Homeಕರ್ನಾಟಕಸೂಲಿಬೆಲೆ ಆಟ ಇನ್ನು ನಡೆಯಲ್ಲ: ಎಂ.ಬಿ.ಪಾಟೀಲ್ ಖಡಕ್‌ ಎಚ್ಚರಿಕೆ

ಸೂಲಿಬೆಲೆ ಆಟ ಇನ್ನು ನಡೆಯಲ್ಲ: ಎಂ.ಬಿ.ಪಾಟೀಲ್ ಖಡಕ್‌ ಎಚ್ಚರಿಕೆ

- Advertisement -
- Advertisement -

ಸುಳ್ಳುಗಳನ್ನು ಹೇಳುತ್ತಾರೆಂಬ ಆರೋಪಗಳಿಗೆ ಗುರಿಯಾಗಿರುವ ಬಲಪಂಥೀಯ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಯವರಿಗೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಎಚ್ಚರಿಕೆ ನೀಡಿದ್ದಾರೆ.

ವಿಜಯಪುರದಲ್ಲಿ ಭಾನುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ಸಚಿವರು, “ಸಮಾಜದಲ್ಲಿ ಕೋಮು ಭಾವನೆ ಸೃಷ್ಟಿಸುವ ಚಕ್ರವರ್ತಿ ಸೂಲಿಬೆಲೆ ಆಟ ಇನ್ನು ನಡೆಯದು” ಎಂದಿದ್ದಾರೆ.

ಮೈಸೂರಿನಲ್ಲಿ ಆಯೋಜಿಸಲಾಗಿದ್ದ ವಿ.ಡಿ.ಸಾವರ್ಕರ್ ಜಯಂತಿಯಲ್ಲಿ ಮಾತನಾಡಿದ್ದ ಸೂಲಿಬೆಲೆ, ರಾಜ್ಯದಲ್ಲಿ ಹಿಟ್ಲರ್‌ ಸರ್ಕಾರವಿದೆ” ಎಂದಿದ್ದರು. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಎಂ.ಬಿ.ಪಾಟೀಲ್‌, “ಬಿಜೆಪಿ ಸರ್ಕಾರದಲ್ಲಿ ಹಿಜಾಬ್, ಹಲಾಲ್, ಉರಿಗೌಡ ಅಂತೆಲ್ಲ ಸಮಾಜದಲ್ಲಿ ಸಂಘರ್ಷಮಯ ವಾತಾವರಣ ಸೃಷ್ಟಿಸುವ ಕೆಲಸ ಮಾಡಿದ ಬಿಜೆಪಿ, ರಾಜ್ಯದ ಅಭಿವೃದ್ಧಿ ಕಡೆಗಣಿಸಿತು” ಎಂದು ಟೀಕಿಸಿದ್ದಾರೆ.

“ರೋಸಿಹೋದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದ್ದಾರೆ. ಮಾಧ್ಯಮಗಳೂ ಸೇರಿದಂತೆ ಎಲ್ಲರ ನಿರೀಕ್ಷೆ ಹುಸಿಗೊಳಿಸಿ ಕಾಂಗ್ರೆಸ್ ಪಕ್ಷಕ್ಕೆ ಅದ್ಭುತ ಬಹುಮತದ ಸರ್ಕಾರ ರಚನೆಗೆ ಮತದಾರ ಪ್ರಭುಗಳು ಆಶೀರ್ವಾದ ಮಾಡಿದ್ದಾರೆ. ನಮ್ಮ ಸರ್ಕಾರ ಎಲ್ಲ ಸಮುದಾಯಗಳ ರಕ್ಷಣೆ ವಿಷಯದಲ್ಲಿ ವಿಶೇಷ ಕಾಳಜಿ ತೋರಲಿದೆ” ಎಂದು ತಿಳಿಸಿದ್ದಾರೆ.

“ಗೋಹತ್ಯೆ ನಿಷೇಧ ಕಾನೂನು, ಮುಸ್ಲಿಮರಿಂದ ಕಿತ್ತುಕೊಂಡ ಶೇ.4 ಮೀಸಲಾತಿ, ಮತಾಂತರ ನಿಷೇಧ ಕಾನೂ ಹಿಂಪಡೆಯುವುದು ಸೇರಿದಂತೆ ಅಹಿಂದ ಸಂಘಟನೆಯ ಬೇಡಿಕೆ ಈಡೇರಿಸುವ ಕುರಿತು ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ನಿರ್ಧಾರ ಕೈಗೊಳ್ಳಲಾಗುತ್ತದೆ” ಎಂದು ಹೇಳಿದ್ದಾರೆ.

“ಈ ಹಿಂದೆ ನಾಲ್ಕು ವರ್ಷ ಸೂಲಿಬೆಲೆ ಅನಾಹುತ ಮಾಡಿದ್ದಾರೆ. ಸೂಲಿಬೆಲೆ ಮಾಡಿದ ಅನಾಹುತಗಳನ್ನ ಈಗ ನಾವು ಸರಿಪಡೆಸುತ್ತಿದ್ದೇವೆ. ಅಲ್ಲದೇ, ಪಠ್ಯಪುಸ್ತಕ, ಹಿಜಾಬ್, ಹಲಾಲ್, ಅಝಾನ್ ಅಂತ ನಾಟಕ ಮಾಡಿದ್ದಾರೆ. ಇದಕ್ಕೆಲ್ಲ ಇತಿಶ್ರೀ ಹಾಡುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ‘ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿಯಾಗಲಿ’: ಸಚಿವರ ಹೇಳಿಕೆ ಸ್ವಾಗತಿಸಿದ ರೈತರು ಏನಂತಾರೆ?

“ಕೇಸರಿ ಬಣ್ಣ ಬರೀ ಬಿಜೆಪಿಯವರು ಗುತ್ತಿಗೆ ಪಡೆದಿಲ್ಲ. ನಮ್ಮ ದೇವಸ್ಥಾನಗಳ ಮೇಲೆ ಕೇಸರಿ ಧ್ವಜವನ್ನೇ ಹಾರಿಸಲಾಗುತ್ತದೆ. ನಮ್ಮ ಮನೆಯಲ್ಲೂ ಕೇಸರಿ ಬಣ್ಣ ಬಳಕೆ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

ಶನಿವಾರ ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸೂಲಿಬೆಲೆ, “ಇಂದಿನ ಕಾರ್ಯಕ್ರಮ ಇಲ್ಲ, ರದ್ದಾಗಲಿದೆ ಎಂದು ನಾವು ತಿಳಿದಿದ್ದೆವು. ಇದಕ್ಕೆ ಹಲವರು ಕಾರಣಗಳು ಇವೆ. ಸಾಹಿತಿ ಎಸ್.ಎಲ್.ಭೈರಪ್ಪ, ನಾನು ಇದ್ದೇವೆ ಎಂದು ರದ್ದು ಪಡಿಸುವ ಕೆಲಸವಾಗಿದೆ” ಎಂದಿದ್ದರು.

“ಸಾವರ್ಕರ್ ಕಾರ್ಯಕ್ರಮದ ಬಗ್ಗೆ ಸರ್ಕಾರಕ್ಕೆ ಭಯ ಇರಬಹುದು. ಅಧಿಕಾರಕ್ಕೆ ಬಂದು ಒಂದು ವಾರವಾಗಿಲ್ಲ. ಅಷ್ಟರಲ್ಲಿ ಸಾವರ್ಕರ್ ಜಯಂತಿ ರದ್ದು ಮಾಡಲು ಹೊರಟಿದ್ದಾರೆ. ಇದು ಹಿಟ್ಲರ್ ಸರ್ಕಾರ. ಸಾವರ್ಕರ್ ಇವತ್ತಿಗೂ ಪ್ರಸ್ತುತ ಹಾಗೂ ಜೀವಂತ” ಎಂದು ಅಭಿಪ್ರಾಯಪಟ್ಟಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...