Homeಕವನಅನುಷಾ ಚಂದ್ರುರವರ ಕವಿತೆ ಸುಮ್ಮನಿದ್ದೇನೆ ನಾನು…..

ಅನುಷಾ ಚಂದ್ರುರವರ ಕವಿತೆ ಸುಮ್ಮನಿದ್ದೇನೆ ನಾನು…..

- Advertisement -
- Advertisement -

ಹಾ….
ಸುಮ್ಮನಿದ್ದೇನೆ ನಾನು
ಹೇಳಲು ಬಹಳಷ್ಟಿದ್ದರು
ಅನುಭವಿಸಿದ್ದೇನೊ ಕೆಲವು
ಕಂಡದ್ದು ಹಲವು
ಆದರೆ ಎಲ್ಲವೂ ಸ್ವಂತದ್ದು
ಆದರದೇಕೊ ನಕ್ಕೊಮ್ಮೆ ಸುಮ್ಮನಾಗುವೆ ನಾನು
ಹೇಳಲು ಬಹಳಷ್ಟಿದ್ದರು

ಚಿಮಣಿ ಮೇಲಿನ ದೀಪದುರಿಯ ಕಪ್ಪಿನಲಿ
ಹೂತ ಕನಸುಗಳ ಚಿತ್ರವ ಕಂಡು……
ನನ್ನಮ್ಮ ಅಪ್ಪನಿಗೆ ಭರವಸೆಯೊಂದೆ
ಹೊಟ್ಟೆ ತುಂಬಿಸಿದ
ಖಾಲಿ ನೀರವ ರಾತ್ರಿಗಳ ನೆನೆದು

ನೀವು ನಾನಾಗದೆ ನಾನೇ ನೀವಾಗಲೊರಟು
ವಿಳಾಸವಿರದ ಊರಿನಲಿ
ದಾರಿ ತಪ್ಪಿ
ಕೊಳವಾದ ಕಂಗಳಲಿ
ಮಾಡಿದೊಂಟಿ ಯುದ್ಧವ ನೆನೆದು…..
ಸುಮ್ಮನಾದೆ ನಾನು

ಇದ್ದ ಬದುಕಿಗಿಡಿದ ಕನ್ನಡಿಯೆದುರು
ಹೊಸಕಿ‌ – ಕೊಂದ ಕನಸುಗಳ ಬಿಂಬ ಕಂಡು
ಹೆದರಿ ಮುದುರಿ ಮೌನಿಯಾದ ಕ್ಷಣವ ನೆನೆದು
ಸುಮ್ಮನಾಗಿ ಬಿಟ್ಟೆ ನಾನು
ಮಾತು ಬರುವ ಮೂಕಿಯಂತೆ
ಹೇಳಲು ಎಷ್ಟೊ ಅದೆಷ್ಟೋ ಇದ್ದರು

ಶಾಶ್ವತವಲ್ಲದೀ ದುಡ್ಡು
ಮೂಡಿಸಿದ ಶಾಶ್ವತ ಗುರುತುಗಳ
ಲೆಕ್ಕ ಪಟ್ಟಿಯ ಲೆಕ್ಕಗಳಲಿ
ಒದ್ದೆಯಾದ ಕಂಗಳನು
ಹುದುಗಿಸಿಡುತ
ಸುಮ್ಮನಾಗುವೆ ನಾನು
ನಿಮ್ಮಗಳೆದುರು
ನಾಲಿಗೆಯ ತುದಿಯಲ್ಲಿ
ಜಾರಲು ಅವೆಷ್ಟೋ ಮಾತುಗಳು ತವಕಿಸುತ್ತಿದ್ದರು

ಚೆಂದದ ನೋಟ ನಮ್ಮನ್ನಳೆವ ಮಾನದಂಡ
ಬೆಂಗಳೂರಿನಲ್ಲಿಇದೇ ನಾ ಕಲಿತ ಮೊದಲ ಪಾಠ
ಕಲಿಕೆಗೇನು ಕೊನೆಮೊದಲಿಲ್ಲವಲ್ಲ
ಪ್ರದರ್ಶನಕ್ಕೆ ಅಡ್ಡಿ ಮಾಡಿತ್ತು
ಧೂಳು ಹಿಡಿದು ತೂತು ಬಿದ್ದ ಆ ಖಾಲಿ ಪರ್ಸ್‌
ಅದನ್ನೇ ನೆನೆವೆ………ಅದನ್ನೇ ನೆನೆದು
ಸುಮ್ಮನಾಗಿ ಬಿಡುವೆ ನಾನು
ನಿಮ್ಮೆಲ್ಲರ ಇಂದಿನ ಗೇಲಿಗಳಿಗೆ
ಭರ್ತಿ ಪರ್ಸ್‌ ಕಿಸೆಯೊಳಗಿದ್ದರು

ಬೊಗಸೆ ತುಂಬ ಸಂಬಳವೆಣಿಸುತ್ತ
ಖರ್ಚಿಗೊಂದು ಬಾರಿ ಸಂಕಲನ ವ್ಯವಕಲನಕ್ಕೆ
ಓರೇ ಹಚ್ಚುವ ನಾನು
ಕೊಂದ ಕನಸುಗಳ, ಮರೆತ ನೋವುಗಳ
ಪಟ್ಟಿ ಇಟ್ಟು ವಾದ ಮಾಡದ ನಾನು
ಜಿಪುಣತನಕ್ಕೊಂದು ಆದರ್ಶ ಉದಾಹರಣೆ
ನಿಮ್ಮಗಳ ಮುಂದೆ
ಆದರು ಅದೇಕೊ
ನಕ್ಕು ಸುಮ್ಮನಾಗುವೆ ನಾನು
ಇಂದಿನಂತಯೇ ……..ಮುಂದೆಯೂ ಕೂಡ

ಉತ್ತರಿಸಲಾರೆ ಎಂದಲ್ಲ
ನಾ ನಡೆದ ಬದುಕಿನ ದಾರಿಯಲಿ
ಹೆಜ್ಜೆ ಕೂಡ ಇಡದ ನಿಮಗೆ
ಪಯಣದ ವರದಿಯ ನೀಡಿ ಸಾಧಿಸುವುದಾದರು ಏನು ? ನಾನು.

ಹಾ….ಸುಮ್ಮನಿದ್ದೇನೆ ನಾನು
ಹೇಳಲು ಬಹಳಷ್ಟಿದ್ದರು.

ಅನುಷಾ ಚಂದ್ರು

(ಮೂಲತಾ ಚಿಕ್ಕಮಗಳೂರಿನ ಸಖರಾಯಪಟ್ಟಣದವರು. ಕನ್ನಡದಲ್ಲಿ ಎಂ ಎ ಪದವಿಯನ್ನು ಪಡೆದಿದ್ದು, ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಕನ್ನಡ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ.)


ಇದನ್ನೂ ಓದಿ: ಮೊಳಗುತ್ತಿದೆ ಸೈರನ್! : ಶಂಕರ್ ಸಿಹಿಮೊಗೆಯವರ ಕವನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...