು ಪ್ರಗತಿಪರ ಮನಸ್ಸುಗಳು ಆಗ್ರಹಿಸಿವೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ರಾಜ್ಯ ಸಂಚಾಲಕ ಸರೋವರ್‌ ಬೆಂಕಿಕೆರೆ, “ಚಕ್ರವರ್ತಿ ಸೂಲಿಬೆಲೆಯವರ ಮೇಲೆ ಇರುವ ಬಹಳ ದೊಡ್ಡ ಆರೋಪ ಅವರು ಸುಳ್ಳುಗಳನ್ನು ಹೇಳುತ್ತಾರೆಂಬುದು. ಯುವಜನರಿಗೆ ಬೇಕಾಗಿರುವುದು ಉದ್ಯೋಗ ಹಾಗೂ ಉದ್ಯೋಗ ಭದ್ರತೆ. ಇದಕ್ಕಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಯುವಜನರಿಗೆ ಸಮಸ್ಯೆ ಇದೆ, ನಿರುದ್ಯೋಗ ಇದೆ ಎಂದು ಒಪ್ಪಿಕೊಳ್ಳದೆ ಇರುವ ಜನರನ್ನು ಸಮಿತಿಯಲ್ಲಿ ನೇಮಿಸುವುದು ಆತಂಕಕಾರಿ. ಇಂಥವರು ಸರ್ಕಾರದ ಪರವಾಗಿಯೇ ನೀತಿ ರೂಪಿಸುತ್ತಾರೆ. ಯುವಜನರ ದಿಕ್ಕು ತಪ್ಪಿಸುವ ಹಿನ್ನೆಲೆ ಇರುವವರನ್ನು ಒಳಗೊಂಡ ಸಮಿತಿ ಮಾಡುವುದು ಸರ್ಕಾರದ ಅಧೋಗತಿಯನ್ನು ಸೂಚಿಸುತ್ತದೆ” ಎಂದರು.

ಸಾಮಾಜಿಕ ಕಾರ್ಯಕರ್ತ ಹರ್ಷಕುಮಾರ್‌ ಕುಗ್ವೆ ಪ್ರತಿಕ್ರಿಯಿಸಿ, “ಕಳೆದ 45 ವರ್ಷಗಳಲ್ಲೇ ಅತಿಹೆಚ್ಚು ನಿರುದ್ಯೋಗ ಮೋದಿ ಸರ್ಕಾರದ ಅವಧಿಯಲ್ಲಿ ಸೃಷ್ಟಿಯಾಗಿದೆ ಎಂದು ಎನ್‌ಎಸ್‌ಎಸ್‌ಓ ಹೇಳಿದೆ. ಆದರೆ ಸರ್ಕಾರ ಆ ವರದಿಯನ್ನು ತಡೆ ಹಿಡಿಯಿತು. ಮೋದಿ ಅವಧಿಯಲ್ಲಿ ಕೊಟ್ಯಾಂತರ ಯುವಕರು ಉದ್ಯೋಗ ಕಳೆದುಕೊಂಡಿದ್ದಾರೆ. ಇಂತಹ ಯುವಜನರ ಕೈಗೆ ಲಾಠಿ, ತ್ರಿಶೂಲ, ಬಡಿಗೆ ಕೊಟ್ಟು, ಮತ್ತೊಂದು ಕೋಮು ವಿರುದ್ಧ ದೊಂಬಿ ನಡೆಸಲಿಕ್ಕೆ ಸರ್ಕಾರ ಸಿದ್ಧವಾದಂತೆ ಕಾಣುತ್ತಿದೆ. ಇತ್ತೀಚೆಗೆ ಚಕ್ರವರ್ತಿ ಸೂಲಿಬೆಲೆ ಅವರು ಟ್ವೀಟ್‌ ಮಾಡಿದ್ದು, ಹಿಂದೂ ಶೂದ್ರ ಯುವಕರನ್ನು ಮುಸ್ಲಿಮರ ವಿರುದ್ಧ ನೇರವಾಗಿ ಪ್ರಚೋದನೆ ಮಾಡಲು ಯತ್ನಿಸಿದ್ದರು. ಇದನ್ನು ಗಮನಿಸಿ ಬೆಂಗಳೂರಿನ ಮಾಜಿ ಪೊಲೀಸ್‌ ಕಮೀಷನರ್‌, ಪ್ರಸ್ತುತ ರೈಲ್ವೇ ADGP ಆಗಿರುವ ಭಾಸ್ಕರ್‌ ರಾವ್ ಅವರು ಟ್ವಿಟರ್‌ನಲ್ಲೆ ಚಕ್ರವರ್ತಿ ಸೂಲಿಬೆಲೆಗೆ ಬುದ್ಧಿವಾದ ಹೇಳಿದ್ದರು. ಸಾರ್ವಜನಿಕ ವೇದಿಕೆಯಲ್ಲಿ ಮುಸ್ಲಿಮರ ವಿರುದ್ಧ ಯುವಕರನ್ನು ಛೂ ಬಿಡುವಂತಹ ಒಬ್ಬ ವ್ಯಕ್ತಿಯನ್ನು ಯುವ ನೀತಿ ಸಮಿತಿಯಲ್ಲಿ ಸೇರಿಸಿಕೊಂಡಿರುವುದು ಏತಕ್ಕೆ?” ಎಂದು ಪ್ರಶ್ನಿಸಿದರು.


ಇದನ್ನೂ ಓದಿರಿ: ಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ತಂಡ ಕೇಶವ ಕೃಪಾದ ಆದೇಶದಂತೆ ಕೆಲಸ ನಿರ್ವಹಿಸುತ್ತದೆ. ಆದ್ದರಿಂದ ಈ ಸಮಿತಿಯಿಂದ ಯುವಜನತೆಗೆ ಯಾವ ಪ್ರಯೋಜನವೂ ಆಗುವುದಿಲ್ಲ.

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...