Homeಕರ್ನಾಟಕಕೇಸರಿ ಪಾಳಯಕ್ಕೆ ಸುಮಲತಾ ಬೆಂಬಲ; ಮಂಡ್ಯದಲ್ಲಿ ಬಿಜೆಪಿ ಕಥೆ ಏನಾಗಲಿದೆ?

ಕೇಸರಿ ಪಾಳಯಕ್ಕೆ ಸುಮಲತಾ ಬೆಂಬಲ; ಮಂಡ್ಯದಲ್ಲಿ ಬಿಜೆಪಿ ಕಥೆ ಏನಾಗಲಿದೆ?

- Advertisement -
- Advertisement -

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಕೇಸರಿ ಪಾಳಯವನ್ನು ಬೆಂಬಲಿಸುವ ನಿರ್ಧಾರ ಪ್ರಕಟಿಸಿದ್ದಾರೆ. ಬಿಜೆಪಿಗೆ ಸೇರದೆ ಇದ್ದರೂ ಕೇಸರಿ ಪಕ್ಷಕ್ಕೆ ತಮ್ಮ ಒಲವು ತೋರಿರುವುದು ರಾಜಕೀಯ ಚರ್ಚೆಗಳಿಗೆ ಅವಕಾಶ ನೀಡಿದೆ.

ಸುಮಲತಾ ಅವರು ಕಾಂಗ್ರೆಸ್‌ ಸೇರುತ್ತಾರೋ, ಬಿಜೆಪಿ ಸೇರುತ್ತಾರೋ ಎಂಬ ಚರ್ಚೆಗಳು ಶುರುವಾಗಿದ್ದವು. ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ಸಿಗರೇ ಹೆಚ್ಚಿನ ಮಟ್ಟದಲ್ಲಿ ಸುಮಲತಾ ಅವರನ್ನು ಬೆಂಬಲಿಸಿದ್ದರು ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ. ಅಲ್ಲದೆ ಮಂಡ್ಯದಲ್ಲಿ ಬಿಜೆಪಿಗೆ ತಳಮಟ್ಟದ ನೆಲೆ ಇಲ್ಲ ಎಂಬ ವಾಸ್ತವ ಸಂಗತಿಗಳು ಮುಂದಿರುವಾಗ ಸಮಲತಾ ಅವರು ಕಮಲವನ್ನು ಹಿಡಿದುಕೊಂಡಿದ್ದಾರೆ.

ಈಗ ಎದ್ದಿರುವ ಪ್ರಶ್ನೆ- ಸುಮಲತಾ ಅವರ ರಾಜಕೀಯ ಭವಿಷ್ಯ ಮುಂದೇನಾಗಲಿದೆ? ಮಂಡ್ಯದ ಜನತೆ ಈ ನಿರ್ಧಾರವನ್ನು ಹೇಗೆ ಸ್ವೀಕರಿಸಲಿದ್ದಾರೆ? ಬಿಜೆಪಿಗೆ ಇದರಿಂದ ಏನಾದರೂ ಉಪಯೋಗವಾಗಲಿದೆಯೇ? – ಇವೆಲ್ಲವಕ್ಕೂ ನಕರಾತ್ಮಕ ಉತ್ತರಗಳನ್ನೇ ಮಂಡ್ಯ ರಾಜಕಾರಣವನ್ನು ಬಲ್ಲವರು ಹೇಳುತ್ತಿದ್ದಾರೆ.

ವಕೀಲರಾದ ಬಿ.ಟಿ.ವಿಶ್ವನಾಥ್ ಅವರು ‘ನಾನುಗೌರಿ.ಕಾಂ’ ಜೊತೆಯಲ್ಲಿ ಮಾತನಾಡಿ, “ಹಳೆ ಮೈಸೂರು ಭಾಗದಲ್ಲಿ ತಮ್ಮ ನೆಲೆಯನ್ನು ಕಂಡುಕೊಳ್ಳುವುದಕ್ಕಾಗಿ ಬಿಜೆಪಿಯವರು ಸುಮಲತಾ ಅವರನ್ನು ಬೆಂಬಲಿಸಿದ್ದರು. ಪರೋಕ್ಷವಾಗಿ ಸುಮಲತಾ ಅವರು ಬಿಜೆಪಿಯ ಮುಖವೆಂಬಂತೆಯೇ ಇದ್ದರು. ಇದೇ ಸಂದರ್ಭದಲ್ಲಿ ಕುಮಾರಸ್ವಾಮಿಯವರ ವಿರುದ್ಧ ಆಡಳಿತವಿರೋಧಿ ಅಲೆ ಇತ್ತು. ದೇವೇಗೌಡರ ಕುಟುಂಬದ ವಿರುದ್ಧವೂ ಅಸಮಾಧಾನ ಮನೆಮಾಡಿತ್ತು. ಯಾವುದೇ ಪಕ್ಷದಲ್ಲಿ ಗುರುತಿಸಿಕೊಳ್ಳದೆ ಇದ್ದಿದ್ದರಿಂದ ಸುಮಲತಾ ಅವರಿಗೆ ಎಲ್ಲ ಪಕ್ಷದ ಹಿನ್ನೆಲೆಯವರೂ ಕಳೆದ ಚುನಾವಣೆಯಲ್ಲಿ ಬೆಂಬಲ ನೀಡಿದರು. ಈಗ ಸುಮಲತಾ ಅವರು ನೇರವಾಗಿಯೇ ತಮ್ಮನ್ನು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ” ಎಂದರು.

“ಬಿಜೆಪಿ ತನ್ನೆಲ್ಲ ಶಕ್ತಿ ಸಾಮರ್ಥ್ಯವನ್ನು ಮಂಡ್ಯ ಜಿಲ್ಲೆಯಲ್ಲಿ ಪರೀಕ್ಷೆಗೆ ಒಡ್ಡಿದೆ. ಆದರೆ ಕಾರ್ಯಕರ್ತರ ಪಡೆ ತಳಮಟ್ಟದಲ್ಲಿ ಬಿಜೆಪಿಗೆ ಇಲ್ಲಿ ಇಲ್ಲ. ಮೇಲುನೋಟಕ್ಕೆ ಬಿಜೆಪಿಯ ಆರ್ಭಟ ಎದ್ದುಕಾಣುತ್ತಿದೆ. ಆದರೆ ರೈತ ಸಮುದಾಯಕ್ಕೆ ಬಿಜೆಪಿ ಆಶಾದಾಯಕವಾಗಿ ಕಾಣುತ್ತಿಲ್ಲ. ಹೀಗಾಗಿ ಸುಮಲತಾ ಸೇರ್ಪಡೆಯಿಂದ ದೊಡ್ಡಮಟ್ಟದ ಲಾಭ ಬಿಜೆಪಿಗೆ ಆಗುತ್ತದೆ ಎಂದು ಕಾಣುತ್ತಿಲ್ಲ” ಎಂದು ಅಭಿಪ್ರಾಯಪಟ್ಟರು.

“ಕಳೆದ ಚುನಾವಣೆ ಸಂದರ್ಭದಲ್ಲಿ ‘ಸ್ವಾಭಿಮಾನಿ ತಂಡ’ ಎಂಬ ಹೆಸರಲ್ಲಿ ಕೆಲವು ಮುಖಂಡರು ಗುರುತಿಸಿಕೊಂಡಿದ್ದರು. ಅವರಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಲ್ಲಿ ಅವಕಾಶಗಳು ಇರಲಿಲ್ಲ. ಸುಮಲತಾ ಅವರು ಯಾವುದೇ ಪಕ್ಷದ ಬ್ಯಾನರ್‌ ಇಲ್ಲದೆ ಚುನಾವಣೆಗೆ ನಿಂತಿದ್ದರಿಂದ ಈ ಸ್ವಾಭಿಮಾನಿ ಮುಖಂಡರು ಸುಮಲತಾ ಪರ ನಿಂತರು. ಈಗ ಈ ಸ್ವಾಭಿಮಾನಿಗಳು ಬಿಜೆಪಿಯ ಜೊತೆ ಹೋಗಬೇಕಾಗುತ್ತದೆ. ಈ ನಿರ್ಧಾರದಿಂದ ಹಿಂದೆ ಸರಿಯುವವರ ಸಂಖ್ಯೆಯೇ ದೊಡ್ಡದಿದೆ. ಸುಮಲತಾ ಅವರೇ ಸ್ವಯಂಕೃತವಾಗಿ ಸಮಸ್ಯೆಯನ್ನು ಮೈಮೇಲೆ ಎಳೆದುಕೊಂಡಿದ್ದಾರೆ” ಎಂದು ತಿಳಿಸಿದರು.

“ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿಯನ್ನು ಸುಮಲತಾ ಅವರು ಮಾಡಿದಂತೆ ಕಾಣುತ್ತಿಲ್ಲ. ಹೆದ್ದಾರಿ ನಿರ್ಮಾಣವಾದ ಮೇಲಂತೂ ಮಂಡ್ಯ ಜಿಲ್ಲೆಯಲ್ಲಿ ವ್ಯಾಪಾರ ವ್ಯವಹಾರಗಳು ಸ್ಥಗಿತವಾಗುತ್ತಿವೆ. ಹೆದ್ದಾರಿ ಬದಿಯಲ್ಲಿನ ಹೋಟೆಲ್‌ಗಳು ಮುಚ್ಚುವಂತಹ ಸ್ಥಿತಿ ನಿರ್ಮಾಣವಾಗಿದೆ. ಮಂಡ್ಯದ ಯುವಕರು ಉದ್ಯೋಗ ಅರಸಿ ಬೆಂಗಳೂರಿಗೆ ಗುಳೇ ಹೋಗುವುದು ನಿಂತಿಲ್ಲ” ಎಂದು ವಿಷಾದಿಸಿದರು.

ಸುಮಲತಾ ಅವರ ನಿರ್ಧಾರವನ್ನು ಖಂಡಿಸಿರುವ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಕೃಷ್ಣೇಗೌಡ ಟಿ.ಎಲ್. ಅವರು, “ಮಂಡ್ಯ ಲೋಕಸಭಾ ಸದಸ್ಯರೂ, ಸಿನಿಮಾ ನಟರೂ ಆದ ಸುಮಲತಾ ಅಂಬರೀಶ್ ಅವರು ಬಿಜೆಪಿಗೆ ಬೆಂಬಲಿಸಲು ತೀರ್ಮಾನಿಸಿರುವುದು ಮಂಡ್ಯ ಜಿಲ್ಲೆಯ ಜನತೆಗೆ ಬಗೆದ ದ್ರೋಹವಾಗಿದೆ, ಇದನ್ನು ಜಿಲ್ಲೆಯ ಜನತೆ ಕ್ಷಮಿಸುವುದಿಲ್ಲ, ಲಾಭಕ್ಕಾಗಿ ಕೋಮುವಾದಿಯಾದ ಸುಮಲತಾ ಅವರ ನಡೆಯನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಮಂಡ್ಯ ಜಿಲ್ಲಾ ಸಮಿತಿ ಬಲವಾಗಿ ಖಂಡಿಸುತ್ತದೆ” ಎಂದಿದ್ದಾರೆ.

“ಸುಮಲತಾ ಅವರು ಪಕ್ಷೇತರ ಎಂಬ ಹೆಸರಿನ ನಾಟಕ ಮಾಡಿ ಜಿಲ್ಲೆಯ ಜನರ, ಪ್ರಗತಿಪರರ, ಪ್ರಗತಿಪರ ಸಂಘಟನೆಗಳ ಹಾಗೂ ಬದುಕಿನುದ್ದಕ್ಕೂ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಡುತ್ತಿರುವ ವ್ಯಕ್ತಿಗಳ ಮತ ಪಡೆದು ಈಗ ಅಧಿಕಾರ ಮತ್ತು ಅಂತಸ್ತಿಗಾಗಿ ಬಿಜೆಪಿ ಎಂಬ ಫ್ಯಾಸಿಸ್ಟ್ ಪಕ್ಷವನ್ನು ಬೆಂಬಲಿಸುವುದು ಅವರನ್ನು ನಂಬಿ ಬೆಂಬಲಿಸಿದ ಎಲ್ಲರ ಬೆನ್ನಿಗೂ ಚೂರಿ ಹಾಕುವ ಕೆಲಸವಾಗಿದೆ” ಎಂದು ಟೀಕಿಸಿದ್ದಾರೆ.

“ಅಂಬರೀಶ್ ಅವರ ಹೆಸರಿನಲ್ಲಿ ಮತಯಾಚಿಸಿದ ಸುಮಲತಾ ಅಂಬರೀಶ್ ಅವರು ಎಲ್ಲಾ ಜಾತಿ ಧರ್ಮಗಳನ್ನು ಮೀರಿದ ಜಾತ್ಯತೀತ ಕಲಾವಿದರಾಗಿದ್ದರು ಮತ್ತು ಅವರು ಬಿಜೆಪಿಯ ಆಮಿಷಗಳಿಗೆ ಎಂದೂ ಬಲಿಯಾಗಿರಲಿಲ್ಲ ಎಂಬುದು ಸುಮಲತಾ ಅವರಿಗೆ ನೆನಪಾಗಲಿಲ್ಲವೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲುವವರಾರು? ಇಲ್ಲಿದೆ ಪೂರ್ಣ ಸಮೀಕ್ಷೆ

“ಬಿಜೆಪಿ ಒಂದು ಮಹಿಳಾ ವಿರೋಧಿ, ಮನುವಾದಿ ರಾಜಕೀಯ ಪಕ್ಷ. ಜಿಲ್ಲೆಯ ಜನರಿಗೆ ಬದುಕು ಕಲ್ಪಿಸಿದ ಟಿಪ್ಪು ಅವರಿಗೆ ಪ್ರತಿಕ್ಷಣವೂ ಅವಮಾನ ಮಾಡುತ್ತಾ ಜಿಲ್ಲೆಯ ಒಕ್ಕಲಿಗರನ್ನು ಬ್ರಿಟಿಷರ ಏಜೆಂಟರು ಎಂದು ಬಿಂಬಿಸಿ ಅವಮಾನ ಮಾಡುತ್ತಿರುವ ಪಕ್ಷ. ಇಂತಹ ಪಕ್ಷಕ್ಕೆ ಕೇವಲ ಅಧಿಕಾರ ಮತ್ತು ಅಂತಸ್ತಿನ ಕಾರಣಕ್ಕೆ ಬೆಂಬಲಿಸುತ್ತಿರುವ ನಿಮ್ಮ ವಿವೇಚನೆಗೆ ಗೆದ್ದಲು ಹಿಡಿದಿದೆಯೆ?” ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆಯಲ್ಲಿ ಮಾತನಾಡಿದ ಸ್ಥಳೀಯ ಪತ್ರರೊಬ್ಬರು, “ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರೇ ಹೆಚ್ಚಿನ ವೋಟು ಹಾಕಿದರು. ರೈತಸಂಘದವರು ಬೆಂಬಲಿಸಿದ್ದರು. ಈಗ ಬಿಜೆಪಿಗೆ ಹೋಗಿದ್ದಾರೆ. ಬಿಜೆಪಿಗೆ ಇಲ್ಲಿ ನೆಲೆ ಇಲ್ಲ. ಇದನ್ನು ಜನರು ಹೇಗೆ ನೋಡುತ್ತಾರೆಂದು ಕಾದು ನೋಡಬೇಕು” ಎಂದರು.

“ಕಳೆದ ಚುನಾವಣೆಯಲ್ಲಿ ಅನುಕಂಪದ ಅಲೆ ಇತ್ತು. ಜೆಡಿಎಸ್ ವಿರೋಧಿ ನಿಲುವು ಹೆಚ್ಚಾಗಿತ್ತು. ಕಾಂಗ್ರೆಸ್, ಬಿಜೆಪಿ, ರೈತಸಂಘದವರ ಬೆಂಬಲದಿಂದ ಸುಮಲತಾ ಗೆದ್ದರೇ ಹೊರತು ವೈಯಕ್ತಿಕ ವರ್ಚಸ್ಸಿನಿಂದಲ್ಲ. ಹಾಗೆ ನೋಡಿದರೆ ಸುಮಲತಾ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾರೆಂದು ನಿರೀಕ್ಷಿಸಲಾಗಿತ್ತು” ಎಂದು ಹೇಳಿದರು.

“ಅಂಬರೀಶ್ ಅವರನ್ನು ಸಚಿವ ಸ್ಥಾನದಿಂದ ತೆಗೆದದ್ದು ನೋವು ತಂದಿದೆ ಎಂದು ಸುಮಲತಾ ಸಮಜಾಯಿಸಿ ನೀಡುತ್ತಿದ್ದಾರೆ. ಇದನ್ನು ಕಳೆದ ಚುನಾವಣೆಯಲ್ಲಿಯೇ ಹೇಳಿದ್ದರೆ ಕಾಂಗ್ರೆಸ್‌ನ ಮತಗಳು ಸುಮಲತಾ ಅವರಿಗೆ ಬೀಳುತ್ತಿರಲಿಲ್ಲ. ಈಗ ಈ ಮಾತುಗಳನ್ನು ಆಡಿದರೆ ಅವರ ರಾಜಕೀಯದ ಮೇಲೆ ವ್ಯತಿರಿಕ್ತ ಪರಿಣಾಮವೇ ಬೀರುತ್ತದೆ” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...