Homeಕರ್ನಾಟಕಕೇಸರಿ ಪಾಳಯಕ್ಕೆ ಸುಮಲತಾ ಬೆಂಬಲ; ಮಂಡ್ಯದಲ್ಲಿ ಬಿಜೆಪಿ ಕಥೆ ಏನಾಗಲಿದೆ?

ಕೇಸರಿ ಪಾಳಯಕ್ಕೆ ಸುಮಲತಾ ಬೆಂಬಲ; ಮಂಡ್ಯದಲ್ಲಿ ಬಿಜೆಪಿ ಕಥೆ ಏನಾಗಲಿದೆ?

- Advertisement -
- Advertisement -

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಕೇಸರಿ ಪಾಳಯವನ್ನು ಬೆಂಬಲಿಸುವ ನಿರ್ಧಾರ ಪ್ರಕಟಿಸಿದ್ದಾರೆ. ಬಿಜೆಪಿಗೆ ಸೇರದೆ ಇದ್ದರೂ ಕೇಸರಿ ಪಕ್ಷಕ್ಕೆ ತಮ್ಮ ಒಲವು ತೋರಿರುವುದು ರಾಜಕೀಯ ಚರ್ಚೆಗಳಿಗೆ ಅವಕಾಶ ನೀಡಿದೆ.

ಸುಮಲತಾ ಅವರು ಕಾಂಗ್ರೆಸ್‌ ಸೇರುತ್ತಾರೋ, ಬಿಜೆಪಿ ಸೇರುತ್ತಾರೋ ಎಂಬ ಚರ್ಚೆಗಳು ಶುರುವಾಗಿದ್ದವು. ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ಸಿಗರೇ ಹೆಚ್ಚಿನ ಮಟ್ಟದಲ್ಲಿ ಸುಮಲತಾ ಅವರನ್ನು ಬೆಂಬಲಿಸಿದ್ದರು ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ. ಅಲ್ಲದೆ ಮಂಡ್ಯದಲ್ಲಿ ಬಿಜೆಪಿಗೆ ತಳಮಟ್ಟದ ನೆಲೆ ಇಲ್ಲ ಎಂಬ ವಾಸ್ತವ ಸಂಗತಿಗಳು ಮುಂದಿರುವಾಗ ಸಮಲತಾ ಅವರು ಕಮಲವನ್ನು ಹಿಡಿದುಕೊಂಡಿದ್ದಾರೆ.

ಈಗ ಎದ್ದಿರುವ ಪ್ರಶ್ನೆ- ಸುಮಲತಾ ಅವರ ರಾಜಕೀಯ ಭವಿಷ್ಯ ಮುಂದೇನಾಗಲಿದೆ? ಮಂಡ್ಯದ ಜನತೆ ಈ ನಿರ್ಧಾರವನ್ನು ಹೇಗೆ ಸ್ವೀಕರಿಸಲಿದ್ದಾರೆ? ಬಿಜೆಪಿಗೆ ಇದರಿಂದ ಏನಾದರೂ ಉಪಯೋಗವಾಗಲಿದೆಯೇ? – ಇವೆಲ್ಲವಕ್ಕೂ ನಕರಾತ್ಮಕ ಉತ್ತರಗಳನ್ನೇ ಮಂಡ್ಯ ರಾಜಕಾರಣವನ್ನು ಬಲ್ಲವರು ಹೇಳುತ್ತಿದ್ದಾರೆ.

ವಕೀಲರಾದ ಬಿ.ಟಿ.ವಿಶ್ವನಾಥ್ ಅವರು ‘ನಾನುಗೌರಿ.ಕಾಂ’ ಜೊತೆಯಲ್ಲಿ ಮಾತನಾಡಿ, “ಹಳೆ ಮೈಸೂರು ಭಾಗದಲ್ಲಿ ತಮ್ಮ ನೆಲೆಯನ್ನು ಕಂಡುಕೊಳ್ಳುವುದಕ್ಕಾಗಿ ಬಿಜೆಪಿಯವರು ಸುಮಲತಾ ಅವರನ್ನು ಬೆಂಬಲಿಸಿದ್ದರು. ಪರೋಕ್ಷವಾಗಿ ಸುಮಲತಾ ಅವರು ಬಿಜೆಪಿಯ ಮುಖವೆಂಬಂತೆಯೇ ಇದ್ದರು. ಇದೇ ಸಂದರ್ಭದಲ್ಲಿ ಕುಮಾರಸ್ವಾಮಿಯವರ ವಿರುದ್ಧ ಆಡಳಿತವಿರೋಧಿ ಅಲೆ ಇತ್ತು. ದೇವೇಗೌಡರ ಕುಟುಂಬದ ವಿರುದ್ಧವೂ ಅಸಮಾಧಾನ ಮನೆಮಾಡಿತ್ತು. ಯಾವುದೇ ಪಕ್ಷದಲ್ಲಿ ಗುರುತಿಸಿಕೊಳ್ಳದೆ ಇದ್ದಿದ್ದರಿಂದ ಸುಮಲತಾ ಅವರಿಗೆ ಎಲ್ಲ ಪಕ್ಷದ ಹಿನ್ನೆಲೆಯವರೂ ಕಳೆದ ಚುನಾವಣೆಯಲ್ಲಿ ಬೆಂಬಲ ನೀಡಿದರು. ಈಗ ಸುಮಲತಾ ಅವರು ನೇರವಾಗಿಯೇ ತಮ್ಮನ್ನು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ” ಎಂದರು.

“ಬಿಜೆಪಿ ತನ್ನೆಲ್ಲ ಶಕ್ತಿ ಸಾಮರ್ಥ್ಯವನ್ನು ಮಂಡ್ಯ ಜಿಲ್ಲೆಯಲ್ಲಿ ಪರೀಕ್ಷೆಗೆ ಒಡ್ಡಿದೆ. ಆದರೆ ಕಾರ್ಯಕರ್ತರ ಪಡೆ ತಳಮಟ್ಟದಲ್ಲಿ ಬಿಜೆಪಿಗೆ ಇಲ್ಲಿ ಇಲ್ಲ. ಮೇಲುನೋಟಕ್ಕೆ ಬಿಜೆಪಿಯ ಆರ್ಭಟ ಎದ್ದುಕಾಣುತ್ತಿದೆ. ಆದರೆ ರೈತ ಸಮುದಾಯಕ್ಕೆ ಬಿಜೆಪಿ ಆಶಾದಾಯಕವಾಗಿ ಕಾಣುತ್ತಿಲ್ಲ. ಹೀಗಾಗಿ ಸುಮಲತಾ ಸೇರ್ಪಡೆಯಿಂದ ದೊಡ್ಡಮಟ್ಟದ ಲಾಭ ಬಿಜೆಪಿಗೆ ಆಗುತ್ತದೆ ಎಂದು ಕಾಣುತ್ತಿಲ್ಲ” ಎಂದು ಅಭಿಪ್ರಾಯಪಟ್ಟರು.

“ಕಳೆದ ಚುನಾವಣೆ ಸಂದರ್ಭದಲ್ಲಿ ‘ಸ್ವಾಭಿಮಾನಿ ತಂಡ’ ಎಂಬ ಹೆಸರಲ್ಲಿ ಕೆಲವು ಮುಖಂಡರು ಗುರುತಿಸಿಕೊಂಡಿದ್ದರು. ಅವರಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಲ್ಲಿ ಅವಕಾಶಗಳು ಇರಲಿಲ್ಲ. ಸುಮಲತಾ ಅವರು ಯಾವುದೇ ಪಕ್ಷದ ಬ್ಯಾನರ್‌ ಇಲ್ಲದೆ ಚುನಾವಣೆಗೆ ನಿಂತಿದ್ದರಿಂದ ಈ ಸ್ವಾಭಿಮಾನಿ ಮುಖಂಡರು ಸುಮಲತಾ ಪರ ನಿಂತರು. ಈಗ ಈ ಸ್ವಾಭಿಮಾನಿಗಳು ಬಿಜೆಪಿಯ ಜೊತೆ ಹೋಗಬೇಕಾಗುತ್ತದೆ. ಈ ನಿರ್ಧಾರದಿಂದ ಹಿಂದೆ ಸರಿಯುವವರ ಸಂಖ್ಯೆಯೇ ದೊಡ್ಡದಿದೆ. ಸುಮಲತಾ ಅವರೇ ಸ್ವಯಂಕೃತವಾಗಿ ಸಮಸ್ಯೆಯನ್ನು ಮೈಮೇಲೆ ಎಳೆದುಕೊಂಡಿದ್ದಾರೆ” ಎಂದು ತಿಳಿಸಿದರು.

“ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿಯನ್ನು ಸುಮಲತಾ ಅವರು ಮಾಡಿದಂತೆ ಕಾಣುತ್ತಿಲ್ಲ. ಹೆದ್ದಾರಿ ನಿರ್ಮಾಣವಾದ ಮೇಲಂತೂ ಮಂಡ್ಯ ಜಿಲ್ಲೆಯಲ್ಲಿ ವ್ಯಾಪಾರ ವ್ಯವಹಾರಗಳು ಸ್ಥಗಿತವಾಗುತ್ತಿವೆ. ಹೆದ್ದಾರಿ ಬದಿಯಲ್ಲಿನ ಹೋಟೆಲ್‌ಗಳು ಮುಚ್ಚುವಂತಹ ಸ್ಥಿತಿ ನಿರ್ಮಾಣವಾಗಿದೆ. ಮಂಡ್ಯದ ಯುವಕರು ಉದ್ಯೋಗ ಅರಸಿ ಬೆಂಗಳೂರಿಗೆ ಗುಳೇ ಹೋಗುವುದು ನಿಂತಿಲ್ಲ” ಎಂದು ವಿಷಾದಿಸಿದರು.

ಸುಮಲತಾ ಅವರ ನಿರ್ಧಾರವನ್ನು ಖಂಡಿಸಿರುವ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಕೃಷ್ಣೇಗೌಡ ಟಿ.ಎಲ್. ಅವರು, “ಮಂಡ್ಯ ಲೋಕಸಭಾ ಸದಸ್ಯರೂ, ಸಿನಿಮಾ ನಟರೂ ಆದ ಸುಮಲತಾ ಅಂಬರೀಶ್ ಅವರು ಬಿಜೆಪಿಗೆ ಬೆಂಬಲಿಸಲು ತೀರ್ಮಾನಿಸಿರುವುದು ಮಂಡ್ಯ ಜಿಲ್ಲೆಯ ಜನತೆಗೆ ಬಗೆದ ದ್ರೋಹವಾಗಿದೆ, ಇದನ್ನು ಜಿಲ್ಲೆಯ ಜನತೆ ಕ್ಷಮಿಸುವುದಿಲ್ಲ, ಲಾಭಕ್ಕಾಗಿ ಕೋಮುವಾದಿಯಾದ ಸುಮಲತಾ ಅವರ ನಡೆಯನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಮಂಡ್ಯ ಜಿಲ್ಲಾ ಸಮಿತಿ ಬಲವಾಗಿ ಖಂಡಿಸುತ್ತದೆ” ಎಂದಿದ್ದಾರೆ.

“ಸುಮಲತಾ ಅವರು ಪಕ್ಷೇತರ ಎಂಬ ಹೆಸರಿನ ನಾಟಕ ಮಾಡಿ ಜಿಲ್ಲೆಯ ಜನರ, ಪ್ರಗತಿಪರರ, ಪ್ರಗತಿಪರ ಸಂಘಟನೆಗಳ ಹಾಗೂ ಬದುಕಿನುದ್ದಕ್ಕೂ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಡುತ್ತಿರುವ ವ್ಯಕ್ತಿಗಳ ಮತ ಪಡೆದು ಈಗ ಅಧಿಕಾರ ಮತ್ತು ಅಂತಸ್ತಿಗಾಗಿ ಬಿಜೆಪಿ ಎಂಬ ಫ್ಯಾಸಿಸ್ಟ್ ಪಕ್ಷವನ್ನು ಬೆಂಬಲಿಸುವುದು ಅವರನ್ನು ನಂಬಿ ಬೆಂಬಲಿಸಿದ ಎಲ್ಲರ ಬೆನ್ನಿಗೂ ಚೂರಿ ಹಾಕುವ ಕೆಲಸವಾಗಿದೆ” ಎಂದು ಟೀಕಿಸಿದ್ದಾರೆ.

“ಅಂಬರೀಶ್ ಅವರ ಹೆಸರಿನಲ್ಲಿ ಮತಯಾಚಿಸಿದ ಸುಮಲತಾ ಅಂಬರೀಶ್ ಅವರು ಎಲ್ಲಾ ಜಾತಿ ಧರ್ಮಗಳನ್ನು ಮೀರಿದ ಜಾತ್ಯತೀತ ಕಲಾವಿದರಾಗಿದ್ದರು ಮತ್ತು ಅವರು ಬಿಜೆಪಿಯ ಆಮಿಷಗಳಿಗೆ ಎಂದೂ ಬಲಿಯಾಗಿರಲಿಲ್ಲ ಎಂಬುದು ಸುಮಲತಾ ಅವರಿಗೆ ನೆನಪಾಗಲಿಲ್ಲವೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲುವವರಾರು? ಇಲ್ಲಿದೆ ಪೂರ್ಣ ಸಮೀಕ್ಷೆ

“ಬಿಜೆಪಿ ಒಂದು ಮಹಿಳಾ ವಿರೋಧಿ, ಮನುವಾದಿ ರಾಜಕೀಯ ಪಕ್ಷ. ಜಿಲ್ಲೆಯ ಜನರಿಗೆ ಬದುಕು ಕಲ್ಪಿಸಿದ ಟಿಪ್ಪು ಅವರಿಗೆ ಪ್ರತಿಕ್ಷಣವೂ ಅವಮಾನ ಮಾಡುತ್ತಾ ಜಿಲ್ಲೆಯ ಒಕ್ಕಲಿಗರನ್ನು ಬ್ರಿಟಿಷರ ಏಜೆಂಟರು ಎಂದು ಬಿಂಬಿಸಿ ಅವಮಾನ ಮಾಡುತ್ತಿರುವ ಪಕ್ಷ. ಇಂತಹ ಪಕ್ಷಕ್ಕೆ ಕೇವಲ ಅಧಿಕಾರ ಮತ್ತು ಅಂತಸ್ತಿನ ಕಾರಣಕ್ಕೆ ಬೆಂಬಲಿಸುತ್ತಿರುವ ನಿಮ್ಮ ವಿವೇಚನೆಗೆ ಗೆದ್ದಲು ಹಿಡಿದಿದೆಯೆ?” ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆಯಲ್ಲಿ ಮಾತನಾಡಿದ ಸ್ಥಳೀಯ ಪತ್ರರೊಬ್ಬರು, “ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರೇ ಹೆಚ್ಚಿನ ವೋಟು ಹಾಕಿದರು. ರೈತಸಂಘದವರು ಬೆಂಬಲಿಸಿದ್ದರು. ಈಗ ಬಿಜೆಪಿಗೆ ಹೋಗಿದ್ದಾರೆ. ಬಿಜೆಪಿಗೆ ಇಲ್ಲಿ ನೆಲೆ ಇಲ್ಲ. ಇದನ್ನು ಜನರು ಹೇಗೆ ನೋಡುತ್ತಾರೆಂದು ಕಾದು ನೋಡಬೇಕು” ಎಂದರು.

“ಕಳೆದ ಚುನಾವಣೆಯಲ್ಲಿ ಅನುಕಂಪದ ಅಲೆ ಇತ್ತು. ಜೆಡಿಎಸ್ ವಿರೋಧಿ ನಿಲುವು ಹೆಚ್ಚಾಗಿತ್ತು. ಕಾಂಗ್ರೆಸ್, ಬಿಜೆಪಿ, ರೈತಸಂಘದವರ ಬೆಂಬಲದಿಂದ ಸುಮಲತಾ ಗೆದ್ದರೇ ಹೊರತು ವೈಯಕ್ತಿಕ ವರ್ಚಸ್ಸಿನಿಂದಲ್ಲ. ಹಾಗೆ ನೋಡಿದರೆ ಸುಮಲತಾ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾರೆಂದು ನಿರೀಕ್ಷಿಸಲಾಗಿತ್ತು” ಎಂದು ಹೇಳಿದರು.

“ಅಂಬರೀಶ್ ಅವರನ್ನು ಸಚಿವ ಸ್ಥಾನದಿಂದ ತೆಗೆದದ್ದು ನೋವು ತಂದಿದೆ ಎಂದು ಸುಮಲತಾ ಸಮಜಾಯಿಸಿ ನೀಡುತ್ತಿದ್ದಾರೆ. ಇದನ್ನು ಕಳೆದ ಚುನಾವಣೆಯಲ್ಲಿಯೇ ಹೇಳಿದ್ದರೆ ಕಾಂಗ್ರೆಸ್‌ನ ಮತಗಳು ಸುಮಲತಾ ಅವರಿಗೆ ಬೀಳುತ್ತಿರಲಿಲ್ಲ. ಈಗ ಈ ಮಾತುಗಳನ್ನು ಆಡಿದರೆ ಅವರ ರಾಜಕೀಯದ ಮೇಲೆ ವ್ಯತಿರಿಕ್ತ ಪರಿಣಾಮವೇ ಬೀರುತ್ತದೆ” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...