Homeಕರ್ನಾಟಕಕೇಸರಿ ಪಾಳಯಕ್ಕೆ ಸುಮಲತಾ ಬೆಂಬಲ; ಮಂಡ್ಯದಲ್ಲಿ ಬಿಜೆಪಿ ಕಥೆ ಏನಾಗಲಿದೆ?

ಕೇಸರಿ ಪಾಳಯಕ್ಕೆ ಸುಮಲತಾ ಬೆಂಬಲ; ಮಂಡ್ಯದಲ್ಲಿ ಬಿಜೆಪಿ ಕಥೆ ಏನಾಗಲಿದೆ?

- Advertisement -
- Advertisement -

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಕೇಸರಿ ಪಾಳಯವನ್ನು ಬೆಂಬಲಿಸುವ ನಿರ್ಧಾರ ಪ್ರಕಟಿಸಿದ್ದಾರೆ. ಬಿಜೆಪಿಗೆ ಸೇರದೆ ಇದ್ದರೂ ಕೇಸರಿ ಪಕ್ಷಕ್ಕೆ ತಮ್ಮ ಒಲವು ತೋರಿರುವುದು ರಾಜಕೀಯ ಚರ್ಚೆಗಳಿಗೆ ಅವಕಾಶ ನೀಡಿದೆ.

ಸುಮಲತಾ ಅವರು ಕಾಂಗ್ರೆಸ್‌ ಸೇರುತ್ತಾರೋ, ಬಿಜೆಪಿ ಸೇರುತ್ತಾರೋ ಎಂಬ ಚರ್ಚೆಗಳು ಶುರುವಾಗಿದ್ದವು. ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ಸಿಗರೇ ಹೆಚ್ಚಿನ ಮಟ್ಟದಲ್ಲಿ ಸುಮಲತಾ ಅವರನ್ನು ಬೆಂಬಲಿಸಿದ್ದರು ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ. ಅಲ್ಲದೆ ಮಂಡ್ಯದಲ್ಲಿ ಬಿಜೆಪಿಗೆ ತಳಮಟ್ಟದ ನೆಲೆ ಇಲ್ಲ ಎಂಬ ವಾಸ್ತವ ಸಂಗತಿಗಳು ಮುಂದಿರುವಾಗ ಸಮಲತಾ ಅವರು ಕಮಲವನ್ನು ಹಿಡಿದುಕೊಂಡಿದ್ದಾರೆ.

ಈಗ ಎದ್ದಿರುವ ಪ್ರಶ್ನೆ- ಸುಮಲತಾ ಅವರ ರಾಜಕೀಯ ಭವಿಷ್ಯ ಮುಂದೇನಾಗಲಿದೆ? ಮಂಡ್ಯದ ಜನತೆ ಈ ನಿರ್ಧಾರವನ್ನು ಹೇಗೆ ಸ್ವೀಕರಿಸಲಿದ್ದಾರೆ? ಬಿಜೆಪಿಗೆ ಇದರಿಂದ ಏನಾದರೂ ಉಪಯೋಗವಾಗಲಿದೆಯೇ? – ಇವೆಲ್ಲವಕ್ಕೂ ನಕರಾತ್ಮಕ ಉತ್ತರಗಳನ್ನೇ ಮಂಡ್ಯ ರಾಜಕಾರಣವನ್ನು ಬಲ್ಲವರು ಹೇಳುತ್ತಿದ್ದಾರೆ.

ವಕೀಲರಾದ ಬಿ.ಟಿ.ವಿಶ್ವನಾಥ್ ಅವರು ‘ನಾನುಗೌರಿ.ಕಾಂ’ ಜೊತೆಯಲ್ಲಿ ಮಾತನಾಡಿ, “ಹಳೆ ಮೈಸೂರು ಭಾಗದಲ್ಲಿ ತಮ್ಮ ನೆಲೆಯನ್ನು ಕಂಡುಕೊಳ್ಳುವುದಕ್ಕಾಗಿ ಬಿಜೆಪಿಯವರು ಸುಮಲತಾ ಅವರನ್ನು ಬೆಂಬಲಿಸಿದ್ದರು. ಪರೋಕ್ಷವಾಗಿ ಸುಮಲತಾ ಅವರು ಬಿಜೆಪಿಯ ಮುಖವೆಂಬಂತೆಯೇ ಇದ್ದರು. ಇದೇ ಸಂದರ್ಭದಲ್ಲಿ ಕುಮಾರಸ್ವಾಮಿಯವರ ವಿರುದ್ಧ ಆಡಳಿತವಿರೋಧಿ ಅಲೆ ಇತ್ತು. ದೇವೇಗೌಡರ ಕುಟುಂಬದ ವಿರುದ್ಧವೂ ಅಸಮಾಧಾನ ಮನೆಮಾಡಿತ್ತು. ಯಾವುದೇ ಪಕ್ಷದಲ್ಲಿ ಗುರುತಿಸಿಕೊಳ್ಳದೆ ಇದ್ದಿದ್ದರಿಂದ ಸುಮಲತಾ ಅವರಿಗೆ ಎಲ್ಲ ಪಕ್ಷದ ಹಿನ್ನೆಲೆಯವರೂ ಕಳೆದ ಚುನಾವಣೆಯಲ್ಲಿ ಬೆಂಬಲ ನೀಡಿದರು. ಈಗ ಸುಮಲತಾ ಅವರು ನೇರವಾಗಿಯೇ ತಮ್ಮನ್ನು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ” ಎಂದರು.

“ಬಿಜೆಪಿ ತನ್ನೆಲ್ಲ ಶಕ್ತಿ ಸಾಮರ್ಥ್ಯವನ್ನು ಮಂಡ್ಯ ಜಿಲ್ಲೆಯಲ್ಲಿ ಪರೀಕ್ಷೆಗೆ ಒಡ್ಡಿದೆ. ಆದರೆ ಕಾರ್ಯಕರ್ತರ ಪಡೆ ತಳಮಟ್ಟದಲ್ಲಿ ಬಿಜೆಪಿಗೆ ಇಲ್ಲಿ ಇಲ್ಲ. ಮೇಲುನೋಟಕ್ಕೆ ಬಿಜೆಪಿಯ ಆರ್ಭಟ ಎದ್ದುಕಾಣುತ್ತಿದೆ. ಆದರೆ ರೈತ ಸಮುದಾಯಕ್ಕೆ ಬಿಜೆಪಿ ಆಶಾದಾಯಕವಾಗಿ ಕಾಣುತ್ತಿಲ್ಲ. ಹೀಗಾಗಿ ಸುಮಲತಾ ಸೇರ್ಪಡೆಯಿಂದ ದೊಡ್ಡಮಟ್ಟದ ಲಾಭ ಬಿಜೆಪಿಗೆ ಆಗುತ್ತದೆ ಎಂದು ಕಾಣುತ್ತಿಲ್ಲ” ಎಂದು ಅಭಿಪ್ರಾಯಪಟ್ಟರು.

“ಕಳೆದ ಚುನಾವಣೆ ಸಂದರ್ಭದಲ್ಲಿ ‘ಸ್ವಾಭಿಮಾನಿ ತಂಡ’ ಎಂಬ ಹೆಸರಲ್ಲಿ ಕೆಲವು ಮುಖಂಡರು ಗುರುತಿಸಿಕೊಂಡಿದ್ದರು. ಅವರಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಲ್ಲಿ ಅವಕಾಶಗಳು ಇರಲಿಲ್ಲ. ಸುಮಲತಾ ಅವರು ಯಾವುದೇ ಪಕ್ಷದ ಬ್ಯಾನರ್‌ ಇಲ್ಲದೆ ಚುನಾವಣೆಗೆ ನಿಂತಿದ್ದರಿಂದ ಈ ಸ್ವಾಭಿಮಾನಿ ಮುಖಂಡರು ಸುಮಲತಾ ಪರ ನಿಂತರು. ಈಗ ಈ ಸ್ವಾಭಿಮಾನಿಗಳು ಬಿಜೆಪಿಯ ಜೊತೆ ಹೋಗಬೇಕಾಗುತ್ತದೆ. ಈ ನಿರ್ಧಾರದಿಂದ ಹಿಂದೆ ಸರಿಯುವವರ ಸಂಖ್ಯೆಯೇ ದೊಡ್ಡದಿದೆ. ಸುಮಲತಾ ಅವರೇ ಸ್ವಯಂಕೃತವಾಗಿ ಸಮಸ್ಯೆಯನ್ನು ಮೈಮೇಲೆ ಎಳೆದುಕೊಂಡಿದ್ದಾರೆ” ಎಂದು ತಿಳಿಸಿದರು.

“ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿಯನ್ನು ಸುಮಲತಾ ಅವರು ಮಾಡಿದಂತೆ ಕಾಣುತ್ತಿಲ್ಲ. ಹೆದ್ದಾರಿ ನಿರ್ಮಾಣವಾದ ಮೇಲಂತೂ ಮಂಡ್ಯ ಜಿಲ್ಲೆಯಲ್ಲಿ ವ್ಯಾಪಾರ ವ್ಯವಹಾರಗಳು ಸ್ಥಗಿತವಾಗುತ್ತಿವೆ. ಹೆದ್ದಾರಿ ಬದಿಯಲ್ಲಿನ ಹೋಟೆಲ್‌ಗಳು ಮುಚ್ಚುವಂತಹ ಸ್ಥಿತಿ ನಿರ್ಮಾಣವಾಗಿದೆ. ಮಂಡ್ಯದ ಯುವಕರು ಉದ್ಯೋಗ ಅರಸಿ ಬೆಂಗಳೂರಿಗೆ ಗುಳೇ ಹೋಗುವುದು ನಿಂತಿಲ್ಲ” ಎಂದು ವಿಷಾದಿಸಿದರು.

ಸುಮಲತಾ ಅವರ ನಿರ್ಧಾರವನ್ನು ಖಂಡಿಸಿರುವ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಕೃಷ್ಣೇಗೌಡ ಟಿ.ಎಲ್. ಅವರು, “ಮಂಡ್ಯ ಲೋಕಸಭಾ ಸದಸ್ಯರೂ, ಸಿನಿಮಾ ನಟರೂ ಆದ ಸುಮಲತಾ ಅಂಬರೀಶ್ ಅವರು ಬಿಜೆಪಿಗೆ ಬೆಂಬಲಿಸಲು ತೀರ್ಮಾನಿಸಿರುವುದು ಮಂಡ್ಯ ಜಿಲ್ಲೆಯ ಜನತೆಗೆ ಬಗೆದ ದ್ರೋಹವಾಗಿದೆ, ಇದನ್ನು ಜಿಲ್ಲೆಯ ಜನತೆ ಕ್ಷಮಿಸುವುದಿಲ್ಲ, ಲಾಭಕ್ಕಾಗಿ ಕೋಮುವಾದಿಯಾದ ಸುಮಲತಾ ಅವರ ನಡೆಯನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಮಂಡ್ಯ ಜಿಲ್ಲಾ ಸಮಿತಿ ಬಲವಾಗಿ ಖಂಡಿಸುತ್ತದೆ” ಎಂದಿದ್ದಾರೆ.

“ಸುಮಲತಾ ಅವರು ಪಕ್ಷೇತರ ಎಂಬ ಹೆಸರಿನ ನಾಟಕ ಮಾಡಿ ಜಿಲ್ಲೆಯ ಜನರ, ಪ್ರಗತಿಪರರ, ಪ್ರಗತಿಪರ ಸಂಘಟನೆಗಳ ಹಾಗೂ ಬದುಕಿನುದ್ದಕ್ಕೂ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಡುತ್ತಿರುವ ವ್ಯಕ್ತಿಗಳ ಮತ ಪಡೆದು ಈಗ ಅಧಿಕಾರ ಮತ್ತು ಅಂತಸ್ತಿಗಾಗಿ ಬಿಜೆಪಿ ಎಂಬ ಫ್ಯಾಸಿಸ್ಟ್ ಪಕ್ಷವನ್ನು ಬೆಂಬಲಿಸುವುದು ಅವರನ್ನು ನಂಬಿ ಬೆಂಬಲಿಸಿದ ಎಲ್ಲರ ಬೆನ್ನಿಗೂ ಚೂರಿ ಹಾಕುವ ಕೆಲಸವಾಗಿದೆ” ಎಂದು ಟೀಕಿಸಿದ್ದಾರೆ.

“ಅಂಬರೀಶ್ ಅವರ ಹೆಸರಿನಲ್ಲಿ ಮತಯಾಚಿಸಿದ ಸುಮಲತಾ ಅಂಬರೀಶ್ ಅವರು ಎಲ್ಲಾ ಜಾತಿ ಧರ್ಮಗಳನ್ನು ಮೀರಿದ ಜಾತ್ಯತೀತ ಕಲಾವಿದರಾಗಿದ್ದರು ಮತ್ತು ಅವರು ಬಿಜೆಪಿಯ ಆಮಿಷಗಳಿಗೆ ಎಂದೂ ಬಲಿಯಾಗಿರಲಿಲ್ಲ ಎಂಬುದು ಸುಮಲತಾ ಅವರಿಗೆ ನೆನಪಾಗಲಿಲ್ಲವೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲುವವರಾರು? ಇಲ್ಲಿದೆ ಪೂರ್ಣ ಸಮೀಕ್ಷೆ

“ಬಿಜೆಪಿ ಒಂದು ಮಹಿಳಾ ವಿರೋಧಿ, ಮನುವಾದಿ ರಾಜಕೀಯ ಪಕ್ಷ. ಜಿಲ್ಲೆಯ ಜನರಿಗೆ ಬದುಕು ಕಲ್ಪಿಸಿದ ಟಿಪ್ಪು ಅವರಿಗೆ ಪ್ರತಿಕ್ಷಣವೂ ಅವಮಾನ ಮಾಡುತ್ತಾ ಜಿಲ್ಲೆಯ ಒಕ್ಕಲಿಗರನ್ನು ಬ್ರಿಟಿಷರ ಏಜೆಂಟರು ಎಂದು ಬಿಂಬಿಸಿ ಅವಮಾನ ಮಾಡುತ್ತಿರುವ ಪಕ್ಷ. ಇಂತಹ ಪಕ್ಷಕ್ಕೆ ಕೇವಲ ಅಧಿಕಾರ ಮತ್ತು ಅಂತಸ್ತಿನ ಕಾರಣಕ್ಕೆ ಬೆಂಬಲಿಸುತ್ತಿರುವ ನಿಮ್ಮ ವಿವೇಚನೆಗೆ ಗೆದ್ದಲು ಹಿಡಿದಿದೆಯೆ?” ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆಯಲ್ಲಿ ಮಾತನಾಡಿದ ಸ್ಥಳೀಯ ಪತ್ರರೊಬ್ಬರು, “ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರೇ ಹೆಚ್ಚಿನ ವೋಟು ಹಾಕಿದರು. ರೈತಸಂಘದವರು ಬೆಂಬಲಿಸಿದ್ದರು. ಈಗ ಬಿಜೆಪಿಗೆ ಹೋಗಿದ್ದಾರೆ. ಬಿಜೆಪಿಗೆ ಇಲ್ಲಿ ನೆಲೆ ಇಲ್ಲ. ಇದನ್ನು ಜನರು ಹೇಗೆ ನೋಡುತ್ತಾರೆಂದು ಕಾದು ನೋಡಬೇಕು” ಎಂದರು.

“ಕಳೆದ ಚುನಾವಣೆಯಲ್ಲಿ ಅನುಕಂಪದ ಅಲೆ ಇತ್ತು. ಜೆಡಿಎಸ್ ವಿರೋಧಿ ನಿಲುವು ಹೆಚ್ಚಾಗಿತ್ತು. ಕಾಂಗ್ರೆಸ್, ಬಿಜೆಪಿ, ರೈತಸಂಘದವರ ಬೆಂಬಲದಿಂದ ಸುಮಲತಾ ಗೆದ್ದರೇ ಹೊರತು ವೈಯಕ್ತಿಕ ವರ್ಚಸ್ಸಿನಿಂದಲ್ಲ. ಹಾಗೆ ನೋಡಿದರೆ ಸುಮಲತಾ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾರೆಂದು ನಿರೀಕ್ಷಿಸಲಾಗಿತ್ತು” ಎಂದು ಹೇಳಿದರು.

“ಅಂಬರೀಶ್ ಅವರನ್ನು ಸಚಿವ ಸ್ಥಾನದಿಂದ ತೆಗೆದದ್ದು ನೋವು ತಂದಿದೆ ಎಂದು ಸುಮಲತಾ ಸಮಜಾಯಿಸಿ ನೀಡುತ್ತಿದ್ದಾರೆ. ಇದನ್ನು ಕಳೆದ ಚುನಾವಣೆಯಲ್ಲಿಯೇ ಹೇಳಿದ್ದರೆ ಕಾಂಗ್ರೆಸ್‌ನ ಮತಗಳು ಸುಮಲತಾ ಅವರಿಗೆ ಬೀಳುತ್ತಿರಲಿಲ್ಲ. ಈಗ ಈ ಮಾತುಗಳನ್ನು ಆಡಿದರೆ ಅವರ ರಾಜಕೀಯದ ಮೇಲೆ ವ್ಯತಿರಿಕ್ತ ಪರಿಣಾಮವೇ ಬೀರುತ್ತದೆ” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...