Homeಕರ್ನಾಟಕಸೂಲಿಬೆಲೆ ಆಟ ಇನ್ನು ನಡೆಯಲ್ಲ: ಎಂ.ಬಿ.ಪಾಟೀಲ್ ಖಡಕ್‌ ಎಚ್ಚರಿಕೆ

ಸೂಲಿಬೆಲೆ ಆಟ ಇನ್ನು ನಡೆಯಲ್ಲ: ಎಂ.ಬಿ.ಪಾಟೀಲ್ ಖಡಕ್‌ ಎಚ್ಚರಿಕೆ

- Advertisement -
- Advertisement -

ಸುಳ್ಳುಗಳನ್ನು ಹೇಳುತ್ತಾರೆಂಬ ಆರೋಪಗಳಿಗೆ ಗುರಿಯಾಗಿರುವ ಬಲಪಂಥೀಯ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಯವರಿಗೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಎಚ್ಚರಿಕೆ ನೀಡಿದ್ದಾರೆ.

ವಿಜಯಪುರದಲ್ಲಿ ಭಾನುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ಸಚಿವರು, “ಸಮಾಜದಲ್ಲಿ ಕೋಮು ಭಾವನೆ ಸೃಷ್ಟಿಸುವ ಚಕ್ರವರ್ತಿ ಸೂಲಿಬೆಲೆ ಆಟ ಇನ್ನು ನಡೆಯದು” ಎಂದಿದ್ದಾರೆ.

ಮೈಸೂರಿನಲ್ಲಿ ಆಯೋಜಿಸಲಾಗಿದ್ದ ವಿ.ಡಿ.ಸಾವರ್ಕರ್ ಜಯಂತಿಯಲ್ಲಿ ಮಾತನಾಡಿದ್ದ ಸೂಲಿಬೆಲೆ, ರಾಜ್ಯದಲ್ಲಿ ಹಿಟ್ಲರ್‌ ಸರ್ಕಾರವಿದೆ” ಎಂದಿದ್ದರು. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಎಂ.ಬಿ.ಪಾಟೀಲ್‌, “ಬಿಜೆಪಿ ಸರ್ಕಾರದಲ್ಲಿ ಹಿಜಾಬ್, ಹಲಾಲ್, ಉರಿಗೌಡ ಅಂತೆಲ್ಲ ಸಮಾಜದಲ್ಲಿ ಸಂಘರ್ಷಮಯ ವಾತಾವರಣ ಸೃಷ್ಟಿಸುವ ಕೆಲಸ ಮಾಡಿದ ಬಿಜೆಪಿ, ರಾಜ್ಯದ ಅಭಿವೃದ್ಧಿ ಕಡೆಗಣಿಸಿತು” ಎಂದು ಟೀಕಿಸಿದ್ದಾರೆ.

“ರೋಸಿಹೋದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದ್ದಾರೆ. ಮಾಧ್ಯಮಗಳೂ ಸೇರಿದಂತೆ ಎಲ್ಲರ ನಿರೀಕ್ಷೆ ಹುಸಿಗೊಳಿಸಿ ಕಾಂಗ್ರೆಸ್ ಪಕ್ಷಕ್ಕೆ ಅದ್ಭುತ ಬಹುಮತದ ಸರ್ಕಾರ ರಚನೆಗೆ ಮತದಾರ ಪ್ರಭುಗಳು ಆಶೀರ್ವಾದ ಮಾಡಿದ್ದಾರೆ. ನಮ್ಮ ಸರ್ಕಾರ ಎಲ್ಲ ಸಮುದಾಯಗಳ ರಕ್ಷಣೆ ವಿಷಯದಲ್ಲಿ ವಿಶೇಷ ಕಾಳಜಿ ತೋರಲಿದೆ” ಎಂದು ತಿಳಿಸಿದ್ದಾರೆ.

“ಗೋಹತ್ಯೆ ನಿಷೇಧ ಕಾನೂನು, ಮುಸ್ಲಿಮರಿಂದ ಕಿತ್ತುಕೊಂಡ ಶೇ.4 ಮೀಸಲಾತಿ, ಮತಾಂತರ ನಿಷೇಧ ಕಾನೂ ಹಿಂಪಡೆಯುವುದು ಸೇರಿದಂತೆ ಅಹಿಂದ ಸಂಘಟನೆಯ ಬೇಡಿಕೆ ಈಡೇರಿಸುವ ಕುರಿತು ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ನಿರ್ಧಾರ ಕೈಗೊಳ್ಳಲಾಗುತ್ತದೆ” ಎಂದು ಹೇಳಿದ್ದಾರೆ.

“ಈ ಹಿಂದೆ ನಾಲ್ಕು ವರ್ಷ ಸೂಲಿಬೆಲೆ ಅನಾಹುತ ಮಾಡಿದ್ದಾರೆ. ಸೂಲಿಬೆಲೆ ಮಾಡಿದ ಅನಾಹುತಗಳನ್ನ ಈಗ ನಾವು ಸರಿಪಡೆಸುತ್ತಿದ್ದೇವೆ. ಅಲ್ಲದೇ, ಪಠ್ಯಪುಸ್ತಕ, ಹಿಜಾಬ್, ಹಲಾಲ್, ಅಝಾನ್ ಅಂತ ನಾಟಕ ಮಾಡಿದ್ದಾರೆ. ಇದಕ್ಕೆಲ್ಲ ಇತಿಶ್ರೀ ಹಾಡುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ‘ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿಯಾಗಲಿ’: ಸಚಿವರ ಹೇಳಿಕೆ ಸ್ವಾಗತಿಸಿದ ರೈತರು ಏನಂತಾರೆ?

“ಕೇಸರಿ ಬಣ್ಣ ಬರೀ ಬಿಜೆಪಿಯವರು ಗುತ್ತಿಗೆ ಪಡೆದಿಲ್ಲ. ನಮ್ಮ ದೇವಸ್ಥಾನಗಳ ಮೇಲೆ ಕೇಸರಿ ಧ್ವಜವನ್ನೇ ಹಾರಿಸಲಾಗುತ್ತದೆ. ನಮ್ಮ ಮನೆಯಲ್ಲೂ ಕೇಸರಿ ಬಣ್ಣ ಬಳಕೆ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

ಶನಿವಾರ ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸೂಲಿಬೆಲೆ, “ಇಂದಿನ ಕಾರ್ಯಕ್ರಮ ಇಲ್ಲ, ರದ್ದಾಗಲಿದೆ ಎಂದು ನಾವು ತಿಳಿದಿದ್ದೆವು. ಇದಕ್ಕೆ ಹಲವರು ಕಾರಣಗಳು ಇವೆ. ಸಾಹಿತಿ ಎಸ್.ಎಲ್.ಭೈರಪ್ಪ, ನಾನು ಇದ್ದೇವೆ ಎಂದು ರದ್ದು ಪಡಿಸುವ ಕೆಲಸವಾಗಿದೆ” ಎಂದಿದ್ದರು.

“ಸಾವರ್ಕರ್ ಕಾರ್ಯಕ್ರಮದ ಬಗ್ಗೆ ಸರ್ಕಾರಕ್ಕೆ ಭಯ ಇರಬಹುದು. ಅಧಿಕಾರಕ್ಕೆ ಬಂದು ಒಂದು ವಾರವಾಗಿಲ್ಲ. ಅಷ್ಟರಲ್ಲಿ ಸಾವರ್ಕರ್ ಜಯಂತಿ ರದ್ದು ಮಾಡಲು ಹೊರಟಿದ್ದಾರೆ. ಇದು ಹಿಟ್ಲರ್ ಸರ್ಕಾರ. ಸಾವರ್ಕರ್ ಇವತ್ತಿಗೂ ಪ್ರಸ್ತುತ ಹಾಗೂ ಜೀವಂತ” ಎಂದು ಅಭಿಪ್ರಾಯಪಟ್ಟಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...