HomeUncategorizedಸಿನಿಮಾ ರಂಗಕ್ಕೂ ಕಾಲಿಟ್ಟ ಸುಮಲತಾ, ಹೆಚ್‌ಡಿಕೆ ವಾಗ್ವಾದ; ಅಣೆಕಟ್ಟೆಯಲ್ಲಿ ಬಿರುಕಿಲ್ಲ ಎಂದ ಸರ್ಕಾರ!

ಸಿನಿಮಾ ರಂಗಕ್ಕೂ ಕಾಲಿಟ್ಟ ಸುಮಲತಾ, ಹೆಚ್‌ಡಿಕೆ ವಾಗ್ವಾದ; ಅಣೆಕಟ್ಟೆಯಲ್ಲಿ ಬಿರುಕಿಲ್ಲ ಎಂದ ಸರ್ಕಾರ!

- Advertisement -
- Advertisement -

ಅಕ್ರಮ ಗಣಿಗಾರಿಕೆ, ಕೆಆರ್‌ಎಸ್‌ ಅಣೆಕಟ್ಟಿನ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಮತ್ತು ಮಂಡ್ಯ ಸಂಸದೆ ಸುಮಲತಾ ಅವರ ನಡುವೆ ನಡೆಯುತ್ತಿದ್ದ ಸಂಘರ್ಷ ಇದೀಗ ಸಿನಿಮಾರಂಗಕ್ಕೂ ಕಾಲಿಟ್ಟಿದೆ. ದಿವಂಗತ ನಟ ಅಂಬರೀಶ್‌ ಅವರ ಸ್ಮಾರಕದ ವಿಷಯದಲ್ಲಿ ಹೆಚ್‌ಡಿಕೆ ಅವರನ್ನು ಭೇಟಿಯಾಗಿದ್ದ ನಟ ದೊಡ್ಡಣ್ಣ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಸುಮಲತಾ ಅವರು ಆರೋಪಿಸಿದ್ದಾರೆ. ಇದರ ಜೊತೆಗೆ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್‌ ಅವರು ಕೂಡಾ ಕುಮಾರಸ್ವಾಮಿ ವಿರುದ್ದ ಕಿಡಿಕಾರಿದ್ದಾರೆ.

ರಾಕ್​ಲೈನ್ ವೆಂಕಟೇಶ್ ಹೇಳಿಕೆ ಕುಮಾರಸ್ವಾಮಿ ಬೆಂಬಲಿಗರನ್ನು ಕೆರಳಿಸಿದ್ದು, ಅವರ ಮನೆಗೆ ಮುತ್ತಿಗೆ ಹಾಕಿದ್ದಾರೆ. ಈ ಹಿನ್ನಲೆಯಲ್ಲಿ ಅವರ ಮನೆಯ ರಸ್ತೆಗೆ ಪೊಲೀಸರು ಬಿಗಿ ಭದ್ರತೆ ನೀಡಿದ್ದಾರೆ.

ಇದನ್ನೂ ಓದಿ: ಅಕ್ರಮ ಕಲ್ಲು ಗಣಿಗಾರಿಕೆಗೆ ಎಚ್.ಡಿ.ಕುಮಾರಸ್ವಾಮಿಯೇ ಪ್ರಮುಖ ರೂವಾರಿ: ಎಎಪಿ

ಶುಕ್ರವಾರ ಕುಮಾರಸ್ವಾಮಿ ವಿರುದ್ಧ ಮಾತನಾಡಿದ್ದ ರಾಕ್​ಲೈನ್ ವೆಂಕಟೇಶ್, ಮಂಡ್ಯ ಲೋಕಸಭಾ ಚುನಾವಣೆ ವೇಳೆ ನನ್ನ ಮತ್ತು ಸುಮಲತಾರ ಅಶ್ಲೀಲ ವಿಡಿಯೋ ಸೃಷ್ಟಿಸಲು ಕುಮಾರಸ್ವಾಮಿ ಯತ್ನಿಸಿದ್ದರು. ವೈಯಕ್ತಿಕ ದಾಳಿಗೆ ಇಳಿದಿದ್ದ ಕುಮಾರಸ್ವಾಮಿ, ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಸುಮಲತಾರ ತೇಜೋವಧೆ ಮಾಡುವ ಯೋಜನೆ ರೂಪಿಸಿದ್ದರು ಎಂದು ಹೇಳಿದ್ದರು.

“ಮಂಡ್ಯ ಲೋಕಸಭೆ ಚುನಾವಣೆ ವೇಳೆ ಪ್ರಚಾರಕ್ಕಾಗಿ ನಾವೆಲ್ಲ ಒಂದೇ ಹೋಟೆಲ್​ನಲ್ಲಿ ತಂಗಿದ್ದೆವು. ಹೋಟೆಲ್‌ನಲ್ಲಿ ನಾನು, ಸುಮಲತಾ ಓಡಾಡಿರುವ ಸಿಸಿಟಿವಿ ದೃಶ್ಯವನ್ನು ಹೋಟೆಲ್​ ಸಿಬ್ಬಂದಿಯಿಂದ ಪಡೆದುಕೊಂಡು, ನಾನು ಸುಮಲತಾ ಅವರ ಹೆಗಲ ಮೇಲೆ ಕೈ ಹಾಕಿರುವಂತೆ ವಿಡಿಯೋವನ್ನು ತಿರುಚಿದ್ದರಂತೆ. ಇಬ್ಬರೂ ಒಂದೇ ಕೊಠಡಿಗೆ ಹೋಗುತ್ತಿರುವ ಹಾಗೇ ವಿಡಿಯೋವನ್ನು ಸೃಷ್ಟಿಸಿದ್ದರು” ಎಂದು ರಾಕ್​​ಲೈನ್​ ಆರೋಪಿಸಿದ್ದರು.

“ಸುಮಲತಾಗೆ ಯಾರು ಇಲ್ಲ ಅಂದುಕೊಂಡಿದ್ದೀರಾ? ನನ್ನಂತ ಸಾವಿರಾರು ಜನ ಸಂಸದೆ ಸುಮಲತಾ ಜೊತೆ ಇದ್ದಾರೆ. ಜೂನಿಯರ್ ರೆಬಲ್ ಸ್ಟಾರ್ ಇದ್ದಾನೆ, ಅಂಬಿ ಅಭಿಮಾನಿಗಳು ಅವರ ಕುಟುಂಬ ಕಾಯುತ್ತಾರೆ. ಸುಮಲತಾರನ್ನು ಅಡ್ಡ ಮಲಗಿಸಿ ಎಂದು ಕುಮಾರಸ್ವಾಮಿ ಮಾತಾಡಿದ್ದಾರೆ. ಅಮೇಲೆ ಕಾವಲು ಕಾಯಬೇಕು ಎಂದಿದ್ದೇನೆ ಎಂದು ಹೇಳಿದ್ದರು. ಕುಮಾರಸ್ವಾಮಿ ತಮ್ಮ ಹೇಳಿಕೆಯನ್ನು ತಿರುಚುತ್ತಾರೆ” ಎಂದು ರಾಕ್​​​ಲೈನ್​​ ವೆಂಕಟೇಶ್‌ ಹೇಳಿದ್ದರು.

ಇದನ್ನೂ ಓದಿ: ಪ್ರತಾಪ್ ಸಿಂಹ ಪೇಟೆ ರೌಡಿ ತರ ಮಾತನಾಡುತ್ತಾರೆ; ಪ್ರತಿಕ್ರಿಯೆಗೆ ಅರ್ಹರಲ್ಲ: ಸಂಸದೆ ಸುಮಲತ

ರಾಕ್​ಲೈನ್‌ ಅವರ ಹೇಳಿಕೆ ಜೆಡಿಎಸ್​ ಕಾರ್ಯಕರ್ತರನ್ನು ಕೆರಳಿಸಿದ್ದು, ಇಂದು ಬೆಳಿಗ್ಗೆ ರಾಕ್​ಲೈನ್ ಮನೆಗೆ ಮುತ್ತಿಗೆ ಹಾಕಿದ್ದಾರೆ. ಈ ಮಾಹಿತಿ ಮೊದಲೆ ತಿಳಿದಿದ್ದ ಪೊಲೀಸರು ರಾಕ್‌ಲೈನ್‌ ಮನೆಯ ಏರಿಯಾಗಳಿಗೆ ಅಡ್ಡಲಾಗಿ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಿದ್ದರು. ಅದಾಗಿಯೂ ಕಾರ್ಯಕರ್ತರು ಅಲ್ಲಿ ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದಾರೆ.

ಈ ನಡುವೆ ಗಣಿಗಾರಿಕೆಯಿಂದ ಕೆಆರ್‌ಎಸ್‌ ಅಣೆಕಟ್ಟೆಯಲ್ಲಿ ಬಿರುಕು ಬಿಟ್ಟಿದೆ ಎಂಬ ಸುಮಲತಾ ಆರೋಪವನ್ನು ತಳ್ಳಿ ಹಾಕಿರುವ ಕಾವೇರಿ ನೀರಾವರಿ ನಿಗಮ, “ಅಣೆಕಟ್ಟೆಯಲ್ಲಿ ಯಾವುದೆ ರೀತಿಯ ಇಲ್ಲ” ಎಂದು ಸ್ಪಷ್ಟಪಡಿಸಿದೆ.

ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಜಯಪ್ರಕಾಶ್ ಅವರು ‘‘ಕೆಆರ್‌ಎಸ್‌ ಅಣೆಕಟ್ಟು ಸುರಕ್ಷಿತವಾಗಿದೆ. ಅಣೆಕಟ್ಟಿನ ಗೋಡೆಯಲ್ಲಿ ಯಾವುದೇ ಬಿರುಕು ಇಲ್ಲದಿರುವುದು ಆಗಾಗ್ಗೆ ನಡೆಸಿದ ತಪಾಸಣೆಯಿಂದ ಖಚಿತವಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಅಣೆಕಟ್ಟು ಸುರಕ್ಷಾ ಪರಿಶೀಲನಾ ಸಮಿತಿ ಹಾಗೂ ರಾಜ್ಯದ ಗೇಟ್‌ ಸಲಹಾ ಸಮಿತಿ ಸದಸ್ಯರು ಜುಲೈ 2 ರಂದು ಕೆಆರ್‌ಎಸ್‌ ಅಣೆಕಟ್ಟೆಯಲ್ಲಿ ಬಿರುಕು ಬಿಟ್ಟಿದೆಯೆ ಎಂಬ ಬಗ್ಗೆ ಪರಿಶೀಲನೆ ನಡೆಸಿದ್ದರು ಎಂದು ಜಯಪ್ರಕಾಶ್ ಹೇಳಿದ್ದಾರೆ.

ಇದನ್ನೂ ಓದಿ: ಹಿಂದಿ ಹೇರಿಕೆಯನ್ನು ಒಪ್ಪಲು ಸಾಧ್ಯವಿಲ್ಲ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...