Homeಅಂಕಣಗಳುಡೊಳ್ಳಿನ ಪದಗಳ `ಹುಡುಗಿಯರ’ ಹಾಡಿಕೆಗೆ ಘನತೆ ತಂದ ಸುಮಿತ್ರ ಮುಗಳಿಹಾಳ

ಡೊಳ್ಳಿನ ಪದಗಳ `ಹುಡುಗಿಯರ’ ಹಾಡಿಕೆಗೆ ಘನತೆ ತಂದ ಸುಮಿತ್ರ ಮುಗಳಿಹಾಳ

- Advertisement -
- Advertisement -

ಬಿ.ಎ, ಬಿ.ಎಡ್ ಮಾಡಿಯೂ ಶಿಕ್ಷಕಿ ಆಗಬೇಕೆನ್ನುವ ಕನಸಿಗಿಂತ ಪಿ.ಎಸ್.ಐ ಆಗಬೇಕೆಂದು ಹುಡುಗಿ ಕನಸು ಕಟ್ಟುತ್ತಾಳೆ. ಅದಕ್ಕಾಗಿ ಕೋಚಿಂಗ್ ಹೋಗುತ್ತಾಳೆ. ಕಷ್ಟಪಟ್ಟು ಓದುತ್ತಾಳೆ. ತುಂಬಾ ಕಡಿಮೆ ಅಂತರದಲ್ಲಿ ಆಯ್ಕೆ ತಪ್ಪಿಹೋಗುತ್ತದೆ. ಎರಡು ಮೂರು ಬಾರಿ ಹೀಗೆಯೇ ಆಗುತ್ತದೆ. ಕೊನೆಗೆ ಈ ಹುಡುಗಿ ಸರಕಾರಿ ನೌಕರಿಗೆ ಹೋಗಬಾರದೆಂದು ನಿರ್ಧರಿಸುತ್ತಾಳೆ.

ಈ ಹುಡುಗಿ ಆ ಹೊತ್ತಿಗಾಗಲೆ ಡೊಳ್ಳಿನ ಹಾಡಿಕೆಯಲ್ಲಿ ಉತ್ತರ ಕರ್ನಾಟಕದಲ್ಲಿ ಜನಪ್ರಿಯಳಾಗಿದ್ದಳು. ಹಾಗಾಗಿ ತನ್ನ ಡೊಳ್ಳಿನ ಹಾಡಿಕೆ ಮೇಳಕ್ಕೆ ಮತ್ತಷ್ಟು ತನ್ನನ್ನು ತಾನು ಅರ್ಪಿಸಿಕೊಳ್ಳುತ್ತಾಳೆ. ಇದೀಗ ಹದಿನೈದಕ್ಕಿಂತ ಹೆಚ್ಚಿನ ಡೊಳ್ಳಿನ ಮೇಳಗಳಿಗೆ ಗುರುವಾಗಿದ್ದಾರೆ. ಈತನಕ ನಾಲ್ಕೈದು ಸಾವಿರಕ್ಕೂ ಹೆಚ್ಚು ಹಾಡಿಕೆ ಪ್ರದರ್ಶನ ಕೊಟ್ಟಿದ್ದಾರೆ. ಕನಿಷ್ಠ ತಿಂಗಳಿಗೆ ಒಂದು ಲಕ್ಷದಷ್ಟು ಆದಾಯವಿದೆ.

ಯೂಟೂಬಲ್ಲಿ ಒಂದೊಂದು ಹಾಡಿಗೆ ನಾಲ್ಕೈದು ಲಕ್ಷ ವೀಕ್ಷಣೆಗಳಿವೆ. ಒಟ್ಟಾರೆ ಇವರ ಹಾಡಿಕೆಗೆ ಮೂರು ಕೋಟಿಗಿಂತ ಹೆಚ್ಚು ವೀಕ್ಷಣೆಗಳಾಗಿವೆ. ಅಂತೆಯೇ ನೂರಾರು ಹುಡುಗಿಯರು ಡೊಳ್ಳಿನ ಹಾಡಿಕೆಗೆ ಬರಲು ಪ್ರೇರಣೆಯಾಗಿದ್ದಾರೆ. ವಾಗ್ವಾದಕ್ಕೆ ನಿಂತರೆ ಗಂಡಸರ ಮೇಳಗಳು ಬೆದರುತ್ತವೆ. ಆ ಹುಡುಗಿಯೇ ಬೆಳಗಾವಿ ಜಿಲ್ಲೆಯ ಸೌದತ್ತಿ ತಾಲೂಕಿನ ಮುಗಳಿಹಾಳದ ಹಾಲುಮತದ ಯಲ್ಲಪ್ಪ-ಯಲ್ಲವ್ವರ ನಾಲ್ಕನೆ ಮಗಳು ಸುಮಿತ್ರ.

ಕುರುಬ ಸಮುದಾಯದ ಹಾಲುಮತದ ಪ್ರಸಾರಕ್ಕಾಗಿ ಹುಟ್ಟಿಕೊಂಡ ಡೊಳ್ಳಿನ ಹಾಡುಗಳು ಜನಪದ ಗೀತ ಸಂಪ್ರದಾಯದಲ್ಲಿ ವಿಶಿಷ್ಟವಾಗಿವೆ. ಉತ್ತರ ಕರ್ನಾಟಕದಿಂದ ಮಹಾರಾಷ್ಟ್ರದವರೆಗಿನ ಹಳ್ಳಿಗಳಲ್ಲಿ ಡೊಳ್ಳಿನ ಹಾಡುಗಳಿಗೆ ಪ್ರಮುಖ ಸ್ಥಾನವಿದೆ. ಡೊಳ್ಳಿನ ಹಾಡುಗಳನ್ನು ಬರೆಯುವ ನೂರಾರು ಕವಿಗಳಿದ್ದಾರೆ.

ಕಳೆದ ಒಂದೆರಡು ದಶಕದಿಂದ ಗಂಡಸರ ಪಾರಮ್ಯವೇ ಆಗಿದ್ದ ಡೊಳ್ಳಿನ ಹಾಡಿಕೆಗೆ ಮಹಿಳೆಯರ ಪ್ರವೇಶವಾಗಿದೆ. ಎಂಬತ್ತರ ದಶಕದಲ್ಲಿ ಬಾಗಲಕೋಟೆ ಜಿಲ್ಲೆಯ ಯಲ್ಲಟ್ಟಿಯ ಅಂಧ ಅಜ್ಜಿ ನೀಲವ್ವ ಬಿರಡಿ ಡೊಳ್ಳಿನ ಹಾಡುಗಳನ್ನು ಹಾಡುತ್ತಿದ್ದರು. ಇದರ ಪ್ರಭಾವ ಎಂಬಂತೆ ಮಣ್ಣೂರಿನ ರೇಣುಕಾ ಮತ್ತು ಅಕ್ಷತಾ ಹಾಡಿಕೆಗೆ ಬಂದರು. ಇಲ್ಲಿಂದ ಹುಡುಗಿಯರು ಡೊಳ್ಳಿನ ಹಾಡಿಕೆಗೆ ಬರುವಿಕೆ ಶುರುವಾಯಿತು. ಈಗ ಆರೇಳು ವರ್ಷದ ಮಕ್ಕಳಿಂದಿಡಿದು ಇಪ್ಪತ್ತೈದರ ವಯೋಮಾನದ ಹುಡುಗಿಯರತನಕ ಐವತ್ತಕ್ಕೂ ಹೆಚ್ಚು ಹುಡುಗಿಯರು ಡೊಳ್ಳಿನ ಪದಗಳನ್ನು ಹಾಡುತ್ತಿದ್ದಾರೆ. ಇದೊಂದು ಹೊಸ ಟ್ರೆಂಡ್ ಆಗಿ ಬದಲಾಗಿದೆ.

ಸುಮಿತ್ರ ಮುಗಳಿಹಾಳ ಡೊಳ್ಳಿನ ಹಾಡಿಕೆಗೆ ಬರುವ ಮುನ್ನ ರೇಣುಕಾ ಮೀನಾಕ್ಷಿ ಮೊದಲಾದವರು ಮೇಷ್ಟ್ರುಗಳು ಬರೆದ ಹಾಡುಗಳನ್ನು ಹಾಡುತ್ತಿದ್ದರಷ್ಟೆ. ವಾಗ್ವಾದ ಚರ್ಚೆ ಬಂದಾಗ ಪದಕಟ್ಟಿದ ಮೇಷ್ಟ್ರು ಚರ್ಚೆ ಸಂವಾದ ಮಾಡುತ್ತಿದ್ದರೆ ವಿನಃ ಹಾಡಿದ ಹುಡುಗಿಯರು ಚರ್ಚೆಸುತ್ತಿರಲಿಲ್ಲ. ಸುಮಿತ್ರ ಹಾಡುತ್ತಾ ಹಾಡುತ್ತಾ, ಹಾಡಿನ ಸಾಹಿತ್ಯಕ್ಕೆ ಪೂರಕವಾದ ಹಾಲುಮತ ಪುರಾಣ ಮತ್ತು ಸಂಶೋಧನೆಗಳನ್ನು ಓದಲು ತೊಡಗುತ್ತಾಳೆ. ಹಾಗಾಗಿ ರಾಮಾಯಣ, ಮಹಾಭಾರತ, ಹಾಲುಮತ ಪುರಾಣ, ಕುರುಬ ಸಮುದಾಯದ ಅಧ್ಯಯನ, ವಚನಕಾರರ, ದಾಸರ, ತತ್ವಪದಕಾರರ ಪುಸ್ತಕಗಳ ಸಂಗ್ರಹ ಸುಮಿತ್ರಾ ಅವರಲ್ಲಿದೆ.

ಪ್ರತಿಬಾರಿ ಹೊಸ ಪದ ಕಟ್ಟುವಾಗ ಹಾಲುಮತದ ಪುರಾಣ ಮುಂತಾದ ಪುಸ್ತಕಗಳನ್ನು ಅಧ್ಯಯನ ಮಾಡುತ್ತಾರೆ. ಹೀಗೆ ಸಾಹಿತ್ಯದ ಓದಿನಿಂದ ಸ್ವತಃ ಡೊಳ್ಳಿನ ಪದಗಳನ್ನು ರಚಿಸುತ್ತಾಳೆ. ಹೀಗಾಗಿ ತಾನೇ ಸ್ವತಃ ರಚಿಸಿದ ಹಾಡನ್ನು ಹಾಡುತ್ತಿದ್ದರಿಂದ ಯಾರೇ ವಾಗ್ವಾದ ಮಾಡಿದರೂ ಅದಕ್ಕೆ ಸುಮಿತ್ರಾಳೇ ಉತ್ತರ ಕೊಡತೊಡಗುತ್ತಾಳೆ. ಸುಮಿತ್ರ ಅವರ ಈ ವಾಗ್ವಾದದ ಮಾದರಿಯ ಪ್ರಭಾವ ಈಗಿನ ಹುಡುಗಿಯರಲ್ಲಿ ಕಾಣುತ್ತಿದೆ.

“ಅಜ್ಜನು ಡೊಳ್ಳಿನ ಪದಗಳನ್ನು ಹಾಡತಿದ್ರು. ಕೌಜಲಗಿ ನಿಂಗಮ್ಮ ನಮ್ಮಜ್ಜನ್ನ ಕರಕೊಂಡು ಹಾಡತಿದ್ದರಂತೆ, ಹಂಗಾಗಿ ನಮ್ಮ ಅಪ್ಪ ಡೊಳ್ಳಿನ ಪದ ಹಾಡಾಕ ಹತ್ತಿದ್ರು. ಹಿಂಗಾಗಿ ಮೊದಲಿನಿಂದ್ಲೂ ಮನಿಯಾಗ ಹಾಡಿಕಿ ಸಂಪ್ರದಾಯವಿತ್ತು. ನಾನು ಸಣ್ಣಾಕಿ ಇದ್ದಾಗ ಹಾಡಿಕೆ ಕೇಳೋದು ನೋಡೋದು ಮಾಡತಿದ್ದೆ. ನಾನು ಹಾಡ್ತೀನಿ ಅಂದ್ರ, ಸಮಾಜದಲ್ಲಿ ಹಂಗ್ ಅಂತಾರ ಹಿಂಗ್ ಅಂತಾರ ಗಂಡಸರ ಮಧ್ಯೆ ನಿಂತು ಹಾಡಬಾರದು ಅನ್ತಿದ್ರು. ಒಟ್ಟ ಡೊಳ್ಳಿನ ಪದದ ಸಪ್ಪಳ ಕೇಳತಂದ್ರ ರಾತ್ರೆಲ್ಲ ನಿದ್ದೆ ಅತ್ತಾಂಗಿಲ್ಲರೀ..ಅದು ಬಂದ್ ಆಗೋಮಟ ಮನಿಯಾಗ ಎದ್ದ ಕುಂದರತಿದ್ದೆ. ದಾಟಿಗಳು ತಲೀಯಾಗ ಉಳೀತಿತ್ತು.

ನೀ ಹಿಂಗ್ ಹಾಡವ್ವಾ, ಹಿಂಗ್ ದಾಟಿ ಬರಕೋ ಅಂತ ಯಾರೂ ಕಲಿಸಿಲ್ಲ. ಅವ್ವ ಸಣ್ಣಾಕಿದ್ದಾಗ ರಾಮಾಯಣ ಮಹಾಭಾರತದ ಕತಿ ಹೇಳತಿದ್ಲು ಅದು ನನ್ನ ತಲಿಯಾಗಿತ್ತು. ನಾನು ಹಾಡೋದಕ್ಕ ಕಾಕಾಗಳು ವಿರೋಧಿಸಿದ್ರು, ಊರಾಗ ವಿರೋಧಿಸಿದ್ರು, ಬಾಳಂದ್ರ ಬಾಳ ಕಾಡಿದ್ರು. ಅದನ್ನ ಹೇಳಿದ್ರ ಕಣ್ಣಾಗ ನೀರು ಬರ್ತಾವ. ಹೆಣ್ಣ ಆದರೂ ಒಂದು ಗಂಡಿನ ರೂಪದಲ್ಲಿ ತೋರಿಸಬೇಕಪಾ ಅಂತೇಳಿ ಎಲ್ಲರ ವಿರೋಧ ಮೀರಿ ಇಲ್ಲಿಗೆ ಬಂದು ನಿಂತೀನಿ” ಎಂದು ಸುಮಿತ್ರ ಹಾಡಿಕೆ ಪಯಣ ನೆನೆಯುತ್ತಾರೆ.

ಮಾಳಿಂಗರಾಯನ ಇತಿಹಾಸದಲ್ಲಿ ಎದುರುಬದುರು ಹಾಡುವಾಗ ಗಂಡಿನವರು ಮಾಳಿಂಗರಾಯನ ಪವಾಡ ಹೇಳಿದರೆ, ಇವರು ಮಾಳಿಂಗರಾಯನ ತಾಯಿಯ ಬಗ್ಗೆ ಹೇಳುತ್ತಾರೆ. ಗಂಡಿನ ಪಾರ್ಟಿ ಮಾಳಿಂಗರಾಯ ನನ ಅಪ್ಪ ಹುಲಿಹಾಲ ತಂದು ಬೀರಪ್ಪನಿಗೆ ಉಣಿಸ್ಯಾನೋ ಅಂತ ಹೇಳಿದ್ರೆ, ಮಾಳಿಂಗರಾಯ ಹುಲಿಹಾಲ ಉಣಿಸಬೇಕಾದ್ರೆ ತಾಯಿ ಹಡದಾಳ, ಉಲುಜಂತಿ ಗ್ರಾಮದಲ್ಲಿ ತಾಯಿ ಕನ್ನವ್ವನ ಆಶೀರ್ವಾದ ತಗಂಡು ಹುಲಿಹಾಲ ತರೋಕ ಹೋಗ್ಯಾನ’ ಅಂತ ಹೇಳತಾ, ಮಾಳಿಂಗರಾಯ ಹೆಚ್ಚು ಎನ್ನುವಾಗಲೂ ಮಾಳಿಂಗರಾಯನ ತಾಯಿಯನ್ನು ಇವರು ಎತ್ತಿ ಹಿಡಿಯುತ್ತಾರೆ. ಇಷ್ಟರಮಟ್ಟಿಗೆ ಒಂದು ಜನಪದ ಪಠ್ಯದ ಹಾಡಿಕೆಗೆ ಹೆಣ್ಣಿನ ಕಣ್ಣೋಟ ಸಾಧ್ಯವಾಗಿದೆ.

ಸುಮಿತ್ರಾರ ಹಾಡುಗಳಲ್ಲಿ ಹೆಣ್ಣು ಗಂಡು ಹೇಳಿದಂಗೆ ಕೇಳಿಕೊಂಡು ಚೆಂದನ ಸಂಸಾರ ಮಾಡಬೇಕು ಎನ್ನುವಂತಹ ಯಥಾಸ್ಥಿತಿಯ ಆಶಯವೂ ಇದೆ. ಆದರೆ ಎದುರು ಗಂಡಿನ ಮೇಳ ಹೆಣ್ಣನ್ನು ಕುಹಕ ಮಾಡಿದಾಗ ನಡೆಯುವ ಬಿರುಸಿನ ಚರ್ಚೆಯಲ್ಲಿ ಸುಮಿತ್ರಾ ಹೆಣ್ಣಿಲ್ಲದೆ ಕೇವಲ ಗಂಡಿಗೆ ಅಸ್ತಿತ್ವವಿಲ್ಲ ಎನ್ನುವುದನ್ನು ತುಂಬಾ ಖಡಕ್ ಆಗಿ ನಿರೂಪಿಸುತ್ತಾರೆ.

ಡೊಳ್ಳಿನ ಹಾಡಿನ ಏರುಧ್ವನಿಯಲ್ಲಿ ಹೆಣ್ಣಿನ ಕೋಮಲ ಧ್ವನಿ ಸಪ್ಪೆಯೆನಿಸುತ್ತದೆ. ಹಾಗಾಗಿ ಸುಮಿತ್ರಾರ ಧ್ವನಿ ಗಂಡಿನಂತೆ ಬಿರುಸು. ಸ್ಟೇಜಿನ ದೇಹಭಾಷೆಯೂ ಗಂಡನ್ನು ಮೀರಿಸುವಂಥದ್ದು. ಹೀಗೆ ಡೊಳ್ಳಿನ ಹಾಡಿನ ನುಡಿಗಟ್ಟನ್ನು ಬದಲಿಸುತ್ತಿರುವ ಸುಮಿತ್ರಾರ ಹಾಡಿಕೆ ಪಯಣಕ್ಕೆ ಡೊಳ್ಳಿನ ಪದದ ಕವಿ ಕೇದಾರ ಕೆಂಪಟ್ಟಿ ಮಾಸ್ತರರ ಮಾರ್ಗದರ್ಶನವಿದೆ. ತನ್ನ ಮೂರುಜನ ಅಕ್ಕಂದಿರಾದ ರೇಣುಕಾ, ಸರೋಜಿನಿ, ಉದ್ದವ್ವರನ್ನು ಮದುವೆ ಮಾಡಿಕೊಟ್ಟು ಮನೆ ಜವಾಬ್ದಾರಿ ಹೊರಲು ಗಂಡು ಮಗನಿರಬೇಕು ಎನ್ನುವ ನಂಬಿಕೆಯನ್ನು ಸುಮಿತ್ರ ಬದಲಿಸಿದ್ದಾರೆ. ಸುಮಿತ್ರಾ ಅವರ ಹಾಡಿಕೆ ಪಯಣ ಮತ್ತಷ್ಟು ಜನರನ್ನು ತಲುಪಲಿ ಎಂದು ಪತ್ರಿಕೆ ಶುಭ ಹಾರೈಸುತ್ತದೆ.

ಸುಮಿತ್ರಾ ಮುಗಳಿಹಾಳ ಎಂದು ಟೈಪಿಸಿದರೆ, ಯೂಟೂಬಿನಲ್ಲಿ ನೂರಾರು ವೀಡಿಯೋಗಳು ನೋಡಲು ಸಿಗುತ್ತವೆ.

ಅರುಣ್ ಜೋಳದಕೂಡ್ಲಿಗಿ


ಓದಿ:

ನಮ್ಮ ನಡುವಿನ ಮಂದಣ್ಣ – ಪರಿಸರ ಪ್ರೇಮಿ ಮಳಿಮಠದ ಪಂಪಯ್ಯ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...