Homeಕರ್ನಾಟಕಕೇಸರಿ ಪಾಳಯಕ್ಕೆ ಸುಮಲತಾ ಬೆಂಬಲ; ಮಂಡ್ಯದಲ್ಲಿ ಬಿಜೆಪಿ ಕಥೆ ಏನಾಗಲಿದೆ?

ಕೇಸರಿ ಪಾಳಯಕ್ಕೆ ಸುಮಲತಾ ಬೆಂಬಲ; ಮಂಡ್ಯದಲ್ಲಿ ಬಿಜೆಪಿ ಕಥೆ ಏನಾಗಲಿದೆ?

- Advertisement -
- Advertisement -

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಕೇಸರಿ ಪಾಳಯವನ್ನು ಬೆಂಬಲಿಸುವ ನಿರ್ಧಾರ ಪ್ರಕಟಿಸಿದ್ದಾರೆ. ಬಿಜೆಪಿಗೆ ಸೇರದೆ ಇದ್ದರೂ ಕೇಸರಿ ಪಕ್ಷಕ್ಕೆ ತಮ್ಮ ಒಲವು ತೋರಿರುವುದು ರಾಜಕೀಯ ಚರ್ಚೆಗಳಿಗೆ ಅವಕಾಶ ನೀಡಿದೆ.

ಸುಮಲತಾ ಅವರು ಕಾಂಗ್ರೆಸ್‌ ಸೇರುತ್ತಾರೋ, ಬಿಜೆಪಿ ಸೇರುತ್ತಾರೋ ಎಂಬ ಚರ್ಚೆಗಳು ಶುರುವಾಗಿದ್ದವು. ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ಸಿಗರೇ ಹೆಚ್ಚಿನ ಮಟ್ಟದಲ್ಲಿ ಸುಮಲತಾ ಅವರನ್ನು ಬೆಂಬಲಿಸಿದ್ದರು ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ. ಅಲ್ಲದೆ ಮಂಡ್ಯದಲ್ಲಿ ಬಿಜೆಪಿಗೆ ತಳಮಟ್ಟದ ನೆಲೆ ಇಲ್ಲ ಎಂಬ ವಾಸ್ತವ ಸಂಗತಿಗಳು ಮುಂದಿರುವಾಗ ಸಮಲತಾ ಅವರು ಕಮಲವನ್ನು ಹಿಡಿದುಕೊಂಡಿದ್ದಾರೆ.

ಈಗ ಎದ್ದಿರುವ ಪ್ರಶ್ನೆ- ಸುಮಲತಾ ಅವರ ರಾಜಕೀಯ ಭವಿಷ್ಯ ಮುಂದೇನಾಗಲಿದೆ? ಮಂಡ್ಯದ ಜನತೆ ಈ ನಿರ್ಧಾರವನ್ನು ಹೇಗೆ ಸ್ವೀಕರಿಸಲಿದ್ದಾರೆ? ಬಿಜೆಪಿಗೆ ಇದರಿಂದ ಏನಾದರೂ ಉಪಯೋಗವಾಗಲಿದೆಯೇ? – ಇವೆಲ್ಲವಕ್ಕೂ ನಕರಾತ್ಮಕ ಉತ್ತರಗಳನ್ನೇ ಮಂಡ್ಯ ರಾಜಕಾರಣವನ್ನು ಬಲ್ಲವರು ಹೇಳುತ್ತಿದ್ದಾರೆ.

ವಕೀಲರಾದ ಬಿ.ಟಿ.ವಿಶ್ವನಾಥ್ ಅವರು ‘ನಾನುಗೌರಿ.ಕಾಂ’ ಜೊತೆಯಲ್ಲಿ ಮಾತನಾಡಿ, “ಹಳೆ ಮೈಸೂರು ಭಾಗದಲ್ಲಿ ತಮ್ಮ ನೆಲೆಯನ್ನು ಕಂಡುಕೊಳ್ಳುವುದಕ್ಕಾಗಿ ಬಿಜೆಪಿಯವರು ಸುಮಲತಾ ಅವರನ್ನು ಬೆಂಬಲಿಸಿದ್ದರು. ಪರೋಕ್ಷವಾಗಿ ಸುಮಲತಾ ಅವರು ಬಿಜೆಪಿಯ ಮುಖವೆಂಬಂತೆಯೇ ಇದ್ದರು. ಇದೇ ಸಂದರ್ಭದಲ್ಲಿ ಕುಮಾರಸ್ವಾಮಿಯವರ ವಿರುದ್ಧ ಆಡಳಿತವಿರೋಧಿ ಅಲೆ ಇತ್ತು. ದೇವೇಗೌಡರ ಕುಟುಂಬದ ವಿರುದ್ಧವೂ ಅಸಮಾಧಾನ ಮನೆಮಾಡಿತ್ತು. ಯಾವುದೇ ಪಕ್ಷದಲ್ಲಿ ಗುರುತಿಸಿಕೊಳ್ಳದೆ ಇದ್ದಿದ್ದರಿಂದ ಸುಮಲತಾ ಅವರಿಗೆ ಎಲ್ಲ ಪಕ್ಷದ ಹಿನ್ನೆಲೆಯವರೂ ಕಳೆದ ಚುನಾವಣೆಯಲ್ಲಿ ಬೆಂಬಲ ನೀಡಿದರು. ಈಗ ಸುಮಲತಾ ಅವರು ನೇರವಾಗಿಯೇ ತಮ್ಮನ್ನು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ” ಎಂದರು.

“ಬಿಜೆಪಿ ತನ್ನೆಲ್ಲ ಶಕ್ತಿ ಸಾಮರ್ಥ್ಯವನ್ನು ಮಂಡ್ಯ ಜಿಲ್ಲೆಯಲ್ಲಿ ಪರೀಕ್ಷೆಗೆ ಒಡ್ಡಿದೆ. ಆದರೆ ಕಾರ್ಯಕರ್ತರ ಪಡೆ ತಳಮಟ್ಟದಲ್ಲಿ ಬಿಜೆಪಿಗೆ ಇಲ್ಲಿ ಇಲ್ಲ. ಮೇಲುನೋಟಕ್ಕೆ ಬಿಜೆಪಿಯ ಆರ್ಭಟ ಎದ್ದುಕಾಣುತ್ತಿದೆ. ಆದರೆ ರೈತ ಸಮುದಾಯಕ್ಕೆ ಬಿಜೆಪಿ ಆಶಾದಾಯಕವಾಗಿ ಕಾಣುತ್ತಿಲ್ಲ. ಹೀಗಾಗಿ ಸುಮಲತಾ ಸೇರ್ಪಡೆಯಿಂದ ದೊಡ್ಡಮಟ್ಟದ ಲಾಭ ಬಿಜೆಪಿಗೆ ಆಗುತ್ತದೆ ಎಂದು ಕಾಣುತ್ತಿಲ್ಲ” ಎಂದು ಅಭಿಪ್ರಾಯಪಟ್ಟರು.

“ಕಳೆದ ಚುನಾವಣೆ ಸಂದರ್ಭದಲ್ಲಿ ‘ಸ್ವಾಭಿಮಾನಿ ತಂಡ’ ಎಂಬ ಹೆಸರಲ್ಲಿ ಕೆಲವು ಮುಖಂಡರು ಗುರುತಿಸಿಕೊಂಡಿದ್ದರು. ಅವರಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಲ್ಲಿ ಅವಕಾಶಗಳು ಇರಲಿಲ್ಲ. ಸುಮಲತಾ ಅವರು ಯಾವುದೇ ಪಕ್ಷದ ಬ್ಯಾನರ್‌ ಇಲ್ಲದೆ ಚುನಾವಣೆಗೆ ನಿಂತಿದ್ದರಿಂದ ಈ ಸ್ವಾಭಿಮಾನಿ ಮುಖಂಡರು ಸುಮಲತಾ ಪರ ನಿಂತರು. ಈಗ ಈ ಸ್ವಾಭಿಮಾನಿಗಳು ಬಿಜೆಪಿಯ ಜೊತೆ ಹೋಗಬೇಕಾಗುತ್ತದೆ. ಈ ನಿರ್ಧಾರದಿಂದ ಹಿಂದೆ ಸರಿಯುವವರ ಸಂಖ್ಯೆಯೇ ದೊಡ್ಡದಿದೆ. ಸುಮಲತಾ ಅವರೇ ಸ್ವಯಂಕೃತವಾಗಿ ಸಮಸ್ಯೆಯನ್ನು ಮೈಮೇಲೆ ಎಳೆದುಕೊಂಡಿದ್ದಾರೆ” ಎಂದು ತಿಳಿಸಿದರು.

“ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿಯನ್ನು ಸುಮಲತಾ ಅವರು ಮಾಡಿದಂತೆ ಕಾಣುತ್ತಿಲ್ಲ. ಹೆದ್ದಾರಿ ನಿರ್ಮಾಣವಾದ ಮೇಲಂತೂ ಮಂಡ್ಯ ಜಿಲ್ಲೆಯಲ್ಲಿ ವ್ಯಾಪಾರ ವ್ಯವಹಾರಗಳು ಸ್ಥಗಿತವಾಗುತ್ತಿವೆ. ಹೆದ್ದಾರಿ ಬದಿಯಲ್ಲಿನ ಹೋಟೆಲ್‌ಗಳು ಮುಚ್ಚುವಂತಹ ಸ್ಥಿತಿ ನಿರ್ಮಾಣವಾಗಿದೆ. ಮಂಡ್ಯದ ಯುವಕರು ಉದ್ಯೋಗ ಅರಸಿ ಬೆಂಗಳೂರಿಗೆ ಗುಳೇ ಹೋಗುವುದು ನಿಂತಿಲ್ಲ” ಎಂದು ವಿಷಾದಿಸಿದರು.

ಸುಮಲತಾ ಅವರ ನಿರ್ಧಾರವನ್ನು ಖಂಡಿಸಿರುವ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಕೃಷ್ಣೇಗೌಡ ಟಿ.ಎಲ್. ಅವರು, “ಮಂಡ್ಯ ಲೋಕಸಭಾ ಸದಸ್ಯರೂ, ಸಿನಿಮಾ ನಟರೂ ಆದ ಸುಮಲತಾ ಅಂಬರೀಶ್ ಅವರು ಬಿಜೆಪಿಗೆ ಬೆಂಬಲಿಸಲು ತೀರ್ಮಾನಿಸಿರುವುದು ಮಂಡ್ಯ ಜಿಲ್ಲೆಯ ಜನತೆಗೆ ಬಗೆದ ದ್ರೋಹವಾಗಿದೆ, ಇದನ್ನು ಜಿಲ್ಲೆಯ ಜನತೆ ಕ್ಷಮಿಸುವುದಿಲ್ಲ, ಲಾಭಕ್ಕಾಗಿ ಕೋಮುವಾದಿಯಾದ ಸುಮಲತಾ ಅವರ ನಡೆಯನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಮಂಡ್ಯ ಜಿಲ್ಲಾ ಸಮಿತಿ ಬಲವಾಗಿ ಖಂಡಿಸುತ್ತದೆ” ಎಂದಿದ್ದಾರೆ.

“ಸುಮಲತಾ ಅವರು ಪಕ್ಷೇತರ ಎಂಬ ಹೆಸರಿನ ನಾಟಕ ಮಾಡಿ ಜಿಲ್ಲೆಯ ಜನರ, ಪ್ರಗತಿಪರರ, ಪ್ರಗತಿಪರ ಸಂಘಟನೆಗಳ ಹಾಗೂ ಬದುಕಿನುದ್ದಕ್ಕೂ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಡುತ್ತಿರುವ ವ್ಯಕ್ತಿಗಳ ಮತ ಪಡೆದು ಈಗ ಅಧಿಕಾರ ಮತ್ತು ಅಂತಸ್ತಿಗಾಗಿ ಬಿಜೆಪಿ ಎಂಬ ಫ್ಯಾಸಿಸ್ಟ್ ಪಕ್ಷವನ್ನು ಬೆಂಬಲಿಸುವುದು ಅವರನ್ನು ನಂಬಿ ಬೆಂಬಲಿಸಿದ ಎಲ್ಲರ ಬೆನ್ನಿಗೂ ಚೂರಿ ಹಾಕುವ ಕೆಲಸವಾಗಿದೆ” ಎಂದು ಟೀಕಿಸಿದ್ದಾರೆ.

“ಅಂಬರೀಶ್ ಅವರ ಹೆಸರಿನಲ್ಲಿ ಮತಯಾಚಿಸಿದ ಸುಮಲತಾ ಅಂಬರೀಶ್ ಅವರು ಎಲ್ಲಾ ಜಾತಿ ಧರ್ಮಗಳನ್ನು ಮೀರಿದ ಜಾತ್ಯತೀತ ಕಲಾವಿದರಾಗಿದ್ದರು ಮತ್ತು ಅವರು ಬಿಜೆಪಿಯ ಆಮಿಷಗಳಿಗೆ ಎಂದೂ ಬಲಿಯಾಗಿರಲಿಲ್ಲ ಎಂಬುದು ಸುಮಲತಾ ಅವರಿಗೆ ನೆನಪಾಗಲಿಲ್ಲವೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲುವವರಾರು? ಇಲ್ಲಿದೆ ಪೂರ್ಣ ಸಮೀಕ್ಷೆ

“ಬಿಜೆಪಿ ಒಂದು ಮಹಿಳಾ ವಿರೋಧಿ, ಮನುವಾದಿ ರಾಜಕೀಯ ಪಕ್ಷ. ಜಿಲ್ಲೆಯ ಜನರಿಗೆ ಬದುಕು ಕಲ್ಪಿಸಿದ ಟಿಪ್ಪು ಅವರಿಗೆ ಪ್ರತಿಕ್ಷಣವೂ ಅವಮಾನ ಮಾಡುತ್ತಾ ಜಿಲ್ಲೆಯ ಒಕ್ಕಲಿಗರನ್ನು ಬ್ರಿಟಿಷರ ಏಜೆಂಟರು ಎಂದು ಬಿಂಬಿಸಿ ಅವಮಾನ ಮಾಡುತ್ತಿರುವ ಪಕ್ಷ. ಇಂತಹ ಪಕ್ಷಕ್ಕೆ ಕೇವಲ ಅಧಿಕಾರ ಮತ್ತು ಅಂತಸ್ತಿನ ಕಾರಣಕ್ಕೆ ಬೆಂಬಲಿಸುತ್ತಿರುವ ನಿಮ್ಮ ವಿವೇಚನೆಗೆ ಗೆದ್ದಲು ಹಿಡಿದಿದೆಯೆ?” ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆಯಲ್ಲಿ ಮಾತನಾಡಿದ ಸ್ಥಳೀಯ ಪತ್ರರೊಬ್ಬರು, “ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರೇ ಹೆಚ್ಚಿನ ವೋಟು ಹಾಕಿದರು. ರೈತಸಂಘದವರು ಬೆಂಬಲಿಸಿದ್ದರು. ಈಗ ಬಿಜೆಪಿಗೆ ಹೋಗಿದ್ದಾರೆ. ಬಿಜೆಪಿಗೆ ಇಲ್ಲಿ ನೆಲೆ ಇಲ್ಲ. ಇದನ್ನು ಜನರು ಹೇಗೆ ನೋಡುತ್ತಾರೆಂದು ಕಾದು ನೋಡಬೇಕು” ಎಂದರು.

“ಕಳೆದ ಚುನಾವಣೆಯಲ್ಲಿ ಅನುಕಂಪದ ಅಲೆ ಇತ್ತು. ಜೆಡಿಎಸ್ ವಿರೋಧಿ ನಿಲುವು ಹೆಚ್ಚಾಗಿತ್ತು. ಕಾಂಗ್ರೆಸ್, ಬಿಜೆಪಿ, ರೈತಸಂಘದವರ ಬೆಂಬಲದಿಂದ ಸುಮಲತಾ ಗೆದ್ದರೇ ಹೊರತು ವೈಯಕ್ತಿಕ ವರ್ಚಸ್ಸಿನಿಂದಲ್ಲ. ಹಾಗೆ ನೋಡಿದರೆ ಸುಮಲತಾ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾರೆಂದು ನಿರೀಕ್ಷಿಸಲಾಗಿತ್ತು” ಎಂದು ಹೇಳಿದರು.

“ಅಂಬರೀಶ್ ಅವರನ್ನು ಸಚಿವ ಸ್ಥಾನದಿಂದ ತೆಗೆದದ್ದು ನೋವು ತಂದಿದೆ ಎಂದು ಸುಮಲತಾ ಸಮಜಾಯಿಸಿ ನೀಡುತ್ತಿದ್ದಾರೆ. ಇದನ್ನು ಕಳೆದ ಚುನಾವಣೆಯಲ್ಲಿಯೇ ಹೇಳಿದ್ದರೆ ಕಾಂಗ್ರೆಸ್‌ನ ಮತಗಳು ಸುಮಲತಾ ಅವರಿಗೆ ಬೀಳುತ್ತಿರಲಿಲ್ಲ. ಈಗ ಈ ಮಾತುಗಳನ್ನು ಆಡಿದರೆ ಅವರ ರಾಜಕೀಯದ ಮೇಲೆ ವ್ಯತಿರಿಕ್ತ ಪರಿಣಾಮವೇ ಬೀರುತ್ತದೆ” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...