Homeಅಂಕಣಗಳುಡೊಳ್ಳಿನ ಪದಗಳ `ಹುಡುಗಿಯರ’ ಹಾಡಿಕೆಗೆ ಘನತೆ ತಂದ ಸುಮಿತ್ರ ಮುಗಳಿಹಾಳ

ಡೊಳ್ಳಿನ ಪದಗಳ `ಹುಡುಗಿಯರ’ ಹಾಡಿಕೆಗೆ ಘನತೆ ತಂದ ಸುಮಿತ್ರ ಮುಗಳಿಹಾಳ

- Advertisement -
- Advertisement -

ಬಿ.ಎ, ಬಿ.ಎಡ್ ಮಾಡಿಯೂ ಶಿಕ್ಷಕಿ ಆಗಬೇಕೆನ್ನುವ ಕನಸಿಗಿಂತ ಪಿ.ಎಸ್.ಐ ಆಗಬೇಕೆಂದು ಹುಡುಗಿ ಕನಸು ಕಟ್ಟುತ್ತಾಳೆ. ಅದಕ್ಕಾಗಿ ಕೋಚಿಂಗ್ ಹೋಗುತ್ತಾಳೆ. ಕಷ್ಟಪಟ್ಟು ಓದುತ್ತಾಳೆ. ತುಂಬಾ ಕಡಿಮೆ ಅಂತರದಲ್ಲಿ ಆಯ್ಕೆ ತಪ್ಪಿಹೋಗುತ್ತದೆ. ಎರಡು ಮೂರು ಬಾರಿ ಹೀಗೆಯೇ ಆಗುತ್ತದೆ. ಕೊನೆಗೆ ಈ ಹುಡುಗಿ ಸರಕಾರಿ ನೌಕರಿಗೆ ಹೋಗಬಾರದೆಂದು ನಿರ್ಧರಿಸುತ್ತಾಳೆ.

ಈ ಹುಡುಗಿ ಆ ಹೊತ್ತಿಗಾಗಲೆ ಡೊಳ್ಳಿನ ಹಾಡಿಕೆಯಲ್ಲಿ ಉತ್ತರ ಕರ್ನಾಟಕದಲ್ಲಿ ಜನಪ್ರಿಯಳಾಗಿದ್ದಳು. ಹಾಗಾಗಿ ತನ್ನ ಡೊಳ್ಳಿನ ಹಾಡಿಕೆ ಮೇಳಕ್ಕೆ ಮತ್ತಷ್ಟು ತನ್ನನ್ನು ತಾನು ಅರ್ಪಿಸಿಕೊಳ್ಳುತ್ತಾಳೆ. ಇದೀಗ ಹದಿನೈದಕ್ಕಿಂತ ಹೆಚ್ಚಿನ ಡೊಳ್ಳಿನ ಮೇಳಗಳಿಗೆ ಗುರುವಾಗಿದ್ದಾರೆ. ಈತನಕ ನಾಲ್ಕೈದು ಸಾವಿರಕ್ಕೂ ಹೆಚ್ಚು ಹಾಡಿಕೆ ಪ್ರದರ್ಶನ ಕೊಟ್ಟಿದ್ದಾರೆ. ಕನಿಷ್ಠ ತಿಂಗಳಿಗೆ ಒಂದು ಲಕ್ಷದಷ್ಟು ಆದಾಯವಿದೆ.

ಯೂಟೂಬಲ್ಲಿ ಒಂದೊಂದು ಹಾಡಿಗೆ ನಾಲ್ಕೈದು ಲಕ್ಷ ವೀಕ್ಷಣೆಗಳಿವೆ. ಒಟ್ಟಾರೆ ಇವರ ಹಾಡಿಕೆಗೆ ಮೂರು ಕೋಟಿಗಿಂತ ಹೆಚ್ಚು ವೀಕ್ಷಣೆಗಳಾಗಿವೆ. ಅಂತೆಯೇ ನೂರಾರು ಹುಡುಗಿಯರು ಡೊಳ್ಳಿನ ಹಾಡಿಕೆಗೆ ಬರಲು ಪ್ರೇರಣೆಯಾಗಿದ್ದಾರೆ. ವಾಗ್ವಾದಕ್ಕೆ ನಿಂತರೆ ಗಂಡಸರ ಮೇಳಗಳು ಬೆದರುತ್ತವೆ. ಆ ಹುಡುಗಿಯೇ ಬೆಳಗಾವಿ ಜಿಲ್ಲೆಯ ಸೌದತ್ತಿ ತಾಲೂಕಿನ ಮುಗಳಿಹಾಳದ ಹಾಲುಮತದ ಯಲ್ಲಪ್ಪ-ಯಲ್ಲವ್ವರ ನಾಲ್ಕನೆ ಮಗಳು ಸುಮಿತ್ರ.

ಕುರುಬ ಸಮುದಾಯದ ಹಾಲುಮತದ ಪ್ರಸಾರಕ್ಕಾಗಿ ಹುಟ್ಟಿಕೊಂಡ ಡೊಳ್ಳಿನ ಹಾಡುಗಳು ಜನಪದ ಗೀತ ಸಂಪ್ರದಾಯದಲ್ಲಿ ವಿಶಿಷ್ಟವಾಗಿವೆ. ಉತ್ತರ ಕರ್ನಾಟಕದಿಂದ ಮಹಾರಾಷ್ಟ್ರದವರೆಗಿನ ಹಳ್ಳಿಗಳಲ್ಲಿ ಡೊಳ್ಳಿನ ಹಾಡುಗಳಿಗೆ ಪ್ರಮುಖ ಸ್ಥಾನವಿದೆ. ಡೊಳ್ಳಿನ ಹಾಡುಗಳನ್ನು ಬರೆಯುವ ನೂರಾರು ಕವಿಗಳಿದ್ದಾರೆ.

ಕಳೆದ ಒಂದೆರಡು ದಶಕದಿಂದ ಗಂಡಸರ ಪಾರಮ್ಯವೇ ಆಗಿದ್ದ ಡೊಳ್ಳಿನ ಹಾಡಿಕೆಗೆ ಮಹಿಳೆಯರ ಪ್ರವೇಶವಾಗಿದೆ. ಎಂಬತ್ತರ ದಶಕದಲ್ಲಿ ಬಾಗಲಕೋಟೆ ಜಿಲ್ಲೆಯ ಯಲ್ಲಟ್ಟಿಯ ಅಂಧ ಅಜ್ಜಿ ನೀಲವ್ವ ಬಿರಡಿ ಡೊಳ್ಳಿನ ಹಾಡುಗಳನ್ನು ಹಾಡುತ್ತಿದ್ದರು. ಇದರ ಪ್ರಭಾವ ಎಂಬಂತೆ ಮಣ್ಣೂರಿನ ರೇಣುಕಾ ಮತ್ತು ಅಕ್ಷತಾ ಹಾಡಿಕೆಗೆ ಬಂದರು. ಇಲ್ಲಿಂದ ಹುಡುಗಿಯರು ಡೊಳ್ಳಿನ ಹಾಡಿಕೆಗೆ ಬರುವಿಕೆ ಶುರುವಾಯಿತು. ಈಗ ಆರೇಳು ವರ್ಷದ ಮಕ್ಕಳಿಂದಿಡಿದು ಇಪ್ಪತ್ತೈದರ ವಯೋಮಾನದ ಹುಡುಗಿಯರತನಕ ಐವತ್ತಕ್ಕೂ ಹೆಚ್ಚು ಹುಡುಗಿಯರು ಡೊಳ್ಳಿನ ಪದಗಳನ್ನು ಹಾಡುತ್ತಿದ್ದಾರೆ. ಇದೊಂದು ಹೊಸ ಟ್ರೆಂಡ್ ಆಗಿ ಬದಲಾಗಿದೆ.

ಸುಮಿತ್ರ ಮುಗಳಿಹಾಳ ಡೊಳ್ಳಿನ ಹಾಡಿಕೆಗೆ ಬರುವ ಮುನ್ನ ರೇಣುಕಾ ಮೀನಾಕ್ಷಿ ಮೊದಲಾದವರು ಮೇಷ್ಟ್ರುಗಳು ಬರೆದ ಹಾಡುಗಳನ್ನು ಹಾಡುತ್ತಿದ್ದರಷ್ಟೆ. ವಾಗ್ವಾದ ಚರ್ಚೆ ಬಂದಾಗ ಪದಕಟ್ಟಿದ ಮೇಷ್ಟ್ರು ಚರ್ಚೆ ಸಂವಾದ ಮಾಡುತ್ತಿದ್ದರೆ ವಿನಃ ಹಾಡಿದ ಹುಡುಗಿಯರು ಚರ್ಚೆಸುತ್ತಿರಲಿಲ್ಲ. ಸುಮಿತ್ರ ಹಾಡುತ್ತಾ ಹಾಡುತ್ತಾ, ಹಾಡಿನ ಸಾಹಿತ್ಯಕ್ಕೆ ಪೂರಕವಾದ ಹಾಲುಮತ ಪುರಾಣ ಮತ್ತು ಸಂಶೋಧನೆಗಳನ್ನು ಓದಲು ತೊಡಗುತ್ತಾಳೆ. ಹಾಗಾಗಿ ರಾಮಾಯಣ, ಮಹಾಭಾರತ, ಹಾಲುಮತ ಪುರಾಣ, ಕುರುಬ ಸಮುದಾಯದ ಅಧ್ಯಯನ, ವಚನಕಾರರ, ದಾಸರ, ತತ್ವಪದಕಾರರ ಪುಸ್ತಕಗಳ ಸಂಗ್ರಹ ಸುಮಿತ್ರಾ ಅವರಲ್ಲಿದೆ.

ಪ್ರತಿಬಾರಿ ಹೊಸ ಪದ ಕಟ್ಟುವಾಗ ಹಾಲುಮತದ ಪುರಾಣ ಮುಂತಾದ ಪುಸ್ತಕಗಳನ್ನು ಅಧ್ಯಯನ ಮಾಡುತ್ತಾರೆ. ಹೀಗೆ ಸಾಹಿತ್ಯದ ಓದಿನಿಂದ ಸ್ವತಃ ಡೊಳ್ಳಿನ ಪದಗಳನ್ನು ರಚಿಸುತ್ತಾಳೆ. ಹೀಗಾಗಿ ತಾನೇ ಸ್ವತಃ ರಚಿಸಿದ ಹಾಡನ್ನು ಹಾಡುತ್ತಿದ್ದರಿಂದ ಯಾರೇ ವಾಗ್ವಾದ ಮಾಡಿದರೂ ಅದಕ್ಕೆ ಸುಮಿತ್ರಾಳೇ ಉತ್ತರ ಕೊಡತೊಡಗುತ್ತಾಳೆ. ಸುಮಿತ್ರ ಅವರ ಈ ವಾಗ್ವಾದದ ಮಾದರಿಯ ಪ್ರಭಾವ ಈಗಿನ ಹುಡುಗಿಯರಲ್ಲಿ ಕಾಣುತ್ತಿದೆ.

“ಅಜ್ಜನು ಡೊಳ್ಳಿನ ಪದಗಳನ್ನು ಹಾಡತಿದ್ರು. ಕೌಜಲಗಿ ನಿಂಗಮ್ಮ ನಮ್ಮಜ್ಜನ್ನ ಕರಕೊಂಡು ಹಾಡತಿದ್ದರಂತೆ, ಹಂಗಾಗಿ ನಮ್ಮ ಅಪ್ಪ ಡೊಳ್ಳಿನ ಪದ ಹಾಡಾಕ ಹತ್ತಿದ್ರು. ಹಿಂಗಾಗಿ ಮೊದಲಿನಿಂದ್ಲೂ ಮನಿಯಾಗ ಹಾಡಿಕಿ ಸಂಪ್ರದಾಯವಿತ್ತು. ನಾನು ಸಣ್ಣಾಕಿ ಇದ್ದಾಗ ಹಾಡಿಕೆ ಕೇಳೋದು ನೋಡೋದು ಮಾಡತಿದ್ದೆ. ನಾನು ಹಾಡ್ತೀನಿ ಅಂದ್ರ, ಸಮಾಜದಲ್ಲಿ ಹಂಗ್ ಅಂತಾರ ಹಿಂಗ್ ಅಂತಾರ ಗಂಡಸರ ಮಧ್ಯೆ ನಿಂತು ಹಾಡಬಾರದು ಅನ್ತಿದ್ರು. ಒಟ್ಟ ಡೊಳ್ಳಿನ ಪದದ ಸಪ್ಪಳ ಕೇಳತಂದ್ರ ರಾತ್ರೆಲ್ಲ ನಿದ್ದೆ ಅತ್ತಾಂಗಿಲ್ಲರೀ..ಅದು ಬಂದ್ ಆಗೋಮಟ ಮನಿಯಾಗ ಎದ್ದ ಕುಂದರತಿದ್ದೆ. ದಾಟಿಗಳು ತಲೀಯಾಗ ಉಳೀತಿತ್ತು.

ನೀ ಹಿಂಗ್ ಹಾಡವ್ವಾ, ಹಿಂಗ್ ದಾಟಿ ಬರಕೋ ಅಂತ ಯಾರೂ ಕಲಿಸಿಲ್ಲ. ಅವ್ವ ಸಣ್ಣಾಕಿದ್ದಾಗ ರಾಮಾಯಣ ಮಹಾಭಾರತದ ಕತಿ ಹೇಳತಿದ್ಲು ಅದು ನನ್ನ ತಲಿಯಾಗಿತ್ತು. ನಾನು ಹಾಡೋದಕ್ಕ ಕಾಕಾಗಳು ವಿರೋಧಿಸಿದ್ರು, ಊರಾಗ ವಿರೋಧಿಸಿದ್ರು, ಬಾಳಂದ್ರ ಬಾಳ ಕಾಡಿದ್ರು. ಅದನ್ನ ಹೇಳಿದ್ರ ಕಣ್ಣಾಗ ನೀರು ಬರ್ತಾವ. ಹೆಣ್ಣ ಆದರೂ ಒಂದು ಗಂಡಿನ ರೂಪದಲ್ಲಿ ತೋರಿಸಬೇಕಪಾ ಅಂತೇಳಿ ಎಲ್ಲರ ವಿರೋಧ ಮೀರಿ ಇಲ್ಲಿಗೆ ಬಂದು ನಿಂತೀನಿ” ಎಂದು ಸುಮಿತ್ರ ಹಾಡಿಕೆ ಪಯಣ ನೆನೆಯುತ್ತಾರೆ.

ಮಾಳಿಂಗರಾಯನ ಇತಿಹಾಸದಲ್ಲಿ ಎದುರುಬದುರು ಹಾಡುವಾಗ ಗಂಡಿನವರು ಮಾಳಿಂಗರಾಯನ ಪವಾಡ ಹೇಳಿದರೆ, ಇವರು ಮಾಳಿಂಗರಾಯನ ತಾಯಿಯ ಬಗ್ಗೆ ಹೇಳುತ್ತಾರೆ. ಗಂಡಿನ ಪಾರ್ಟಿ ಮಾಳಿಂಗರಾಯ ನನ ಅಪ್ಪ ಹುಲಿಹಾಲ ತಂದು ಬೀರಪ್ಪನಿಗೆ ಉಣಿಸ್ಯಾನೋ ಅಂತ ಹೇಳಿದ್ರೆ, ಮಾಳಿಂಗರಾಯ ಹುಲಿಹಾಲ ಉಣಿಸಬೇಕಾದ್ರೆ ತಾಯಿ ಹಡದಾಳ, ಉಲುಜಂತಿ ಗ್ರಾಮದಲ್ಲಿ ತಾಯಿ ಕನ್ನವ್ವನ ಆಶೀರ್ವಾದ ತಗಂಡು ಹುಲಿಹಾಲ ತರೋಕ ಹೋಗ್ಯಾನ’ ಅಂತ ಹೇಳತಾ, ಮಾಳಿಂಗರಾಯ ಹೆಚ್ಚು ಎನ್ನುವಾಗಲೂ ಮಾಳಿಂಗರಾಯನ ತಾಯಿಯನ್ನು ಇವರು ಎತ್ತಿ ಹಿಡಿಯುತ್ತಾರೆ. ಇಷ್ಟರಮಟ್ಟಿಗೆ ಒಂದು ಜನಪದ ಪಠ್ಯದ ಹಾಡಿಕೆಗೆ ಹೆಣ್ಣಿನ ಕಣ್ಣೋಟ ಸಾಧ್ಯವಾಗಿದೆ.

ಸುಮಿತ್ರಾರ ಹಾಡುಗಳಲ್ಲಿ ಹೆಣ್ಣು ಗಂಡು ಹೇಳಿದಂಗೆ ಕೇಳಿಕೊಂಡು ಚೆಂದನ ಸಂಸಾರ ಮಾಡಬೇಕು ಎನ್ನುವಂತಹ ಯಥಾಸ್ಥಿತಿಯ ಆಶಯವೂ ಇದೆ. ಆದರೆ ಎದುರು ಗಂಡಿನ ಮೇಳ ಹೆಣ್ಣನ್ನು ಕುಹಕ ಮಾಡಿದಾಗ ನಡೆಯುವ ಬಿರುಸಿನ ಚರ್ಚೆಯಲ್ಲಿ ಸುಮಿತ್ರಾ ಹೆಣ್ಣಿಲ್ಲದೆ ಕೇವಲ ಗಂಡಿಗೆ ಅಸ್ತಿತ್ವವಿಲ್ಲ ಎನ್ನುವುದನ್ನು ತುಂಬಾ ಖಡಕ್ ಆಗಿ ನಿರೂಪಿಸುತ್ತಾರೆ.

ಡೊಳ್ಳಿನ ಹಾಡಿನ ಏರುಧ್ವನಿಯಲ್ಲಿ ಹೆಣ್ಣಿನ ಕೋಮಲ ಧ್ವನಿ ಸಪ್ಪೆಯೆನಿಸುತ್ತದೆ. ಹಾಗಾಗಿ ಸುಮಿತ್ರಾರ ಧ್ವನಿ ಗಂಡಿನಂತೆ ಬಿರುಸು. ಸ್ಟೇಜಿನ ದೇಹಭಾಷೆಯೂ ಗಂಡನ್ನು ಮೀರಿಸುವಂಥದ್ದು. ಹೀಗೆ ಡೊಳ್ಳಿನ ಹಾಡಿನ ನುಡಿಗಟ್ಟನ್ನು ಬದಲಿಸುತ್ತಿರುವ ಸುಮಿತ್ರಾರ ಹಾಡಿಕೆ ಪಯಣಕ್ಕೆ ಡೊಳ್ಳಿನ ಪದದ ಕವಿ ಕೇದಾರ ಕೆಂಪಟ್ಟಿ ಮಾಸ್ತರರ ಮಾರ್ಗದರ್ಶನವಿದೆ. ತನ್ನ ಮೂರುಜನ ಅಕ್ಕಂದಿರಾದ ರೇಣುಕಾ, ಸರೋಜಿನಿ, ಉದ್ದವ್ವರನ್ನು ಮದುವೆ ಮಾಡಿಕೊಟ್ಟು ಮನೆ ಜವಾಬ್ದಾರಿ ಹೊರಲು ಗಂಡು ಮಗನಿರಬೇಕು ಎನ್ನುವ ನಂಬಿಕೆಯನ್ನು ಸುಮಿತ್ರ ಬದಲಿಸಿದ್ದಾರೆ. ಸುಮಿತ್ರಾ ಅವರ ಹಾಡಿಕೆ ಪಯಣ ಮತ್ತಷ್ಟು ಜನರನ್ನು ತಲುಪಲಿ ಎಂದು ಪತ್ರಿಕೆ ಶುಭ ಹಾರೈಸುತ್ತದೆ.

ಸುಮಿತ್ರಾ ಮುಗಳಿಹಾಳ ಎಂದು ಟೈಪಿಸಿದರೆ, ಯೂಟೂಬಿನಲ್ಲಿ ನೂರಾರು ವೀಡಿಯೋಗಳು ನೋಡಲು ಸಿಗುತ್ತವೆ.

ಅರುಣ್ ಜೋಳದಕೂಡ್ಲಿಗಿ


ಓದಿ:

ನಮ್ಮ ನಡುವಿನ ಮಂದಣ್ಣ – ಪರಿಸರ ಪ್ರೇಮಿ ಮಳಿಮಠದ ಪಂಪಯ್ಯ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...