Homeಕರ್ನಾಟಕಸೂಲಿಬೆಲೆ ಆಟ ಇನ್ನು ನಡೆಯಲ್ಲ: ಎಂ.ಬಿ.ಪಾಟೀಲ್ ಖಡಕ್‌ ಎಚ್ಚರಿಕೆ

ಸೂಲಿಬೆಲೆ ಆಟ ಇನ್ನು ನಡೆಯಲ್ಲ: ಎಂ.ಬಿ.ಪಾಟೀಲ್ ಖಡಕ್‌ ಎಚ್ಚರಿಕೆ

- Advertisement -
- Advertisement -

ಸುಳ್ಳುಗಳನ್ನು ಹೇಳುತ್ತಾರೆಂಬ ಆರೋಪಗಳಿಗೆ ಗುರಿಯಾಗಿರುವ ಬಲಪಂಥೀಯ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಯವರಿಗೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಎಚ್ಚರಿಕೆ ನೀಡಿದ್ದಾರೆ.

ವಿಜಯಪುರದಲ್ಲಿ ಭಾನುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ಸಚಿವರು, “ಸಮಾಜದಲ್ಲಿ ಕೋಮು ಭಾವನೆ ಸೃಷ್ಟಿಸುವ ಚಕ್ರವರ್ತಿ ಸೂಲಿಬೆಲೆ ಆಟ ಇನ್ನು ನಡೆಯದು” ಎಂದಿದ್ದಾರೆ.

ಮೈಸೂರಿನಲ್ಲಿ ಆಯೋಜಿಸಲಾಗಿದ್ದ ವಿ.ಡಿ.ಸಾವರ್ಕರ್ ಜಯಂತಿಯಲ್ಲಿ ಮಾತನಾಡಿದ್ದ ಸೂಲಿಬೆಲೆ, ರಾಜ್ಯದಲ್ಲಿ ಹಿಟ್ಲರ್‌ ಸರ್ಕಾರವಿದೆ” ಎಂದಿದ್ದರು. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಎಂ.ಬಿ.ಪಾಟೀಲ್‌, “ಬಿಜೆಪಿ ಸರ್ಕಾರದಲ್ಲಿ ಹಿಜಾಬ್, ಹಲಾಲ್, ಉರಿಗೌಡ ಅಂತೆಲ್ಲ ಸಮಾಜದಲ್ಲಿ ಸಂಘರ್ಷಮಯ ವಾತಾವರಣ ಸೃಷ್ಟಿಸುವ ಕೆಲಸ ಮಾಡಿದ ಬಿಜೆಪಿ, ರಾಜ್ಯದ ಅಭಿವೃದ್ಧಿ ಕಡೆಗಣಿಸಿತು” ಎಂದು ಟೀಕಿಸಿದ್ದಾರೆ.

“ರೋಸಿಹೋದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದ್ದಾರೆ. ಮಾಧ್ಯಮಗಳೂ ಸೇರಿದಂತೆ ಎಲ್ಲರ ನಿರೀಕ್ಷೆ ಹುಸಿಗೊಳಿಸಿ ಕಾಂಗ್ರೆಸ್ ಪಕ್ಷಕ್ಕೆ ಅದ್ಭುತ ಬಹುಮತದ ಸರ್ಕಾರ ರಚನೆಗೆ ಮತದಾರ ಪ್ರಭುಗಳು ಆಶೀರ್ವಾದ ಮಾಡಿದ್ದಾರೆ. ನಮ್ಮ ಸರ್ಕಾರ ಎಲ್ಲ ಸಮುದಾಯಗಳ ರಕ್ಷಣೆ ವಿಷಯದಲ್ಲಿ ವಿಶೇಷ ಕಾಳಜಿ ತೋರಲಿದೆ” ಎಂದು ತಿಳಿಸಿದ್ದಾರೆ.

“ಗೋಹತ್ಯೆ ನಿಷೇಧ ಕಾನೂನು, ಮುಸ್ಲಿಮರಿಂದ ಕಿತ್ತುಕೊಂಡ ಶೇ.4 ಮೀಸಲಾತಿ, ಮತಾಂತರ ನಿಷೇಧ ಕಾನೂ ಹಿಂಪಡೆಯುವುದು ಸೇರಿದಂತೆ ಅಹಿಂದ ಸಂಘಟನೆಯ ಬೇಡಿಕೆ ಈಡೇರಿಸುವ ಕುರಿತು ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ನಿರ್ಧಾರ ಕೈಗೊಳ್ಳಲಾಗುತ್ತದೆ” ಎಂದು ಹೇಳಿದ್ದಾರೆ.

“ಈ ಹಿಂದೆ ನಾಲ್ಕು ವರ್ಷ ಸೂಲಿಬೆಲೆ ಅನಾಹುತ ಮಾಡಿದ್ದಾರೆ. ಸೂಲಿಬೆಲೆ ಮಾಡಿದ ಅನಾಹುತಗಳನ್ನ ಈಗ ನಾವು ಸರಿಪಡೆಸುತ್ತಿದ್ದೇವೆ. ಅಲ್ಲದೇ, ಪಠ್ಯಪುಸ್ತಕ, ಹಿಜಾಬ್, ಹಲಾಲ್, ಅಝಾನ್ ಅಂತ ನಾಟಕ ಮಾಡಿದ್ದಾರೆ. ಇದಕ್ಕೆಲ್ಲ ಇತಿಶ್ರೀ ಹಾಡುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ‘ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿಯಾಗಲಿ’: ಸಚಿವರ ಹೇಳಿಕೆ ಸ್ವಾಗತಿಸಿದ ರೈತರು ಏನಂತಾರೆ?

“ಕೇಸರಿ ಬಣ್ಣ ಬರೀ ಬಿಜೆಪಿಯವರು ಗುತ್ತಿಗೆ ಪಡೆದಿಲ್ಲ. ನಮ್ಮ ದೇವಸ್ಥಾನಗಳ ಮೇಲೆ ಕೇಸರಿ ಧ್ವಜವನ್ನೇ ಹಾರಿಸಲಾಗುತ್ತದೆ. ನಮ್ಮ ಮನೆಯಲ್ಲೂ ಕೇಸರಿ ಬಣ್ಣ ಬಳಕೆ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

ಶನಿವಾರ ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸೂಲಿಬೆಲೆ, “ಇಂದಿನ ಕಾರ್ಯಕ್ರಮ ಇಲ್ಲ, ರದ್ದಾಗಲಿದೆ ಎಂದು ನಾವು ತಿಳಿದಿದ್ದೆವು. ಇದಕ್ಕೆ ಹಲವರು ಕಾರಣಗಳು ಇವೆ. ಸಾಹಿತಿ ಎಸ್.ಎಲ್.ಭೈರಪ್ಪ, ನಾನು ಇದ್ದೇವೆ ಎಂದು ರದ್ದು ಪಡಿಸುವ ಕೆಲಸವಾಗಿದೆ” ಎಂದಿದ್ದರು.

“ಸಾವರ್ಕರ್ ಕಾರ್ಯಕ್ರಮದ ಬಗ್ಗೆ ಸರ್ಕಾರಕ್ಕೆ ಭಯ ಇರಬಹುದು. ಅಧಿಕಾರಕ್ಕೆ ಬಂದು ಒಂದು ವಾರವಾಗಿಲ್ಲ. ಅಷ್ಟರಲ್ಲಿ ಸಾವರ್ಕರ್ ಜಯಂತಿ ರದ್ದು ಮಾಡಲು ಹೊರಟಿದ್ದಾರೆ. ಇದು ಹಿಟ್ಲರ್ ಸರ್ಕಾರ. ಸಾವರ್ಕರ್ ಇವತ್ತಿಗೂ ಪ್ರಸ್ತುತ ಹಾಗೂ ಜೀವಂತ” ಎಂದು ಅಭಿಪ್ರಾಯಪಟ್ಟಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....