HomeUncategorizedಸಿನಿಮಾ ರಂಗಕ್ಕೂ ಕಾಲಿಟ್ಟ ಸುಮಲತಾ, ಹೆಚ್‌ಡಿಕೆ ವಾಗ್ವಾದ; ಅಣೆಕಟ್ಟೆಯಲ್ಲಿ ಬಿರುಕಿಲ್ಲ ಎಂದ ಸರ್ಕಾರ!

ಸಿನಿಮಾ ರಂಗಕ್ಕೂ ಕಾಲಿಟ್ಟ ಸುಮಲತಾ, ಹೆಚ್‌ಡಿಕೆ ವಾಗ್ವಾದ; ಅಣೆಕಟ್ಟೆಯಲ್ಲಿ ಬಿರುಕಿಲ್ಲ ಎಂದ ಸರ್ಕಾರ!

- Advertisement -
- Advertisement -

ಅಕ್ರಮ ಗಣಿಗಾರಿಕೆ, ಕೆಆರ್‌ಎಸ್‌ ಅಣೆಕಟ್ಟಿನ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಮತ್ತು ಮಂಡ್ಯ ಸಂಸದೆ ಸುಮಲತಾ ಅವರ ನಡುವೆ ನಡೆಯುತ್ತಿದ್ದ ಸಂಘರ್ಷ ಇದೀಗ ಸಿನಿಮಾರಂಗಕ್ಕೂ ಕಾಲಿಟ್ಟಿದೆ. ದಿವಂಗತ ನಟ ಅಂಬರೀಶ್‌ ಅವರ ಸ್ಮಾರಕದ ವಿಷಯದಲ್ಲಿ ಹೆಚ್‌ಡಿಕೆ ಅವರನ್ನು ಭೇಟಿಯಾಗಿದ್ದ ನಟ ದೊಡ್ಡಣ್ಣ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಸುಮಲತಾ ಅವರು ಆರೋಪಿಸಿದ್ದಾರೆ. ಇದರ ಜೊತೆಗೆ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್‌ ಅವರು ಕೂಡಾ ಕುಮಾರಸ್ವಾಮಿ ವಿರುದ್ದ ಕಿಡಿಕಾರಿದ್ದಾರೆ.

ರಾಕ್​ಲೈನ್ ವೆಂಕಟೇಶ್ ಹೇಳಿಕೆ ಕುಮಾರಸ್ವಾಮಿ ಬೆಂಬಲಿಗರನ್ನು ಕೆರಳಿಸಿದ್ದು, ಅವರ ಮನೆಗೆ ಮುತ್ತಿಗೆ ಹಾಕಿದ್ದಾರೆ. ಈ ಹಿನ್ನಲೆಯಲ್ಲಿ ಅವರ ಮನೆಯ ರಸ್ತೆಗೆ ಪೊಲೀಸರು ಬಿಗಿ ಭದ್ರತೆ ನೀಡಿದ್ದಾರೆ.

ಇದನ್ನೂ ಓದಿ: ಅಕ್ರಮ ಕಲ್ಲು ಗಣಿಗಾರಿಕೆಗೆ ಎಚ್.ಡಿ.ಕುಮಾರಸ್ವಾಮಿಯೇ ಪ್ರಮುಖ ರೂವಾರಿ: ಎಎಪಿ

ಶುಕ್ರವಾರ ಕುಮಾರಸ್ವಾಮಿ ವಿರುದ್ಧ ಮಾತನಾಡಿದ್ದ ರಾಕ್​ಲೈನ್ ವೆಂಕಟೇಶ್, ಮಂಡ್ಯ ಲೋಕಸಭಾ ಚುನಾವಣೆ ವೇಳೆ ನನ್ನ ಮತ್ತು ಸುಮಲತಾರ ಅಶ್ಲೀಲ ವಿಡಿಯೋ ಸೃಷ್ಟಿಸಲು ಕುಮಾರಸ್ವಾಮಿ ಯತ್ನಿಸಿದ್ದರು. ವೈಯಕ್ತಿಕ ದಾಳಿಗೆ ಇಳಿದಿದ್ದ ಕುಮಾರಸ್ವಾಮಿ, ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಸುಮಲತಾರ ತೇಜೋವಧೆ ಮಾಡುವ ಯೋಜನೆ ರೂಪಿಸಿದ್ದರು ಎಂದು ಹೇಳಿದ್ದರು.

“ಮಂಡ್ಯ ಲೋಕಸಭೆ ಚುನಾವಣೆ ವೇಳೆ ಪ್ರಚಾರಕ್ಕಾಗಿ ನಾವೆಲ್ಲ ಒಂದೇ ಹೋಟೆಲ್​ನಲ್ಲಿ ತಂಗಿದ್ದೆವು. ಹೋಟೆಲ್‌ನಲ್ಲಿ ನಾನು, ಸುಮಲತಾ ಓಡಾಡಿರುವ ಸಿಸಿಟಿವಿ ದೃಶ್ಯವನ್ನು ಹೋಟೆಲ್​ ಸಿಬ್ಬಂದಿಯಿಂದ ಪಡೆದುಕೊಂಡು, ನಾನು ಸುಮಲತಾ ಅವರ ಹೆಗಲ ಮೇಲೆ ಕೈ ಹಾಕಿರುವಂತೆ ವಿಡಿಯೋವನ್ನು ತಿರುಚಿದ್ದರಂತೆ. ಇಬ್ಬರೂ ಒಂದೇ ಕೊಠಡಿಗೆ ಹೋಗುತ್ತಿರುವ ಹಾಗೇ ವಿಡಿಯೋವನ್ನು ಸೃಷ್ಟಿಸಿದ್ದರು” ಎಂದು ರಾಕ್​​ಲೈನ್​ ಆರೋಪಿಸಿದ್ದರು.

“ಸುಮಲತಾಗೆ ಯಾರು ಇಲ್ಲ ಅಂದುಕೊಂಡಿದ್ದೀರಾ? ನನ್ನಂತ ಸಾವಿರಾರು ಜನ ಸಂಸದೆ ಸುಮಲತಾ ಜೊತೆ ಇದ್ದಾರೆ. ಜೂನಿಯರ್ ರೆಬಲ್ ಸ್ಟಾರ್ ಇದ್ದಾನೆ, ಅಂಬಿ ಅಭಿಮಾನಿಗಳು ಅವರ ಕುಟುಂಬ ಕಾಯುತ್ತಾರೆ. ಸುಮಲತಾರನ್ನು ಅಡ್ಡ ಮಲಗಿಸಿ ಎಂದು ಕುಮಾರಸ್ವಾಮಿ ಮಾತಾಡಿದ್ದಾರೆ. ಅಮೇಲೆ ಕಾವಲು ಕಾಯಬೇಕು ಎಂದಿದ್ದೇನೆ ಎಂದು ಹೇಳಿದ್ದರು. ಕುಮಾರಸ್ವಾಮಿ ತಮ್ಮ ಹೇಳಿಕೆಯನ್ನು ತಿರುಚುತ್ತಾರೆ” ಎಂದು ರಾಕ್​​​ಲೈನ್​​ ವೆಂಕಟೇಶ್‌ ಹೇಳಿದ್ದರು.

ಇದನ್ನೂ ಓದಿ: ಪ್ರತಾಪ್ ಸಿಂಹ ಪೇಟೆ ರೌಡಿ ತರ ಮಾತನಾಡುತ್ತಾರೆ; ಪ್ರತಿಕ್ರಿಯೆಗೆ ಅರ್ಹರಲ್ಲ: ಸಂಸದೆ ಸುಮಲತ

ರಾಕ್​ಲೈನ್‌ ಅವರ ಹೇಳಿಕೆ ಜೆಡಿಎಸ್​ ಕಾರ್ಯಕರ್ತರನ್ನು ಕೆರಳಿಸಿದ್ದು, ಇಂದು ಬೆಳಿಗ್ಗೆ ರಾಕ್​ಲೈನ್ ಮನೆಗೆ ಮುತ್ತಿಗೆ ಹಾಕಿದ್ದಾರೆ. ಈ ಮಾಹಿತಿ ಮೊದಲೆ ತಿಳಿದಿದ್ದ ಪೊಲೀಸರು ರಾಕ್‌ಲೈನ್‌ ಮನೆಯ ಏರಿಯಾಗಳಿಗೆ ಅಡ್ಡಲಾಗಿ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಿದ್ದರು. ಅದಾಗಿಯೂ ಕಾರ್ಯಕರ್ತರು ಅಲ್ಲಿ ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದಾರೆ.

ಈ ನಡುವೆ ಗಣಿಗಾರಿಕೆಯಿಂದ ಕೆಆರ್‌ಎಸ್‌ ಅಣೆಕಟ್ಟೆಯಲ್ಲಿ ಬಿರುಕು ಬಿಟ್ಟಿದೆ ಎಂಬ ಸುಮಲತಾ ಆರೋಪವನ್ನು ತಳ್ಳಿ ಹಾಕಿರುವ ಕಾವೇರಿ ನೀರಾವರಿ ನಿಗಮ, “ಅಣೆಕಟ್ಟೆಯಲ್ಲಿ ಯಾವುದೆ ರೀತಿಯ ಇಲ್ಲ” ಎಂದು ಸ್ಪಷ್ಟಪಡಿಸಿದೆ.

ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಜಯಪ್ರಕಾಶ್ ಅವರು ‘‘ಕೆಆರ್‌ಎಸ್‌ ಅಣೆಕಟ್ಟು ಸುರಕ್ಷಿತವಾಗಿದೆ. ಅಣೆಕಟ್ಟಿನ ಗೋಡೆಯಲ್ಲಿ ಯಾವುದೇ ಬಿರುಕು ಇಲ್ಲದಿರುವುದು ಆಗಾಗ್ಗೆ ನಡೆಸಿದ ತಪಾಸಣೆಯಿಂದ ಖಚಿತವಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಅಣೆಕಟ್ಟು ಸುರಕ್ಷಾ ಪರಿಶೀಲನಾ ಸಮಿತಿ ಹಾಗೂ ರಾಜ್ಯದ ಗೇಟ್‌ ಸಲಹಾ ಸಮಿತಿ ಸದಸ್ಯರು ಜುಲೈ 2 ರಂದು ಕೆಆರ್‌ಎಸ್‌ ಅಣೆಕಟ್ಟೆಯಲ್ಲಿ ಬಿರುಕು ಬಿಟ್ಟಿದೆಯೆ ಎಂಬ ಬಗ್ಗೆ ಪರಿಶೀಲನೆ ನಡೆಸಿದ್ದರು ಎಂದು ಜಯಪ್ರಕಾಶ್ ಹೇಳಿದ್ದಾರೆ.

ಇದನ್ನೂ ಓದಿ: ಹಿಂದಿ ಹೇರಿಕೆಯನ್ನು ಒಪ್ಪಲು ಸಾಧ್ಯವಿಲ್ಲ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....