HomeUncategorizedಸಿನಿಮಾ ರಂಗಕ್ಕೂ ಕಾಲಿಟ್ಟ ಸುಮಲತಾ, ಹೆಚ್‌ಡಿಕೆ ವಾಗ್ವಾದ; ಅಣೆಕಟ್ಟೆಯಲ್ಲಿ ಬಿರುಕಿಲ್ಲ ಎಂದ ಸರ್ಕಾರ!

ಸಿನಿಮಾ ರಂಗಕ್ಕೂ ಕಾಲಿಟ್ಟ ಸುಮಲತಾ, ಹೆಚ್‌ಡಿಕೆ ವಾಗ್ವಾದ; ಅಣೆಕಟ್ಟೆಯಲ್ಲಿ ಬಿರುಕಿಲ್ಲ ಎಂದ ಸರ್ಕಾರ!

- Advertisement -
- Advertisement -

ಅಕ್ರಮ ಗಣಿಗಾರಿಕೆ, ಕೆಆರ್‌ಎಸ್‌ ಅಣೆಕಟ್ಟಿನ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಮತ್ತು ಮಂಡ್ಯ ಸಂಸದೆ ಸುಮಲತಾ ಅವರ ನಡುವೆ ನಡೆಯುತ್ತಿದ್ದ ಸಂಘರ್ಷ ಇದೀಗ ಸಿನಿಮಾರಂಗಕ್ಕೂ ಕಾಲಿಟ್ಟಿದೆ. ದಿವಂಗತ ನಟ ಅಂಬರೀಶ್‌ ಅವರ ಸ್ಮಾರಕದ ವಿಷಯದಲ್ಲಿ ಹೆಚ್‌ಡಿಕೆ ಅವರನ್ನು ಭೇಟಿಯಾಗಿದ್ದ ನಟ ದೊಡ್ಡಣ್ಣ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಸುಮಲತಾ ಅವರು ಆರೋಪಿಸಿದ್ದಾರೆ. ಇದರ ಜೊತೆಗೆ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್‌ ಅವರು ಕೂಡಾ ಕುಮಾರಸ್ವಾಮಿ ವಿರುದ್ದ ಕಿಡಿಕಾರಿದ್ದಾರೆ.

ರಾಕ್​ಲೈನ್ ವೆಂಕಟೇಶ್ ಹೇಳಿಕೆ ಕುಮಾರಸ್ವಾಮಿ ಬೆಂಬಲಿಗರನ್ನು ಕೆರಳಿಸಿದ್ದು, ಅವರ ಮನೆಗೆ ಮುತ್ತಿಗೆ ಹಾಕಿದ್ದಾರೆ. ಈ ಹಿನ್ನಲೆಯಲ್ಲಿ ಅವರ ಮನೆಯ ರಸ್ತೆಗೆ ಪೊಲೀಸರು ಬಿಗಿ ಭದ್ರತೆ ನೀಡಿದ್ದಾರೆ.

ಇದನ್ನೂ ಓದಿ: ಅಕ್ರಮ ಕಲ್ಲು ಗಣಿಗಾರಿಕೆಗೆ ಎಚ್.ಡಿ.ಕುಮಾರಸ್ವಾಮಿಯೇ ಪ್ರಮುಖ ರೂವಾರಿ: ಎಎಪಿ

ಶುಕ್ರವಾರ ಕುಮಾರಸ್ವಾಮಿ ವಿರುದ್ಧ ಮಾತನಾಡಿದ್ದ ರಾಕ್​ಲೈನ್ ವೆಂಕಟೇಶ್, ಮಂಡ್ಯ ಲೋಕಸಭಾ ಚುನಾವಣೆ ವೇಳೆ ನನ್ನ ಮತ್ತು ಸುಮಲತಾರ ಅಶ್ಲೀಲ ವಿಡಿಯೋ ಸೃಷ್ಟಿಸಲು ಕುಮಾರಸ್ವಾಮಿ ಯತ್ನಿಸಿದ್ದರು. ವೈಯಕ್ತಿಕ ದಾಳಿಗೆ ಇಳಿದಿದ್ದ ಕುಮಾರಸ್ವಾಮಿ, ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಸುಮಲತಾರ ತೇಜೋವಧೆ ಮಾಡುವ ಯೋಜನೆ ರೂಪಿಸಿದ್ದರು ಎಂದು ಹೇಳಿದ್ದರು.

“ಮಂಡ್ಯ ಲೋಕಸಭೆ ಚುನಾವಣೆ ವೇಳೆ ಪ್ರಚಾರಕ್ಕಾಗಿ ನಾವೆಲ್ಲ ಒಂದೇ ಹೋಟೆಲ್​ನಲ್ಲಿ ತಂಗಿದ್ದೆವು. ಹೋಟೆಲ್‌ನಲ್ಲಿ ನಾನು, ಸುಮಲತಾ ಓಡಾಡಿರುವ ಸಿಸಿಟಿವಿ ದೃಶ್ಯವನ್ನು ಹೋಟೆಲ್​ ಸಿಬ್ಬಂದಿಯಿಂದ ಪಡೆದುಕೊಂಡು, ನಾನು ಸುಮಲತಾ ಅವರ ಹೆಗಲ ಮೇಲೆ ಕೈ ಹಾಕಿರುವಂತೆ ವಿಡಿಯೋವನ್ನು ತಿರುಚಿದ್ದರಂತೆ. ಇಬ್ಬರೂ ಒಂದೇ ಕೊಠಡಿಗೆ ಹೋಗುತ್ತಿರುವ ಹಾಗೇ ವಿಡಿಯೋವನ್ನು ಸೃಷ್ಟಿಸಿದ್ದರು” ಎಂದು ರಾಕ್​​ಲೈನ್​ ಆರೋಪಿಸಿದ್ದರು.

“ಸುಮಲತಾಗೆ ಯಾರು ಇಲ್ಲ ಅಂದುಕೊಂಡಿದ್ದೀರಾ? ನನ್ನಂತ ಸಾವಿರಾರು ಜನ ಸಂಸದೆ ಸುಮಲತಾ ಜೊತೆ ಇದ್ದಾರೆ. ಜೂನಿಯರ್ ರೆಬಲ್ ಸ್ಟಾರ್ ಇದ್ದಾನೆ, ಅಂಬಿ ಅಭಿಮಾನಿಗಳು ಅವರ ಕುಟುಂಬ ಕಾಯುತ್ತಾರೆ. ಸುಮಲತಾರನ್ನು ಅಡ್ಡ ಮಲಗಿಸಿ ಎಂದು ಕುಮಾರಸ್ವಾಮಿ ಮಾತಾಡಿದ್ದಾರೆ. ಅಮೇಲೆ ಕಾವಲು ಕಾಯಬೇಕು ಎಂದಿದ್ದೇನೆ ಎಂದು ಹೇಳಿದ್ದರು. ಕುಮಾರಸ್ವಾಮಿ ತಮ್ಮ ಹೇಳಿಕೆಯನ್ನು ತಿರುಚುತ್ತಾರೆ” ಎಂದು ರಾಕ್​​​ಲೈನ್​​ ವೆಂಕಟೇಶ್‌ ಹೇಳಿದ್ದರು.

ಇದನ್ನೂ ಓದಿ: ಪ್ರತಾಪ್ ಸಿಂಹ ಪೇಟೆ ರೌಡಿ ತರ ಮಾತನಾಡುತ್ತಾರೆ; ಪ್ರತಿಕ್ರಿಯೆಗೆ ಅರ್ಹರಲ್ಲ: ಸಂಸದೆ ಸುಮಲತ

ರಾಕ್​ಲೈನ್‌ ಅವರ ಹೇಳಿಕೆ ಜೆಡಿಎಸ್​ ಕಾರ್ಯಕರ್ತರನ್ನು ಕೆರಳಿಸಿದ್ದು, ಇಂದು ಬೆಳಿಗ್ಗೆ ರಾಕ್​ಲೈನ್ ಮನೆಗೆ ಮುತ್ತಿಗೆ ಹಾಕಿದ್ದಾರೆ. ಈ ಮಾಹಿತಿ ಮೊದಲೆ ತಿಳಿದಿದ್ದ ಪೊಲೀಸರು ರಾಕ್‌ಲೈನ್‌ ಮನೆಯ ಏರಿಯಾಗಳಿಗೆ ಅಡ್ಡಲಾಗಿ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಿದ್ದರು. ಅದಾಗಿಯೂ ಕಾರ್ಯಕರ್ತರು ಅಲ್ಲಿ ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದಾರೆ.

ಈ ನಡುವೆ ಗಣಿಗಾರಿಕೆಯಿಂದ ಕೆಆರ್‌ಎಸ್‌ ಅಣೆಕಟ್ಟೆಯಲ್ಲಿ ಬಿರುಕು ಬಿಟ್ಟಿದೆ ಎಂಬ ಸುಮಲತಾ ಆರೋಪವನ್ನು ತಳ್ಳಿ ಹಾಕಿರುವ ಕಾವೇರಿ ನೀರಾವರಿ ನಿಗಮ, “ಅಣೆಕಟ್ಟೆಯಲ್ಲಿ ಯಾವುದೆ ರೀತಿಯ ಇಲ್ಲ” ಎಂದು ಸ್ಪಷ್ಟಪಡಿಸಿದೆ.

ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಜಯಪ್ರಕಾಶ್ ಅವರು ‘‘ಕೆಆರ್‌ಎಸ್‌ ಅಣೆಕಟ್ಟು ಸುರಕ್ಷಿತವಾಗಿದೆ. ಅಣೆಕಟ್ಟಿನ ಗೋಡೆಯಲ್ಲಿ ಯಾವುದೇ ಬಿರುಕು ಇಲ್ಲದಿರುವುದು ಆಗಾಗ್ಗೆ ನಡೆಸಿದ ತಪಾಸಣೆಯಿಂದ ಖಚಿತವಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಅಣೆಕಟ್ಟು ಸುರಕ್ಷಾ ಪರಿಶೀಲನಾ ಸಮಿತಿ ಹಾಗೂ ರಾಜ್ಯದ ಗೇಟ್‌ ಸಲಹಾ ಸಮಿತಿ ಸದಸ್ಯರು ಜುಲೈ 2 ರಂದು ಕೆಆರ್‌ಎಸ್‌ ಅಣೆಕಟ್ಟೆಯಲ್ಲಿ ಬಿರುಕು ಬಿಟ್ಟಿದೆಯೆ ಎಂಬ ಬಗ್ಗೆ ಪರಿಶೀಲನೆ ನಡೆಸಿದ್ದರು ಎಂದು ಜಯಪ್ರಕಾಶ್ ಹೇಳಿದ್ದಾರೆ.

ಇದನ್ನೂ ಓದಿ: ಹಿಂದಿ ಹೇರಿಕೆಯನ್ನು ಒಪ್ಪಲು ಸಾಧ್ಯವಿಲ್ಲ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...